Breaking News

ಜಿಲ್ಲೆ

ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ ಗಡಿಪಾರಿಗೆ ಆಗ್ರಹ

  ರಾಮನಗರ : ಹಿರಿಯ ಸಾಹಿತಿ, ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆ ಖಂಡಿಸಿ ಪ್ರಗತಿಪರ ಹಾಗೂ ದಲಿತ ಸಮಾನ ಮನಸ್ಕರ ಒಕ್ಕೂಟದಿಂದ ಸೋಮವಾರ ಪ್ರತಿಭಟನೆ ನಡೆಸಿದರು. ವಕೀಲೆ ಮೀರಾ ರಾಘವೇಂದ್ರ ಅವರ ಗಡಿಪಾರಿಗೆ ಆಗ್ರಹಿಸಿದರು. ಇಲ್ಲಿನ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆ ಪ್ರಾರಂಭಿಸಿದರು.ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ‌ ಬಳಿದ ವಕೀಲೆ ವೀರಾ ರಾಘುವೇಂದ್ರ‌ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು. ದೇಶದ ಸಂವಿಧಾನದ …

Read More »

ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು

ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ. ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ: ಮತಗಟ್ಟೆಗಳ ತಯಾರಿ ನಡೆಸಿರುವ ಅಧಿಕಾರಿಗಳು

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತಗಟ್ಟೆಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ. ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ ಎನ್ನಲಾಗುತ್ತಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು, ವಿವಿಧ ಸರ್ಕಾರಿ ಶಾಲೆಗಳಿಗೆ ಭಾನುವಾರ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳು ಮತ್ತು ಮತಗಟ್ಟೆಯಾಗಿ ಪರಿವರ್ತಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಸೆ. 23ರಂದು ಕೋವಿಡ್‌ನಿಂದಾಗಿ …

Read More »

ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಗೋಕಾಕ : ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದಲೂ ಇದೆ. ಆ ವಿಷಯವಾಗಿ ವಾಲ್ಮೀಕಿ ಜಾತ್ರೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಸಹ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ …

Read More »

ತಮಿಳು, ತೆಲುಗಿನಿಂದಾಗಿ ಕನ್ನಡ ಚಿತ್ರರಂಗ ಉದ್ದಾರ ಆಗಿಲ್ಲ: ಸುದೀಪ್ ಖಡಕ್ ಮಾತು

ಬೆಂಗಳೂರು: ಬೇರೆ ಭಾಷೆಯಿಂದಾಗಿ ನಮ್ಮ ಚಿತ್ರರಂಗ ಇತ್ತೀಚೆಗಿನ ದಿನಗಳಲ್ಲಿ ಬೇರೆ ಲೆವೆಲ್ ಗೆ ಹೋಗಿಲ್ಲ. ಕನ್ನಡಕ್ಕೆ ಕನ್ನಡದ್ದೇ ಆದ ನೆಲೆ, ಸ್ಥಾನ-ಮಾನವಿದೆ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ. ತಮ್ಮ ಚಿತ್ರಜೀವನಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಮಾಧ‍್ಯಮಗಳೊಂದಿಗೆ ಮಾತನಾಡಿದ ಸುದೀಪ್, ಕನ್ನಡ ಸಿನಿಮಾ ಈಗ ಬೇರೆ ಭಾಷೆಗಳಲ್ಲೂ ಮಿಂಚುತ್ತಿದೆ. ಇದರಿಂದಾಗಿ ನಮ್ಮ ಸಿನಿಮಾದ ಲೆವೆಲ್ ಬೇರೆಯಾಗಿದೆ ಎಂದು ನಿಮಗನಿಸುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ‘ತಮಿಳು, ತೆಲುಗು, …

Read More »

ಲಕ್ಷ್ಮೀನ ಶಿಕ್ಷಣ ಸಂಸ್ಥೆಯಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನೆಯನ್ನು ಸುವರ್ಣಾ ಭೀಮಶಿ ಜಾರಕಿಹೊಳಿ ನೆರವೇರಿಸಿದರು.

  ಗೋಕಾಕ: ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ ಎಂದು ಬೆಂಗಳೂಇನ ಕ್ರೀಡೋ ಸಂಸ್ಥೆಯ ಆಯೇಷಾ ಶೇಖ ಹೇಳಿದರು. ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು …

Read More »

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ ನಟಿ ಅಮೂಲ್ಯ ದಂಪತಿ

ಸ್ಯಾಂಡಲ್ ವುಡ್ ನ ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಸದ್ಯ ಸಿನಿಮಾರಂಗದಿಂದ ದೂರ ಉಳಿದ್ದರೂ ಸಹ ಆಗಾಗ ಸುದ್ದಿಯಲ್ಲಿರುತ್ತಾರೆ. ತನ್ನ ಮಾವನ ಜೊತೆ ರಾಜಕೀಯ ಕೆಲಸಗಳಲ್ಲಿ ಗುರುತಿಸಿಕೊಳ್ಳುವ ಅಮೂಲ್ಯ ಆಗಾಗ ರಾಜಕೀಯ ವಿಚಾರಕ್ಕೆ ಸದ್ದು ಮಾಡುತ್ತಿರುತ್ತಾರೆ. ಮದುವೆ ಬಳಿಕ ಅಮೂಲ್ಯ ಮತ್ತೆ ಬಣ್ಣ ಹಚ್ಚಿಲ್ಲ. ಅಮೂಲ್ಯ ಮತ್ತೆ ಸಿನಿಮಾ ಮಾಡುತ್ತಾರೆ ಎನ್ನುವ ಮಾತುಗಳು ಆಗಾಗ ಕೇಳಿಬಂದರೂ ಸಹ ಇದುವರೆಗೂ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿಲ್ಲ. ಪತಿ, ಸಂಸಾರ ಅಂತ ಸಂತೋಷದ ಜೀವನ …

