Breaking News

ಜಿಲ್ಲೆ

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಯಶಸ್ವಿಯಾಗಿರುವ ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರಿಗೆ ಅಭಿನಂದನೆ ಸಲ್ಲಿಸಿರುವ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಯಶಸ್ವಿಯಾಗಿರುವ ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರಿಗೆ ಅಭಿನಂದನೆ ಸಲ್ಲಿಸಿರುವ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್, ರಾಜ್ಯದ ಜನರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ. ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸಚಿವಸಂಪುಟ ಸಭೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸೋನಾಲಿ ಸರ್ನೋಬತ್ ಹೇಳಿಕೆ ನೀಡಿದ್ದಾರೆ. ಹಲವಾರು ವರ್ಷಗಳಿಂದ ರಾಜ್ಯದ ಕೊಟ್ಯಂತರ ಜನರ ಬೇಡಿಕೆಯಾಗಿದ್ದ ಗೋಹತ್ಯಾ ನಿಷೇಧ ಕಾಯ್ದೆ …

Read More »

ಅಕ್ರಮವಾಗಿ ನುಗ್ಗಿ ಚಿಗರೆಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳ ವಶಕ್ಕೆ

ಬೆಳಗಾವಿ: ಗೋಲಿಹಳ್ಳಿ ವಲಯದ ಕಿತ್ತೂರು ಕಾಯ್ದಿಟ್ಟ ಅರಣ್ಯದಲ್ಲಿ ಅಕ್ರಮವಾಗಿ ನುಗ್ಗಿ ಚಿಗರೆಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಅರಣ್ಯ ಅಪರಾಧಗಳನ್ನು ರೂಢಿಗತ( Habitual Offenders) ಮಾಡಿಕೊಂಡಿರುವ ಇವರು ಅರಣ್ಯಾಧಿಕಾರಿಗಳ ಕಣ್ಣು ತಪ್ಪಿಸಿ ವನ್ಯಭೇಟೆಗೆ ಇಳಿಯುತ್ತಾರೆ ಎಂದು ತಿಳಿದುಬಂದಿದೆ. ಕಿತ್ತೂರು ಬಳಿಯ ಕಾಯ್ದಿಟ್ಟ ಅರಣ್ಯದಲ್ಲಿ ಗುಂಡು ಹಾರಿಸಿದ ಖದೀಮರಿಂದ ಜಿಂಕೆ ತಪ್ಪಿಸಿಕೊಂಡಿದ್ದು, ಬೆಳಗಾವಿ ವಿನಾಯಕ ನಗರದ ಉದ್ದವ ರಾಜೇಂದ್ರ ನಾಯಕ, ಕಾಕತಿ ದೇಸಾಯಿ ಗಲ್ಲಿಯ ಸಾಗರ …

Read More »

ನಾನು ದನದ ಮಾಂಸ ತಿನ್ನುತ್ತೇನೆ. ಬೇಡ ಎನ್ನಲು ನೀನು ಯಾವನು: ಸಿದ್ದರಾಮಯ್ಯ

ಬೆಂಗಳೂರು, ಡಿ.28- ನಾನು ದನದ ಮಾಂಸ ತಿನ್ನುತ್ತೇನೆ. ಅದನ್ನು ಬೇಡ ಎನ್ನಲು ನೀನು ಯಾವನು ಎಂದು ಪ್ರಶ್ನಿಸುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನನ್ನು ಬಲವಾಗಿ ವಿರೋಧಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್‍ನ 136ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಹೊಸದಲ್ಲ. 1964ರಲ್ಲೆ ಕಾಂಗ್ರೆಸ್ ಜಾರಿಗೆ ತಂದಿತ್ತು. ಈಗ ಅದನ್ನು ಪರಿಷ್ಕರಣೆ ಮಾಡಿ …

Read More »

ಬಿಜೆಪಿಯವರು 7 ವರ್ಷದಲ್ಲೇ ಮಾರಿದ್ರು: ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ಕಾಂಗ್ರೆಸ್ ಏನು ಮಾಡದಿದ್ರೆ ಸಂಸ್ಥೆಗಳನ್ನು ಹೇಗೆ ಮಾರಾಟ ಮಾಡುತಿದ್ರು?

