Breaking News

ಜಿಲ್ಲೆ

ಕೊಕೇನ್ ಸಾಗಾಟ: ಬಿಜೆಪಿ ಮುಖಂಡೆ ಎಂ ಎಸ್ ಗೋಸ್ವಾಮಿ ಬಂಧನ

ಕೋಲ್ಕತ್ತಾ: ಕೊಕೇನ್ ಸಾಗಿಸಿದ ಆರೋಪದ ಮೇಲೆ ಬಿಜೆಪಿ ಯುವ ಮುಖಂಡೆ ಎಂ. ಎಸ್. ಗೋಸ್ವಾಮಿ ಯನ್ನು ಕೋಲ್ಕತ್ತಾದಲ್ಲಿ ಶುಕ್ರವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ. ಬಂಗಾಳದ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯ (ಯುವ ಮೋರ್ಚಾ) ಅವರ ಪರ್ಸ್‌ನಲ್ಲಿ ಮತ್ತು ಅವರು ಇದ್ದ ಕಾರಿನ ಸೀಟಿನ ಕೆಳಗೆ ದೊರೆತ ಕೊಕೇನ್ ಹೊಂದಿದ್ದಕ್ಕಾಗಿ ಬಂಧಿಸಲಾಗಿದೆ. ಯುವ ಮೋರ್ಚಾದಲ್ಲಿನ ಅವರ ಸ್ನೇಹಿತ ಮತ್ತು ಸಹೋದ್ಯೋಗಿ – ಪ್ರಬೀರ್ ಕುಮಾರ್ ಡೇ ಎಂಬ ವ್ಯಕ್ತಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. …

Read More »

ಖಾಕಿ ರೇಡ್ ಬೆಳಗಾವಿಯಲ್ಲಿ ಅನ್ನಭಾಗ್ಯ ಅಕ್ಕಿ ವಶ

ಬೆಳಗಾವಿ ನಗರದ ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೆರಿಗಲ್ಲಿಯಲ್ಲಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾಗ ರೇಡ್ ಮಾಡಿ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ.- 1, ಸುಹಾಸ ಸುರೇಶ್ ಪಿಳವಕರ, ಸಾ: ವಡಗಾಂವಿ, ಅನಂ-2 ಮಹಾದೇವ ಲಕ್ಷ್ಮಣ ಪಾಟೀಲ್, ಸಾ: ಧಾಮನೆ, ಹಾಗೂ ಆರೋಪಿ-3 ಅಹಮದ ಬಸೀರ ಅಹಮದ, ಸಾ: ವೀರಭದ್ರನಗರ, ಬೆಳಗಾವಿ ರವರನ್ನು ಬಂಧಿಸಲಾಗಿದೆ ಖಡೇಬಜಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ದೀರಜ್ ಬಿ ಶಿಂಧೆ …

Read More »

ಅಕ್ರಮ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಜೋಡಿಯನ್ನ ಟ್ರ್ಯಾಕ್ಟರ್ ಗೆ ಕಟ್ಟಿ ಹಾಕಿದ ಗ್ರಾಮಸ್ಥರು

ಬೆಳಗಾವಿ: ವಿವಾಹೇತರ ಸಂಬಂಧ ಹೊಂದಿದ್ದ ಜೋಡಿಯನ್ನ ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು ಟ್ಯಾಕ್ಟರ್ ಗೆ ಕಟ್ಟಿ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಮುರಕಟನಾಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಚುಂಚನೂರ ಗ್ರಾಮದ ಭೀಮಸಿ ಜೆಟ್ಟೆನ್ನವರ್ ಎಂಬಾತ ಮುರಕಟನಾಳದ ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ. ನಿನ್ನೆ ತಡರಾತ್ರಿ ಮನೆಯವರ ಕಣ್ತಪ್ಪಿಸಿ ಹೊರ ಹೊದಾಕೆ ಮುರಕಟನಾಳ ಗ್ರಾಮ ಹೊರವಲಯದ ಹೊಲದಲ್ಲಿ ಪ್ರಿಯಕರನನ್ನು ಭೇಟಿ …

Read More »