Read More »

ಗೋಹತ್ಯೆ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಫೆ.26ಕ್ಕೆ ವಿಚಾರಣೆಗೆ: ಖಾಸಿಮ್ ಇಜಾಝ್ ಖುರೇಶಿ

ಬೆಂಗಳೂರು, ಫೆ.7: ರಾಜ್ಯ ಸರಕಾರ ಜಾರಿಗೆ ತಂದಿರುವ ವಿವಾದಿತ ಗೋಹತ್ಯೆ ನಿಷೇಧ ಕಾನೂನು ಪ್ರಶ್ನಿಸಿ ಜಮೀಯ್ಯತುಲ್ ಖುರೇಶ್ ಬೀಫ್ ಮರ್ಚೆಂಟ್ ಅಸೋಸಿಯೇಶನ್ ವತಿಯಿಂದ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಮುಖ್ಯ ನ್ಯಾಯಮೂರ್ತಿ ನೇತೃತ್ವದ ದ್ವಿಸದಸ್ಯ ಪೀಠ ನಮ್ಮ ಅರ್ಜಿಯನ್ನು ಫೆ.26ರಂದು ವಿಚಾರಣೆ ನಡೆಸಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಖಾಸಿಮ್ ಇಜಾಝ್ ಖುರೇಶಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮಕುಮಾರ್ ನಮ್ಮ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡನೆ …

Read More »

ಸರಕಾರಿ ಉದ್ಯೋಗಕ್ಕೆ ಕಾದವರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಗ್ರೀನ್ ಸಿಗ್ನಲ್ ನೀಡಿದೆ. ಪ್ರಸ್ತಾವಿತ ನೇಮಕ ಪ್ರಕ್ರಿಯೆ ಪುನರಾರಂಭಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಕರೊನಾ ಕಾರಣಕ್ಕೆ ತಲೆದೂರಿದ ಆರ್ಥಿಕ ಸಂಕಷ್ಟ ಸರಿದೂಗಿಸಿ ಸುಸ್ಥಿತಿಗೆ ತರಲೆಂದು 2020-21 ನೇ ಸಾಲಿನ ಎಲ್ಲ ನೇರ ನೇಮಕ ಹುದ್ದೆಗಳ ಭರ್ತಿ ತಡೆಹಿಡಿಯಲಾಗಿತ್ತು. ಅನುಕಂಪದ ಆಧಾರದ ಮೇಲೆ ನೇಮಕವಾದ ಅಭ್ಯರ್ಥಿಗಳಿಗೆ ಷರತ್ತುಬದ್ಧ ನೇಮಕ ನೀಡಲು ಅಸ್ತು …

Read More »

ಯಾವುದೆ ಆಪತ್ತಿರಲಿ ತುರ್ತು ಸಂಖ್ಯೆ 112 ಕರೆ ಮಾಡುವುದು ನೆನಪಿರಲಿ : PSI ನಾಗರಾಜ ಖಿಲಾರೆ.

  ಗೋಕಾಕ : ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಶನಿವಾರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿ,ಎಸ್,ಆಯ್, ನಾಗರಾಜ ಖಿಲಾರೆಯವರು ಶ್ರೀಲಕ್ಷ್ಮಿ ದೇವಸ್ಥಾನದಲ್ಲಿ ಜನಸಂಪರ್ಕ ಸಭೆ ಮತ್ತು ಅಂಬೇಡ್ಕರ ನಗರದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನಡೆದ ದಲಿತ ಸಬೆ ಮತ್ತು ಒಂದೆ ದೇಶ ಒಂದೆ ತುರ್ತು ಸಂಖ್ಯೆಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸ್ಥಳಿಯರನ್ನು ಉದ್ದೇಶಿಸಿ ಮಾತನಾಡಿ ತಮ್ಮ ಸುತ್ತಮುತ್ತಲು  ಅಗ್ನಿ ದುರಂತ ಸಂಭವಿಸಿದ್ದಲ್ಲಿ,ಅಪಘಾತವಾಗಿದ್ದಲ್ಲಿ,ಅಪರಾಧವಾಗಿದ್ದಲ್ಲಿ ಹಾಗೂ ವಿನಾಕಾರಣ ಯಾರಾದರೂ ಅಣ್ಯ ವ್ಯಕ್ತಿಗಳು ಕುಡಿದು …

Read More »