Breaking News

ಜಿಲ್ಲೆ

ರಮೇಶ್ ಜಾರಕಿಹೊಳಿ ಮತ್ತು ನಾನು 20 ವರ್ಷದ ಸ್ನೇಹಿತರು ಅವರು ನನ್ನ ಪರವಾಗಿ ಹೈಕಮಾಂಡ್ ನಾಯಕರ ಬಳಿ ಮಾತನಾಡುತ್ತಿದ್ದಾರೆ ಸಿ.ಪಿ.ಯೋಗೇಶ್ವರ್

ಬೆಂಗಳೂರು, ನ.27- ಸರ್ಕಾರ ರಚನೆ ವೇಳೆ ನನ್ನ ಪಾತ್ರ ಏನು ಎಂಬುದು ಹೈಕಮಾಂಡ್ ನಾಯಕರಿಗೆ ಗೊತ್ತಿದೆ. ಹಾಗಾಗಿ ನಾನು ಹೆಚ್ಚು ಮಾತನಾಡುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ನವದೆಹಲಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ನೀಡಬಾರದು ಎಂದು ವಿರೋಧ ವ್ಯಕ್ತಪಡಿಸುತ್ತಿರುವವರನ್ನು ಗಮನಿಸಿದ್ದೇನೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದರು. ಇಂದು ಬಿ.ಎಲ್.ಸಂತೋಷ್ ಅವರನ್ನು …

Read More »

ಸೀಮಿತ ಆದಾಯದ ನಡುವೆ ಹೊಸ ಬಜೆಟ್ ಮಂಡನೆಗಾಗಿ ಈಗಾಗಲೇ ಹಣಕಾಸು ಇಲಾಖೆ ಪೂರ್ವಸಿದ್ಧತೆ ಪ್ರಾರಂಭ

ಬೆಂಗಳೂರು: ಸೀಮಿತ ಆದಾಯದ ನಡುವೆ ಹೊಸ ಬಜೆಟ್ ಮಂಡನೆಗಾಗಿ ಈಗಾಗಲೇ ಹಣಕಾಸು ಇಲಾಖೆ ಪೂರ್ವಸಿದ್ಧತೆ ಪ್ರಾರಂಭಿಸಿದೆ.ಆರ್ಥಿಕ ಸಂಕಷ್ಟದ ನಡುವೆ ಸಿಎಂ ಯಡಿಯೂರಪ್ಪ, 2021-22ನೇ ಸಾಲಿನ ಆಯವ್ಯಯ ಮಂಡಿಸಬೇಕಾಗಿದೆ. ತೆರಿಗೆ ಸಂಗ್ರಹದಲ್ಲಿನ ಕೊರತೆ, ಸೀಮಿತ ಆದಾಯ ಮೂಲ ಸರ್ಕಾರದ ಕೈಯನ್ನು ಕಟ್ಟಿ ಹಾಕಿದೆ. ಹೀಗಾಗಿ 2021-22ನೇ ಸಾಲಿನ ಆಯವ್ಯಯ ಸಿಎಂಗೆ ಕಬ್ಬಿಣದ ಕಡಲೆಯಾಗಿದೆ. ಒಂದೆಡೆ ಜನಪ್ರಿಯ ಯೋಜನೆಗಳು ಕೊಡುವ ಅಗತ್ಯವೂ ಇದೆ, ಇನ್ನೊಂದೆಡೆ ಪ್ರಮುಖ ಇಲಾಖೆಗಳಿಗೆ ಅನುದಾನ ಕಡಿತಗೊಳಿಸು ಹಾಗಿಲ್ಲ. ಈ …

Read More »

B.S.Y. ಕೂಡಲೇ ರಾಜೀನಾಮೆ ಕೊಡಲೇಬೇಕು, ಮಾದ್ಯಮಗಳ ಪ್ರಶ್ನೆಗೆ ತಬ್ಬಿಬ್ಬಾದ ವಾಟಾಳ್ ನಾಗರಾಜ್ ಸಾರಾ ಗೋವೀಂದ್

ಬೆಳಗಾವಿ- ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಲು ಬೆಳಗಾವಿಗೆ ಆಗಮಿಸಿದ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಸಾರಾ ಗೋವೀಂದ್ ತಬ್ಬಿಬ್ಬಾದ ಘಟನೆ ನಡೆಯಿತು ಹೋರಾಟಗಾರ ವಾಟಾಳ್ ನಾಗರಾಜ್, ಸ ರಾ ಗೋವಿಂದ ಸೇರಿ ಹಲವಾರು ಜನ ಕಾರ್ಯಕರ್ತರನ್ನು ಪೋಲೀಸರು ಹಿರೇಬಾಗೇವಾಡಿ ಟೋಲ್ ಬಳಿ, ಬಂಧಿಸಿದರು. ಸುವರ್ಣ ಸೌಧ ಬಳಿ ಧರಣಿಗೆ ಮುಂದಾಗಿದ್ದ ಹೋರಾಟಗಾರರನ್ನು ಹಿರೇಬಾಗೇವಾಡಿ ಟೋಲ್ ಬಳಿ ತಡೆದರು. ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆ. ಡಿಸೆಂಬರ್ …

