ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …
Read More »ಮೃತ ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಶಾಸಕ ಸತೀಶ ಜಾರಕಿಹೊಳಿ
ಎರಡು ತಿಂಗಳ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …
Read More »ಕೃಷ್ಣ -ಕಾವೇರಿ ಕಣಿವೆ ,ಭೂಪೇಂದ್ರ ಯಾದವ್ ಜತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ
ಬೆಂಗಳೂರು: ರಾಜ್ಯದ ಕೃಷ್ಣ ಮತ್ತು ಕಾವೇರಿ ಕೊಳ್ಳದ ರೈತರಿಗೆ ಹೆಚ್ಚಿನ ಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜ್ಯಸಭಾ ಸದಸ್ಯ ಭೂಪೇಂದ್ರ ಯಾದವ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಮಹತ್ವದ ಬೆಳವಣಿಗೆಯಲ್ಲಿ ಅಸ್ಸಾಂನ ರಾಜಧಾನಿ ಗೌಹಾಟಿಯಲ್ಲಿ ಭೂಪೇಂದ್ರ ಅವರನ್ನು ಭೇಟಿ ಮಾಡಿದ್ದ ಸಚಿವರು, ಬ್ರಹ್ಮಪುತ್ರ ನದಿ ಕಣಿವೆಯ ಇಕ್ಕೆಲಗಳಲ್ಲಿ ವಿಶ್ವದ ಪ್ರತಿಷ್ಠಿತ ಮಲ್ಬರಿ ಮತ್ತು ಗೋಲ್ಟನ್ ಮೋಘಾ ಸಿಲ್ಕ್ ರೇಷ್ಮೆ ಬೆಳೆಯುವ ಯೋಜನೆ …
Read More »ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಣಿಗಳ ಹಿಂಸೆ ತಡೆ (ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಅನಿಮಲ್ ಕ್ರ್ಯುಯೆಲ್ಟಿ -ಎಸ್ಪಿಸಿಎ) ಸಮಿತಿಗಳನ್ನು ರಚಿಸಲಾಗುತ್ತಿದೆ.
ಬೆಳಗಾವಿ – ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಣಿಗಳ ಹಿಂಸೆ ತಡೆ (ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಅನಿಮಲ್ ಕ್ರ್ಯುಯೆಲ್ಟಿ -ಎಸ್ಪಿಸಿಎ) ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬುಧವಾರ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಡಾ.ಸೋನಾಲಿ ಸರ್ನೋಬತ್ ಮತ್ತು ಶಿವಾನಂದ್ ಡಂಬಳ ಅವರು ಜಿಲ್ಲಾಧಿಕಾರಿ ಡಾ.ಮಹಾಂತೇಶ ಹಿರೇಮಠ ಮತ್ತು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ), ಪುನರ್ವಸತಿ ಕೇಂದ್ರಗಳು, …
Read More »ಇಂದು ಸಂಜೆ 6 ಗಂಟೆಯಿಂದ ಜನವರಿ 2ರ ಸಂಜೆಯವರೆಗೂ Chamundi Hill ಪ್ರವೇಶ ನಿಷೇಧಿಸಲಾಗಿದೆ.
ಮೈಸೂರು (ಡಿ. 31): ಮತ್ತೆ ಹೆಚ್ಚುತ್ತಿರುವ ಕೊರೋನಾದಿಂದಾಗಿ ಈ ಬಾರಿಯ New Year Celebrationಗೂ ಬ್ರೇಕ್ ಬಿದ್ದಿದೆ. ಬೆಂಗಳೂರು ಮಾತ್ರವಲ್ಲದೆ ಮೈಸೂರಿನಲ್ಲಿ ಕೂಡ ಹೊಸ ವರ್ಷಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಇಂದು ರಾತ್ರಿ 11.30ರೊಳಗೆ ಎಲ್ಲ ಕಾರ್ಯಕ್ರಮ ಮುಗಿಸಬೇಕು. ಹೋಟೆಲ್, ರೆಸ್ಟೋರೆಂಟ್, ಪಬ್ ಅಂಗಡಿ, ಮುಗ್ಗಟ್ಟುಗಳನ್ನು ಮುಚ್ಚಬೇಕು ಎಂದು ಈಗಾಗಲೇ ಎಲ್ಲ ಅಧಿಕಾರಿಗಳನ್ನೂ ಕರೆದು ಸೂಚನೆ ನೀಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಜನವರಿ 2ರ ಸಂಜೆಯವರೆಗೂ Chamundi Hill …
Read More »ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಯ್ತು 85 ಲೀಟರ್ ಟಾಪ್ ಕ್ವಾಲಿಟಿ ಮದ್ಯ..!