ಬೈಲವಾಡ ಗ್ರಾಮದಲ್ಲಿ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಧ್ವನಿಯಾದರು,ಈ ಗ್ರಾಮದ ಯುವಕ ಡಿಸಿ ಹಿರೇಮಠ ಅವರನ್ನು ಭೇಟಿಯಾಗಿ,ತಂದೆ ಇಲ್ಲ ತಾಯಿಗೆ ಅನಾರೋಗ್ಯ,ನಾನು ಇರೋದು ಬಾಡಿಗೆ ಮನೆಯಲ್ಲಿ ನನಗೊಂದು ಆಶ್ರಯ ಮನೆ ಕೊಡಿ ಎಂದು ಗ್ರಾಮದ ಬಾಲಕನೊಬ್ಬ ಡಿಸಿಗೆ ಮನವಿ ಅರ್ಪಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಇದೇ ಗ್ರಾಮದಲ್ಲಿ ವಾಸ್ತವ್ಯ ಮಾಡಲಿರುವ ಜಿಲ್ಲಾಧಿಕಾರಿಗಳು ಈ ಬಾಲಕನ ಸಮಸ್ಯೆಗೆ ಸ್ಪಂದನೆ ಮಾಡುತ್ತಾರೆಯೋ ಇಲ್ಲವೋ ಕಾದು ನೋಡೋಣ ಬೆಳಗಾವಿ,-ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ …

Read More »

ಬಾಳಿಗೆ ಬೆಳಕಾದ IPL​ ಬಿಡ್ಡಿಂಗ್; ಟೆಂಪೋ ಚಾಲಕನ ಮಗನೀಗ ಕರೋಡ್​ಪತಿ

ಕ್ರೀಡಾಲೋಕದಲ್ಲಿ ರಾತ್ರೋರಾತ್ರಿ ಸ್ಟಾರ್‌ಗಳಾದ ಸಾಕಷ್ಟು ಸಾಧಕರಿದ್ದಾರೆ. ಒಂದೊತ್ತಿನ ಊಟಕ್ಕೂ ಪರಿತಪಿಸುತ್ತಿದ್ದವರು ಊಹಿಸಲಾರದಷ್ಟು ಎತ್ತರಕ್ಕೆ ಏರಿ, ನಿಬ್ಬೆರಗಾಗುವಂತೆ ಮಾಡಿದ್ದಾರೆ. ಭಾರತೀಯ ಕ್ರಿಕೆಟ್​‌ ಲೋಕದಲ್ಲಿ ಇಂತಹ ಹಲವು ಸ್ಫೂರ್ತಿದಾಯಕ ಕಥೆಗಳು ಸಿಗುತ್ತವೆ. ಹಿಂದೆ ಮುಂಬೈನ ರಸ್ತೆ ಬದಿಯಲ್ಲಿ ಪಾನಿಪುರಿ ಮಾರಾಟ ಮಾಡಿ ಕ್ರಿಕೆಟ್​ ಕಿಟ್‌ಗೆ ಹಣ ಹೊಂದಿಸಿಕೊಳ್ಳುತ್ತಿದ್ದ ಯಶಸ್ವಿ ಜೈಸ್ವಾಲ್​.. ಶಾಲಾ ವಾಹನ ಚಾಲನೆ, ಹಾಲು ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ನರೇಶ್​​ ಗರ್ಗ್​ ಪುತ್ರ ಪ್ರಿಯಂ ಗರ್ಗ್​‌ 13ನೇ ಸೀಸನ್​​ ಐಪಿಎಲ್​ …

Read More »

ಗೊಡಚಿನ‌ ಮಲ್ಕಿ ಬಸ್ ಅಪಘಾತ: ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಗೋಕಾಕ ತಾಲೂಕಿನ‌ ಗೊಡಚಿನ‌‌ ಮಲ್ಲಿ ಸಮೀಪ ರಾಜ ರಸ್ತೆ ಸಾರಿಗೆ ಬಸ್ ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಗಾಯಗೊಂಡ ಸುಮಾರು 20ಕ್ಕೂ ಹೆಚ್ಚು ಗಾಯಾಳುಗಳು ನಗರದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಎಲ್ಲಾ ಗಾಯಾಳುಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ಯುವನಾಯಕ ರಾಹುಲ್ ಜಾರಕಿಹೊಳಿ ಅವರು ಭೆಟ್ಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.   ಈ ಅಪಘಾತದಲ್ಲಿ ಗಾಯಗೊಂಡ ಹೆಚ್ಚಿನ …

Read More »

