Breaking News

ಜಿಲ್ಲೆ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್‍ನ್ನು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್‍ನಲ್ಲಿ ಠೇವಣಿಯಾಗಿಟ್ಟು …

Read More »

ಹೊಸ ಚಿತ್ರದಲ್ಲಿ ಕುರಿ ಪ್ರತಾಪ್​ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!

ಕಾಮಿಡಿಯನ್​ಗಳಾಗಿ ಕಾಣಿಸಿಕೊಂಡ ನಂತರ ಹೀರೋ ಆಗುವ ಪ್ರಯತ್ನವನ್ನು ಕನ್ನಡ ಚಿತ್ರರಂಗದಲ್ಲಿ ಅನೇಕರು ಮಾಡಿದ್ದಾರೆ. ಇದರಲ್ಲಿ ಕೆಲವರು ಯಶಸ್ಸು ಕಂಡರೆ, ಇನ್ನೂ ಕೆಲವರು ಸೋತಿದ್ದಾರೆ. ಈಗ ಕನ್ನಡದ ಹಾಸ್ಯ ನಟ ಕುರಿ ಪ್ರತಾಪ್​ (Kuri Prathap) ಇದೇ ರೀತಿಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಹೀರೋ ಆಗಿ ತೆರೆಮೇಲೆ ಬರುತ್ತಿದ್ದಾರೆ. ಚಿತ್ರಕ್ಕೆ ‘ಆರ್​ಸಿ ಬ್ರದರ್’​ ಎಂದು ನಾಮಕರಣ ಮಾಡಲಾಗಿದೆ. ನಿರ್ದೇಶಕ ಪ್ರಕಾಶ್​ ಕುಮಾರ್​ ಈ ಚಿತ್ರಕ್ಕೆ ಆಯಕ್ಷನ್ …

Read More »

ಬಾಗಲೂರು: ಮದ್ಯ ಸೇವಿಸಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಪತಿಯನ್ನೇ ಬಿಟ್ಟು ಹೋದ ಪತ್ನಿ

ಬೆಂಗಳೂರು: ಮದ್ಯ ಸೇವಿಸುವ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ತವರು ಮನೆ ಸೇರಿದ ಅದೆಷ್ಟೋ ಪ್ರಸಂಗಗಳು ದಿನ ನಿತ್ಯ ನಡೆಯುತ್ತಲೇ ಇರುತ್ತವೆ. ಆದ್ರೆ ಇಲ್ಲೊಂಚೂರು ಬೇರೆ. ಮದ್ಯ ಸೇವಿಸಬೇಡ ಎಂದಿದ್ದಕ್ಕೆ ಪತಿಯನ್ನ ಪತ್ನಿ ಬಿಟ್ಟುಹೋಗಿದ್ದಾರೆ. ಇಂತಹದೊಂದು ಘಟನೆ ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದ್ಯ ಸೇವಿಸಬೇಡ ಎಂದು ಬೈದು ಬುದ್ಧಿ ಹೇಳಿದಕ್ಕೆ ಗಂಡನನ್ನೇ ಬಿಟ್ಟು ಹೆಂಡತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಮಹಿಳೆಯ ಮನವೊಲಿಸಿ …

Read More »

ಆನ್ ಲೈನ್ ಜೂಜಾಟ: ಸಂಪುಟ ನಿರ್ಧಾರ ಕೇಳಿದ ಹೈಕೋರ್ಟ್

ಬೆಂಗಳೂರು: ಆನ್ ಲೈನ್ ಜೂಜಾಟ ನಿಲ್ಲಿಸಬೇಕು ಎಂದು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, ಈ ಬಗ್ಗೆ ರಾಜ್ಯ ಸಚಿವ ಸಂಪುಟ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪ್ರಶ್ನಿಸಿದೆ. ಸಚಿವ ಸಂಪುಟವು ತೆಗೆದುಕೊಳ್ಳುವ ನಿರ್ಧಾರವನ್ನು ಕೋರ್ಟ್ ಮುಂದೆ ದಾಖಲಿಸಬೇಕು ಎಂದು ಆನ್ ಲೈನ್ ಬೆಟ್ಟಿಂಗ್ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದೆ ಮತ್ತು ಇದರ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ …

Read More »

ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿ ಬಂಧನ

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿಯಗೈದ್ದು, ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಮತ್ತೋರ್ವ ಆರೋಪಿ ರಾಚಪ್ಪನಿಂದ ಪ್ರಶ್ನೆ …

Read More »

