Breaking News

ಜಿಲ್ಲೆ

ಸಚಿವರ ಹಾಗೂ 1 ವರ್ಷದ ಸಂಬಳ, ಶಾಸಕರ 1 ತಿಂಗಳ ಸಂಬಳ ಕೋವಿಡ್ ನಿಯಂತ್ರಣಕ್ಕಾಗಿ.”: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಲಸಿಕೆ ಹಾಗೂ ಆಕ್ಸಿಜನ್ ವ್ಯವಸ್ಥೆಗಳ ನಿರ್ವಹಣೆಗೂ ಕೂಡ ಯಾವೆಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣಕ್ಕಾಗಿ ಸಚಿವರ 1 ವರ್ಷದ ಸಂಬಳ ಹಾಗೂ ಶಾಸಕರ 1 ತಿಂಗಳ …

Read More »

ಸಮಾಜಕ್ಕೆ ಮಾರಕವಾಗಿರುವ  6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಕ್ಕೆ: ಅಶೋಕ ತೇಲಿ 

ಬೆಳಗಾವಿ : ಬೆಳಗಾವಿ ಉಪವಿಭಾಗಾಧಿಕಾರಿ ಅಶೋಕ ತೇಲಿ ಇಂದು ಖಾನಾಪುರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 6,000 ಕೆಜಿ  ಅಕ್ರಮ ತಂಬಾಕು ವಶಕ್ಕೆ ಪಡೆಯಲಾಗಿದೆ.  ಖಾನಾಪುರದ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟಿರುವ ಸಮಾಜಕ್ಕೆ ಮಾರಕವಾಗಿರುವ  6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಮೂರು ಸಾವಿರ ಕೆಜಿ ಬಿಡಿ ತಂಬಾಕು ವಶಪಡಿಸಿಕೊಂಡಿದ್ದು, ಇದರಲ್ಲಿ ಲೇಬಲ್, ಪ್ಯಾಕಿಂಗ್ ಇರಲಿಲ್ಲ. ಇನ್ನೂ ಮೂರು ಸಾವಿರ ಕೆಜಿ ಅಕ್ರಮ ತಂಬಾಕನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಎಪ್ಪತ್ತು ಕೆಜಿ ಪ್ಲಾಸ್ಟಿಕ್ ವಶ ಪಡಿಸಿಕೊಳ್ಳಲಾಗಿದೆ. …

Read More »

ಇಲ್ಲೊಬ್ಬ ಹೆಣ್ಮಗಳು ತನ್ನ ಪತಿಯನ್ನು ಉಳಿಸಿಕೊಳ್ಳಲು ಪಟ್ಟ ಪಾಡು ಕೇಳಿದರೆ ಎದೆ ಝಲ್ಲೆನ್ನುತ್ತದೆ.

ಬೆಂಗಳೂರು – ಕೊರೋನಾ ದಿನದಿಂದ ದಿನಕ್ಕೆ ಎಂತೆಂತವರ ಜೀವವನ್ನು ಕಸಿದುಕೊಳ್ಳುತ್ತಿದೆ ಎಂದು ನೋಡಿದಾಗ ನಿಂತಲ್ಲೇ ಕುಸಿದು ಬೀಳುವಂತಾಗಿದೆ. ಪತ್ನಿ ಪತಿಯನ್ನು ಉಳಿಸಿಕೊಳ್ಳಲು, ತಾಯಿ ಮಗನನ್ನು ಉಳಿಸಿಕೊಳ್ಳಲು, ಮಗ ತಂದೆ-ತಾಯಿಯನ್ನು ಉಳಿಸಿಕೊಳ್ಳಲು ಹೆಣಗಾಡುವುದನ್ನು ಕೇಳಿದರೆ ಈ ಜೀವನದ ಮೇಲಿನ ಭರವಸೆಯೇ ಹೊರಟು ಹೋಗುವಂತಾಗಿದೆ. ಇಲ್ಲೊಬ್ಬ ಹೆಣ್ಮಗಳು ತನ್ನ ಪತಿಯನ್ನು ಉಳಿಸಿಕೊಳ್ಳಲು ಪಟ್ಟ ಪಾಡು ಕೇಳಿದರೆ ಎದೆ ಝಲ್ಲೆನ್ನುತ್ತದೆ. ಇದು ಒಬ್ಬ ಹೆಣ್ಮಗಳ ಕಥೆಯಲ್ಲ, ಸಾವಿರಾರು ಜನರು ಕ್ಷಣ 7ಣವೂ ಪಡುತ್ತಿರುವ ಪಾಡು. …

