ಹುಬ್ಬಳ್ಳಿ- ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಅರುಣ ಹಚಡದ ಎಂಬುವರ ಮೇಲೆ ರೌಡಿಗಳನ್ನು ಕರೆದುಕೊಂಡು ಮಾರಕಾಸ್ತ್ರಗಳಿಂದ ಮನೆಗೆ ಬಂದು ಆವಾಜ್ ಹಾಕುವ ದ್ರಶ್ಯಗಳು ಸಿಸಿ ಟಿವಿಯಲ್ಲಿ ದೃಶ್ಯಗಳು ಕಂಡು ಬಂದಿವೆ. ಇನ್ನು ಇದರ ಬಗ್ಗೆ ಸಂಬಂದಿಸಿದ ಹಾಗೆ ಕಮರಿಪೇಟ್ ಪೊಲೀಸ್ ಠಾಣೆಗೆ ದೂರನ್ನು ಕೊಡಲು ಹೋದ್ರು ಕೂಡಾ, ಪೊಲೀಸರು ಕ್ಯಾರೇ ಎನ್ನುತ್ತಿಲ್ಲ ಎಂದು ಸಂತ್ರಸ್ತ ಅರುಣ್ ಮಾಧ್ಯಮದವರ ಮುಂದೆ ತಮಗೆ ಆಗುವ ಅನ್ಯಾಯದ ಬಗ್ಗೆ ಹೇಳಿದರು. ಯಲ್ಲಪ್ಪ ಬದ್ದಿ ಹಾಗೂ ಅವನ ಸಹಚರರು …
Read More »ಮುಂದಿನ ತಿಂಗಳು ಗ್ರಾಮ ಪಂಚಾಯತಿ ಚುನಾವಣೆ
ಬೆಂಗಳೂರು: ಅವಧಿ ಮುಗಿದರೂ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಲ ಕೂಡಿ ಬಂದಿದೆ. ಅಕ್ಟೋಬರ್ ಮೊದಲ ವಾರ ಇಲ್ಲವೇ ಎರಡನೇ ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬಹುದು. ಸಾರ್ವತ್ರಿಕವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವ ಬದಲು ಬಹುಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚುನಾವಣಾ ಆಯೋಗಕ್ಕೆ ಜಿಲ್ಲಾಧಿಕಾರಿಗಳು ಈ ಕುರಿತಾಗಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೊರೋನಾ ನಿಯಮಗಳನ್ನು ಪಾಲಿಸುವ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮಕೈಗೊಂಡಿದೆ. …
Read More »ಸಚಿವ ಕೆಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್
ಬೆಂಗಳೂರು : ಕಳೆದ ನಿನ್ನೆಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಫೇಸ್ ಬುಕ್ ಹಾಗೂ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ …
Read More »ಪ್ರಥಮ ದರ್ಜೆ ಕಾಲೇಜ್ 2ನೇ ಹಂತದ ಕಟ್ಟಡ ಕಾಮಗಾರಿಗೆ ಕುಲಪತಿ ಪ್ರೋ.ಎಂ ರಾಮಚಂದ್ರಗೌಡ ಸೋಮವಾರ ಚಾಲನೆ
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ 2ನೇ ಹಂತದ ಕಟ್ಟಡ ಕಾಮಗಾರಿಗೆ ಕುಲಪತಿ ಪ್ರೋ.ಎಂ ರಾಮಚಂದ್ರಗೌಡ ಸೋಮವಾರ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿ, ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ ಸುಸಜ್ಜಿತವಾದ ಮೂಲ ಸೌಕರ್ಯದೊಂದಿಗೆ ಗ್ರಾಮೀಣ ಪ್ರತಿಭೆಗಳ ಉನ್ನತ ವ್ಯಾಸಂಗದ ಕನಸನ್ನು ನನಸು ಮಾಡುವ ಉದ್ದೇಶ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹೊಂದಿದೆ. ಸುಮಾರು 9.8 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. …
Read More »ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿಉತ್ತರ ಕರ್ನಾಟಕ ಭಾಗದ ಶಾಸಕರ ಪುತ್ರನ ವಿರುದ್ಧ ಡ್ರಗ್ಸ್ ಸೇವನೆ ಆರೋಪ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಎನ್ ಸಿಬಿ ಅಧಿಕಾರಿಗಳು ನಿರಂತರ ತನಿಖೆ ಕೈಗೊಂಡಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರತಿದೆ. ಮೈಸೂರು ಭಾಗದ ಓರ್ವ ಶಾಸಕರ ಪುತ್ರ ಹಾಗೂ ಉತ್ತರ ಕರ್ನಾಟಕ ಭಾಗದ ಮತ್ತೋರ್ವ ಶಾಸಕರ ಪುತ್ರನ ವಿರುದ್ಧ ಡ್ರಗ್ಸ್ ಸೇವನೆ ಆರೋಪ ಕೇಳಿಬಂದಿದೆ. ಇಬ್ಬರು ತಾವು ಮಾತ್ರವಲ್ಲದೆ ತಮ್ಮದೆಯಾದ ಗುಂಪು ಕಟ್ಟಿಕೊಂಡು ಡ್ರಗ್ಸ್ ಸೇವೆನೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಇವರ ವಿಚಾರಣೆ ಮತ್ತು ತನಿಖೆಗೆ ಮುಂದಾಗಿದ್ದು, ಸೂಕ್ತ …
Read More »ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು: ನಟಿ, ರಾಜಕಾರಣಿ ತಾರಾ
ಬೆಂಗಳೂರು: ನಮ್ಮನ್ನ ಅನುಸರಿಸುವವರು ಇದ್ದಾರೆ. ಹೀಗಾಗಿ ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು ಎಂದು ನಟಿ, ರಾಜಕಾರಣಿ ತಾರಾ ಪ್ರಶ್ನಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸ್ಯಾಂಡಲ್ ವುಡ್ ಡ್ರಗ್ಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತ ದೇವರಿಗೆ ನಮಸ್ಕಾರ ಮಾಡಿದೆ. ನಾನು ಸಿಎಂಗೆ ಇಂದು ಸಲಹೆ ನೀಡುವೆ. ನಾವೆಲ್ಲರೂ ಎಲ್ಲ ಬೆಳವಣಿಗೆ ವೀಕ್ಷಿಸುತ್ತಿದ್ದೀವಿ ಎಂದರು. ಡ್ರಗ್ಸ್ ವಿಚಾರ ನಮ್ಮ ರಂಗಕ್ಕೆ …
Read More »ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ………..
