Breaking News
Home / ಜಿಲ್ಲೆ (page 841)

ಜಿಲ್ಲೆ

ಡಾಕ್ಟರ್ ನಿವೇದಿತಾ ಮತ್ತು ಡಾಕ್ಟರ್ ಸವಿತಾ ಅವರು ಹಾಸನ ರಕ್ತನಿಧಿಗೆ ಬಂದು ಬಿ – ನೆಗೆಟಿವ್ ರಕ್ತವನ್ನು ರಕ್ತದಾನ ಮಾಡಿ ಜೀವ ಉಳಿಸುವ ಕೆಲಸ ಮಾಡಿದ್ದಾರೆ .

ಹಾಸನ: ಇಂದು ಹಾಸನದ ಎಸ್.ಡಿ.ಎಂ.ಎ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಶಂಕ್ರಪ್ಪ ಎಂಬುವರಿಗೆ ರಕ್ತದ ಅಂಶ ಕಡಿಮೆ ಇರುವ ಕಾರಣ ಬಿ – ನೆಗೆಟಿವ್ ರಕ್ತ ಅವಶ್ಯಕತೆ ಇದೆ ಎಂದು ಹಾಸನದಲ್ಲಿ ಇರುವ ಎಲ್ಲಾ ರಕ್ತ ನಿಧಿಗಳಿಗೆ ಭೇಟಿ ನೀಡಿದರು ಕೂಡ ಬಿ – ನೆಗೆಟಿವ್ ರಕ್ತ ದೊರೆಯಲಿಲ್ಲ. ಹಾಗೂ ಶಂಕ್ರಪ್ಪ ಅವರು ಬೆಂಗಳೂರಿನವರಾಗಿದ್ದಾರೆ ಅವರ ಸಂಬಂಧಿಕರು ಕೂಡ ಬೇಗ ಮುಂದೆ ಬರಲು ಆಗದ ಕಾರಣ , ಅಲ್ಲೇ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ಸ್ …

Read More »

‘ಅಣ್ಣ ಮತ್ತೊಬ್ಬ ತಾಯಿ ಇದ್ದ ಹಾಗೆ. ಧನ್ಯವಾದ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡಾಲಿ ಎಂದೇ ಖ್ಯಾತಿಯಾಗಿರುವ ನಟ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಟಾರ್ ನಟರು, ನಿರ್ದೇಶಕರು ಸೋಶಿಯಲ್ ಮೀಡಿಯಾದ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಕೊರೊನಾ ಕಾರಣದಿಂದ ಧನಂಜಯ್ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದು ಬೇಡ ಎಂದು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಅದರಂತೆಯೇ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕವೇ ನೆಚ್ಚಿನ ನಟನಿಗೆ ಶುಭಾಶಯ …

Read More »

ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಕಾಂಪ್ಲೆಕ್ಸ್ ನಲ್ಲಿದ್ದ ಅಂಗಡಿಗಳ ಬೀಗ ಮುರಿದು ಕಳ್ಳತನ

ಕೋಲಾರ: ನಗರದಲ್ಲಿ ಕೊರೊನಾ ಆತಂಕದ ಮಧ್ಯೆ ಕಳ್ಳರ ಕೈಚಳಕ ಆರಂಭವಾಗಿದ್ದು, ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಕೋಲಾರ ನಗರದ ಅರ್ಬನ್ ಬ್ಯಾಂಕ್ ಕಾಂಪ್ಲೆಕ್ಸ್ ನಲ್ಲಿ ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಕಾಂಪ್ಲೆಕ್ಸ್ ನಲ್ಲಿದ್ದ ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಅದೃಷ್ಟವಶಾತ್ ಅರ್ಬನ್ ಬ್ಯಾಂಕ್ ಹೊರತುಪಡಿಸಿ ಉಳಿದಂತೆ ಮೆಡಿಕಲ್ ಸ್ಟೋರ್, ಡೆಂಟಲ್ ಕ್ಲಿನಿಕ್, ಟೈಲರ್ ಅಂಗಡಿ, ಫೈನಾನ್ಸ್ ಆಫೀಸ್ ಸೇರಿದಂತೆ ಎಂಟು ಅಂಗಡಿಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಅಂಗಡಿಗಳಲ್ಲಿ …

