Breaking News

ಜಿಲ್ಲೆ

‘ನಾನು ನಿರಪರಾಧಿ, ಅಪರಾಧಿಯಲ್ಲ’ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಹೊರಬಂದ ದಿನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಬಳಿಕ ನಾಪತ್ತೆಯಾಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಂಗಳೂರಿನ ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ನಡೆಸುತ್ತಿರುವ ಮೊದಲ ಸುದ್ದಿಗೋಷ್ಠಿ ಇದಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ವಂದನೆ. ನನಗೆ ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್‌ ಯಡಿಯೂರಪ್ಪ, ಮಾಜಿ …

Read More »

ಯುದ್ಧ ನೌಕೆಗೆ ಮಹಿಳೆಯರ ನೇಮಕ

ಹೊಸದಿಲ್ಲಿ: ಭಾರತೀಯ ನೌಕಾ ಪಡೆ ವಿಶ್ವ ಮಹಿಳಾ ದಿನಾಚರಣೆಗೆ ವಿಶಿಷ್ಟ ಕೊಡುಗೆ ನೀಡಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ 23 ವರ್ಷಗಳ ಬಳಿಕ ಯುದ್ಧ ನೌಕೆಗೆ ನಾಲ್ವರು ಮಹಿಳೆಯರನ್ನು ನೇಮಕ ಮಾಡಲಾಗಿದೆ. ಐಎನ್‌ಎಸ್‌ ವಿಕ್ರಮಾದಿತ್ಯ ವಿಮಾನ ವಾಹಕ ನೌಕೆಗೆ ಇಬ್ಬರು, ಐಎನ್‌ಎಸ್‌ ಶಕ್ತಿ ಟ್ಯಾಂಕರ್‌ಗೆ ಇಬ್ಬರು ಸೇರಿದಂತೆ ನಾಲ್ವರು ಮಹಿಳೆಯರನ್ನು ನೌಕಾಪಡೆಯ ಮುಂಚೂಣಿ ಜಾಗಕ್ಕೆ ನೇಮಕ ಮಾಡಲಾಗಿದೆ. 1998ರಲ್ಲಿ ಮೊಟ್ಟ ಮೊದಲ ಬಾರಿಗೆ ಯುದ್ಧನೌಕೆಗೆ ಮಹಿಳೆಯರನ್ನು ನೇಮಕ ಮಾಡಲಾಗಿತ್ತು. ಆದರೆ, ಕಾರಣಾಂತರಗಳಿಂದ ಅನುಷ್ಠಾನ …

Read More »

ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಇಂದಿರಾ ಕ್ಯಾಂಟೀನ್ ಗೂ ಇಲ್ಲ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಗೆ ಅನುದಾನ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಅನ್ನಭಾಗ್ಯ’ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆಜಿಗೆ ಇಳಿಕೆ ಮಾಡಿದೆ. ಆದರೆ, ಸಿಎಂ ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಪಡಿತರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಿಲ್ಲ. ‘ಅನ್ನಭಾಗ್ಯ’ ಮತ್ತು ‘ಕ್ಷೀರ ಭಾಗ್ಯ’ …

Read More »

ಬೆಳಗಾವಿಯಲ್ಲಿ ಆತ್ಮನಿರ್ಭರ ಮಹಿಳೆ; ರೊಟ್ಟಿ ತಯಾರಿಸಿ 40 ಕುಟುಂಬಗಳಿಗೆ ಆಸರೆಯಾದ ಮಹಾದೇವಿ ಕಬ್ಬೂರು

ಬೆಳಗಾವಿ (ಮಾ. 7): ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಕೇವಲ ಅಡುಗೆ ಮಾಡೋದು ಮಕ್ಕಳು ಸಂಸಾರ ನೋಡಿಕೊಂಡು ಹೋಗುವವರೇ ಜಾಸ್ತಿ. ಆದರೆ, ಇಲ್ಲೋರ್ವ ಮಹಿಳೆ ತನ್ನ ಸಂಸಾರ ಜೊತೆಗೆ ಇತರೆ 40 ಜನರ ಸಂಸಾರಕ್ಕೂ ಆಸರೆಯಾಗಿದ್ದಾರೆ. ಅವರ ಒಂದೇ  ಒಂದು ಕೆಲಸ 40 ಕುಟುಂಬಗಳಿಗೆ ಆಸರೆಯಾಗಿದೆ. ಹಾಗಾದರೆ ಯಾರು ಆ ಮಹಿಳೆ? ಏನು ಆ ಕೆಲಸ ಅಂತೀರಾ? ಈ ಸ್ಟೋರಿ ಓದಿ… ‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ಆಳಬಲ್ಲದು’ ಎಂಬ …

Read More »

ಬೆಳಗಾವಿಯಲ್ಲಿ ಆರಂಭಗೊ0ಡಿದೆ ಪಾಲಿಕೆಯ ಕನ್ನಡ ಧ್ವಜ ತೆರವುಗೊಳಿಸುವಂತೆ ಎಂಇಎಸ ಪ್ರತಿಭಟನಾ ಮೆರವಣಿಗೆ..