ಈ ಬಾರಿಯ ಬಜೆಟ್ ನಿಂದ ಆರೋಗ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಫೆಬ್ರವರಿ 16 : ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ 3 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರಿ ಆರೋಗ್ಯ ಕೇಂದ್ರಗಳು ನಿರೀಕ್ಷೆಗೆ ತಕ್ಕಂತೆ …

Read More »

ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅಭಿಮಾನಿಗಳು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸ್ಪತ್ರೆ ಸುತ್ತ ಕೆ.ಎಸ್.ಆರ್.ಪಿ. ತುಕಡಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು …

Read More »

ಜಗತ್ತಿನ ಎಲ್ಲೆಡೆ ಭಾರತದ ಅಲೆ : ಅತ್ಯುನ್ನತ ಹುದ್ದೆಗಳಲ್ಲಿ ಭಾರತೀಯರ ಮಿಂಚು

ಹೊಸದಿಲ್ಲಿ: ಜಗದೆಲ್ಲೆಡೆ ಚದುರಿ, ನೆಲೆ ಕಂಡಿರುವ ಭಾರತೀಯರು ಆಯಾ ರಾಷ್ಟ್ರಗಳಲ್ಲಿ ನಾಯಕತ್ವದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅಮೆರಿಕದ “ಇಂಡಿಯಾನ್ಪೊರಾ’ ಪ್ರಕಟಿಸಿರುವ “ಗವರ್ನ್ಮೆಂಟ್‌ ಲೀಡರ್ಸ್‌- 2021’ರ ಪಟ್ಟಿಯ ಪ್ರಕಾರ ಬರೋಬ್ಬರಿ 15 ರಾಷ್ಟ್ರಗಳಲ್ಲಿ ಭಾರತೀಯರೇ ಚಾಲಕ ಸ್ಥಾನಗಳಲ್ಲಿ ಇದ್ದಾರೆ. 15 ದೇಶಗಳಲ್ಲಿ ನಿರ್ಣಾಯಕರು 15 ರಾಷ್ಟ್ರಗಳಲ್ಲಿ ಸಾರ್ವಜನಿಕ ಸೇವೆ, ಅತ್ಯುನ್ನತ ಹುದ್ದೆಗಳಲ್ಲಿ ಭಾರತೀಯ ಮೂಲದವರೇ ಇದ್ದಾರೆ. ಈ ಪೈಕಿ 60 ನಾಯಕರು ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ ಹೊಂದಿರುವುದು ವಿಶೇಷ. ಎಲ್ಲೆಲ್ಲೂ ಭಾರತೀಯರು …

Read More »

ಬೆಳಗಾವಿ ನಗರ ಸಿಸಿಐಬಿ ತಂಡದಿಂದ ಸುಮಾರು ೧೩ ಲಕ್ಷ ಮೌಲ್ಯದ ಮಿಲಿಟರಿ ಮತ್ತು ಅಂತರ್‌ರಾಜ್ಯ ಮದ್ಯ ಜಪ್ತಿ

ಬೆಳಗಾವಿ – ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರದ ರಕ್ಷಕ ಕಾಲೋನಿಯಲ್ಲಿ ಗೋವಾ ರಾಜ್ಯದಲ್ಲಿ ಮಾರಾಟ ಮಾಡುವ & ಮಿಲಿಟರಿ ಕ್ಯಾಂಟೀನ್ ಮುಖಾಂತರ ಸೈನಿಕರಿಗೆ ಮಾರಾಟ ಮಾಡುವ ವಿವಿಧ ಕಂಪನಿಯ ಸರಾಯಿ ಬಾಟಲ & ಚೀಲಗಳನ್ನು ಸ್ಥಳಿಯರಿಗೆ ಎರಡುಪಟ್ಟು ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಡಲಾಗಿತ್ತು. ಆರೋಪಿತರಾದ ರಾಜೇಶ ಕೇಶವ ನಾಯಿಕ, (೩೭) ಸಾ: ಕುಮಾರಸ್ವಾಮಿ ಲೇಔಟ್, ಬೆಳಗಾವಿ, ಶಂಕರ ಬಸವಂತ ದೇಸನೂರ, (೩೮) ಸಾ|| ಸಿಸಿಬಿ ನಂ. …

Read More »

ಐವರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು : ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳಿಗೂ ವರ್ಗಾವಣೆಯ ಬಿಸಿ ಮುಟ್ಟಿಸಿದೆ. ಇಂದು ಸಂಜೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ‌‌. ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ರೈಲ್ವೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು …

Read More »