Breaking News

ಜಿಲ್ಲೆ

ಕೆಂಪು, ಹಳದಿ ಬಾವುಟ ಹಾಕಿಕೊಂಡು ಓಡಾಡಿದ್ರೆ ಅಟ್ಟಾಡಿಸಿ ಹೊಡೀತಾನಂತೆ…!!

ಬೆಳಗಾವಿ: ಕನ್ನಡಿಗರನ್ನೆ ಅಟ್ಟಾಡಿಸಿ ಹೊಡ್ತಿವಿ ಎಂದು ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ಹೂಂಕರಿಸಿ ಸಂಕಷ್ಟಕ್ಕೆ ಬಿದ್ದಿದ್ದಾನೆ. ಬೆಳಗಾವಿ ನೆಲದಲ್ಲಿ ನಿಂತುಕೊಂಡು ಈ ರೀತಿ ಧಮ್ಕಿ ಹಾಕಿದವ ಎಂಇಎಸ ಮುಖಂಡ ಶುಭಂ ಸಾಳುಂಕೆ. ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಎರಡು ಒಂದಾಗಿವೆ ಎಂದಿರುವ ಸಾಳುಂಕೆ, ಹಳದಿ ಕೆಂಪು ಬಣ್ಣದ ಶಾಲು ಧರಿಸಿದವರನ್ನು ಸಿಕ್ಕ ಸಿಕ್ಕಲ್ಲಿ ನಾವು ಹೊಡ್ತಿವಿ ಎಂದಿದ್ದಾನೆ. ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದು ಕನ್ನಡಿಗರು ಮತ್ತು ಸರಕಾರಕ್ಕೆ ಎಚ್ಚರ …

Read More »

ಈ ಸಾಲಿನ ಬಜೆಟ್ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ: ಸಿದ್ದರಾಮಯ್ಯ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಮಾರಕವಾಗಿದೆ. ಕಾರಣ ಈ ಸಾಲಿನಲ್ಲಿ ರಾಜಸ್ವ ಆದಾಯಕ್ಕಿಂತ ರಾಜಸ್ವ ಖರ್ಚು ಹೆಚ್ಚಾಗುವ ಮೂಲಕ ಮೊದಲನೇ ಬಾರಿಗೆ ರಾಜಸ್ವ ಖೋತಾ‌ ಅಥವಾ ರಾಜಸ್ವ ಕೊರತೆ ಉಂಟಾಗಿದೆ. 2004 ರ ನಂತರ ವಿತ್ತೀಯ ಹೊಣೆಗಾರಿಕೆ ನೀತಿಯನ್ನು ಕರ್ನಾಟಕ ಅಳವಡಿಸಿಕೊಂಡ ನಂತರದಲ್ಲಿ ಇಂಥದ್ದೊಂದು ರಾಜಸ್ವ ಕೊರತೆಯ ಬಜೆಟ್‌ ಈ ವರೆಗೆ ಮಂಡನೆಯಾಗಿರಲಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ …

Read More »

ಯುವತಿಯ ಪ್ರಿಯತಮ ಎಸ್‌ಐಟಿ ಮುಂದೆ ಹಾಜರಾಗಿ ಸತ್ಯ ಬಾಯಿ ಬಿಟ್ಟಿದ್ದಾನೆ…

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆಯ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಯ ಪ್ರಿಯತಮನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ತನಿಖೆ ವೇಳೆ ಯುವತಿಯ ಪ್ರಿಯತಮ ಎಸ್‌ಐಟಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾನೆ. ಯುವತಿ ತನ್ನ ಪ್ರಿಯಕರನಿಗೆ ಸಿಡಿಯ ಕಥೆ ಹೇಳದೆಯೇ ಮಾಹಾಮೊಸ ಮಾಡಿದ್ದಾಳೆ ಎಂದು ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ ಯುವತಿ ಪ್ರಿಯತಮ ಸತ್ಯ ಬಾಯಿ ಬಿಟ್ಟಿದ್ದಾನೆ. ಸಚಿವರೊಬ್ಬರಿಗೆ ವಂಚನೆ ಮಾಡುತ್ತಿರೋ ವಿಚಾರ ಪ್ರಿಯತಮನಿಗೆ ಗೊತ್ತಿತ್ತಂತೆ. ಆದರೆ ರಾಸಲೀಲೆ ಸಿಡಿ …

Read More »