ಗೋಕಾಕ: ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ನಿರಂತರ ಶ್ರಮಪಟ್ಟು ಅಭಿವೃದ್ದಿಗೊಳಿಸಿದ ದೇಶವನ್ನು ಬಿಜೆಪಿಯವರು ಕೇವಲ 7 ವರ್ಷದಲ್ಲಿ ಮಾರಾಟ ಮಾಡಿದ್ದಾರೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಪೆಟ್ರೋಲಿಯಂ, ಬಿಎಸ್ಎನ್ ಎಲ್ ಎಲ್ಲವನ್ನು ಕಾಂಗ್ರೆಸ್ ನವರು 70ವರ್ಷಗಳ …

Read More »

ರೂಪಾಂತರ ವೈರಸ್ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲೇ ಬಂದಿರಬಹುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

,ಡಿ.28- ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ. ಕೊರೊನಾ ವೈರಸ್ ನಮ್ಮ ದೇಶಕ್ಕೆ ಕಾಲಿಟ್ಟು 10 ತಿಂಗಳು ಮುಗಿದಿದೆ. ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡಬೇಕಾಗಿಲ್ಲ. ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕೊರೊನಾ ವೈರಸ್ ಬಂದಾಗ ನಮ್ಮ ದೇಶ ಸಮರ್ಥವಾಗಿ ನಿಭಾಯಿಸಿದೆ ಎಂದರು. ಫೆಬ್ರವರಿ, ಮಾರ್ಚ್‍ನಲ್ಲಿ 2ನೇ ಅಲೆ …

Read More »

ಕೆರೆಯ ದಂಡೆಯ ಮೇಲೆ ಹೋರಿ ಓಡಿಸೋ ಹಬ್ಬದಲ್ಲಿ ಈ ದುರ್ಘಟನೆ

ಹಾವೇರಿ: ಕೊಬ್ಬರಿ ಹೋರಿ ಸ್ಪರ್ಧೆಗೆ ಹಾವೇರಿ ಜಿಲ್ಲೆ ಫೇಮಸ್ಸ್. ಆದರೆ ಕೊಬ್ಬರಿ ಹೋರಿ ಅಖಾಡದಲ್ಲಿ ಮಿಂಚಿನ ಓಟ ಓಡುತ್ತಲೇ ಹೋರಿಯೊಂದು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿ ಇರೋ ಕೆರೆಯ ದಂಡೆಯ ಮೇಲೆ ಹೋರಿ ಓಡಿಸೋ ಹಬ್ಬದಲ್ಲಿ ಈ ದುರ್ಘಟನೆ ನಡೆದಿದೆ. ಅರಳೀಕಟ್ಟಿ ಗ್ರಾಮದ ಪುಟ್ಟಪ್ಪ ಎಂಬವರಿಗೆ ಸೇರಿದ ವರದನಾಯಕ ಹೆಸರಿನ ಹೋರಿ ಇದಾಗಿದೆ. ಹೋರಿ ಕೆರೆಗೆ ಜಿಗಿಯುತ್ತಿದ್ದಂತೆ …

Read More »

ಚಾಕು ಇರಿದು ಮಹಿಳೆಯ ಕೊಲೆ

ರಾಯಚೂರು: ಚಾಕು ಇರಿದು ಮಹಿಳೆಯನ್ನು ಕೊಲೆಗೈದ ಘಟನೆಯೊಂದು ರಾಯಚೂರಿನ ಲಿಂಗಸಗೂರಿನ ಮುದಗಲ್ ಪಟ್ಟಣದ ವೆಂಕಟರಾಯಪೇಟೆಯಲ್ಲಿ ನಡೆದಿದೆ. ನೇತ್ರಾವತಿ (33) ಕೊಲೆಯಾದ ಮಹಿಳೆ. ಸೋದರ ಸಂಬಂಧಿ ಶಿವರಾಜ್, ನೇತ್ರಾವತಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆಯ ಬಳಿಕ ಶಿವರಾಜ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕರಣ ಗೃಹ ಕಾರ್ಯದರ್ಶಿ ಡಿ.ರೂಪಾ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನಡುವಿನ ಸಮರಕ್ಕೆ ಕಾರಣ

