ಬೆಂಗಳೂರು: ಗವಿಗಂಗಾಧರೇಶ್ವರನ ಸೂರ್ಯ ರಶ್ಮಿ ಸ್ಪರ್ಶಕ್ಕೆ ಮೋಡ ಅಡ್ಡವಾಗಿದೆ. ಭಾಸ್ಕರನು ಅಗೋಚರವಾಗಿ ಲಿಂಗ ಸ್ಪರ್ಶಿಸಿ ಹಾದುಹೋಗಿದ್ದಾನೆ. ಈ ಬಗ್ಗೆ, ಗವಿಗಂಗಾಧರೇಶ್ವರ ದೇಗುಲದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಮಾಹಿತಿ ನೀಡಿದ್ದಾರೆ. ದೈವ ನಿರ್ಣಯ ದೇವರಿಗೆ ಮಾತ್ರ ಗೊತ್ತಿರುತ್ತದೆ. ನನ್ನ 53 ವರ್ಷಗಳ ಅನುಭವದಲ್ಲಿ ಇದೇ ಮೊದಲ ಬಾರಿ ಹೀಗಾಗುತ್ತಿದೆ. ಕಳೆದ ವರ್ಷ ಈಶ್ವರನ ಮೇಲೆ 2.36 ನಿಮಿಷ ಸೂರ್ಯ ಕಿರಣವಿತ್ತು. ಹಾಗಾಗಿ, ಕಳೆದ ವರ್ಷ ಕೊರೊನಾ ಇಡೀ ವಿಶ್ವವನ್ನು ಕಾಡಿತ್ತು. …
Read More »ಡ್ರಗ್ಸ್ ಪ್ರಕರಣ ಕೌಶಲಾಭಿವೃದ್ಧಿ ಸಚಿವ ಸೋದರಳಿಯ ನನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕೌಶಲಾಭಿವೃದ್ಧಿ ಸಚಿವ ನವಾಬ್ ಮಲ್ಲಿಕ್ ಸೋದರಳಿಯ ಸಮೀರ್ ಖಾನ್ ನನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಸಮೀರ್ ಖಾನ್ ಬ್ರಿಟಿಷ್ ಮೂಲದ ಕರಣ್ ಸಜ್ನಾನಿ ಎಂಬಾತನ ಜೊತೆ ಡ್ರಗ್ಸ್ ಗೆ ಸಂಬಂಧಿಸಿದಂತೆ ವ್ಯವಹಾರ ನಡೆಸಿರುವ ಬಗ್ಗೆ ಎನ್ ಸಿಬಿ ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಸಮೀರ್ ಬಂಧನವಾಗಿದೆ. ಕಳೆದ ವಾರವಷ್ಟೇ ಕರಣ್ ಹಾಗೂ ಇಬ್ಬರು ಮಹಿಳೆಯರನ್ನು ಎನ್ ಸಿಬಿ ವಶಕ್ಕೆ ಪಡೆದುಕೊಂಡಿತ್ತು. …
Read More »ನೋಡಲು ಆಗದಂತಹ ಸಿಡಿಗಳೂ ಇವೆ : ಯತ್ನಾಳ್
ಬಾಗಲಕೋಟೆ: ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು, ಸಿಡಿ ವಿಚಾರನ್ನಿಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಒಂದರ ಮೇಲೊಂದರಂತೆ ಆರೋಪಗಳನ್ನು ಮಾಡುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ಕೂಡಲಸಂಗಮದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪನವರ ಭ್ರಷ್ಟಾಚಾರ ಸಿಡಿ ಮಾತ್ರವಲ್ಲ, ನೋಡಲು ಆಗದಂತಹ ಸಿಡಿಗಳೂ ಇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನನ್ನ ಬಳಿ ಬಂದಿದ್ದ 3 ಶಾಸಕರ ಬಳಿ ಆ ಸಿಡಿಗಳಿವೆ. ಆದರೆ ನಾನು ಅಂಥಹ …
Read More »ಸಿಡಿ ವಿವಾದವು ಬಿಜೆಪಿ ಮುಕ್ತ ರಾಜ್ಯಕ್ಕೆ ಮುನ್ನುಡಿ ಬರೆದಿದೆ | ಭವಿಷ್ಯ ನುಡಿದ ಪ್ರಿಯಾಂಕ್ ಖರ್ಗೆ
ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಿಡಿ ವಿವಾದ ಸೃಷ್ಟಿಯಾಗಿದ್ದು, ಇದು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಸಿಎಂ ಯಡಿಯೂರಪ್ಪನವರ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೇವಲ ಬಿಎಸ್ ವೈ ಮುಕ್ತ ಬಿಜೆಪಿ ಮಾತ್ರವಲ್ಲ, ಬಿಜೆಪಿ ಮುಕ್ತ ರಾಜ್ಯ ಆಗುವ ಮುನ್ನುಡಿ …
