Breaking News
Home / ಜಿಲ್ಲೆ (page 915)

ಜಿಲ್ಲೆ

ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದ: ರಮೇಶ ಜಾರಕಿಹೊಳಿ ಅವರು

ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಅಭಿನಂದಿಸಿದರು. ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ಪ್ರೋತ್ಸಹಧನ ನೀಡಿ, ಅಭಿನಂದನಾ ಪತ್ರ ವಿತರಿಸಿ ಸನ್ಮಾನ ಮಾಡಿದರು. ಗೋಕಾಕ …

Read More »

ಖಾಲಿ ಖಾಲಿ ಆಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ಯಜೀವಿಗಳು……….

ಚಾಮರಾಜನಗರ: ಕೊರೊನಾ ಎಪೆಕ್ಟ್ ಸರಕು ಸಾಗಣೆ ವಾಹನಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಹೀಗಾಗಿ ಖಾಲಿ ಖಾಲಿ ಆಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ಯಜೀವಿಗಳು ನಿರ್ಭೀತಿಯಿಂದ ಓಡಾಟ ಮಾಡುತ್ತಿವೆ. ಬೆಂಗಳೂರು-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳು ಹಿಂಡು ರಸ್ತೆಯಲ್ಲಿ ನಡೆದುಕೊಂಡು ಹೋಗಿವೆ. 8ಕ್ಕೂ ಹೆಚ್ಚು ಆನೆಗಳು ಸುಮಾರು 2 ಕಿಲೋ ಮೀಟರ್ ತನಕ ರಸ್ತೆಯಲ್ಲೇ ನಡೆದು ಹೋಗಿವೆ. ಸ್ಥಳದಲ್ಲಿದ್ದವರು ಆನೆಗಳು ನಡೆದುಕೊಂಡು ಹೋಗುತ್ತಿದ್ದ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಕೊರೊನಾ ಕಡಿಮೆಯಾಗದ ಕಾರಣ ಸರಕು ಸಾಗಣೆ …

Read More »

ನ್ಯಾಯಾಧೀಶರಿಗೆ ಕೊರೊನಾ- ಉಡುಪಿ ಕೋರ್ಟ್ 2 ದಿನ ಸೀಲ್‍ಡೌನ್

ಉಡುಪಿ: ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಂದನೇ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ವೈದ್ಯಕೀಯ ಮೂಲಗಳು ಮಾಹಿತಿ ನೀಡಿದೆ. ಉಡುಪಿ ನಗರದ ಒಳಗಿರುವ ನ್ಯಾಯಾಲಯದ ಒಂದು ವಿಭಾಗವನ್ನು ಸದ್ಯ ಸೀಲ್‍ಡೌನ್ ಮಾಡಲಾಗಿದೆ ಎಂದು ಮಾಹಿತಿ ಇದೆ. ಮುಂದಿನ ಎರಡು ದಿನ ಉಡುಪಿ ಜಿಲ್ಲಾ ನ್ಯಾಯಾಲಯದ ಒಳಗೆ ಯಾವುದೇ ಚಟುವಟಿಕೆಗಳು ನಡೆಯುವುದಿಲ್ಲ ಸಂಪೂರ್ಣ ಸ್ಯಾನಿಟೈಸ್ ಪ್ರಕ್ರಿಯೆಯನ್ನು ಮಾಡಲಾಗುವುದು. ನ್ಯಾಯಾಧೀಶರ ಸಂಪರ್ಕಕ್ಕೆ ಬಂದ ಎಲ್ಲಾ ಸಿಬ್ಬಂದಿಗಳಿಗೆ …

Read More »

ಕ ರೋನಾ ಇದೆ ಎಂದು ಹಂಗಿಸಿದಕ್ಕೆ ಆತ್ಮ ಹತ್ಯೆ ಮಾಡಿಕೊಂಡ ಸೋಂಕಿತ..