Read More »

ಯರನಾಳ ಗ್ರಾಮದ ಶ್ರೀ ಕಾಳಿಕಾ ದೇವಸ್ಥಾನದ ಬ್ರಹ್ಮಾನಂದ ಮಠದಲ್ಲಿ ಭಕ್ತಿಗೀತೆಗಳ ಸಿ ಡಿ ಯನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.

ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಶ್ರೀ ಕಾಳಿಕಾ ದೇವಸ್ಥಾನದ ಬ್ರಹ್ಮಾನಂದ ಮಠದಲ್ಲಿ ಕಾಳಿಕಾಂಬೆಂಯ ಕಂದ ಗುರು ಬ್ರಹ್ಮಾನಂದ ಎಂಬ ಭಕ್ತಿಗೀತೆಗಳ ಸಿ ಡಿ ಯನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಶ್ರೀಗಳು ಅರುಣ ಐಹೋಳೆ ಮತ್ತು ಮುಕುಂದ ಮಠದ ನೇತೃತ್ವದಲ್ಲಿ ರಚಿಸಿದ ಶ್ರೀ ಬ್ರಹ್ಮಾನಂದ ಗುರುಗಳ ಭಕ್ತಿ ಗೀತೆಗಳು ಚನ್ನಾಗಿ ಮೂಡಿಬಂದಿವೆ ಎಂದರು , ರಾಯಬಾಗ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅರುಣ ಐಹೋಳೆ ಕಲಾವಿದರಾದ …

Read More »

ಲಿಂಗಾಯತ ಸಮುದಾಯ 2A ಗೆ ಸೇರಿಸದಿದ್ರೆ ಉಗ್ರ ಹೋರಾಟ: ಮೃತ್ಯುಂಜಯ ಸ್ವಾಮಿ

ಬೆಂಗಳೂರು : ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2ಎಗೆ ಸೇರಿಸಲು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಅಧಿಕಾರವಿದೆ. ಸಿಎಂ ತಮ್ಮ ಅಧಿಕಾರ ಬಳಸಿ ಈ ಕೆಲಸ ಮಾಡಬಹುದು. ಓಬಿಸಿ ಸೇರಿಸೋದನ್ನ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಅಂತಾ ಬಸವ ಜಯಮೃತ್ಯುಂಜಯ ಸ್ವಾಮೀಜಿ  ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ಟೋಬರ್ 28ರಂದು ನಾವು ಸತ್ಯಾಗ್ರಹ ಮಾಡಿದ್ಧೇವು. ನಾನು ಸಿಎಂ ಭೇಟಿಯಾಗಿದ್ದೆ. ನವೆಂಬರ್ 28ರ ಒಳಗೆ ಬೇಡಿಕೆ ಈಡೇರಿಸೋದಾಗಿ ಭರವಸೆ ನೀಡಿದ್ದಾರೆ. ಸಿಎಂ …

Read More »

ಗೋಕಾಕ್ : ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗೋಕಾಕ : ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಇಂತಹ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ತೀರ್ಮಾನ ಖಂಡನೀಯ ಎಂದು ಸಿಎಂ …

Read More »

ಕಿಚ್ಚ ಖಡಕ್ ಆಗಿ ವರ್ಕೌಟ್ ಅಭಿಮಾನಿಗಳು ಕಿಚ್ಚನ ಬೇರ್ ಬಾಡಿ ನೋಡಿ ಫಿದಾ

ಬೆಂಗಳೂರು: ಕಿಚ್ಚ ಸುದೀಪ್ ಅವರು ಖಡಕ್ ಆಗಿ ವರ್ಕೌಟ್ ಮಾಡಿರುವ ಫೋಟೋ ಜೊತೆಗೆ ತಮ್ಮ ಫಿಟ್ನೆಸ್ ಮಂತ್ರವನ್ನು ರಿವೀಲ್ ಮಾಡಿದ್ದು, ಅಭಿಮಾನಿಗಳು ಕಿಚ್ಚನ ಬೇರ್ ಬಾಡಿ ನೋಡಿ ಫಿದಾ ಆಗಿದ್ದಾರೆ. ಹೀರೋಗಳು ಎಂದಮೇಲೆ ತಮ್ಮ ಫಿಟ್ನೆಸ್ ಕಡೆ ಗಮನಕೊಡಲೇಬೇಕು. ಇದಕ್ಕಾಗಿ ದಿನಾ ಬೆಳಗ್ಗೆ ಎದ್ದು ರಗಡ್ ಆಗಿ ವ್ಯಾಯಾಮ ಮಾಡಿ ತಮ್ಮ ದೇಹವನ್ನು ದಂಡಿಸಲೇಬೇಕು. ಈಗ ಕಿಚ್ಚ ಸುದೀಪ್ ಅವರು ಕೂಡ ಖಡಕ್ ಆಗಿ ವ್ಯಾಯಾಮ ಮಾಡಿದ್ದು, ಆ ಫೋಟೋವನ್ನು …

