Breaking News
Home / ಜಿಲ್ಲೆ (page 870)

ಜಿಲ್ಲೆ

ಕೊರೊನಾ ನಿಯಂತ್ರಣ: ಪ್ರಧಾನಿ ಜೊತೆ 4 ಪ್ರಮುಖ ಬೇಡಿಕೆ ಸಲ್ಲಿಸಿದ ಕರ್ನಾಟಕ

ಬೆಂಗಳೂರು: ಕೋವಿಡ್‌ 19 ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ಪ್ರಮುಖವಾಗಿ 4 ಬೇಡಿಕೆಯನ್ನು ಸಲ್ಲಿಸಿದೆ.ವಿಡಿಯೋ ಸಂವಾದದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ಒದಗಿಸಿದರು.ಸಭೆಯಲ್ಲಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳನಾಡು, ಬಿಹಾರ್, ಗುಜರಾತ್, ಪಂಜಾಬ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತೆಲಂಗಾಣ ರಾಜ್ಯಗಳ …

Read More »

ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು.

ಚಿಕ್ಕೋಡಿ  – ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು. ಅರಣ್ಯ ಇಲಾಖೆಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ ವಿಶೇಷ ಪ್ರಯತ್ನ ಮಾಡಿ ಗಣೇಶ ಹುಕ್ಕೇರಿ ಬಡ ಜನರಿಗೆ ಈ ಸೌಲಭ್ಯ ಕೊಡಿಸಿದ್ದಾರೆ. ಸರಕಾರ ಯಾವುದೇ ಇರಲಿ, ಕ್ಷೇತ್ರದ ಜನರಿಗೆ ಎಲ್ಲ ರೀತಿಯ ಸೌಲಭ್ಯ ಕೊಡಿಸಲು ನಾನು ಮತ್ತು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ನಿರಂತರವಾಗಿ ಪ್ರಯತ್ನ …

Read More »

ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.

ಬೆಳಗಾವಿ,): ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ(ಆ.11) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ ತರಬೇಕು. ಖಾಸಗಿ …

Read More »

70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ:ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ

ಬೆಳಗಾವಿ-ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ, ಈವರೆಗೂ 70 ಕೊರೊನಾ ಸೋಂಕಿತರ ಯಶಸ್ವಿ ಹೆರಿಗೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬಿಮ್ಸ್ ಆಸ್ಪತ್ರೆಯಲ್ಲಿ ಈವರೆಗೂ 70 ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಗಿದೆ. ಈ ಪೈಕಿ 34 ಸೀಜರಿನ್ ಹಾಗೂ 36 ನಾರ್ಮಲ್ ಡಿಲಿವರಿ ಆಗಿವೆ,ಎಂದು ದಾಸ್ತಿಕೊಪ್ಪ ಮಾಹಿತಿ ನೀಡಿದ್ದಾರೆ. ಹೆರಿಗೆಯಾದ 5 ಅಥವಾ 7ನೇ ದಿವಸಕ್ಕೆ ನವಜಾತ ಶಿಶುವಿನ ಸ್ವ್ಯಾಬ್ ಟೆಸ್ಟ್ …

Read More »

ಕಣಕುಂಬಿ ಅರಣ್ಯ ಪ್ರದೇಶದಲ್ಲಿರೈತನ ಮೇಲೆ ಕರಡಿಯೊಂದು ದಾಳಿ

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಕಣಕುಂಬಿ ಅರಣ್ಯ ಪ್ರದೇಶದಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದೆ. ಚಿಕಲೆ ಗ್ರಾಮದ 60 ವರ್ಷದ ಶಂಕರ ಗವಸ್ ಎಂಬ ರೈತ ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿ ಮಾಡಿ ಗಾಯಪಡಿಸಿದ್ದು ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎಂದು ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.