ಶಿವಸೇನೆ ಕಚೇರಿ ಮುಚ್ಚಿಸಲು ವಾಹನಗಳ ಜಪ್ತಿಗೆ ಕನ್ನಡ ಕ್ರಿಯಾ ಸಮಿತಿ ಆಗ್ರಹ

  ಕರ್ನಾಟಕ, ಕನ್ನಡಿಗರ ವಿರುದ್ಧವೇ ನಾಡದ್ರೋಹಿ ಚಟುವಟಿಕೆ ನಡೆಸುವ ಶಿವಸೇನೆಗೆ ಕರ್ನಾಟಕದ ನೆಲದಲ್ಲಿಯೇ ಕಾರ್ಯಾಲಯ ನಡೆಸಲು ಅವಕಾಶ ಮಾಡಿಕೊಡುವದು ಎಷ್ಟು ಸರಿ? ನಮ್ಮ ವಿರುದ್ಧವೇ ಪಿತೂರಿ ನಡೆಸುವ ಇಂಥ ಸಂಘಟನೆಯ ವಾಹನಗಳು ನಮ್ಮ ಮುಂದೆಯೇ ನಾಮಫಲಕ ಹಾಕಿಕೊಂಡು ಸಂಚರಿಸಲು ಅವಕಾಶ ಮಾಡಿಕೊಡುವದು ಎಷ್ಟು ಸಮಂಜಸ?   ಕೂಡಲೇ ಶಿವಸೇನೆಯ ಬೆಳಗಾವಿ ಕಾರ್ಯಾಲಯವನ್ನು ಮುಚ್ಚಿಸಬೇಕು ಮತ್ತು ಈ ಸಂಘಟನೆಯ ವಾಹನಗಳನ್ನು ಜಪ್ತಿ ಮಾಡಬೇಕೆಂದು ಆಗ್ರಹಿಸುವ ಮನವಿಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ …

Read More »

ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ

ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …

Read More »

CD ಪ್ರಕರಣ; ನೆರೆಯ 3 ರಾಜ್ಯಗಳಲ್ಲಿ ಆರೋಪಿಗಳ ಓಡಾಟ ಪತ್ತೆ ಹಚ್ಚಿದ SIT

ಬೆಂಗಳೂರು: ಮಾಜಿ ಸಚಿವರ CD ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್​​ಪಿನ್​​ಗಳಿಗಾಗಿ ಎಸ್​​ಐಟಿ ಅಧಿಕಾರಿಗಳು ಶೋಧಕಾರ್ಯ ಆರಂಭಿಸಿದ್ದಾರೆ. ಸದ್ಯ ಆರೋಪಿಗಳು ಮೊಬೈಲ್ ಸ್ವಿಚ್​ಆಫ್ ಮಾಡಿಕೊಂಡು ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಬ್ಬರು ಕಿಂಗ್​ಪಿನ್​ಗಳು ಒಟ್ಟಿಗೆ ಇರುವ ಬಗ್ಗೆ ಅಧಿಕಾರಿಗಳ ತನಿಖೆ ವೇಳೆ ಗೊತ್ತಾಗಿದೆ. ಸಿಡಿ ಲೀಕ್ ಮಾಡಿದ ಪ್ರಮುಖ ಕಿಂಗ್​ಪಿನ್ ಹಾಗೂ ರಷ್ಯಾ ವೆಬ್ ಸೈಟ್ ಮೂಲಕ ವಿಡಿಯೋ ಅಪ್​​ಲೋಡ್ ಮಾಡಿದ್ದ ಹ್ಯಾಕರ್ ಇಬ್ಬರು, ಸಿಡಿ ರಿಲೀಸ್ ಆದ ಬೆನ್ನಲ್ಲೇ ಮೊಬೈಲ್ ಸ್ವಿಚ್​ಆಫ್ …

Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಶಿವರಾಜ್ ಕುಮಾರ್

ಬೆಂಗಳೂರು: ಸ್ಯಾಂಡಲ್ ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಡಿ ಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ಇಂದು ಬೆಳಗ್ಗೆ ಶಿವರಾಜ್ ಕುಮಾರ್ ಭೇಟಿಯಾದರು. ಜೆಡಿಎಸ್ ನಲ್ಲಿದ್ದ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅವರ ಸಹೋದರಿ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿಗಳ ನಡುವೆ …

Read More »

