Breaking News

ಜಿಲ್ಲೆ

ಆದಷ್ಟು ಬೇಗ ರಮೇಶ್ ಆರೋಪ ಮುಕ್ತರಾಗಿ ಹೊರ ಬರುತ್ತಾರೆ: ಮುರುಗೇಶ ನಿರಾಣಿ

ಧಾರವಾಡ : ರಮೇಶ್ ಜಾರಕಿಹೊಳಿ ಕುರಿತ ರಾಸಲೀಲೆ ವಿಡಿಯೋ ನಕಲಿ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ತನಿಖೆಗೂ ಸಹ ಸರ್ಕಾರ ಸೂಚಿಸಿದೆ. ಆದಷ್ಟು ಬೇಗ ರಮೇಶ್ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆಗೆ ತನ್ನದೇ ಆದ ರೀತಿ, ನಿಯಮಗಳಿರುತ್ತವೆ ಆ ಪ್ರಕಾರ ತನಿಖೆ ನಡೆಸುತ್ತದೆ. ರಮೇಶ್ ಅವರು …

Read More »

ಸಿಡಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಖಡಕ್ ಅಧಿಕಾರಿಗಳನ್ನು ಹೊಂದಿರುವ ತಂಡ ರಚನೆ

ಬೆಂಗಳೂರು, ಮಾರ್ಚ್‌ 12: ಬೆಳಗಾವಿ ಸಾಹುಕಾರ್ ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಖಡಕ್ ಅಧಿಕಾರಿಗಳನ್ನು ಹೊಂದಿರುವ ತಂಡ ರಚನೆಯಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಅವರ ಮಾರ್ಗದರ್ಶನದಲ್ಲಿ ಸಿಡಿ ಪ್ರಕರಣದ ತನಿಖೆ ನಡೆಸಲಿದ್ದಾರೆ. ಇನ್ನೂ ಕೇವಲ ತನಿಖೆ ನಡೆಸಿ ವರದಿ ಸಲ್ಲಿಸುವ ವಿಚಾರವಾಗಿ ಈ ತಂಡವನ್ನು ರಚನೆ ಮಾಡಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಆದೇಶದ ಹಿನ್ನೆಲೆಯಲ್ಲಿ ಇದೀಗ ಪೂರ್ಣ ಪ್ರಮಾಣದ …

Read More »

ಕೊಲ್ಹಾಪುರದಲ್ಲಿ ಕನ್ನಡ ನಾಮಫಲಕಗಳಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದ ಪ್ರಕರಣಕ್ಕೆ ಕರವೇ ಕಾರ್ಯಕರ್ತರ ತಿರುಗೇಟು

ಬೆಳಗಾವಿ: ಕೊಲ್ಹಾಪುರದಲ್ಲಿ ಕನ್ನಡ ನಾಮಫಲಕಗಳಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದ ಪ್ರಕರಣಕ್ಕೆ ಕರವೇ ಕಾರ್ಯಕರ್ತರು ತಿರುಗೇಟು ನೀಡಿದ್ದು, ಬೆಳಗಾವಿಯಲ್ಲಿ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಹೊರವಲಯದ ಗಾಂವಕರಿ ಹೋಟೆಲ್, ಡಾಬಾ, ಅಂಗಡಿ ಮುಂಗಟ್ಟುಗಳ ಮೇಲೆ ಹಾಕಿದ್ದ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು, ಕೆಲ ನಾಮಫಲಕಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಶಿವಸೇನೆ ನಾಯಕನ ವಿರುದ್ಧ …

Read More »

ಬಿಎಸ್ ವೈ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ: ಕಾಂಗ್ರೆಸ್

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಗುರುವಾರ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಪದವಿ ಮುಂದಿರುವ ಉಪ ಹೋಗಿ ಆದಷ್ಟು ಬೇಗ ಮುಖ್ಯಮಂತ್ರಿಯಾಗಲಿ ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದರು. ಈ ಹೇಳಿಕೆಯನ್ನೇ ದಾಳವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್, ಬಿಎಸ್ ಯಡಿಯೂರಪ್ಪ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ …

Read More »

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ. ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಹಾಗೂ ಓರ್ವ ಯುವತಿ ಸೇರಿದಂತೆ ಒಟ್ಟು ನಾಲ್ವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ವಿಜಯನಗರ ಹಾಗೂ ಚಾಮರಾಜಪೇಟೆಯಲ್ಲಿ ರೂಂ ಮಾಡಿಕೊಂಡಿದ್ದ ಇಬ್ಬರು ಯುವಕರು ಹಾಗೂ ಚಿಕ್ಕಮಗಳೂರಿನ …

