ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಬೆಳಿಗ್ಗೆಯಿಂದಲೇ ರಾಜ್ಯಾದ್ಯಂತ ಮುಷ್ಕರ ಆರಂಭಿಸಿದ್ದು, ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆಯಾದರೂ ದುಪ್ಪಟ್ಟು ಹಣ, ಬಸ್ ಸಂಚಾರ ಸಮರ್ಪಕವಾಗಿಲ್ಲದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧ ಅಂಗವಿಕಲರೊಬ್ಬರು ಹೃದಾಯಾಘಾತದಿಂದ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ! ಜಿಗಣಿಯಿಂದ ಬಂದಿದ್ದ ಚೆನ್ನಪ್ಪ ಮೆಜೆಸ್ಟಿಕ್ ನಲ್ಲಿ …
Read More »ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಮೇಶ್ ಜಾರಕಿಹೊಳಿ ಕೆಲ ದಿನ ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ
ಬೆಳಗಾವಿ : ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್, ಇನ್ನು ಕೆಲ ದಿನ ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಏಪ್ರಿಲ್ 4ರಂದು ರಾತ್ರಿ 10.30ರ ಸುಮಾರಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ರಮೇಶ್ ಜಾರಕಿಹೊಳಿ ಬಿಪಿ, ಶುಗರ್ …
Read More »ಅಧಿಕಾರದ ಅವಧಿ ಪೂರೈಸುತ್ತೀರಿ: ಯಡಿಯೂರಪ್ಪ ಅವರಿಗೆ ಜೈನ ಮುನಿ ಆಶೀರ್ವಾದ
ಬೆಳಗಾವಿ: ‘ನೀವು ಅಧಿಕಾರದ ಅವಧಿ ಪೂರೈಸುತ್ತೀರಿ. ಚಿಂತೆ ಬಿಡಿ. ಬಳಿಕ ರಾಜ್ಯಪಾಲ, ಉಪ ರಾಷ್ಟ್ರಪತಿ ಅಥವಾ ರಾಷ್ಟ್ರಪತಿ ಆಗುತ್ತೀರಿ’ ಎಂದು ತಾಲ್ಲೂಕಿನ ಹಲಗಾದ ಸಿದ್ಧಸೇನಾ ಮುನಿ ಅವರು ತಮ್ಮ ಬಳಿಗೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಂಗಳವಾರ ಆಶೀರ್ವಾದ ಮಾಡಿದರು. ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಹೇಳಿ’ ಎಂದು ಯಡಿಯೂರಪ್ಪ ಕೇಳಿದಾಗ ಪ್ರತಿಕ್ರಿಯಿಸಿದ ಮುನಿ, ’40 ಸಾವಿರ ಮತಗಳ ಅಂತರದಿಂದ ಮಂಗಲಾ ಅಂಗಡಿ ಗೆಲ್ಲುತ್ತಾರೆ’ …
Read More »ಸಿಡಿ ಬಂದ ವೇಗದಲ್ಲೇ ಮರಳಿ ಹೋಗುತ್ತದೆ : ಸಚಿವ ಆರ್. ಶಂಕರ್
ಬಾಗಲಕೋಟೆ : ಮಾಜಿ ಸಚಿವ ರಮೇಶ ಜಾರಕಿಹೋಳಿ ಕುರಿತು ಬಿಡುಗಡೆಯಾಗಿರುವ ಸಿಡಿ, ಎಷ್ಟು ವೇಗವಾಗಿ ಬಂತೋ ಅಷ್ಟೇ ವೇಗದಲ್ಲಿ ಮರಳಿ ಹೋಗುತ್ತದೆ. ಎಲ್ಲರೂ ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಆರ್. ಶಂಕರ ಹೇಳಿದರು. ತೋಟಗಾರಿಕೆ ವಿವಿಯ 10ನೇ ಘಟಿಕೋತ್ಸವದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನೂರಕ್ಕೆ ನೂರರಷ್ಟು ಸಿಡಿ ಮರಳಿ ಹೋಗುತ್ತದೆ. ಜನರು ಸಿಡಿ-ಪಿಡಿ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಮೂರು ಉಪ ಚುನಾವಣೆಯಲ್ಲೂ …
Read More »ಮುತ್ತಪ್ಪ ರೈ ಆಸ್ತಿ ಪರಭಾರೆಗೆ ಸಿವಿಲ್ ಕೋರ್ಟ್ ಬ್ರೇಕ್
ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಆಸ್ತಿ ವಿಭಾಗ ಸಂಬಂಧ ಪತ್ನಿ ಅನುರಾಧಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿವಿಲ್ ಕೋರ್ಟ್ ಸದ್ಯ ಆಸ್ತಿ ಪರಭಾರೆ ಮಾಡದಂತೆ ಮಧ್ಯಂತರ ಆದೇಶ ನೀಡಿದೆ. ಮುತ್ತಪ್ಪ ರೈ ಅವರು ನಿಧನರಾದ ಬಳಿಕ ಎರಡನೇ ಪತ್ನಿ ಅನುರಾಧಾ ಅವರು ಪತಿಯ ಆಸ್ತಿಯನ್ನು ಪರಭಾರೆ ವಿಚಾರ ಸಂಬಂಧ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುತ್ತಪ್ಪ ರೈ ಪುತ್ರ ರಾಕಿ, …
Read More »7 ಜಿಲ್ಲೆಗಳಲ್ಲಿ ಶತಕ ದಾಟಿದ ಕೊರೊನಾ ಅಬ್ಬರ
ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಶತಕ ದಾಟಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ದಿನೇದಿನೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 4266 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಎಂದಿನಂತೆ ಅಪಾಯದ ಕರೆಗಂಟೆ ಬಾರಿಸುತ್ತಿದೆ. ಕಲಬುರಗಿಯಲ್ಲಿ 261, ಮೈಸೂರಿನಲ್ಲಿ 237, ತುಮಕೂರು 157, ಮಂಡ್ಯ 102, ಹಾಸನ 110 ಮತ್ತು ಬೀದರ್ ನಲ್ಲಿ 167 ಪ್ರಕರಣಗಳು …
Read More »ಜನತೆಗೆ ತಟ್ಟಿದ ಸಾರಿಗೆ ಮುಷ್ಕರ ಬಿಸಿ, ಖಾಸಗಿ ವಾಹನಗಳಿಂದ ಸುಲಿಗೆ -ಪ್ರಯಾಣಿಕರ ಪರದಾಟ
ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡಿದ್ದು, ರಾಜ್ಯದ ಜನತೆಗೆ ಮುಷ್ಕರದ ಬಿಸಿ ತಟ್ಟಿದ್ದು ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ನಡುವೆ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿವೆ. ಮುಷ್ಕರ ಆರಂಭವಾಗುತ್ತಿದ್ದಂತೆ ಡೀಸೆಲ್ ದರ 80 ರ ರೂಪಾಯಿ ಇದೆ ಎಂದು ಹೇಳುತ್ತಿರುವ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಬದಲಿ …
Read More »ಗೋಕಾಕ ಆಸ್ಪತ್ರೆ ಬಳಿ ಗಲಾಟೆ: ನ್ಯಾಯವಾದಿ ಗಿಡ್ಡನವರ ಸೇರಿ ಮೂವರ ಬಂಧನ, ಹಿಂಡಲಗಾ ಜೈಲಿಗೆ ರವಾನೆ
ಗೋಕಾಕ ತಾಲೂಕು ಆಸ್ಪತ್ರೆ ಬಳಿ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ವಕೀಲರ ನಡುವೆ ನಿನ್ನೆ ನಡೆದ ಘರ್ಷಣೆಗೆ ಸಂಬಂಧಿಸಿ ಜಾರಕಿಹೊಳಿ ಪರವಾಗಿ ನೀಡಿದ ದೂರನ್ನು ಪೊಲೀಸರು ದಾಖಲಿಸಿಕೊಂಡು ನ್ಯಾಯವಾದಿ ಚೆನ್ನಬಸು ಗಿಡ್ನವರ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಗೋಕಾಕ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯುನಲ್ಲಿ ದಾಖಲಾಗಿದ್ದಾರೆ ಎನ್ನಲಾದ ರಮೇಶ ಜಾರಕಿಹೊಳಿ ಅವರನ್ನು ಕಾಣಲು ನ್ಯಾಯವಾದಿ ಚೆನ್ನಬಸವ ಚಂದನ ಗಿಡ್ಡನವರ ಮತ್ತು …
Read More »ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ
ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು. ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …
Read More »ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು
ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …
Read More »
Laxmi News 24×7