Breaking News

ಜಿಲ್ಲೆ

ಮುಂದಿನ ವಾರ ರಾಣಿ ಚನ್ನಮ್ಮ ಮೃಗಾಲಯಕ್ಕೆ ಎರಡು ಹುಲಿ ಸೇರ್ಪಡೆ : ಬಿ.ಪಿ.ರವಿ

ಬೆಳಗಾವಿ : ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯಕ್ಕೆ ಮುಂದಿನ ವಾರದಲ್ಲಿ ಎರಡು ಹುಲಿಗಳು ಬರಲಿವೆ ಎಂದು ರಾಜ್ಯ ಮೃಗಾಲಯ ಪ್ರಾಧಿಕಾರ ಸದಸ್ಯ, ಕಾರ್ಯದರ್ಶಿ ಬಿ.ಪಿ.ರವಿ ಹೇಳಿದರು. ನಿನ್ನೆ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಮೃಗಾಯಲಕ್ಕೆ ಭೇಟಿ ನೀಡಿ, ಮೃಗಾಲಯದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕಮಾತನಾಡಿದ ಅವರು, ಈ ಮೃಗಾಲಯಕ್ಕೇ ಶೀಘ್ರವೇ ನುರಿತ ತಜ್ಞರ ತಂಡ ಭೇಟಿ ನೀಡಿ, ಇಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿ, ವರದಿ ನೀಡಿದ ನಂತರ ಎರಡು ಹುಲಿಗಳು ಇಲ್ಲಿಗೆ …

Read More »

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ‌ ಭೇಟಿಯಾದ ರೈತರ ನಿಯೋಗ

ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದರು.   ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ‌*, ನಮ್ಮ ಪಾಲಿನ‌ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ …

Read More »

ಏರೋ‌ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ

ಬೆಂಗಳೂರು    ಐತಿಹಾಸಿಕ‌ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್‌ ಏರೋ‌ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ‌ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್​​ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್‌ ಬಳಿಯಿಂದಲೇ ಟ್ರಾಫಿಕ್ ಜಾಮ್‌ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …

Read More »

ಶೂಟಿಂಗ್ ಶುರುವಾದ ಮೊದಲ ದಿನವೇ ಆದಿಪುರುಷ್ ಸೆಟ್‌ನಲ್ಲಿ ಬೆಂಕಿ ಅವಘಡ

ಪ್ರಭಾಸ್ ನಟನೆಯ ಪೌರಾಣಿಕ ಚಿತ್ರ ಆದಿಪುರುಷ್ ಅಧಿಕೃತವಾಗಿ ಸೆಟ್ಟೇರಿದೆ. ಸಿನಿಮಾ ಆರಂಭವಾದ ಮೊದಲ ದಿನವೇ ಚಿತ್ರಕ್ಕೆ ವಿಘ್ನ ಎದುರಾಗಿದೆ. ಚಿತ್ರದ ಸೆಟ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮುಂಬೈನ ಗೋರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್‌ನ ಹಿಂಭಾಗದಲ್ಲಿರುವ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾದ ಚಿತ್ರೀಕರಣ ನಡೆಸಲು ಸಿದ್ಧತೆ ನಡೆದಿತ್ತು. ಸೆಟ್‌ನಲ್ಲಿ ಸುಮಾರು ಐವತ್ತರಿಂದ ಅರವತ್ತು ಜನರು ಹಾಜರಿದ್ದರು. ಸಂಜೆ 4: 13ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬಾಲಿವುಡ್‌ …

Read More »

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ‌, ಕಿತ್ತೂರು ರಾಣಿ …

Read More »

ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು

ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.   ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್,​ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್​ ರೆಡ್ಡಿ …

Read More »

ಇಂಜಿನಿಯರ್ ಖಜಾನೆ‌ ಬಗೆದಷ್ಟು ಬಯಲು: ಕಂತೆ ಕಂತೆ ಹಣ ಕಂದು ದಂಗಾದ ಅಧಿಕಾರಿಗಳು!

ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಕೆ. ಶಿಗ್ಗಾಂವಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳೇ ಒಂದು ದಂಗಾಗಿದ್ದಾರೆ. ಅಧಿಕಾರಿಯ ಖಜಾನೆ‌ ಬಗೆದಷ್ಟು ಬಯಲಾಗಯತ್ತಿದ್ದು, ಬ್ಯಾಂಕ್ ಲಾಕರ್​ನಲ್ಲಿ ಲಕ್ಷಾಂತರ ಮೌಲ್ಯದ ಗರಿ ಗರಿ ನೋಟುಗಳು ಪತ್ತೆ‌ಯಾಗಿವೆ. ಎಇಇ ದೇವರಾಜ ಕೆ. ಶಿಗ್ಗಾಂವಿ ಮನೆ ಮತ್ತು ತಾಯಿ ಹಾಗೂ ಮಾವನ ಮನೆಗಳ ಮೇಲೂ ಎಸಿಬಿ ದಾಳಿ ಮಾಡಿದೆ. ಈ ವೇಳೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆ ಪತ್ತೆ‌ಯಾಗಿದೆ. …

Read More »

ಗೋಕಾಕ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕ ಸತೀಶ್ ಜಾರಕಿಹೊಳಿ ಭೇಟಿ

ಗೋಕಾಕ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  ಸುಧಾರಣ ಸಮಿತಿ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು. ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಪ್ರವೇಶ ಪಡೆದಿರುವ ಕುರಿತು ಮಾಹಿತಿ ಪಡೆದರು. ಬಳಿಕ ನೂತನ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು. ತದನಂತರ ಕಾಲೇಜು ಅಭಿವೃದ್ಧಿಗೆ ಮಾಡಬೇಕಾದ ಯೋಜನೆಗಳ ಕುರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ, ಹಲವು ಸಲಹೆಗಳನ್ನು ನೀಡಿದರು. ಇದೇ ವೇಳೆ ಕಾಲೇಜ್ ಸಿಬ್ಬಂದಿ …

Read More »

ಸೈನಿಕನ ಕುಟುಂಬಸ್ಥರ ಮೇಲೆ ಬೆಳಗಾವಿ ಬಿಜೆಪಿ ಮುಖಂಡನ ದರ್ಪ : ಕಬ್ಬಿಣ ರಾಡ್ ನಿಂದ ಹಲ್ಲೆ !

  ಬೆಳಗಾವಿ : ಆಸ್ತಿ ವಿಚಾರವಾಗಿ ಬೆಳಗಾವಿ ಮಹಾನಗರ ಘಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ ನಮ್ಮ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಅಧಿಕಾರಿಗಳು ಕೇಸ್ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸೈನಿಕ ಭೀಮ್ಮಪ್ಪಾ ನರಸಗೌಡ ಕುಟುಂಬಸ್ಥರು ಆರೋಪಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು ತೊಡಿಕೊಂಡ ಸೈನಿಕ ಕುಟುಂಬ ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಅತ್ತ ಸೇನೆಯಲ್ಲಿ ಸೈನಿಕ ಸೇವೆ …

Read More »

ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ಬಿಜೆಪಿ ಸದಸ್ಯ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಮಧ್ಯಾಹ್ನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು.   ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು.   ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, ಇದರ ಪರವಾಗಿ …

Read More »