Breaking News
Home / ಜಿಲ್ಲೆ (page 851)

ಜಿಲ್ಲೆ

ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ

ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರ ಎದುರೇ ಬಿಜೆಪಿ ಕಾರ್ಯಕರ್ತರು ಕಿತ್ತಾಡಿಕೊಂಡ ಘಟನೆ  ಅರಸಿಕೇರೆಯ ಚಲುವನಹಳ್ಳಿಯಲ್ಲಿ ಗುರುವಾರ ನಡೆದಿದೆ. ಮೂಲ ಬಿಜೆಪಿ ಕಡೆಗಣಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ ಮಾಡಿಕೊಂಡಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಚಿವ ಗೋಪಾಲಯ್ಯ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಮಾರ್ ಕಾರ್ಯಕರ್ತರ ಸಮಾಧಾನ ಪಡೆಸಲು ಹರಸಾಹಸ ಪಟ್ಟ ಪ್ರಸಂಗ …

Read More »

ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ:ಪೊಲೀಸ್ ಆಯುಕ್ತ ಕಮಲ್‍ ಪಂತ್

ಬೆಂಗಳೂರು: ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ ಎಂದು ಪೊಲೀಸ್ ಆಯುಕ್ತ ಕಮಲ್‍ ಪಂತ್ ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.ಡಿಜೆ ಹಳ್ಳಿ ಪೊಲೀಸ್ ಠಾಣೆಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಲ್‍ ಪಂತ್, ಇವತ್ತು ಕರ್ಫ್ಯೂ ತೆರವು ಆದಮೇಲೆ ಯಾವ ಪರಿಸ್ಥಿತಿ ಇದೆ ಅನ್ನೋದನ್ನು ನೋಡೋಕೆ ಬಂದಿದ್ದೆ. ತನಿಖೆ ಯಾವ ರೀತಿ ನಡೆಯುತ್ತಿದೆ. ಮುಂದೆ ಏನು ಮಾಡಬೇಕು ಅನ್ನೋದನ್ನು ಚರ್ಚೆ ಮಾಡಿದ್ದೀವಿ. ನಮಗೆ ಯಾವುದೇ ರೀತಿಯ ಒತ್ತಡ ಇಲ್ಲ …

Read More »

ಗೋಕಾಕ:  ಇಲ್ಲಿನ ಪರಿಹಾರ ಕೇಂದ್ರದಲ್ಲಿ ಕ್ಷುಲ್ಲಕ ಕಾರಣಕ್ಕೆ  ಜಗಳವಾಡಿಕೊಂಡ ಮಹಿಳೆಯರು.

ಗೋಕಾಕ:  ಇಲ್ಲಿನ ಪರಿಹಾರ ಕೇಂದ್ರದಲ್ಲಿ ಮಹಿಳೆಯರಿಬ್ಬರು ಕ್ಷುಲ್ಲಕ ಕಾರಣಕ್ಕೆ  ಜಗಳವಾಡಿಕೊಂಡಿದ್ದಾರೆ. ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ನದಿತೀರದ ಗ್ರಾಮಗಳ ಜನರನ್ನು ಜಿಲ್ಲಾಡಳಿತ ಮುನ್ನೆಚ್ಚೆರಿಕೆ ಕ್ರಮವಾಗಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ. ಆದ್ರೆ ಕಸ ಗುಡಿಸುವ ವಿಚಾರವಾಗಿ   ಉಪ್ಪಾರಗಲ್ಲಿ – ಕುಂಬಾರಗಲ್ಲಿ ಮಹಿಳೆಯರ ಮಧ್ಯೆ ಗಲಾಟೆ ನಡೆದಿದೆ. ವಿಕೋಪಕ್ಕೆ ತಿರುಗಿ ಬಳಿಕ ಇಬ್ಬರು ಕೈಕೈ ಮಿಲಾಯಿಸುವಷ್ಟರ ಮಟ್ಟಿಗೆ ಜಗಳಾಡಿದ್ದಾರೆ. ಸ್ಥಳದಲ್ಲಿದ್ದ ಕಾಳಜಿ ಕೇಂದ್ರದ ನೋಡಲ್ ಅಧಿಕಾರಿ ಇಬ್ಬರನ್ನು ಸಮಾಧಾನಪಡಿಸಲು ಹರಸಾಹಸಪಟ್ಟಿದ್ದಾರೆ

Read More »

ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣ 13 ಜನರ ವಿರುದ್ಧ ಚಾರ್ಜ್ ಶೀಟ್

ಬೆಳಗಾವಿ: ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 13 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಐಡಿ ಡಿವೈಎಸ್​​​ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ಸುದೀರ್ಘ ತನಿಖೆ ನಡೆಸಿದ್ದು, ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆನಂದ ಅಪ್ಪುಗೋಳ  ಸೇರಿ ಆಡಳಿತ ಮಂಡಳಿಯ 13 ಜನ ನಿರ್ದೇಶಕರು ಗ್ರಾಹಕರ ಠೇವಣಿಯನ್ನು …

Read More »

ಕೊರೊನಾ ಕೂಡ. ಇದನ್ನು ನಾವು ಮನೆಯಲ್ಲಿ ಎದುರಿಸಬೇಕಾಗುತ್ತದೆ. ಇದರ ಬಗ್ಗೆ ತೆಲೆಕೆಡಿಸಿಕೊಂಡರೆ ಆರ್ಥಿಕತೆ ದಿವಾಳಿತನ ಆಗುತ್ತೆ