ಬೆಂಗಳೂರು: ಕೊರೊನಾ ಸೋಂಕಿತರನ್ನು ಜನರು ಅವಮಾನಿಸುತ್ತಿದ್ದು, ಇದರಿಂದ ನೊಂದ ಸೋಂಕಿತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಸಮಾಜ ಎಷ್ಟೇ ಬದಲಾಗಿದ್ದರೂ ವಿದ್ಯಾವಂತರು ಹೆಚ್ಚಿದ್ದರೂ ಕೂಡ ಜನರ ಮನ:ಸ್ಥಿತಿ ಮಾತ್ರ ಇನ್ನೂ ಬದಲಾಗುತ್ತಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮತ್ತು ಮಗನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಕೀಲಾಗಿ ನೋಡುತ್ತಿದ್ದುದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಸರುಘಟ್ಟದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ನಿವಾಸಿ ನಾಗರಾಜು (56) ಮೃತ …

Read More »

ಕೊರೊನಾ ಸದ್ಯ ಬುಡಾ ಕಚೇರಿಗೂ ಕಾಲಿಟ್ಟಿದೆ. ಬುಡಾ ಕಚೇರಿ ಸೀಲ್ ಡೌನ್

ಬೆಳಗಾವಿ:  ಜಿಲ್ಲೆಯಲ್ಲಿ  ಜೂನ್ ಅಂತ್ಯದಿಂದ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚುತಲಿದ್ದು, ಸದ್ಯ ಬುಡಾ ಕಚೇರಿಗೂ ಕಾಲಿಟ್ಟಿದೆ. ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ  ಇಂಜಿನೀಯರ್ ಗೆ  ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ  ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಬುಡಾ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಸೋಂಕಿತನ  ಪ್ರಾಥಮಿಕ ಸಂಪರ್ಕ …

Read More »

ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.

  ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ  ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …

Read More »

ಬೆಂಗಳೂರಿನಲ್ಲಿ ಮಳೆ; ವಿದ್ಯುತ್ ಶಾಕ್​ಗೆ ಬಾಲಕಿ ಸಾವು; ಟಿ ದಾಸರಹಳ್ಳಿಯ ಹಲವು ಪ್ರದೇಶ ಜಲಾವೃತ

ಬೆಂಗಳೂರು(ಜುಲೈ 21): ನಗರದಲ್ಲಿ ನಿನ್ನೆ ಸಂಜೆಯ ನಂತರದಿಂದಲೂ ವಿವಿಧೆಡೆ ಭಾರೀ ಮಳೆಯಾಗಿದೆ. ತಗ್ಗಿದ ಪ್ರದೇಶಗಳು ಬಹಳ ಹೊತ್ತು ಜಲಾವೃತಗೊಂಡವು. ಯಲಹಂಕ, ದೊಡ್ಡಬೊಮ್ಮಸಂದ್ರ, ಟಿ. ದಾಸರಹಳ್ಳಿ ಪ್ರದೇಶಗಳಲ್ಲಿ ಮಳೆ ನೀರು ಹಲವು ಅಪಾರ್ಟ್ಮೆಂಟ್, ಮನೆಗಳಿಗೆ ನುಗ್ಗಿತ್ತು. ಇಲ್ಲಿಯ ರಸ್ತೆಗಳು ಕೆರೆಯಂತಾದವು. ಆರ್.ಟಿ. ನಗರದಲ್ಲಿ ಬಾಲಕಿಯೊಬ್ಬಳು ವಿದ್ಯುತ್ ಶಾಕ್​ನಿಂದ ಮೃತಪಟ್ಟ ದುರಂತ ಘಟನೆಯೂ ನಿನ್ನೆ ರಾತ್ರಿ ಸಂಭವಿಸಿದೆ. ಕಾವಲ್ ಬೈರಸಂದ್ರದಲ್ಲಿ 8 ವರ್ಷದ ಫಾತಿಮಾ ಮೃತಪಟ್ಟ ಬಾಲಕಿ. ನಿನ್ನೆ ರಾತ್ರಿ 8ಗಂಟೆಯ ಸಮಯದಲ್ಲಿ …