Read More »

ನಿಮ್ಮ ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು:H.D.K.

ಬೆಂಗಳೂರು: ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಭ್ಯವಿರುವ ಮಾಹಿತಿ ಪ್ರಕಾರ ಮೇ …

Read More »

ಚಿಕ್ಕೋಡಿ ಪಟ್ಟಣದ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ ಅಪೂರ್ವ ಬೀದ್ರಿ

ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಒಡೆತನ‌ದ‌ ಜ್ಯೋತಿ ಬಜಾರ್ ಅನ್ನು ಚಿಕ್ಕೋಡಿ ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬೀದ್ರಿ (KAS) ಅವರ ನೇತ್ರತ್ವದಲ್ಲಿ ದಾಳಿ ಮಾಡಿ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ. ಬೆಳಗಾವಿ‌‌ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಜ್ಯೋತಿ ಬಜಾರ್ ಕೊರೊನಾ ನಿಯಮ ಗಾಳಿಗೆ ತೊರಿ ವ್ಯಾಪಾರ ನಡೆಸುತ್ತಿರುವ ಆರೋಪದ ಅಡಿ ಸೀಲ್ ಮಾಡಿಸಿದ ಅಧಿಕಾರಿ ಯಾಕೆ ಅಂಗಡಿ ತಗೆದಿದ್ದೀರಿ ಎಂದು ಜ್ಯೋತಿ ಬಜಾರ್ ಸಿಬ್ಬಂಧಿಗೆ …

Read More »

ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಕೊರೋನಾ ಸೋಂಕು

ಬೆಳಗಾವಿ – ರಾಜ್ಯದಲ್ಲಿ ಬುಧವಾರ 39,047 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 229 ಜನರು ಕಳೆದ 24 ಗಂಟೆಯಲ್ಲಿ ಸಾವಿಗೀಡಾಗಿದ್ದಾರೆ. 2,192 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 11,833 ಜನರು ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ 22,596 ಜನರಿಗೆ ಕೊರೋನಾ ದೃಢಪಟ್ಟಿದೆ. ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಸೋಂಕು ತಗುಲಿದ್ದು, ಬೆಳಗಾವಿ ನಗರದಲ್ಲೇ 291 ಜನರಿಗೆ ಕೊರೋನಾ ದೃಢಪಟ್ಟಿದೆ. ಅಥಣಿ 4, ಬೈಲಹೊಂಗಲ 15, ಚಿಕ್ಕೋಡಿ 2, ಗೋಕಾಕ …

Read More »

ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿ

ತುಮಕೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ. ಕಿಣಿಗಲ್ ತಾಲೂಕಿನ ಉಜ್ಜಯನಿ ಪ್ರೌಢ ಶಾಲೆಯ ಶಿಕ್ಷಕ ಶಿವರಾಮೇಗೌಡ, ಮಲ್ಲಿಪಾಳ್ಯ ಪ್ರೌಢ ಶಾಲೆಯ ಪರಮೇಶ್ವರ್ ಆಚಾರ್ ಹಾಗೂ ತುರುಗೂರು ಪ್ರಾಥಮಿಕ ಶಾಲಾ ಶಿಕ್ಷಕ ಕೃಷ್ಣಪ್ಪ ಕೊರೊನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು …

Read More »

ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ರೆಮ್‌ಡಿಸಿವಿರ್ ಹಂಚಿಕೆಗೆ ಸಮಿತಿ: ಡಿ.ಸಿಡಾ.ಕೆ. ಹರೀಶ್ ಕುಮಾರ್