Read More »

ರೈತನ ಮಗನ ಓದಿಸುವ ಜವಾಬ್ದಾರಿಯನ್ನು ವಹಿಸಿಕೊಂಡ ಸುಧಾ ಮೂರ್ತಿಯವರು

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕಿ ಸುಧಾ ಮೂರ್ತಿಯವರು ಜಮಖಂಡಿಯ ಪ್ರತಿಭಾನ್ವಿತ ರೈತನ ಮಗನ ಓದಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಸುಧಾ ಮೂರ್ತಿಯವರು ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಪ್ರವಾಹದಲ್ಲಿ ಸಿಲುಕಿ ನಲುಗಿದ್ದ ಉತ್ತರ ಕರ್ನಾಟಕ ಜನರಿಗೆ ಸಹಾಯ ಮಾಡಿದ್ದರು. ಈಗ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಬಡ ವಿದ್ಯಾರ್ಥಿಗಳ ನೆರವಿಗೆ ನಿಂತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸವಲಗಿ ಗ್ರಾಮದ ರೈತನ ಮಗ ಸಂಜು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ …

Read More »

ಮುಷ್ಕರ ಹಿಂಪಡೆದ ವೈದ್ಯರಿಗೆ ಸಚಿವರಿಂದ ಧನ್ಯವಾದ

ಬೆಂಗಳೂರು: ಸಿಎಂ ಮನವೊಲಿಕೆ ಹಿನ್ನೆಲೆ ನಂಜನಗೂಡು ಟಿಹೆಚ್‍ಒ ಆತ್ಮಹತ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಮೈಸೂರಿನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೈದ್ಯಾಧಿಕಾರಿಗಳು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ. ಸಚಿವ ಡಾ. ಸುಧಾಕರ್, ಶ್ರೀರಾಮುಲು ಮತ್ತು ಸಿಎಂ ಪುತ್ರ ವಿಜಯೇಂದ್ರ ಪ್ರತಿಭಟನೆ ಹಿಂಪಡೆದಿದ್ದಕ್ಕೆ ವೈದ್ಯರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು …

Read More »

ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿಗೆ ಪತ್ರ

ಬೆಂಗಳೂರು: ಮಲಪ್ರಭಾ ನದಿ ಪಾತ್ರದಲ್ಲಿ ವ್ಯಾಪಕ ಒತ್ತುವರಿಯಾಗಿದ್ದು, ತೆರವುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕದ ಮಲಪ್ರಭಾ ನದಿ ತೀರದಲ್ಲಿ ಮಾನವರ ದುರಾಸೆಯಿಂದ ಹೆಚ್ಚು ಒತ್ತುವರಿಯಾಗಿದೆ. ಇದರ ಪರಿಣಾಮ ಮಲಪ್ರಭಾ ನದಿಯಲ್ಲಿ ಭಾರೀ ಪ್ರವಾಹ ಉಂಟಾಗುತ್ತಿದೆ. ಇದರಿಂದಾಗಿ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಒಟ್ಟು ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗುತ್ತಿದೆ. ಹೀಗಾಗಿ ಮಲಪ್ರಭಾ …

Read More »

ಗಲಭೆ ಪ್ರಕರಣಗಳಲ್ಲಿ ಭಾಗಿಯಾದವರು ಎಷ್ಟೇ ದೂರ ಹೋದರು ಸಹ ಅವರಿಗೆಬಂಧಿಸುತ್ತೇವೆ: ಪ್ರವೀಣ್ ಸೂದ್

ಕೋಲಾರ: ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣಗಳಲ್ಲಿ ಭಾಗಿಯಾದವರು ಎಷ್ಟೇ ದೂರ ಹೋದರು ಸಹ ಅವರಿಗೆ ಶಿಕ್ಷೆ ನೀಡಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. ಕೋಲಾರಕ್ಕೆ ಭೇಟಿ ನೀಡಿ ನಗರದ ಹೊರ ವಲಯದ ಟಮಕ ಬಳಿಯ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಗಲಭೆ ಮಾಡಿ ನಂತರ ಕೋಲಾರಕ್ಕೆ ಬಂದಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. …

Read More »

ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿನ ಸುದ್ದಿ ಮಾಸುವ ಮುನ್ನವೇ, ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ

ಹಾವೇರಿ: ಮೈಸೂರು ಜಿಲ್ಲೆಯ ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿನ ಸುದ್ದಿ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಅಂತಹ ಘಟನೆ ನಡೆದಿದೆ. ಹೌದು, ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಬಸವೇಶ್ವರ ನಗರದಲ್ಲಿ ಇಂದು ನಡೆದಿದೆ. ಡಾ. ಜಗದೀಶ್ ಗೊಡ್ಡೆಮ್ಮಿ (47) ಎಂಬುವರೇ ಆತ್ಮಹತ್ಯೆಗೆ ಶರಣಾದ ವೈದ್ಯರಾಗಿದ್ದಾರೆ. ಮೃತ ಜಗದೀಶ್ ನಗರದ ಗೌರಮ್ಮ ಸ್ಮಾರಕ ಮೊಮೊರಿಯಲ್ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಜ್ಞ ವೈದ್ಯರಾಗಿ …

Read More »

ಈಜಾಡಿ ವಿದ್ಯುತ್ ಕಂಬ ಬಳಿ ತೆರಳಿ ವಿದ್ಯುತ್ ಕಂಬ ಏರಿ ದುರಸ್ತಿ ಕಾರ್ಯ ಮಾಡಿದ್ದಾರೆ.

ಬೆಳಗಾವಿ: ಕಳೆದ ವರ್ಷವಷ್ಟೇ ಭೀಕರ ಪ್ರವಾಹಕ್ಕೆ ತುತ್ತಾಗಿದ್ದ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಪಶ್ಚಿಮಘಟ್ಟ ಹಾಗೂ ಖಾನಾಪುರ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಬಳಿಯ ನವಿಲುತೀರ್ಥ ಜಲಾಶಯ ಭರ್ತಿಯಾಗಿ 11 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಮುನವಳ್ಳಿ ಪಟ್ಟಣದ ಯಲಿಗಾರ್ ಓಣಿಗೆ ನೀರು ನುಗ್ಗಿದೆ. ಯಲಿಗಾರ್ ಓಣಿಯಲ್ಲಿದ್ದ ವಿದ್ಯುತ್ ಕಂಬಗಳು ಸಹ ಮುಳುಗಡೆಯಾಗಿದ್ದು ವಿದ್ಯುತ್ ದುರಸ್ತಿಗೆ ಲೈನ್ ಮ್ಯಾನ್‍ಗಳು ಪರದಾಡುತ್ತಿದ್ದಾರೆ. ಈ …

Read More »

ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಪವರ್ ಆಫ್ ಪಾಕಿಸ್ತಾನ್ ಎಂಬ ಪೇಜ್ ಲೈಕ್ ಮಾಡಿ ವಾಟ್ಸ್ ಆಪ್ ಗ್ರೂಪ್ ನಲ್ಲಿ ಆ ಪೇಜ್ ಲೈಕ್. ಪಾಕ್ ಪರ ಪೋಸ್ಟ್ ಮಾಡಿದ್ದ ಪೊಲೀಸ್ ಪೇದೆಯನ್ನು ಅಮಾನತು.

ದಾವಣಗೆರೆ : ಜಿಲ್ಲೆಯ ಸಶಸ್ತ್ರ ಮೀಸಲು ಪಡೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಪವರ್ ಆಫ್ ಪಾಕಿಸ್ತಾನ್ ಎಂಬ ಪೇಜ್ ಲೈಕ್ ಮಾಡಿದ್ದಲ್ಲದೇ, ವಾಟ್ಸ್ ಆಪ್ ಗ್ರೂಪ್ ನಲ್ಲಿ ಆ ಪೇಜ್ ಲೈಕ್ ಮಾಡುವಂತೆ ಶೇರ್ ಮಾಡಿದ್ದರು. ಈ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದರು. ಇಂತಹ ಪಾಕ್ ಪರ ಪೋಸ್ಟ್ ಮಾಡಿದ್ದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. 2008ನೇ ಸಾಲಿನಲ್ಲಿ ಕಾನ್ ಸ್ಟೇಬಲ್ ಹುದ್ದೆಗೆ …

Read More »