‘ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೀನಿ’ -ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿರುವುದಾಗಿ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಸ್ವತಃ ಈ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ, ನಾನು ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದರು. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆ ರಾಮಮಂದಿರ ಕಟ್ಟುತ್ತಾರೆ, ಅದರಲ್ಲೇನಿದೆ? ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ಇದನ್ನು …

Read More »

2021ರ ಕರ್ನಾಟಕ ರಾಜ್ಯ ನಾಗರೀಕ ಸೇವಾ(ನಡತೆ) ನಿಯಮ’ಗಳು ಪ್ರಕಟ : ಹೀಗಿದೆ ಸರ್ಕಾರಿ ನೌಕರರ ‘ನೂತನ ನಡೆತೆ ನಿಯಮಾವಳಿ’ಗಳು

ಬೆಂಗಳೂರು : ರಾಜ್ಯ ಸಿಬ್ಬಂದಿ ಮತ್ತು ಸುಧಾರಣಾ ಇಲಾಖೆಯು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು-2021 ಪ್ರಕಟಗೊಳಿಸಿದೆ. ಇಂತಹ ನಡತೆಯ ನಿಯಮಗಳಲ್ಲಿ ಸರ್ಕಾರಿ ನೌಕರನ ಕುಟುಂಬ ಸದಸ್ಯರು ಎಂದರೆ?, ಸಂಘ/ ಸಂಸ್ಥೆಗಳಿಗೆ ಸೇರಿಕೊಳ್ಳುವುದು, ಚುನಾವಣೆಗೆ ಸ್ಪರ್ಧೆಯ ಸಂದರ್ಭದಲ್ಲಿ ಹೇಗಿರಬೇಕು, ಸಮೂಹ ಮಾಧ್ಯಮಗಳೊಂದಿಗೆ ಸಂಪರ್ಕ, ಪುಸ್ತಕ, ಲೇಖನಗಳ ಪ್ರಕಟಣೆಗೊಳಿಸುವ ಮೊದಲು ಯಾವೆಲ್ಲಾ ನಿಯಮ ಪಾಲಿಸಬೇಕು ಸೇರಿದಂತೆ ವಿವಿಧ ನೂತನ ತಿದ್ದುಪಡಿಗಳ ನಡತೆಯ ನಿಯಮ ಪ್ರಕಟಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ …

Read More »

ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ರೌಡಿಯೊಬ್ಬ ಫೋನ್ ಮಾಡಿ ಧಮಕಿ ಖಾಕಿ ಪಡೆ ಹಿಂಡಲಗಾ ಜೈಲಿನ ಮೇಲೆ ಧಿಡೀರ್ ದಾಳಿ

ಬೆಳಗಾವಿ- ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ರೌಡಿಯೊಬ್ಬ ಫೋನ್ ಮಾಡಿ ಧಮಕಿ ಹಾಕಿದ ಬೆನ್ನಲ್ಲಿಯೇ ಬೆಳಗಾವಿ ಖಾಕಿ ಪಡೆ ಹಿಂಡಲಗಾ ಜೈಲಿನ ಮೇಲೆ ಧಿಡೀರ್ ದಾಳಿ ಮಾಡಿ,ಸುಮಾರು ಐವತ್ತಕ್ಕೂ ಹೆಚ್ಚು ಪೋಲೀಸರು ಜೈಲಿನಲ್ಲಿ ಶೋಧ ಮಾಡಿದಾಗ ಸಿಕ್ಕಿದ್ದು ಒಂದೇ ಒಂದು ಮೋಬೈಲ್… ಯಾಕಂದ್ರೆ ಹಿಂಡಲಗಾ ಜೈಲಿನಲ್ಲಿದ್ದ ರೌಡಿಯೊಬ್ಬ ಫೋನ್ ಮಾಡಿದ್ದು ಹೇಗೆ,ಜೈಲಿನಲ್ಲಿ ಫೋನ್ ಬಂದಿದ್ದು ಎಲ್ಲಿಂದ ಎಂದು ಮಾದ್ಯಗಳು ಪ್ರಶ್ನೆ ಮಾಡಿದ ಹಿನ್ನಲೆಯಲ್ಲಿ ಹಿಂಡಲಗಾ ಜೈಲಿನ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಧಾರಿಸಿಕೊಂಡ ಸಂಧರ್ಭದಲ್ಲಿಯೇ …

Read More »

87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆಗಳನ್ನು ಆರಂಭಿಸಿ ಪ್ರಯಾಣಿಕರಿಗೆ …

Read More »