Read More »

ಸೋಂಕಿತರು ಬಳಸಿದ ಹಾಸಿಗೆ ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ನೀಡಿದರೇ ಸರ್ಕಾರದ ವಿರುದ್ಧ ಹೋರಾಟ ಗ್ಯಾರಂಟಿ‘ – ಡಿ.ಕೆ ಶಿವಕುಮಾರ್​​

ಬೆಂಗಳೂರು): ಕೊರೋನಾ  ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಮತ್ತು ಕೋವಿಡ್-19 ಚಿಕಿತ್ಸಾ ಸಲಕರಣೆ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಸೇರಿದಂತೆ ರಾಜ್ಯಾದ್ಯಂತ ಸೋಂಕಿತರ ಪರದಾಟ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಹಿರಿಯ ಮುಖಂಡರು, ಕಾಂಗ್ರೆಸ್ ಕೋವಿಡ್ ಕಾರ್ಯಪಡೆ ಹಾಗೂ ವೈದ್ಯ ಘಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಹಾಗೆಯೇ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ವಿಧಾನಸಭೆ …

Read More »

ಮಾಸ್ಕ್ ಏಕೆ ಧರಿಸಬೇಕು?………..

ಬೆಂಗಳೂರು: ಕೊರೊನಾ ಆತಂಕ ಮತ್ತು ತಡೆಗಾಗಿ ಸಾರ್ವಜನಿಕರು ಮಾಸ್ಕ್ ಧರಿಸುತ್ತಿದ್ದಾರೆ. ಆದ್ರೆ ಮಾಸ್ಕ್ ಧರಿಸೋದು ಹೇಗೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಮಾಸ್ಕ್ ಏಕೆ ಧರಿಸಬೇಕು?: ಕೋವಿಡ್-19 ವೈರಸ್ ವ್ಯಕ್ತಿಯಿಂದ ವ್ಯಕ್ತಿಯ ನಡುವೆ ಆಗುವ ಸಂಪರ್ಕದಿಂದ ಸುಲಭವಾಗಿ ಹರಡುತ್ತದೆ. ವೈರಸ್ ಗಳನ್ನು ಹೊತ್ತ ನೀರಿನ ಹನಿಗಳು ಬೇಗನೆ ಒಣಗಿ, ಬೀಜಕಣಗಳಾಗಿ ತೇಲಾಡಿ ನಂತರ ನೆಲ ಅಥವಾ ಇನ್ಯಾವುದೇ ಪದರುಗಳ ಮೇಲೆ ಚಿಮ್ಮುತ್ತವೆ. ಕೋವಿಡ್-19 ಸಂಭವಿಸಲು ಕಾರಣವಾದ ಸಾರ್ಸ್-ಸಿಓವಿ-2 ವೈರಸ್ …

Read More »

ಬೆಂಗಳೂರಿನ ಎಎಸ್‍ಐ ಇವರಿಗೆ ಕೊರೊನಾ ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಕೊರೊನಾ ತನ್ನ ಮರಣಕೇಕೆಯನ್ನು ಮುಂದುವರಿಸಿದ್ದು, ನಗರದಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್ ಸಾವನ್ನಪ್ಪಿದ್ದಾರೆ. ಎಎಸ್‍ಐ ಆಗಿ ಕರ್ತವ್ಯ ನಿರ್ವಹಿಸುತಿದ್ದ ವಾರಿಯರ್ ಮಹಾಮಾರಿ ಕೊರೊನಾಗೆ ಮೃತಪಟ್ಟಿದ್ದಾರೆ. ಮೃತ ಎಎಸ್‍ಐ ಬೆಂಗಳೂರಿನ ಸಿಟಿ ಆರ್ಮ್ ರಿಸರ್ವ್ ಸೌತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಕೊರೊನಾ ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ನಗರದಲ್ಲಿ 33 ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ. …

Read More »