Read More »

ವಿದ್ಯುತ್ ಲೈನ್ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಯ ಮೇಲೆ ಮಾರಕಾಸ್ತ್ರ ಹಾಗೂ ಚಪ್ಪಲಿಯಿಂದ ಹಲ್ಲೆ

ಚಿತ್ರದುರ್ಗ: ನೀರಾವರಿ ಪಂಪ್‍ಸೆಟ್‍ಗೆ ಅಕ್ರಮವಾಗಿ ಹಾಕಿಕೊಂಡಿದ್ದ ನಿರಂತರ ಜ್ಯೋತಿ ವಿದ್ಯುತ್ ಲೈನ್ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಯ ಮೇಲೆ ಮಾರಕಾಸ್ತ್ರ ಹಾಗೂ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬೆಸ್ಕಾಂ ಕಚೇರಿ ಬಳಿ ನಡೆದಿದೆ ಹಲವು ದಿನಗಳಿಂದ ಶಿವರಾಜ್ ಎನ್ನುವವರು ನಿಯಮಬಾಹಿರವಾಗಿ ವಿದ್ಯುತ್ ಸಂಪರ್ಕ ಹಾಕಿಕೊಂಡಿದ್ದರು. ಈ ಬಗ್ಗೆ ಲೈನ್‍ಮ್ಯಾನ್ ಕೇಶವ ಅವರು ಒಂದು ಬಾರಿ ಶಿವರಾಜ್‍ಗೆ ಎಚ್ಚರಿಕೆ ನೀಡಿದ್ದರು. ಆದರೆ ನಿನ್ನೆ …

Read More »

ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಆರೋಪಿ ಬಂಸಿಧಿ 2 ಲಕ್ಷ ರೂ. ಬೆಲೆ ಬಾಳುವ 5 ವಿವಿಧ ಕಂಪನಿಯ ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ

ಬೆಂಗಳೂರು,- ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಉತ್ತರ ವಿಭಾಗದ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಸಿಧಿ 2 ಲಕ್ಷ ರೂ. ಬೆಲೆ ಬಾಳುವ 5 ವಿವಿಧ ಕಂಪನಿಯ ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ವಿಜಯಕುಮಾರ್ ಅಯ್ಯರ್(35) ಬಂತ ಆರೋಪಿ. ಈತನ ಬಂಧನದಿಂದ ಸುಬ್ರಹ್ಮಣ್ಯನಗರ, ಕೋಣನಕುಂಟೆ ಸೇರಿದಂತೆ ಐದು ದ್ವಿಚಕ್ರವಾಹನ ಪ್ರಕರಣಗಳಲ್ಲಿ 2 ಪ್ರಕರಣಗಳು ಪತ್ತೆಯಾಗಿದ್ದು, ಉಳಿದ ಮೂರು ವಾಹನಗಳ ವಾರಸುದಾರರ ಪತ್ತೆಕಾರ್ಯ ಮುಂದುವರೆದಿದೆ. ನ.19ರಂದು ಸಂಜೆ 6 ಗಂಟೆಯಲ್ಲಿ ಗಾಯತ್ರಿನಗರದ ಅನಿಲ್‍ಕುಮಾರ್(23) ಎಂಬುವರು ತಮ್ಮ …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು ಎತ್ತಿದ್ದಂತೆ ಕಾಣುತ್ತಿದೆ. ನಿನ್ನೆಯಷ್ಟೆ 17 ಮಂದಿಯಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿಲ್ಲ. 105 ಶಾಸಕರಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಗುಂಪು ರಾಜಕೀಯ ಶುರುವಾಗಿದೆ. ಶಾಸಕರಾದ ಮುನಿರತ್ನ, ಉಮೇಶ್ ಕತ್ತಿ, ಮೇಲ್ಮನೆ ಸದಸ್ಯರಾದ ಆರ್. ಶಂಕರ್, ಸಿ.ಪಿ. ಯೋಗೇಶ್ವರ್, ಎಂಟಿಬಿ ನಾಗರಾಜ್ ಸಚಿವರಾಗುವುದು ಪಕ್ಕಾ ಆಗುತ್ತಿದ್ದಂತೆ, ದೆಹಲಿಯಲ್ಲಿ …

Read More »