ಬೆಳಗಾವಿ ಮಹಾಪಾಲಿಕೆ ಎದುರಿನ ಕನ್ನಡ ಧ್ವಜವನ್ನ ತೆರವುಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ರ‍್ಯಾಲಿಯನ್ನ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಧರ್ಮವೀರ ಸಂಭಾಜೀ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ್ಲ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಮೆರವಣಿಗೆ ಆರಂಭಗೊAಡಿತು. ಈ ವೇಳೆ ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಭಗವಾ ಧ್ವಜವನ್ನ ಹಾರಿಸಲೇ ಬೇಕೆಂದು ಘೋಷಣೆಗಳನ್ನ ಕೂಗಿದರು. ಮಾಜಿ ಮಹಾಪೌರ ಸರೀತಾ ಪಾಟೀಲ ಅವರು …

Read More »

ಕರ್ನಾಟಕ ಬಜೆಟ್ 2021: ಸಾರಿಗೆ ವಲಯಕ್ಕೆ ನೀಡಿದ ಕೊಡುಗೆಗಳೇನು?

ಬೆಂಗಳೂರು, ಮಾರ್ಚ್ 05: ಕೊರೊನಾ ಸೋಂಕಿನಿಂದಾಗಿ ನಷ್ಟ ಅನುಭವಿಸಿರುವ ಸಾರಿಗೆ ವಲಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. 2021-22ರ ಸಾಲಿನಲ್ಲಿ 7,515 ಕೋಟಿ ರೂ. ಆದಯಾ ಸಂಗ್ರಹಣೆಯ ಗುರಿಯನ್ನು ಹಾಕಲಾಗಿದೆ. ಈ ವರ್ಷ ರಾಜ್ಯದಲ್ಲಿ 52 ಬಸ್‌ ನಿಲ್ದಾಣ, 16 ಬಸ್‌ ಘಟಕಗಳ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ.   2020-21ರ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆ 7,115 ಕೋಟಿ ರೂ.ಗಳ ಆದಾಯವನ್ನು …

Read More »

ಕೊರೊನಾ ನಿರ್ವಹಣೆಗೆ 5372 ಕೋಟಿ ಖರ್ಚು

ಬೆಂಗಳೂರು,ಮಾ.8- ರಾಜ್ಯದಲ್ಲಿ ಕೊರೊನಾ ನಿರ್ವಹಣೆಗೆ ಇದುವರೆಗೂ 5372 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಿಂದ 63.59 ಲಕ್ಷ ಫಲಾನುಭವಿಗಳಿಗೆ ನೆರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಯವ್ಯಯದಲ್ಲಿ ಅಂಕಿ ಅಂಶ ನೀಡಿದ್ದಾರೆ.ಇದುವರೆಗೂ 1.91ಕೋಟಿ ಮಂದಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. 9.53 ಲಕ್ಷ ಸೋಂಕಿತರಿಗೆ ಉಚಿತ ಚಿಕಿತ್ಸೆ ಒದಗಿಸಲಾಗಿದೆ. ಕಟ್ಟಡ ಕಾರ್ಮಿಕರಿಗೆ 90 ಲಕ್ಷ ಆಹಾರ ಪೊಟ್ಟಣ ವಿತರಿಸಲಾಗಿದೆ. 11,770 ಕುಶಲಕರ್ಮಿಗಳಿಗೆ ಹಾಗೂ 51 ಲಕ್ಷ ರೈತರಿಗೆ ನೆರವು ನೀಡಲಾಗಿದೆ. ಕೊರೊನಾ ನಿಯಂತ್ರಣದಲ್ಲಿ …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »

ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ

  ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು …

Read More »

ಬಜೆಟ್ ಮಂಡಿಸಲು ಯಡಿಯೂರಪ್ಪಗೆ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸಲು ಮತ್ತು ಬಜೆಟ್ ಮಂಡಿಸಲು ಬಿ ಎಸ್ ಯಡಿಯೂರಪ್ಪಗೆ ನೈತಿಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ ಬಜೆಟ್ ಅಧಿವೇಶನಕ್ಕೂ ಮುನ್ನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.   26 ಎಕರೆ ಬಡಾವಣೆ ಯೋಜನೆಯಲ್ಲಿ ಡಿನೋಟಿಫೈ ಗೆ ಸಂಬಂಧಿಸಿದ ಅವ್ಯವಹಾರ ಕೇಳಿಬಂದಿತ್ತು. ಈ ವಿಚಾರದಲ್ಲಿ ಬಿಎಸ್ ವೈ ಮತ್ತು ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಸುವಂತೆ …

Read More »