ಪಂಚಮಸಾಲಿ ಮೀಸಲಾತಿ ಹೋರಾಟ ತಾತ್ಕಾಲಿಕ ಮೊಟಕುಗೊಳಿಸಿ; ಸ್ವಾಮೀಜಿಗೆ ಶಾಸಕ ಯತ್ನಾಳ್ ಮನವಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಮುಂದುವರೆದಿದೆ. ಈ ನಡುವೆ ಹೋರಾಟ ಕೈಬಿಡುವಂತೆ ಸ್ವತಃ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಶಾಸಕ ಯತ್ನಾಳ್, ಪಂಚಮಸಾಲಿ ಮೀಸಲಾತಿ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಎದ್ದು ನಿಂತ ಸಿಎಂ ಬಿ.ಎಸ್. ಯಡಿಯೂರಪ್ಪ ಮೀಸಲಾತಿಗೆ ಸಂಬಂಧಿಸಿದಂತೆ ಇನ್ನು 6 ತಿಂಗಳಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ, ಸಮಿತಿ ವರದಿ ತರಿಸಿಕೊಳ್ಳುತ್ತೇನೆ. ನಂತರ …

Read More »

ಸಿಡಿ ಡೀಲ್‌ ದುಡ್ಡಲ್ಲಿ ಐಶಾರಾಮಿ ಕಾರು, ಕಾಫಿ ತೋಟ ಖರೀದಿಸಲು ಹೊರಟಿದ್ದ ಪತ್ರಕರ್ತ!!

ಬೆಂಗಳೂರು: ರಮೇಶ್‌ ಜಾರಕಿಹೊಳಿ ಅಶ್ಲೀಲ ಸಿಡಿ ಹಗರಣ ಸಂಬಂಧ ಬಂಧಿತರಾಗಿರುವ ಪತ್ರಕರ್ತರಲ್ಲಿ ಒಬ್ಬನಾದ ತುಮಕೂರಿನ ಶಿರಾ ಮೂಲದ ಕಿಂಗ್​ಪಿನ್ ಸಿಡಿ ಡೀಲ್‌ ದುಡ್ಡಲ್ಲಿ ಎರಡು ಐಶಾರಾಮಿ ಕಾರು ಖರೀದಿಸಲು ಮುಂದಾಗಿದ್ದ ಎಂದು ತಿಳಿದುಬಂದಿದೆ. ಮಹೀಂದ್ರಾ ಎಕ್ಸ್‌ಯುವಿ-500 ಹಾಗೂ ಥಾರ್‌ ಜೀಪ್‌ ಖರೀದಸಲು ಆತ ಮುಂದಾಗಿದ್ದ ಎಂದು ಎಸ್‌ಐಟಿ ತನಿಖೆಗಳಿಂದ ತಿಳಿದುಬಂದಿದೆ. ಮಹೀಂದ್ರಾ ಕಾರು ಖರೀದಿಗೆ ಒಂದೂವರೆ ಲಕ್ಷ ಹಾಗೂ ಥಾರ್‌ ಜೀಪ್‌ಗಾಗಿ 25 ಸಾವಿರ ರೂ. ಅಡ್ವಾನ್ಸ್‌ ನೀಡಿದ್ದ ಎಂದು …

Read More »

ರಮೇಶ್ ಜಾರಕಿಹೊಳಿ ಎಫ್‌ಐಆರ್ ಎಸ್‌ಐಟಿಗೆ ವರ್ಗಾವಣೆ!

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಎಸ್‌ಐಟಿ ತಂಡ ಸದಾಶಿವನಗರ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ತಮ್ಮ ಸುಪರ್ದಿಗೆ ಪಡೆದಿದ್ದು ಕಾನೂನಾತ್ಮಕವಾಗಿ ತನಿಖೆ ಕೈಗೆತ್ತಿಕೊಂಡಿದೆ‌. ಇದೇ ವೇಳೆ ಸಂತ್ರಸ್ತೆ ಸೇರಿ ಮೂವರಿಗೆ ಎಸ್‌ಐಟಿ ನೋಟಿಸ್ ನೀಡಿ ವಿಚಾರಣೆಗೆ ಬುಲಾವ್ ನೀಡಿದ್ದಾರೆ. ಸಿಡಿ ಪ್ರಕರಣದ ಸಂಬಂಧ ನಿನ್ನೆ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದರು. ಇಂದು ರಮೇಶ್ ಜಾರಕಿಹೊಳಿ ಎಫ್‌ಐಆರ್ ಎಸ್‌ಐಟಿ ತನಿಖೆಗೆ ವರ್ಗಾವಣೆ …

Read More »