Breaking News

ಜಿಲ್ಲೆ

ರಾಜಕೀಯ ಸಮಾವೇಶಗಳಲ್ಲಿ ಇಲ್ಲದ ನಿರ್ಬಂಧ ಸಿನಿಮಾ ಥಿಯೇಟರ್‌ಗೆ ಏಕೆ..?: ದುನಿಯಾ ವಿಜಿ

ದಾವಣಗೆರೆ: ರಾಜಕೀಯ ಸಮಾವೇಶಗಳಲ್ಲಿ ಸಾವಿರಾರು ಜನ ಸೇರ್ತಾರೆ. ಅದಕ್ಕೆ ನಿರ್ಬಂಧ ಇಲ್ಲ. ಎಲ್ಲೂ ಇಲ್ಲದ ನಿಯಮಗಳು ಸಿನಿಮಾ ಥಿಯೇಟರ್‌ಗೆ ಏಕೆ ಎಂದು ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ಪ್ರಶ್ನಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಿಹರದ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಥಿಯೇಟರ್‌ಗಳಿಗೆ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂಬ ಸರ್ಕಾರದ ಅದೇಶಕ್ಕೆ ಪ್ರತಿಕ್ರಿಯಿಸಿದರು. ಅಲ್ಲದೆ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು. ಎಲ್ಲೂ ಇಲ್ಲದ ನಿಯಮಗಳು …

Read More »

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು.

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು. ನಗರದ ಸಂಕಮ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಆದೇಶ ಪತ್ರ ನೀಡಿ ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲೆಯಲ್ಲಿ ನಾಡ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಸಮರ ಮಾಡುವುದಾಗಿ ತಿಳಿಸಿದರು. ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾ ಅಧ್ಯಕ್ಷರಾದ ಅಭಿಲಾಷ್ …

Read More »

ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ: ಲಂಚಕ್ಕಾಗಿ ಬೇಡಿಕೆ ಇಟ್ಟು ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಒಬ್ಬರು ಶನಿವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚದ ಸಮೇತ ವೈದ್ಯನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ. ಡಾ.ವಿರೇಂದ್ರ ಕುಚಬಾಳ ಎಸಿಬಿ ಬಲೆಗೆ ಬಿದ್ದ ವೈದ್ಯ. ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಕಿತ್ತೂರು ತಾಲೂಕು ದಾಸ್ತಿಕೊಪ್ಪ ಮೂಲಕ …

Read More »

ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅಬ್ಬರದ ಪ್ರಚಾರ

ಸವದತ್ತಿ ವಿಧಾನಸಭಾ ಮತಕ್ಷೇತ್ರದ ಮಬನೂರ, ಬೆನಕಟ್ಟಿ, ಮುನವಳ್ಳಿ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕೈಗೊಂಡು, ಮತಯಾಚನೆ ಮಾಡಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. “ರಾಜ್ಯ ಹಾಗೂ ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ಜನರು ಒಂದಾಗಬೇಕು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿ, ಜನವಿರೋಧಿ ಸರ್ಕಾರಗಳಿಗೆ ತಕ್ಕ ಉತ್ತರ ನೀಡಬೇಕು” ಎಂದು ಮನವಿ …

Read More »

LSD ಡ್ರಗ್ಸ್ ಡೀಲ್ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಸಿಸಿಬಿ ಬಲೆಗೆ

ಬೆಂಗಳೂರು, ಏಪ್ರಿಲ್ 03: ವಿದೇಶದಿಂದ ಡ್ರಗ್ ತರಿಸಿ ಡೀಲಿಂಗ್ ಮಾಡುತ್ತಿದ್ದ ಇಬ್ಬರು ಡ್ರಗ್ ಡೀಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ಮತ್ತು ಜಯನಗರ ಸುತ್ತಮುತ್ತ ಡ್ರಗ್ ವಹಿವಾಟು ನಡೆಸುತ್ತಿದ್ದ ಇಬ್ಬರು ಆರೋಪಿಗಳು ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಹತ್ತು ಲಕ್ಷ ರೂ. ಮೌಲ್ಯದ ಎಕ್ಸ್ ಟಸಿ ಪಿಲ್ಸ್ ಮತ್ತು ಎಲ್‌ಎಸ್ ಡಿ ಸ್ಟ್ರಿಪ್ಸ್ ವಶಪಡಿಸಿಕೊಂಡಿದ್ದಾರೆ. ಜಯನಗರದ ನಿವಾಸಿ ಜೇಡನ್ ಸೌದ್ ಮತ್ತು ಬನಶಂಕರಿ ನಿವಾಸಿ ನಾಗರಾಜ್ ರಾವ್ ಬಂಧಿತ ಅರೋಪಿಗಳು. …

Read More »

ಕೊರೋನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ಸಚಿವ ಸುಧಾಕರ್

ಬೆಂಗಳೂರು, ಏ.3- ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳನ್ನು ತಡೆಗಟ್ಟಬೇಕಾದ ಅಗತ್ಯವಿರುವ ಕಾರಣ ಸರ್ಕಾರದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಲಹಾ ಸಮಿತಿಯವರ ಶಿಫಾರಸಿನ ಮೇಲೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ ಮಾರ್ಗಸೂಚಿಯನ್ನು ಜಾರಿ ಮಾಡಲಾಗಿದೆ. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ ಎಂದು ಹೇಳಿದರು. ವೈಜ್ಞಾನಿಕ ವರದಿ ಆಧಾರದ ಮೇಲೆ ಕ್ರಮ ಕೈಗೊಂಡಿದ್ದೇವೆ. ಏಕಾಏಕಿ ಈ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!

ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು     ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …

Read More »

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ …

Read More »

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “ ಹಿರೇ ಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಜನಪ್ರತಿನಿಧಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಬರಲಿರುವ ಲೋಕಸಭಾ ಉಪ ಚುನಾವಣೆಯ ಸಲುವಾಗಿ ಸಭೆಯನ್ನು ನಡೆಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು. ಕಾಂಗ್ರೆಸ್ ಪಕ್ಷವು ಬಡವರ, ಶ್ರಮಿಕರ ಹಾಗೂ ನಿರ್ಗತಿಕರ ಪಕ್ಷವಾಗಿ ಹೊರಹೊಮ್ಮಿದ್ದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕಾರ್ಯರೂಪಕ್ಕೆ ತಂದಿದೆ, ನೂರಾರು ವರ್ಷಗಳ ಇತಿಹಾಸವಿರುವ …

Read More »