ಬೆಳಗಾವಿ: ಮಾಸ್ಕ್ ಹಾಕಿಕೊಂಡವರನ್ನು ನೋಡಿದರೆ ರಾಮಾಯಣ ನೆನಪಾಗುತ್ತದೆ ಎಂದು ಹೇಳುವ ಮೂಲಕ ಕೇಂದ್ರದ ಮಾಜಿ ಸಚಿವ ಮತ್ತು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಕೊರೊನಾ ಕುರಿತು ಭಾಷಣ ಮಾಡುವಾಗ ಮಾತನಾಡಿದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಮಗೆ ಸುಮ್ಮನೆ ಹೆದರಿಸಿದ್ದಾರೆ. ಈ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು  ಘೋಷಣೆ ಕೂಗಿ ಆಕ್ರೋಶ

ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು  ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. …

Read More »

ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ

ಬೆಂಗಳೂರು:  ಅತಿವೃಷ್ಟಿಯಿಂದಾಗಿ ಇಡೀ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಆದ್ರೆ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾದ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ವರ್ಷ ಅತಿವೃಷ್ಟಿ ಪರಿಹಾರದಲ್ಲಿ ಆದ ವೈಫಲ್ಯದಿಂದ ಈ ಬಾರಿ ಜನರ ಕಷ್ಟ ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ. ಅತಿವೃಷ್ಟಿಯಿಂದ ಕಂಗೆಟ್ಟ ಜನರಿಗೆ ಪರಿಹಾರ ಕೊಡುವ ಕೆಲಸ ಮಾಡುವ ಬದಲು ಕಂದಾಯ ಸಚಿವರು ಬೆಂಗಳೂರಿನಲ್ಲಿ ಕುಳಿತು ಕಾವಲಭೈರಸಂದ್ರ ಗಲಭೆ ಬಗ್ಗೆ …

Read More »

ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಮಳೆಯಿಂದಾಗಿ ನೆರೆಯ ಭೀತಿ ಅನುಭವಿಸುತ್ತಿರುವ ಘಟಪ್ರಭಾ ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಮಂಗಳವಾರದಂದು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರಾಶ್ರಿತ ಕುಟುಂಬಗಳಿಗೆ ಗಂಜಿ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಿರುವುದಾಗಿ ಹೇಳಿದ್ದಾರೆ.   ಅಡಿಬಟ್ಟಿ, ಮೆಳವಂಕಿ, ಉದಗಟ್ಟಿ, ಬಳೋಬಾಳ, ಬೀರನಗಡ್ಡಿ, ಮಸಗುಪ್ಪಿ, ವಡೇರಹಟ್ಟಿ, ಹುಣಶ್ಯಾಳ ಪಿಜಿ, …

Read More »

ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಬೆಳಗಾವಿ : ಗಣೇಶ ಹಬ್ಬಕ್ಕೆ ಕೊರೊನಾ ಕರಿನೆರಳು ಬಿದ್ದಿದ್ದು, ವಿಘ್ನಗಳ ಮೂರ್ತಿ ತಯಾರಿಕಾ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ವಿಘ್ನಗಳ ವಿನಾಶಕನೇ ಗಣೇಶ ಎಂಬ ಕಾರಣ ಪ್ರತಿಯೊಂದು ಸಮಾರಂಭದಲ್ಲಿ ಗಜಾನನ ಪೂಜೆ ನಡೆಸಲಾಗುತ್ತದೆ. ಆದ್ರೆ ಈ ಬಾರಿ ಗಣೇಶ ಹಬ್ಬಕ್ಕೆ ಮೂರ್ತಿ ತಯಾರಿಕ ಕುಟುಂಬಕ್ಕೆ ಈ ಮಾತು ಅಕ್ಷರಶಃ ಸುಳ್ಳಾಗಿದೆ. ಅಥಣಿ ಪಟ್ಟನದಲ್ಲಿವಂಶ ಪಾರಂಪರಿಕವಾಗಿ ಗಣೇಶ ಮೂರ್ತಿ ತಯಾರಿಕೆ ಕಾಯಕದಲ್ಲಿ ತೊಡಗಿಕೊಂಡಿರುವ  15ಕ್ಕೂ ಹೆಚ್ಚು ಕುಟುಂಬಗಳು ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ. …

Read More »

8 ತಿಂಗಳಿನಿಂದ ಬಾರದ ಸಂಬಳ : ರಾಜ್ಯ ಸರ್ಕಾರಕ್ಕೆ ರಾತ್ರಿ ಹೊತ್ತು ಕಾವಲುಗಾರನಾಗಿ ಕೆಲಸ ಮಾಡಲು ಪತ್ರ ಬರೆದ ‘ಸರ್ಕಾರಿ ನೌಕರ’

ಬೆಂಗಳೂರು : ಮನೆಯಲ್ಲಿ ಗರ್ಭಿಣಿ ಪತ್ನಿಯಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪೋಷಕರು ಇದ್ದಾರೆ. ಅವರನ್ನು ಉಳಿಸಿಕೊಳ್ಳಲು ಕಚೇರಿ ಕರ್ತವ್ಯಕ್ಕೆ ಧಕ್ಕೆಯಾಗದಂತೆ ರಾತ್ರಿ ಪಾಳಿಯಲ್ಲಿ ಅಲ್ಪಾವಧಿ ಕೆಲಸ ಮಾಡಲು ಅನುಮತಿ ನೀಡುವಂತೆ ನೊಂದಣಿ ಮತ್ತು ಮುದ್ರಣಾಂಕ ಶಾಖೆಯ ಆಡಿಟ್ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರು ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪತ್ರದಿಂದಾಗಿ ರಾಜ್ಯ ಸರ್ಕಾರಿ ನೌಕರರ ಪರಿಸ್ಥಿತಿ ಮನ ಮಿಡಿಯುವಂತಾಗಿದೆ. ರಾಜ್ಯ …

Read More »