Read More »ದಡ್ಡಿ, ಮಜತಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ
ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ದಡ್ಡಿ, ಮಜತಿ ಹಾಗೂ ಚಿಕ್ಕಲದಿನ್ನಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯ ಸುಮಾರು 45 ಲಕ್ಷ ರೂ. ಅನುದಾನದಲ್ಲಿ ದಡ್ಡಿ, ಮಜತಿ, ಮಾವನೂರು, ಕುರ್ಣಿ, ಚಿಕ್ಕಲದಿನ್ನಿ ಗ್ರಾಮದಲ್ಲಿನ ಎಸ್, ಸಿ ಕಾಲೋನಿಗಳಲ್ಲಿನ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ರಮೇಶ ಪಾಟೀಲ್, ಸುರೇಶ ಬೆನ್ನಿ, ಮಾಲಿಂಗ ಶಿರಗುಪ್ಪಿ, …
Read More »ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎತ್ತುಗಳಿಗೆ ಪೂಜೆ ಮಾಡಿರೋದು ಸಾಕಷ್ಟು ಕುತೂಹಲ ಮೂಡಿಸಿರೋದು ಸುಳ್ಳಲ್ಲ
ಬೆಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಧರ್ಮಪತ್ನಿ ಉಷಾ ಶಿವಕುಮಾರ್ ಜೊತೆಗೂಡಿ ಇಂದು ತಮ್ಮ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ವಿಶೇಷ ಅಂದ್ರೆ ಒಂದೆಡೆ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಗೋಮಾಂಸದ ಕುರಿತು ದಿನಕ್ಕೊಂದು ಹೇಳಿಕೆ ನೀಡುತ್ತಾ ವಿವಾದ ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ನನಗೆ ಯಾರೂ ಬೆಂಬಲ ನೀಡುತ್ತಿಲ್ಲ.. ಜನರೇ ನನ್ನನ್ನು ಕಾಪಾಡಬೇಕು ಅಂತಾ ಅಲವತ್ತುಕೊಳ್ಳುತ್ತಿದ್ದಾರೆ. ಈನಡುವೆ ಇನ್ನೊಂದೆಡೆ ಕೆಪಿಸಿಸಿ …
Read More »ಮೊದಲ ಹಂತದಲ್ಲಿ 2,934 ಸ್ಥಳಗಳಲ್ಲಿ ಸುಮಾರು 3 ಲಕ್ಷ ಫ್ರಂಟ್ ಲೈನ್ ವರ್ಕರ್ಸ್ ಕೊರೋನಾ ಲಸಿಕೆ
ಬೆಂಗಳೂರು : ಜನವರಿ 16ರ ಮೊದಲ ದಿನ ದೇಶಾದ್ಯಂತ 2,934 ಸ್ಥಳಗಳಲ್ಲಿ ಸುಮಾರು 3 ಲಕ್ಷ ಫ್ರಂಟ್ ಲೈನ್ ಹೆಲ್ತ್ ಕೇರ್ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರತಿ ಸೈಟ್ ಗೆ ದಿನಕ್ಕೆ ಅಸಮಂಜಸ ಸಂಖ್ಯೆಯ ಲಸಿಕೆಗಳನ್ನು ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಪ್ರತಿ ಲಸಿಕೆ ಯ ಅಧಿವೇಶನವು ಗರಿಷ್ಠ 100 ಫಲಾನುಭವಿಗಳಿಗೆ ಸೇವೆ ನೀಡಲಿದೆ ಎಂದು ಹೇಳಿದೆ. ಪ್ರತಿ ಅಧಿವೇಶನದಲ್ಲಿ ಪ್ರತಿ …
Read More »ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ ಮಾತನಾಡುವುದು ಬೇಡ. B.S.Y.
ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ 7 ಸಚಿವರ ಸೇರ್ಪಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವಾಕಾಂಕ್ಷಿಗಳು ವರಿಷ್ಠರಿಗೆ ದೂರು ನೀಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಸಮಾಧಾನಗೊಂಡಿರುವ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆ ಬಗ್ಗೆ ಶಾಸಕರಿಗೆ ಅಸಮಾಧಾನ, ವಿರೋಧವಿದ್ದರೆ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ ಎಂದಿದ್ದಾರೆ. ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ …
Read More »ವಿವಾಹೇತರ ಸಂಬಂಧ ಬಯಲಿಗೆ ಬರುತ್ತಿದ್ದಂತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಆತ್ಮಹತ್ಯೆ
ಕಾಚಿಗುಡ: ವಿವಾಹೇತರ ಸಂಬಂಧ ಬಯಲಿಗೆ ಬರುತ್ತಿದ್ದಂತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಕಾಚಿಗುಡದಲ್ಲಿ ನಡೆದಿದೆ. ಕಾಚಿಗುಡದ ಚಪ್ಪಲ್ ಬಜಾರ್ನಲ್ಲಿ ವಾಸವಿದ್ದ ಕರ್ನಾಟಕ ಮೂಲದ ಆಟೋ ಚಾಲಕ ಹನಮಂತು (23) ಮತ್ತು ಅದೇ ಏರಿಯಾದಲ್ಲಿ ವಾಸವಿದ್ದ ಮಹಾರಾಷ್ಟ್ರದ ಲಾತುರ್ ಮೂಲದ 23 ವರ್ಷದ ಮಹಿಳೆ ಮೃತ ದುರ್ದೈವಿಗಳು.ಕೆಲವು ದಿನಗಳಿಂದ ಹನುಮಂತು ಜತೆ ಮಹಿಳೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ಮಹಿಳೆಯ ಪತಿಗೆ ತಿಳಿದು ಇಬ್ಬರ ನಡುವೆ …
Read More »ಚಿನ್ನದ ಅಂಗಡಿಯ ಮಾಲೀಕನ ಪುತ್ರನನ್ನು ಅವರ ಮನೆಯಲ್ಲಿಯೇ ಕೊಲೆ
ಹುಣಸಗಿ: ಪಟ್ಟಣದಲ್ಲಿ ಮಧ್ಯಾಹ್ನ ಚಿನ್ನದ ಅಂಗಡಿಯ ಮಾಲೀಕನ ಪುತ್ರನನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಿದ ಘಟನೆ ಬುಧವಾರ ನಡೆದಿದೆ. ಕೊಲೆಯಾದ ಯುವಕನನ್ನು ನರೇಂದ್ರ ಶಿರೂರಿ (22) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಮನೆಗೆ ಊಟಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನೆಲ್ಲೆಡೆ ಜನ ಭಯಭೀತರಾಗಿದ್ದು, ಜನ ತಂಡೋಪತಂಡವಾಗಿ ಕೊಲೆಯಾದ ಸ್ಥಳದತ್ತ ಆಗಮಿಸುತ್ತಿದ್ದರು. ‘ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿಶೋರ ಕಣ್ಮರೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಮೃತ …
Read More »
Laxmi News 24×7