Breaking News

ಜಿಲ್ಲೆ

ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …

Read More »

ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ಎಸಿ ಕಚೇರಿ ಜಪ್ತಿ ಮಾಡುವಂತೆ ನ್ಯಾಯಾಲಯದ ಆದೇಶ

ಬೆಳಗಾವಿ: ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ಎಸಿ ಕಚೇರಿ ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಾಂಬ್ರಾ ವಿಮಾನ ನಿಲ್ದಾಣ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ಹತ್ತು ರೈತರು ಕೋರ್ಟ್ ಮೆಟ್ಟಿಲೇರಿದ್ದರು. ನಮಗೆ ನೀಡಬೇಕಿದ್ದ 5.5 ಕೋಟಿ ಪರಿಹಾರವನ್ನು ನೀಡದೇ  ರೈತರಿಗೆ ವಂಚಿಸಲಾಗಿದೆ ಎಂದು ಆರೋಪಿಸಿದ್ದರು. ರೈತರ ಅರ್ಜಿ ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ನ್ಯಾಯಾಲಯ …

Read More »

ಲಾಕ್ ಡೌನ್ ಮಾದರಿಯಲ್ಲಿ ಬಿಗಿ ಕ್ರಮ ಕೈಗೊಳ್ಳಿ- ಬಸವರಾಜ ಬೊಮ್ಮಾಯಿ

ಬೆಂಗಳೂರು: ದಿನೇದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ …

Read More »

ಕೋವಿಡ್‌ ಸಂಕಷ್ಟದಲ್ಲಿದ್ದರೂ ಸರ್ಕಾರ ಪ್ರಧಾನಿ ಮೋದಿಯ ಪ್ರಚಾರದಲ್ಲಿ ನಿರತವಾಗಿದೆ :H.D.K.

ಕರೋನಾ ವಿಚಾರ ಹಿನ್ನಲೆ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು …

Read More »

ರಾಜ್ಯ ಸರ್ಕಾರದಿಂದ ‘ನೈಟ್ ಅಂಡ್ ವೀಕ್ ಎಂಡ್ ಕರ್ಪ್ಯೂ’ ಪರಿಷ್ಕೃತ ಮಾರ್ಗಸೂಚಿ ರಿಲೀಸ್ : ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ ನಿನ್ನೆ ಬಿಡುಗಡೆ ಮಾಡಿರುವಂತ ಕೊರೋನಾ ನೈಟ್ ಕಪ್ಯೂ ಹಾಗೂ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿದೆ. ಈ ಮೊದಲು ಅಗತ್ಯ ವಸ್ತು ಸೇವೆ ಜೊತೆಗೆ, ಇತರೆ ಶಾಪ್ ಗಳಿಗು ತೆರೆಯಲು ಅನುಮತಿ ನೀಡಿತ್ತು. ಆದ್ರೇ.. ಇಂದು ದಿಢೀರ್ ಶಾಕ್ ನೀಡುವಂತೆ ಪರಿಷ್ಕೃತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯಂತೆ, ಈಗ ಅಗತ್ಯಸೇವೆ ಒದಗಿಸುವಂತ ಶಾಪ್ ಹೊರತಾಗಿ ಎಲ್ಲಾ ಶಾಪ್ ಬಂದ್ ಮಾಡುವಂತೆ ಸೂಚಿಸಿದೆ. ಈ ಕುರಿತಂತೆ …

Read More »

ಇನ್ನು ಕೆಲವೇ ಹೊತ್ತಿನಲ್ಲಿಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು – ಲಾಕ್ ಡೌನ್ ಮಾದರಿಯಲ್ಲಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯಸರಕಾರದ ನಡೆಯಿಂದ ಉಂಟಾಗಿರುವ ಗೊಂದಲಕ್ಕೆ ಸ್ಪಷ್ಟನೆ ನೀಡಿ ಮತ್ತು ಕೆಲವು ಮಾರ್ಪಾಡು ಮಾಡಿ ಹೊಸ ಮಾರ್ಗಸೂಚಿ ಪ್ರಕಟಿಸಲು ಸರಕಾರ ನಿರ್ಧರಿಸಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಹೊಸ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಲಿದೆ. ನಿನ್ನೆ ಸಂಜೆ ಪ್ರಕಟಿಸಿರುವ ಮಾರ್ಗಸೂಚಿ ಇಂದು ಬೆಳಗ್ಗೆ ಜಾರಿಯಾಗುವ ವೇಳೆಗೆ ಭಾರಿ ಗೊಂದಲಕ್ಕೆ ಕಾರಣವಾಗಿತ್ತು. ಅದು ಸಾರ್ವಜನಿಕರಿಗೆ ಸರಿಯಾಗಿ ತಲುಪಿರಲಿಲ್ಲ. ಏಕಾ ಏಕಿ ಪೊಲೀಸರು ಬಂದು ಅಂಗಡಿ …

Read More »

ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಇಂದು ಮಧ್ಯಾಹ್ನ ಶಾಕೀಂಗ್ ಆದೇಶ ಎದುರಾಗಿದೆ,ಮದ್ಯಾಹ್ನ 1 ಗಂಟೆಯಿಂದಲೇ ಪೋಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ.