Read More »

S.S.L.C. ಪರೀಕ್ಷೆಯ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೆ ಸಿಎಂ ಕೃತಜ್ಞತೆ

ಬೆಂಗಳೂರು, ಆ.11 : ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಕೊರೋನಾ ಸವಾಲುಗಳ ನಡುವೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಬಾರದು ಎಂದು ರಾಜ್ಯ ಸರ್ಕಾರ ಟೊಂಕಕಟ್ಟಿ ನಿಂತು, ಈ ವರ್ಷದ ಜೂನ್ 25 ರಿಂದ ಜುಲೈ 3 ರವರೆಗೆ, ಅತ್ಯಂತ ಯಶಸ್ವಿಯಾಗಿ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಶೇಕಡಾ 71.80 ರಷ್ಟು ಮಕ್ಕಳು …

Read More »

ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಎಂದು ಸ್ಪಷ್ಟ ಪಡಿಸಿದ್ದಾರೆ.

ಬೆಂಗಳೂರು: ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಎಂದು ಸ್ಪಷ್ಟ ಪಡಿಸಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಎಂ.ಎಸ್. ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘಟನೆ ಹೊರತು ಪಡಿಸಿ, ಈ ಕ್ಷಣದಿಂದಲೇ ಉಳಿದ ಸಂಘಟನೆಗಳನ್ನು ವಿಸರ್ಜಿಸುವಂತೆ ಸೂಚನೆ ನೀಡಿದ್ದಾರೆ. ಯಾರಾದರು ತಮ್ಮ ಹಾಗೂ ಸಹೋದರ ಡಿ.ಕೆ. ಸುರೇಶ ಅವರ ಹೆಸರಲ್ಲಿ  ಸಂಘಟನೆಗಳನ್ನು ನಡೆಸಿದರೆ …

Read More »

ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್

ಗೋಕಾಕ:  ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಮಾಡಲು  ನಿರ್ಧರಿಸಲಾಗಿದೆ ಎಂದು ನಗರಸಭೆ  ಕಮಿಷನರ್ ಶಿವನಂದ ಹಿರೇಮಠ್  ತಿಳಿಸಿದ್ದಾರೆ.  ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ  ಅಂಗಡಿ, ಮುಗ್ಗಟ್ಟು ಹಾಗೂ ವ್ಯಾಪಾರಸ್ತರೊಂದಿಗೆ ಮಂಗಳವಾರ  ನಡೆದ ಸಭೆಯಲ್ಲಿ ನಾಳೆಯಿಂದ  ಆ. 15(ರವಿವಾರ)ದವರೆಗೂ ಲಾಕ್ ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ನಗರದಲ್ಲಿ ಸಾವಿನ ಸಂಖ್ಯೆ ಹೆಚ್ಚುತಲಿದೆ.  ಹೀಗಾಗಿ ಬಟ್ಟೆ ಅಂಗಡಿ, …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

ಚಿಕ್ಕೋಡಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದುಕೊಂಡು ನಮ್ಮ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ ಅವಳ ಮುಂದಿನ ವಿದ್ಯಾಭ್ಯಾಸದ ಸಮಗ್ರ ಖರ್ಚು ವೆಚ್ಚವನ್ನು ಸಂಸ್ಥೆ ಭರಿಸಲಿದೆ ಎಂದು ಸಿಎಲ್‍ಇ ಸಂಸ್ಥೆ ಕಾರ್ಯದರ್ಶಿ ಜಗದೀಶ ಕವಟಗಿಮಠ ತಿಳಿಸಿದರು. ಇಲ್ಲಿನ ಸಿಎಲ್‍ಇ ಸಂಸ್ಥೆಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ರ್ಯಾಂಕ ಪಡೆದ ಎಂ.ಕೆ.ಕವಟಗಿಮಠ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ …

Read More »

ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅಧಿಕಾರ

ಬೆಳಗಾವಿ : ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿ ಯಶೋಧಾ ವಂಟಗೋಡಿ ಲೋಕಾಯುಕ್ತ ಎಸ್ಪಿಯಾಗಿ ವರ್ಗಾವಣೆಯಾದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಚಂದ್ರಶೇಖರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಅವರು ಅಧಿಕಾರ ಸ್ವೀಕರಿಸಿಕೊಂಡರು.

Read More »