Breaking News

ಜಿಲ್ಲೆ

ಪಬ್ ಗಳಲ್ಲಿ ಕೊರೊನಾ ರೂಲ್ಸ್ ಬ್ರೇಕ್ ಸಿಲಿಕಾನ್ ಸಿಟಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ನಂಗಾನಾಚ್

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಮಿಂಚಿನ ವೇಗದಲ್ಲಿ ಕೊರೊನಾ ಹರಡುತ್ತಿದ್ದು, ನಿತ್ಯ 10 ಸಾವಿರಕ್ಕೂ ಅಧಿಕ ಪ್ರಕರಣಗಳು ನಗರದಲ್ಲಿ ವರದಿಯಾಗುತ್ತಿವೆ. ಸರ್ಕಾರ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಪಬ್, ಬಾರ್‍ಗಳಲ್ಲಿ ಇದ್ಯಾವುದೂ ಪಾಲನೆಯಾಗುತ್ತಿಲ್ಲ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ನಂಗಾನಾಚ್ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳಿಗೆ ನಗರದ ಪಬ್, ಬಾರ್ ಗಳಲ್ಲಿ ಕಿಮ್ಮತ್ತು ಇಲ್ಲದಂತಾಗಿದ್ದು, ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಶೇ.50ರಷ್ಟು ಜನರ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಿ …

Read More »

ಲಸಿಕೆ ಪಡೆದ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ನಗರದ ವಂಟಮುರಿ ಕಾಲನಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ (ಏ.18) ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡರು. ಇದಕ್ಕೂ ಎಂಟು ವಾರಗಳ ಮುಂಚೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಅನ್ನು‌‌ ಅವರು ಪಡೆದುಕೊಂಡಿದ್ದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು, ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ; ಆದ್ದರಿಂದ ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲರೂ ಲಸಿಕೆಯನ್ನು …

Read More »

ಕೊರೋನ ಸಂಕಷ್ಟ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ಎ. 18: ಒಂದೂವರೆ ವರ್ಷದಿಂದಲೂ ಎದುರಾಗಿರುವ ಕೊರೋನ ಸಂಕಷ್ಟವನ್ನು ನಿಭಾಯಿಸಲಾಗದಿದ್ದ ಮೇಲೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಆಗ್ರಹಿಸಿದ್ದಾರೆ. ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟ ಮುಗಿಯುವವರೆಗೂ ರಾಜ್ಯದ ಎಲ್ಲ ಜನರಿಗೂ ಉಚಿತ ಆರೋಗ್ಯ ಸೇವೆ ಒದಗಿಸಬೇಕು. ಕೋವಿಡ್ ಆರಂಭದಿಂದ ಈವರೆಗೂ ಪ್ರತಿಪಕ್ಷವಾಗಿ ಕಾಂಗ್ರೆಸ್ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡಿದೆ. ಜಾರಿಗೊಳಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆ. ಗಂಟೆ ಹೊಡಿಯಿರಿ, …

Read More »

‘ದೇಶದಲ್ಲೇ ಅತಿಹೆಚ್ಚು ಆಸ್ಪತ್ರೆ ನಮ್ಮಲ್ಲಿವೆ, ಆದರೂ ಸರ್ಕಾರ ಕೈಚೆಲ್ಲಿ ಕೂತಿದೆ’

ಬೆಂಗಳೂರು: ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಆಸ್ಪತ್ರೆಗಳಿವೆ. ದೇಶದಲ್ಲೇ ತಜ್ಞವೈದ್ಯರು ನಮ್ಮಲ್ಲಿದ್ದಾರೆ ಹಾಗಿದ್ದರೂ ಇದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದ ಸರ್ಕಾರ ಕೈಚೆಲ್ಲಿ ಕೂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕಿಡಿಕಾರಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಡಿಕೆಎಸ್​ ಸರ್ಕಾರಕ್ಕೆ ಯಾವುದೇ ಸರಿಯಾದ ಯೋಜನೆ ಇಲ್ಲ. ಹೋಟೆಲ್​ಗಳನ್ನ ವಶಕ್ಕೆ ಪಡೆದು 10 ಸಾವಿರ ಬೆಡ್​ಗಳನ್ನ ಮಾಡಿದ್ರು. ಆದರೂ ರಾಜ್ಯಲ್ಲಿ ಬೆಡ್​ ಇಲ್ಲ. ರೆಮ್ಡೆಸಿವಿರ್ ಇಂಜೆಕ್ಷನ್​ ಸಿಗ್ತಿಲ್ಲ. ಆಸ್ಪತ್ರೆಗಳಲ್ಲಿ‌ ಹಾಸಿಗೆಗಳು ಸಿಗ್ತಿಲ್ಲ ಅಧಿಕಾರಿಗಳು ಏನು …

Read More »

ಲಾಕ್ ಡೌನ್ ಇಲ್ಲ ಆದರೆ ಕಠಿಣ ನಿಯಮ ಜಾರಿ :ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಟಫ್ ರೂಲ್ಸ್ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಅಗತ್ಯವಿದೆ. ಬಡವರಿಗೆ ತೊಂದರೆಯಾಗದಂತೆ ನಿಯಮ ಜಾರಿ …

Read More »

ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೋರೋನಾ ಸೋಂಕು ದೃಢಪಟ್ಟಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಚಾರಕ್ಕೆ ಆಗಮಿಸಿದ್ದ …

Read More »