ಬೆಳಗಾವಿ-ನೈಟ್ ಕರ್ಫ್ಯು ಮುಗಿಸಿ ಇವತ್ತು ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಇಂದು ಮಧ್ಯಾಹ್ನ ಶಾಕೀಂಗ್ ಆದೇಶ ಎದುರಾಗಿದೆ,ಮದ್ಯಾಹ್ನ 1 ಗಂಟೆಯಿಂದಲೇ ಪೋಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತುರ್ತು ಆದೇಶ ಹೊರಡಿಸಿ ಅಗತ್ಯವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಪೋಲೀಸ್ ವಾಹನಗಳ ಸೈರನ್ ಸದ್ದು ಬೆಳಗಾವಿ ಮಾರುಕಟ್ಟೆಯನ್ನು ಸ್ತಭ್ದಗೊಳಿಸಿದೆ. ಬೆಳಗಾವಿಯ ಖಡೇಬಝಾರ್,ಮಾರುತಿಗಲ್ಲಿ,ಗಣಪತಿ ಬೀದಿ …

Read More »

ಮೆಡಿಕಲ್ ಆಕ್ಸಿಜನ್ ಕೊರತೆ: ಉಕ್ಕಿನ ಕಾರ್ಖಾನೆಗಳ ಜೊತೆ ಶೆಟ್ಟರ್- ಮುರುಗೇಶ್ ನಿರಾಣಿ ಸಭೆ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಆಮ್ಲಜನಕ ಕೊರತೆ ಸರಿದೂಗಿಸಲು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ಬುಧವಾರ ಉಕ್ಕು ತಯಾರಿಕಾ ಕಾರ್ಖಾನೆಗಳ ಜೊತೆ ಸಭೆ ನಡೆಸಿದ್ದಾರೆ. ಜೆಎಸ್ ಡಬ್ಲ್ಯೂ ಮಂಗಳವಾರ ಪ್ರತಿದಿನ 400 ಟನ್ ಆಕ್ಸಿಜನ್ ಪೂರೈಕೆ ಮಾಡುವುದಾಗಿ ತಿಳಿಸಿದ ನಂತರ, ಬಲ್ದೋಟಾ, ಜಿಂದಾಲ್ ಸೇರಿದಂತೆ ಹಲವು ಉಕ್ಕಿನ ಕಾರ್ಖಾನೆಗಳು ಮೆಡಿಕಲ್ ಆಕ್ಸಿಜನ್ ಉತ್ಪಾದನೆ ಮಾಡುವುದಾಗಿ ತಿಳಿಸಿವೆ. ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ಸಂಬಂಧ ರಾಜ್ಯ …

Read More »

ಅಕ್ರಮ ಗಣಿಗಾರಿಕೆ ದಂಡ ಪ್ರಮಾಣ ಇಳಿಕೆ: ನಿರಾಣಿ

ಬೆಂಗಳೂರು: ‘ರಾಜ್ಯದಾದ್ಯಂತ ಅಕ್ರಮ ಗಣಿಗಾರಿಕೆಯನ್ನು ಡ್ರೋನ್ ‌ಮೂಲಕ‌ ಸಮೀಕ್ಷೆ ‌ನಡೆಸಿ‌ ವಿಧಿಸಿದ್ದ ಐದು ಪಟ್ಟು ದಂಡವನ್ನು ಬದಲಿಸಿ, ಸದ್ಯ ಒಂದು ಪಟ್ಟು ಮಾತ್ರ ವಿಧಿಸಲು ನಿರ್ಧರಿಸಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಗಳ ನಂತರ ಗಣಿಗಾರಿಕೆ ಕಂಪನಿಗಳ ಪರವಾನಗಿ ಮತ್ತು ದಂಡ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದೆ’ ಎಂದರು. ‘ಕಾನೂನುಬಾಹಿರ ಗಣಿಗಾರಿಕೆ ‌ನಡೆಯುವ …

Read More »

ಸರ್ಕಾರದ ಮಾರ್ಗಸೂಚಿ ವಿಚಾರ-ಅಂಗಡಿ ಮಾಲೀಕರಿಂದ ಆಕ್ರೋಶ

ಧಾರವಾಡ: ಜಿಲ್ಲೆಯ ಜನತೇ ಸರ್ಕಾರದ ಕೊರೊನಾ ಮಾರ್ಗ ಸೂಚಿಗಳ ವಿಷಯದಲ್ಲಿ ಈಗಲೂ ಗೊಂದಲದಲ್ಲಿದ್ದಾರೆ. ನಗರದ ಅಂಗಡಿ ಮಾಲೀಕರು ಪ್ರತಿ ದಿನದಂತೆ ಇವತ್ತು ಅಂಗಡಿಗಳನ್ನು ತೆರೆದಿದ್ದರು. ಆದರೆ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನು ಕಂಡು ಸರ್ಕಾರದ ವಿರುದ್ಧ ಅಂಗಡಿ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ಜಿಲ್ಲೆಯ ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತು ಪಡಿಸಿ, ಬಟ್ಟೆ, ಪಾತ್ರೆ, ಮೊಬೈಲ್ ಸೇರಿ ಹಲವು ಅಂಗಡಿಗಳನ್ನು ಪೊಲೀಸರು ಬಂದ್ …

Read More »