ಬೆಂಗಳೂರು, ಡಿ.31- ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ ರಸ್ತೆ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 114 ಬಾಟಲ್ ಮದ್ಯವನ್ನು ವಶಪಡಿಸಿ ಕೊಂಡಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರಸ್ತೆಯ ವಾಸಿ ಮಣಿ …
Read More »ಇಂದು ಶ್ರೀ ಲಕ್ಷ್ಮಣರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ಪುಣ್ಯ ಸ್ಮರಣೆ ಅಜ್ಜ ಅಜ್ಜಿಯ ಬಗ್ಗೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಹೇಳಿದ್ದೇನು..?
ಜಾರಕಿಹೊಳಿ ಕುಟುಂಬದ ಹಿರಿಯ ಜೀವಿ ಗಳಾದ ಶ್ರೀ ಲಕ್ಷ್ಮಣ ರಾವ್ ಜಾರಕಿಹೋಳಿ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೋಳಿ , ಅವರ್ ಪುಣ್ಯ ತಿಥಿ ಇಂದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳು ಇಂದು ಕುಟುಂಬವನ್ನು ಆಗಲಿ ಒಂಬತ್ತು ವರ್ಷಗಳು ಕಳೆದು ಹೋಗಿವೆ ಆದರೂ ಅವರು ಬರಿ ದೈಹಿಕವಾಗಿ ನಮ್ಮ್ಮಿಂದ ದೂರ ವಾಗಿದ್ದರೆ ಆದರೂ ಅವರು ಮಾನಸಿಕವಾಗಿ ನಮ್ಮ ಜೊತೆಯೇ ಇದ್ದಾರೆ ಎಂದು ಇಂದು ತಮ್ಮ ಅಜ್ಜನನ್ನು ನೆನೆದು ಮಾತನಾಡಿದ ಸೌಭಾಗ್ಯ ಲಕ್ಷ್ಮಿ …
Read More »ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭ
ಬೆಂಗಳೂರು, ಡಿ.31- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಮಾರ್ಚ್ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿದ್ದು, ಮೊದಲ ದಿನ ವಿದ್ಯಾರ್ಥಿಗಳಿಗೆ ಮೊದಲ ಒಂದು ಗಂಟೆ ಕಾಲ ಪಾಠ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ. 10 ಮತ್ತು 12ನೆ ತರಗತಿ ಮಕ್ಕಳಿಕೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುವಂತೆ ಇಲಾಖೆ ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ ಧರಿಸುವುದು, ಜನದಟ್ಟಣೆ ಇರುವ ಪ್ರದೇಶಗಳಿಗೆ ತೆರಳದೆ …
Read More »ಬಸ್ ಮೇಲೆ ಬಾಂಬ್ ದಾಳಿ; 28ಕ್ಕೂ ಹೆಚ್ಚು ಜನ ಸಾವು
ಸಿರಿಯಾ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, 28 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಸಿರಿಯಾದಲ್ಲಿ ನಡೆದಿದೆ. ರಜೆ ಮುಗಿಸಿ ಸೈನಿಕರು ತಮ್ಮ ನೆಲೆಗಳಿಗೆ ಮರಳುತ್ತಿದ್ದಾಗ ಸೈನಿಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಮರಭೂಮಿ ಪ್ರದೇಶದ ಗುಹೆಗಳಲ್ಲಿ ಅಡಗಿಕೊಂಡಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಸೈನಿಕರು ಸೇರಿದಂತೆ ಹಲವರು ಸಾವನಪ್ಪಿದ್ದಾರೆ.
Read More »ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?
ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು. ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.
Read More »
Laxmi News 24×7