ಕೊರೊನಾದಿಂದ ಬಳಲುತ್ತಿರೋ ಸಿಎಂ ಆರೋಗ್ಯ ಸ್ಥಿರ

ಬೆಂಗಳೂರು: ಕೋವಿಡ್ ನಿಂದ ಮಣಿಪಾಲ್ ಆಸ್ಪತ್ರೆ ಸೇರಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಲವಲವಿಕೆಯಿಂದ ಇದ್ದಾರೆ ಅಂತ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಹೇಳಿದೆ. ತಜ್ಞ ವೈದ್ಯರ ತಂಡ ಶ್ವಾಸಕೋಶದ ಮೇಲೂ ನಿಗಾ ಇರಿಸಲಾಗಿದೆ ಅಂದಿದೆ. ಸಿಎಂ ಮೊಮ್ಮಗಳು ಸೌಂದರ್ಯ ಮತ್ತು ಅವರ ಪತಿ ಡಾ.ನಿರಂಜನ್‍ರಿಗೂ ಪಾಸಿಟಿವ್ ಆಗಿದ್ದು, ಮಣಿಪಾಲದಲ್ಲಿ ಸಿಎಂ ಪಕ್ಕದ ವಾರ್ಡ್‍ನಲ್ಲೇ ದಾಖಲಿಸಲಾಗಿದೆ. ಸಿಎಂ ಪ್ರಾಥಮಿಕ ಸಂಪರ್ಕಿತರಾಗಿರೋ ಡಿಸಿಎಂ ಲಕ್ಷ್ಮಣ ಸವದಿ ಗನ್‍ಮ್ಯಾನ್‍ಗೂ ಸೋಂಕು ದೃಢವಾಗಿದೆ. …

Read More »

ಒಂದೇ ದಿನ 2,433 ಸಾರಿಗೆ ನೌಕರರ ಅಮಾನತು : 11 ದಿನಗಳಲ್ಲಿ ಇಂಥ ಕ್ರಮ ಇದೇ ಮೊದಲು

ಬೆಂಗಳೂರು: ಮುಷ್ಕರ ನಿರತ ಬಿಎಂಟಿಸಿ ನೌಕರರಿಗೆ ಸರಕಾರ ಭಾರೀ ಪೆಟ್ಟು ನೀಡಿದ್ದು, ಶನಿವಾರ ಒಂದೇ ದಿನ 2,443 ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇಷ್ಟು ನೌಕರರನ್ನು ಅಮಾನತು ಮಾಡಿರುವುದು ಇದೇ ಮೊದಲು. ಮುಷ್ಕರ ನಿಷೇಧಿಸಿದ್ದರೂ ಅನಧಿಕೃತವಾಗಿ ಭಾಗವಹಿಸಿದ್ದು ಮತ್ತು ಇತರರನ್ನು ಪ್ರಚೋದಿಸಿದ ಆರೋಪದ ಹಿನ್ನೆಲೆಯಲ್ಲಿ ಈ ಎಲ್ಲ ಸಿಬಂದಿಯನ್ನು ಅಮಾನತು ಮಾಡಲಾಗಿದೆ. ಸಾವಿರ ಮೀರಿದ ಸಂಖ್ಯೆ ಇತರ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಇದುವರೆಗೆ 1 ಸಾವಿರಕ್ಕೂ ಅಧಿಕ ನೌಕರರನ್ನು ವಜಾಗೊಳಿಸಲಾಗಿದೆ. …

Read More »

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನಲೆ, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆಸಲಾಗಿದೆ. ಕೋವಿಡ್ ಪರೀಕ್ಷೆ ವರದಿ ನೀಡುವುದರಲ್ಲಿ ವಿಳಂಬವಾಗುತ್ತಿದೆ. ಎಸ್‌ಎಂಎಸ್, ವಾಟ್ಸಾಪ್ ಮೂಲಕ ಶೀಘ್ರ ವರದಿಗೆ ಸೂಚನೆ ನೀಡಲಾಗಿದೆ. 24 ಗಂಟೆಯೊಳಗೆ ವರದಿ ನೀಡಲು ಹೈಕೋರ್ಟ್ ಸೂಚನೆ ನೀಡಿದ್ದು, ಟೆಸ್ಟ್ ಮಾಡಿಸಿದವರು ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ತಿಳಿಸಿದೆ. ಬೆಡ್ ನಿರ್ವಹಣೆಗೆ ವ್ಯವಸ್ಥೆ ಇರುವುದಾಗಿ ಸರ್ಕಾರದಿಂದ ಹೇಳಿಕೆ ನೀಡಲಾಗಿದೆ. ಬೆಡ್ ಒದಗಿಸುವುದು ಸರ್ಕಾರದ ಕರ್ತವ್ಯ. …

Read More »

ಧಾರ್ಮಿಕ ಆಚರಣೆ-ಸಮಾರಂಭ ನಿಷೇಧ,ಮಾರ್ಗಸೂಚಿ ಪಾಲಿಸದಿದ್ದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

ಬೆಳಗಾವಿ : ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಈ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಭಾರತ ಸರ್ಕಾರದ ಕೇಂದ್ರ ಗ್ರಹ ಮಂತ್ರಾಲಯದ ಆದೇಶದ ಪ್ರಕಾರ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು  ಸಾರ್ವಜನಿಕ ಸಮಾರಂಭ, ಆಚರಣೆ ಸೇರಿದಂತೆ ಮನರಂಜನೆ ಕಾರ್ಯಕ್ರಮ ಹಾಗೂ ಇತರೆ ಸಂದರ್ಭಗಳಲ್ಲಿ ಸೇರಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ಮಿತಿಗೊಳಿಸಲು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. …

Read More »