Read More »

ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ: ಎಚ್ ಡಿ ರೇವಣ್ಣ

ಹಾಸನ, ಮಾರ್ಚ್.12: ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ ಕಣ್ರಿ.. ರಾಜಕಾರಣಿಗಳಿಗೆ ಮನುಷ್ಯತ್ವ ಇರಬೇಕು” ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಎಚ್ ಡಿ ರೇವಣ್ಣ, ನಾವು ಮೊದಲು ಮನುಷ್ಯತ್ವನ್ನು ಹೊಂದಿರಬೇಕು ಎಂದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಹಳ ಕಷ್ಟಪಟ್ಟು ಮೇಲೆ ಬಂದವರು. ಒಳ್ಳೆಯದ್ದು ಮತ್ತು ಕೆಟ್ಟದ್ದನ್ನು ದೇವರಿಗೆ …

Read More »

ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…

ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್‌ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …

Read More »

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ 100 ಅಡಿ ಅಗಲದ ಜಲಪಾತ

ಬೆಂಗಳೂರು, ಮಾರ್ಚ್ 11: ಐಟಿ ಸಿಟಿ, ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು ಮಹಾ ಶಿವರಾತ್ರಿ ದಿನದಂದು ಆ ಯೋಜನೆ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಉದ್ಯಾನನಗರಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ್ಯಾಂಕಿ ಕೆರೆಯ ಈಜುಕೊಳದ ಪಕ್ಕದಲ್ಲಿ ಜಲಪಾತ ನಿರ್ಮಿಸುವ ಸಂಬಂಧ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು ಸ್ಥಳ ಪರಿಶೀಲನೆ ನಡೆಸಿದರು. ಈ ಮೂಲಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ …

Read More »

ED ಹೆಸರಲ್ಲಿ ಬ್ಯಾಂಕ್​ಗಳಿಗೆ ನಕಲಿ ಪತ್ರಗಳನ್ನು ಕಳುಹಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ED ಹೆಸರಲ್ಲಿ ಬ್ಯಾಂಕ್​ಗಳಿಗೆ ನಕಲಿ ಪತ್ರಗಳನ್ನು ಕಳುಹಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮದುಕರ್​ ಸಪಳೆ ಬಂಧಿತ ಆರೋಪಿ. ಬೆಳಗಾವಿಯ ಶಾಸ್ತ್ರೀನಗರದ ನಿವಾಸಿಯಾದ ಆರೋಪಿ ಖಾಸಗಿ ಇನ್ಶೂರೆನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇವನ ಬಳಿ ಬರುವ ಗ್ರಾಹಕರಿಗೆ ಬಣ್ಣ, ಬಣ್ಣದ ಮಾತುಗಳನ್ನ ಹೇಳಿ ಅವರ ಇನ್ಶೂರೆನ್ಸ್​ ಹಣವನ್ನ ತನ್ನ ಅಕೌಂಟ್​ಗೆ ಹಾಕಿಸಿಕೊಂಡು ವಂಚನೆ ಮಾಡುತ್ತಿದ್ದ ಅನ್ನೋ ಆರೋಪ ಕೇಳಿ ಬಂದಿದೆ. ಹಣ ಕಳೆದುಕೊಂಡವರು ಬಂದು ಹಣ ಕೇಳಿದರೆ …

Read More »

ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಕೊಡಬೇಕು: ಶ್ರೀಮಂತ ಪಾಟೀಲ

ಬೆಳಗಾವಿ: ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಕೊಡಬೇಕು. ಈ ಬಗ್ಗೆ ನಾನು ಸಹ ಸಿಎಂಗೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಶ್ರೀಮಂತ್ ಪಾಟೀಲ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ‌ ಹೇಳಿದಂತೆ ಸಿಡಿ ಪ್ರಕರಣದ ಬಗ್ಗೆ ಆದಷ್ಟು ಬೇಗ ಉನ್ನತ ಮಟ್ಟದ ತನಿಖೆಯಾಗಬೇಕು. ರಮೇಶ್​ ಒಳ್ಳೆಯ ಮನುಷ್ಯ. ನನ್ನ ಅಭಿಪ್ರಾಯದಂತೆ ಅವರಿಗೆ ಕ್ಲೀನ್ ಚಿಟ್​ ಸಿಗಬಹುದು. ಹೀಗಾಗಿ, ಸಮಗ್ರ ತನಿಖೆ ಆಗಬೇಕು. ಪ್ರಕರಣದಲ್ಲಿ ಯಾರಿದ್ದಾರೋ …

Read More »