ಚಿಕ್ಕಬಳ್ಳಾಪುರ: ಟೋಲ್ ಕಟ್ಟಲು ಸರದಿ ಸಾಲಿನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕರ್ನಾಟಕ ಆಂಧ್ರ ಗಡಿಭಾಗದ ಬಾಗೇಪಲ್ಲಿ ಟೋಲ್ ಪ್ಲಾಜಾದಲ್ಲಿ ಅಪಘಾತ ನಡೆದಿದೆ. ಬೆಂಗಳೂರು ಕಡೆಯಿಂದ ಬಂದ ಸ್ಕಾರ್ಪಿಯೋ ಕಾರು, ಸರದಿ ಸಾಲಿನಲ್ಲಿದ್ದ ಸ್ವಿಫ್ಟ್ ಡಿಜೈರ್ ಹಾಗೂ ಹುಂಡೈ ಕ್ರೆಟಾ ಕಾರಿಗೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ನಂತರ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದೆ. ಈ …
Read More »ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ ಸೆ.30ರವರೆಗೆ ಬಂದ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ ಸೆ.30ರವರೆಗೆ ಬಂದ್ ಮಾಡಲಾಗಿದೆ. ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮ, ಚಿಂಚಲಿ ಮಾಯಕ್ಕ , ಜೋಗುಳಬಾವಿ ಸತ್ಯಮ್ಮ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮುಂದುವರೆದಿದೆ. ಈ ಮೂರು ದೇವಾಲಯಗಳಿಗೂ ಮಹಾರಾಷ್ಟ್ರಾದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕೊರೊನಾ ಹಿನ್ನೆಲೆ ಭಕ್ತರ ಹಿತದೃಷ್ಟಿಯಿಂದ ಇನ್ನೂ ಒಂದು ತಿಂಗಳವರೆಗೂ ಈ ದೇವಾಲಯಗಳ ಬಾಗಿಲು ತೆರೆಯದಂತೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ …
Read More »ಶ್ರೀ ಸಂತೋಷ. ರ. ಜಾರಕಿಹೊಳಿಯವರಿಂದ ಪ್ರತಿಕಾ ಮಿತ್ರರಿಗೆ ಖಡಕ್ ವಾರ್ನಿಂಗ್
ಗೋಕಾಕ ನಗರದ ಎಲ್ಲಾ ಪತ್ರಿಕಾ ಮಾಧ್ಯಮದ ಮಿತ್ರ ರನ್ನ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಒಂದು ಔತಣ ಕೂಟಕ್ಕೆ ಕರೆದಿದ್ದರು ಇಲ್ಲಿ ಸುಮಾರು ಜನ ಕೂಡ ಭಾಗ ವಹಿಸಿದ್ದರು, ಗೋಕಾಕ ನಗರದ ಎಲ್ಲಾ ವಾರ ಪತ್ರಿಕೆ,ದಿನ ಪತ್ರಿಕೆ ,ಹಾಗೂ ಯೂಟ್ಯೂಬ್ ಚಾನಲ್ ಗಳ ವರದಿಗಾರರು ಈ ಸಭೆಯಲ್ಲಿ ಭಾಗ ವಹಿಸಿದ್ದರು, ಸಭೆಯ ಮುಖ್ಯ ಉದ್ದೇಶ ಏನಂದ್ರೆ ಎಲ್ಲರೂ ಒಂದಾಗಿ ಇರಿ ನಿಮ್ಮ , …
Read More »ಅಕ್ಟೋಬರ್ನಲ್ಲಿ ಗ್ರಾಪಂ ಚುನಾವಣೆ? ಮೀಸಲಾತಿ ಪಟ್ಟಿ ಸಿದ್ಧ; ಕರೊನಾ ಕಾಲದ ನಿಯಮ ಪಾಲನೆಗೂ ಬದ್ಧ
ಬೆಂಗಳೂರು: ಕರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ ಮೊದಲ ಇಲ್ಲವೇ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದ 6025 ಗ್ರಾಪಂಗಳ ಪೈಕಿ ಶೇ.90ರ ಅವಧಿ ಜೂನ್-ಜುಲೈನಲ್ಲಿ ಅಂತ್ಯಗೊಂಡಿತ್ತು. ಕರೊನಾ ಉಲ್ಬಣ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಂವಿಧಾನದತ್ತ ಅಧಿಕಾರ ಬಳಸಿ ‘ಅಸಾಧಾರಣ ಸಂದರ್ಭ’ವೆಂದು ಪರಿಗಣಿಸಿ ಚುನಾವಣೆ ಮುಂದೂಡಿತ್ತು. ರಾಜ್ಯ ಸರ್ಕಾರ ಕೂಡ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು. …
Read More »