ಬೆಂಗಳೂರು: ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕರಣ ಗೃಹ ಕಾರ್ಯದರ್ಶಿ ಡಿ.ರೂಪಾ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನಡುವಿನ ಸಮರಕ್ಕೆ ಕಾರಣವಾಗಿದೆ. ಸೇಫ್ ಸಿಟಿ ಟೆಂಡರ್ ಕುರಿತಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಡಿ.ರೂಪಾ, ಹೇಮಂತ್ ನಿಂಬಾಳ್ಕರ್, 1067 ಕೋಟಿ ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. ಈ ಟೆಂಡರ್ ನಲ್ಲಿ ಅನೇಕ ಅಕ್ರಮಗಳು ನಡೆದಿವೆ.ಸರ್ಕಾರಕ್ಕೆ ತಪ್ಪು ಮಾಹಿತಿ ಸಲ್ಲಿಸಲಾಗುತ್ತಿದೆ. ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುವ ಕೆಲಸ …

Read More »

ಸಾವಿರ ಕಷ್ಟಗಳು ಬಂದ್ರೂ ಎದುರಿಸುವ ಶಕ್ತಿ ತಾನಾಗಿಯೇ ಬರುತ್ತದೆ ಎನ್ನುವುದಕ್ಕೆ ಇಲ್ಲೊಬ್ಬ ಯುವಕ ಪ್ರತ್ಯಕ್ಷ ಸಾಕ್ಷಿ

ಬೆಳಗಾವಿ: ಸಾಧಿಸುವ ಗುರಿಯೊಂದಿದ್ದರೆ ಸಾಕು, ಸಾವಿರ ಕಷ್ಟಗಳು ಬಂದ್ರೂ ಎದುರಿಸುವ ಶಕ್ತಿ ತಾನಾಗಿಯೇ ಬರುತ್ತದೆ ಎನ್ನುವುದಕ್ಕೆ ಇಲ್ಲೊಬ್ಬ ಯುವಕ ಪ್ರತ್ಯಕ್ಷ ಸಾಕ್ಷಿಯಾಗಿದ್ದಾನೆ. ಕುಟುಂಬದ ಕಷ್ಟಗಳನ್ನೇ ತನ್ನ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಫಾಸ್ಟೆಸ್ಟ್ ಸ್ಕೇಟಿಂಗ್‌ನಲ್ಲಿ ಗಿನ್ನೆಸ್​ ದಾಖಲೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹೌದು, ನಗರದ ಮಾಳಮಾರುತಿ ನಿವಾಸಿ ಸಂಜಯ ಹಾಗೂ ಸುಜಾತಾ ನವಲೆ ದಂಪತಿ ಪುತ್ರ ಅಭಿಷೇಕ ನವಲೆ 12.85 ಸೆಕೆಂಡ್ಸ್​​​ನಲ್ಲಿ 100 ಮೀಟರ್ ಕ್ರಮಿಸುವ ಮೂಲಕ …

Read More »

ಹಂಪಿ ವಿವಿ ಉಳಿಸಲು ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

ಬೆಂಗಳೂರು,ಡಿ.27- ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಉಳಿಸಿ ಹೋರಾಟ ಉಗ್ರರೂಪ ತಾಳುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಅನುದಾನ ಬಿಡುಗಡೆ ಮಾಡುವಂತೆ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕೊಟ್ಟಿಗೆ ಪಾಳ್ಯದಲ್ಲಿ ನಡೆದ ಕರವೇ ಸಭೆಯಲ್ಲಿ ಮಾತನಾಡಿದ ಅವರು, ಹಂಪಿ ಕನ್ನಡ ವಿವಿಗೆ ಅನುದಾನ ನೀಡುವುದು ಸೇರಿದಂತೆ ವಿಶ್ವವಿದ್ಯಾಲಯ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿದರು. ಟ್ವಿಟರ್‍ನಲ್ಲಿ ಹಂಪಿ ಕನ್ನಡ ವಿವಿ ಉಳಿಸಿ ಎಂಬ ಅಭಿಯಾನಕ್ಕೆ ಈಗಾಗಲೇ 4,500 ಲಕ್ಷ …

Read More »