Breaking News

ಜಿಲ್ಲೆ

ಸಂಕೇಶ್ವರ: ಹಿಂದೂ ಸಂಘಟನೆ ಕಾರ್ಯಕರ್ತರಿಂದಲೇ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ಕೊಲೆ ಯತ್ನ!

24 ಗಂಟೆಗಳಲ್ಲಿ 7 ಆರೋಪಿಗಳನ್ನು ಬಂಧಿಸಿದ ಸಂಕೇಶ್ವರ ಪೊಲೀಸರು ಹುಕ್ಕೇರಿ: ಸಂಕೇಶ್ವರ ಪಟ್ಟಣದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ನಡೆದ ತಲವಾರ್ ದಾಳಿಯ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಕೇವಲ 24 ಗಂಟೆಗಳೊಳಗಾಗಿ ಬೇಧಿಸಿ ಏಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಕೇಶ್ವರ ಪಟ್ಟಣದ ಸಾಯಿ ಕಾರ್ಯಾಲಯದ ಸಮೀಪ ಸೋಮವಾರ ರಾತ್ರಿ ಅನಾಮಿಕ ಗುಂಪೊಂದು ಕಾರಿನಲ್ಲಿ ಬಂದು ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ದತ್ತಾ ಥೋರವತ್ ಅವರ ಮೇಲೆ ತಲವಾರ್‌ನಿಂದ ಕುತ್ತಿಗೆ …

Read More »

ಕಿತ್ತೂರು ಹಿರೇನಂದಿಹಳ್ಳಿ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು: ಪತ್ನಿ–ಪುತ್ರ ಸೇರಿ ನಾಲ್ವರ ಬಂಧನ

ಬೆಳಗಾವಿ, ಫೆಬ್ರವರಿ 26: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದ ಅಮಾನುಷ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆಗೈದ ಪ್ರಕರಣದಲ್ಲಿ ಮೃತನ ಪತ್ನಿ ಹಾಗೂ ಪುತ್ರನೇ ಸಂಚಿನಲ್ಲಿ ಭಾಗಿಯಾಗಿದ್ದರೆಂಬ ಅಂಶ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಹೊರವಲಯದ ಜಮೀನಿನಲ್ಲಿ ಶವ ಪತ್ತೆಯಾಗಿತ್ತು. ಮೃತರನ್ನು ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ್ …

Read More »

ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ -ಆಸ್ಪತ್ರೆಗೆ ದಾಖಲು

ಚಿಕ್ಕೋಡಿ:ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ. ಅನಾಮಧೇಯ ವ್ಯಕ್ತಿಗಳ ಗುಂಪಿನಿಂದ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಸಂಕೇಶ್ವರ ಪಟ್ಟದಲ್ಲಿ ತಡರಾತ್ರಿ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ದತ್ತಾ ಥೋರವಾತ್ 40 ಯುವಕನ ಮೇಲೆ ಹಲ್ಲೆ ಯುವಕನ ಕೈ ಹಾಗೂ ಕುತ್ತಿಗೆಯ ಭಾಗಕ್ಕೆ ತಲವಾರದಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿ. ಮಹಾರಾಷ್ಟ್ರ ರಾಜ್ಯದ ಗಡಹಿಂಗ್ಲಜ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನೆ …

Read More »

ಮಾಜಿ ಸಚಿವ ಎ.ಬಿ. ಪಾಟೀಲ ಹಾಗೂ ನಾನು ಒಂದೇ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಸಂಘ- ಸಂಸ್ಥೆ ವಿಚಾರ ಬಂದಾಗ ಎ. ಬಿ. ಪಾಟೀಲ ಹಾಗೂ ನಾವು ಬೇರೆ ಬೇರೆ, ಆದರೆ ಪಕ್ಷದ ವಿಚಾರ ಬಂದಾಗ ನಾವು ಅವರು ಒಂದೇ ಎಂದು ಲೋಕೋಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯವಾಗಿ ಸಂಘ-ಸಂಸ್ಥೆಗಳ ಚುನಾವಾಣೆ ಬಂದಾಗ ಮಾಜಿ ಸಚಿವ ಎ.ಬಿ.ಪಾಟೀಲ ಅವರು ಬೇರೆ ಬೇರೆಯಾಗಿದ್ದೇವೆ ಹೊರತು ಪಕ್ಷದ ವಿಚಾರ ಬಂದಾಗ ನಾವು ಅವರು ಕೂಡಿ ಪ್ರಚಾರ ಮಾಡುತ್ತೇವೆ. ಈ ಕುರಿತು …

Read More »

ಅಥಣಿ:ಡಯಾಬಿಟಿಸ್‌ಗೆ ಬಲಿಯಾದ 9ನೇ ತರಗತಿ ವಿದ್ಯಾರ್ಥಿನಿ

ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ತಡರಾತ್ರಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟ ದುರ್ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಂಜಲಿ ಮಂಜುನಾಥ್ ಗುಜ್ಜರ್ (14) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಅಂಜಲಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಪ್ರತಿದಿನವೂ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಳು ಎನ್ನಲಾಗಿದೆ. ನಿನ್ನೆ ಏಕಾಏಕಿ ಅಂಜಲಿ ಪ್ರಜ್ಞಾಹೀನ …

Read More »

ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ವಂಚನೆ: ಆರೋಪಿಗಳಿಬ್ಬರ ಬಂಧನ

ಬೆಂಗಳೂರು: ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಹಣ ವಸೂಲಿ ಮಾಡಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ ಬನಶಂಕರಿಯಲ್ಲಿರುವ ಜಿಎಸ್‌ಟಿ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್ ಹಾಗೂ ದಾದಾಪೀರ್ ಅಧಿಕಾರಿಗಳ ಸೋಗಿನಲ್ಲಿ ವಂಚಿಸಿದ್ದಾರೆ. ಈ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಾಪಾರಿಯ ಬಳಿ ತಾವು ಜಿಎಸ್‌ಟಿ ಅಧಿಕಾರಿಗಳು ಎಂದು ಹೇಳಿಕೊಂಡು ಆತನನ್ನು ಬೆದರಿಸಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಹೊರಗುತ್ತಿಗೆ ಆಧಾರದಲ್ಲಿ …

Read More »

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ನೆಲೆ ಮೇಲೆ ಖಾಕಿದಾಳಿ 20 ಮಂದಿ ವಶಕ್ಕೆ!

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳ ಅಡಗುತಾಣಗಳ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 20 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್‌ ಆಯುಕ್ತ ಸೀಮಂತ್ ಕುಮಾ‌ರ್ ಸಿಂಗ್‌ ಅವರ ಆದೇಶದ ಮೇರೆಗೆ ಈ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿ ಆಧರಿಸಿ, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರಿನ ಹಲವು ಭಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಯಿತು. ರಾಮಮೂರ್ತಿ …

Read More »

ಬೆಳಗಾವಿ-ಮುಂಬೈ ವಿಮಾನಯಾನ ಪುನರಾರಂಭ

ಬೆಳಗಾವಿ: ಬೆಳಗಾವಿಯಿಂದ ನವಿಮುಂಬೈ ನಡುವೆ ಮಾ.29ರಿಂದ ಇಂಡಿಗೋ ಸಂಸ್ಥೆ ನೂತನ ವಿಮಾನಯಾನ ಸೇವೆ ಆರಂಭಗೊಳ್ಳಲಿದೆ ಎಂದು ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಕೆಲ ತಿಂಗಳ ಹಿಂದೆ ಸ್ಟಾರ್ ಏರ್ ಸಂಸ್ಥೆ ಬೆಳಗಾವಿ-ಮುಂಬೈ ನಡುವಿನ ವಿಮಾನಯಾನ ಸೇವೆ ರದ್ದುಗೊಳಿ ಸಿತ್ತು. ಇದರಿಂದಾಗಿ ನಾಗರಿಕರಿಗೆ ಅನಾನುಕೂಲತೆ ಎದುರಾಗಿತ್ತು. ಈ ಕುರಿತು ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಭೇಟಿ ಮಾಡಿ ಚರ್ಚಿಸಿದ ಬಳಿಕ ಇಂಡಿಗೋ ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಳಗಾವಿಯಿಂದ ಮುಂಬೈ, …

Read More »

ಬೆಳಗಾವಿ ಮೀಸಲು ಪಡೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಸಂಗಮೇಶ ಅನಿ ‘ಐರನ್ ಮ್ಯಾನ್’ ಪ್ರಶಸ್ತಿ

ಬೆಳಗಾವಿ: ಶ್ರೀಲಂಕಾ ದೇಶದ ಕೋಲಂಬೋ ನಗರದಲ್ಲಿ ನಡೆದ ‘ಐರನ್ ಮ್ಯಾನ್ 70.3’ ಸ್ಪರ್ಧೆಯಲ್ಲಿ ಬೆಳಗಾವಿ ಮೀಸಲು ಪಡೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಸಂಗಮೇಶ ಅನಿ ‘ಐರನ್ ಮ್ಯಾನ್’ ಪ್ರಶಸ್ತಿ ಪಡೆದಿದ್ದಾರೆ. ವಿಶ್ವದ ಅತ್ಯಂತ ಕಠಿಣ, ಬಹುಶಿಸ್ತೀಯ ಸಹಿಷ್ಣುತಾ ಸ್ಪರ್ಧೆಗಳಲ್ಲೊಂದಾದ ಇದು ದೈಹಿಕ ಸಾಮರ್ಥ್ಯ, ಮಾನಸಿಕ ಸ್ಥೈರ್ಯ ಹಾಗೂ ಪರಿಶ್ರಮದ ಪರೀಕ್ಷೆಯಾಗಿದೆ. ಸ್ಪರ್ಧೆಯನ್ನು ಸಂಗಮೇಶ 5.9 ಗಂಟೆಯಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮಳೆಯ ಸವಾಲು ಮೀರಿ 90 ಕಿ.ಮೀ. ಸೈಕ್ಲಿಂಗ್ 2.51 ಗಂಟೆಯಲ್ಲಿ ಪೂರ್ಣಗೊಳಿಸಿದರು. …

Read More »

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯಿಂದ ಶನಿವಾರ ಬಸವ ಜಯಂತಿ ಪೂರ್ವಭಾವಿ ಸಭೆ

ಬೆಳಗಾವಿ: ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕವು ಬಸವ ಜಯಂತಿಯ ಅಂಗವಾಗಿ  ಫೆ.28ರಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಂಡಿದೆ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರ  ಜಯಂತಿಯನ್ನು ವೈಭವದಿಂದ ಆಚರಿಸುವ ಉದ್ದೇಶದಿಂದ ರೂಪರೇಷೆಗಳು, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ಉಪನ್ಯಾಸ, ಸಮಾಜಮುಖಿ ಚಟುವಟಿಕೆ ಹಾಗೂ ವಿವಿಧ ಸಮಿತಿ ರಚನೆ ಕುರಿತು ಚರ್ಚಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ …

Read More »