ಬೆಳಗಾವಿ: ‘ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೆಮ್‌ಡಿಸಿವಿರ್ ಸಮರ್ಪಕ ಹಂಚಿಕೆ, ಲಭ್ಯವಿರುವ ಹಾಸಿಗೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ವಿವಿಧ ಸಮಿತಿಗಳನ್ನು ರಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ‘ಲಸಿಕಾಕರಣ ಚುರುಕುಗೊಳಿಸಲು ಕ್ರಮ ಕೈಗೊಂಡಿದ್ದು, ಮಾರ್ಗಸೂಚಿ ಪ್ರಕಾರ ಅಕ್ಟೋಬರ್ ವೇಳೆಗೆ ಸಂಪೂರ್ಣ ಲಸಿಕೆಗೆ ಆದ್ಯತೆ ನೀಡಲಾಗುತ್ತಿದೆ’ ಎಂದರು. ‘ಬಿಮ್ಸ್ ಆಸ್ಪತ್ರೆಯಲ್ಲಿ ಊಟ, …

Read More »

ಕಿಲ್ಲರ್ ಕೊರೊನಾ: ಆಯಂಬುಲೆನ್ಸ್ ಚಾಲಕರಿಂದಲೇ ಅಂತ್ಯಸಂಸ್ಕಾರ, ವಿಡಿಯೋ ನೋಡಿ ವಿದಾಯ ಹೇಳುತ್ತಿರುವ ಕುಟುಂಬಸ್ಥರು

ಬೆಂಗಳೂರು: ಕಿಲ್ಲರ್ ಕೊರೊನಾಗೆ ಜನ ಬಲಿಯಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಹಾಗೂ ಸಾಯುವವರ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ವಿಪರ್ಯಾಸವೆಂದರೆ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರು ಮೃತರ ಅಂತ್ಯಸಂಸ್ಕಾರವನ್ನು ವಿಡಿಯೋ ಮೂಲಕ ವೀಕ್ಷಿಸುತ್ತಿದ್ದಾರೆ. ತಮ್ಮವರನ್ನು ವಿಡಿಯೋ ಮೂಲಕವೇ ವಿದಾಯ ಹೇಳುತ್ತಿದ್ದಾರೆ. ಹೌದು ಮಹಾಮಾರಿ ಕೊರೊನಾದಿಂದ ಮೃತಪಟ್ಟಂತಹ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು ಭಾಗಿಯಾಗುತ್ತಿಲ್ಲ. ಕೆಲವರು ಮೃತದೇಹವನ್ನೇ ಬಿಟ್ಟು ಹೋಗುತ್ತಿದ್ದಾರೆ. ಮತ್ತೆ ಕೆಲವರು ಮೊಬೈಲ್ ವಿಡಿಯೋದಲ್ಲೇ ಅಂತ್ಯಸಂಸ್ಕಾರವನ್ನು ವೀಕ್ಷಿಸಿ ದೂರದಿಂದಲೇ …

Read More »

ಆಹಾರ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡಲಿ; ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಪಡಿತರ ಅಕ್ಕಿ ಕೇಳಿದ ವ್ಯಕ್ತಿಯನ್ನು ಸಾಯುವಂತೆ ಹೇಳಿದ ಆಹಾರ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡಬೇಕೆಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಊಟಕ್ಕೆ ಅಕ್ಕಿ ಕೇಳಿದರೆ ಸಾಯಿ ಎಂದು ಹೇಳುವ ಇವರೆಂತಹ ಆಹಾರ ಸಚಿವರು? ಇದು ಬಿಜೆಪಿ ಸಂಸ್ಕೃತಿಯನ್ನು ತೋರುತ್ತದೆ. ಸಿಎಂ ಯಡಿಯೂರಪ್ಪನವರು ಮೊದಲು ಉಮೇಶ್ ಕತ್ತಿಯವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ 7 ಕೆ.ಜಿ ಅಕ್ಕಿ ಕೊಡುತ್ತಿದ್ದೆವು. ಇವರು …

Read More »