Breaking News

ಜಿಲ್ಲೆ

ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇಮಕವಾಗುವ ಸಾಧ್ಯತೆ ಇದೆ

ಬೆಳಗಾವಿ(ಮಾ. 5): ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ್ದಾರೆ. ಇದೀಗ ಬೆಳಗಾವಿ ಉಸ್ತುವಾರಿ ಹೊಣೆ ಯಾರ ಹೆಗಲು ಏರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ನಾಲ್ವರು ಸಚಿವರು ಇದ್ದರೂ ಇಬ್ಬರು ನಡುವೆ ನೇರ ಪೈಪೋಟಿ ಕಂಡು ಬರುತ್ತಿದೆ. ಅಷ್ಟಕ್ಕೂ ಉಸ್ತುವಾರಿ ಸಚಿವ ಸ್ಥಾನ ಸಿಕ್ಕರೆ ಜಿಲ್ಲಾ ರಾಜಕಾರಣದ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗಲಿದೆ ಎಂಬುದು ರಾಜಕೀಯ ಲೆಕ್ಕಾಚಾರ. ರಾಜ್ಯದಲ್ಲಿ ರಾಜಕೀಯ …

Read More »

ಸಚಿವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರು ಯಾರು, ಆ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ಸರ್ಕಾರ ಸೂಚನೆ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಸಂತ್ರಸ್ತೆಯ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ, ಇನ್ನೊಂದು ಕಡೆ ಪೊಲೀಸರು ರಮೇಶ್ ಜಾರಕಿಹೊಳಿ ವಿಡಿಯೋ ಹಿಂದೆ ಬಿದ್ದಿದ್ದಾರೆ. ಸಚಿವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರು ಯಾರು, ಆ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ಸರ್ಕಾರ ಸೂಚನೆ ನೀಡಿದೆ. ಸದ್ಯ ವೈರಲ್ ಆಗಿರುವ ವಿಡಿಯೋ ಮೂಲ ಪತ್ತೆಗಾಗಿ ಹುಡುಕಾಟ …

Read More »

ವಿಸ್ಕಿ ಡಿಸ್ಟ್ರಿಬ್ಯೂಟರ್​ವೊಬ್ಬರ ಮೇಲೆ ಹಲ್ಲೆಗೈದು, ಕಿಡ್ನ್ಯಾಪ್ ಮಾಡಲು ಯತ್ನ

ಬೆಂಗಳೂರು: ನಗರದಲ್ಲಿ ವಿಸ್ಕಿ ಡಿಸ್ಟ್ರಿಬ್ಯೂಟರ್​ವೊಬ್ಬರ ಮೇಲೆ ಹಲ್ಲೆಗೈದು, ಕಿಡ್ನ್ಯಾಪ್ ಮಾಡಲು ಯತ್ನಿಸಿರೋ ಘಟನೆ ನಿನ್ನೆ ಸಂಜೆ ನಾಗರಭಾವಿ ಎರಡನೇ ಹಂತದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೋನ್ ಸ್ಟಾಗ್ ವಿಸ್ಕಿ ಡಿಸ್ಟ್ರಿಬ್ಯೂಟರ್ ಅವಿನಾಶ್ ಹಲ್ಲೆಗೊಳಗಾದವರು. ಅವಿನಾಶ್​ರಿಂದ, ಪ್ರವೀಣ್ ಶೆಟ್ಟಿ ಎಂಬುವವರು ₹35 ಲಕ್ಷ ‌ಮೌಲ್ಯದ ಮದ್ಯವನ್ನ ಪಡೆದಿದ್ರು. ಆದ್ರೆ ಕೊರೊನಾ ಶುರುವಾದ ಹಿನ್ನೆಲೆ ವಿಸ್ಕಿ ಡಿಸ್ಟ್ರಿಬ್ಯೂಟ್ ಮಾಡಲಾಗಿಲ್ಲ ಅಂತ ಪ್ರವೀಣ್ ಶೆಟ್ಟಿ ಅವಿನಾಶ್​ಗೆ ಹಣ ನೀಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆ …

Read More »

16ನೇ ಶರಣ ಸಂಸ್ಕೃತಿ ಉತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಫಲ್ಲಕಿ ಉತ್ಸವದಲ್ಲಿ ಪಾಲ್ಗೊಂಡ ಶ್ರೀಗಳು ಹಾಗೂ ಗಣ್ಯರು.

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವದ ಕೊನೆಯ ದಿನವಾದ ಗುರುವಾರದಂದು ಮುಂಜಾನೆ ಫಲ್ಲಕ್ಕಿ ಉತ್ಸವಕ್ಕೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಚಾಲನೆ ನೀಡಿದರು. ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳ ಹಾಗೂ ವಚನ ತಾಡೋಲೆ ಪ್ರತಿಗಳು, ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಗೂ ಸಕಲ ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಂಚರಿಸಿ …

Read More »

ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ.

ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ, …

Read More »

ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ. : ಡಾ.ಕೆ. ಸುಧಾಕರ್​

ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಯುವತಿಯನ್ನ ಕಾಮತೃಷೆಗೆ ಬಳಸಿಕೊಂಡ ಆರೋಪ ಹೊತ್ತ ರಮೇಶ್​ ಜಾರಕಿಹೊಳಿ ಸದ್ಯ ಬಿಎಸ್​ವೈ ಸಚಿವ ಸಂಪುಟದಿಂದ ಔಟ್​ ಆಗಿದ್ದಾರೆ. ಆದರೂ ರಾಜ್ಯ ರಾಜಕೀಯಲ್ಲಿ ಸಿಡಿ ರಿಲೀಸ್​ನದ್ದೇ ಸದ್ದು. ಇದೊಂದು ಪ್ಲಾನ್ಡ್ ಎಫರ್ಟ್, ರಾಜಕೀಯದ ಷಡ್ಯಂತ್ರ. ಅವ್ರು ಸಂಪೂರ್ಣ‌ ನಿರ್ದೋಷಿ ಆಗಿ ಆಚೆ ಬರ್ತಾರೆ. ರಾಜಕಾರಣಿಗಳ ಬಗ್ಗೆ ಅಸಹ್ಯ ಹುಟ್ಟಿಸೋ ಸಂಚು ಅಡಗಿದೆ. ಎಲ್ಲರ ಮೇಲೂ ಪ್ರಯೋಗ ಮಾಡುವ ಅಸ್ತ್ರ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ …

Read More »

ವಿಚಾರಣೆಗೆ ಹಾಜರಾಗದ ಈ ವ್ಯಕ್ತಿ ನಿಜವಾದ ಸಾಮಾಜಿಕ ಹೋರಾಟಗಾರನಾ…?

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿರುವ ದೂರಿನ ವಿಚಾರಣೆಗೆ ಗುರುವಾರ ಗೈರಾಗಿರುವ ದೂರುದಾರ ದಿನೇಶ್ ಕಲ್ಲಹಳ್ಳಿ, ‘ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮಾ. 2ರಂದು ದೂರು ನೀಡಿದ್ದೇನೆ. ಅದರ ಹೆಚ್ಚಿನ ವಿಚಾರಣೆಗೆ ಠಾಣೆಗೆ ಬರುವಂತೆ ನೋಟಿಸ್‌ ನೀಡಿದ್ದಿರಾ. ಈ ಬಗ್ಗೆ ಈಗಾಗಲೇ ರಾಮನಗರ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ. ಭದ್ರತೆ ಇಲ್ಲದ ಕಾರಣದಿಂದಾಗಿ ವಿಚಾರಣೆಗೆ ಬರಲು ಆಗುವುದಿಲ್ಲ’ ಎಂದೂ ಪತ್ರದಲ್ಲಿ …

Read More »

ಮರಳು ಗಣಿಗಾರಿಕೆ: ಅಧ್ಯಯನಕ್ಕೆ ಸರ್ಕಾರ ಸಿದ್ಧವಿದೆಯೇ?: ಹೈಕೋರ್ಟ್

ಬೆಂಗಳೂರು: ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ಪರವಾನಗಿ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಿದ್ಧವಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ ನದಿಯಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡಿರುವ ಸಂಬಂಧ ಫ್ರಾಂಕಿ ಡಿಸೋಜಾ ಮತ್ತು ಮಂಗಳೂರಿನ ಇತರ 9 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲನೆ …

Read More »

2020-21ನೇ ಸಾಲಿನಲ್ಲಿ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ ಬಂದ ಹಣವೆಷ್ಟು ಗೊತ್ತೇ..?

ಬೆಂಗಳೂರು, ಮಾ.4-ಪೆಟ್ರೋಲ್, ಡೀಸೆಲ್ ಮೇಲೆ ವಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ಗಳ ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್‍ಕೆ.ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕೇರಳ ಹೊರತು ಪಡಿಸಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ …

Read More »

ರಾಜಕಾರಣಿಗಳ ಚಾರಿತ್ರ್ಯ ಹರಣ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಶಾಸಕ ರಾಜುಗೌಡ!

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಿಂದಿರುವ ವ್ಯಕ್ತಿಯ ಬಗ್ಗೆ ಸತ್ಯಾಂಶ ಹೊರ ಬರಲು ಸಿಬಿಐ ತನಿಖೆಯಾಗಬೇಕು. ಈ ಸಿಡಿ ಬಿಡುಗಡೆ ಮಾಡಲು ಯಾರು ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿದ್ದಾರೆ ಎನ್ನುವ ವಿಚಾರದ ಬಗ್ಗೆಯೂ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ರಾಜುಗೌಡ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ, ಸದ್ಯ ಬಿಡುಗಡೆಯಾಗಿರುವ ವಿಡಿಯೋ ರಷ್ಯಾದಿಂದ ಅಪ್ ಲೋಡ್ ಆಗಿದೆ. ಅಲ್ಲಿಂದ ವಿಡಿಯೋವನ್ನು ಅಪ್ ಲೋಡ್ ಮಾಡಲು ಯಾರೋ ದೊಡ್ಡವರೇ …

Read More »