Breaking News
Home / ಜಿಲ್ಲೆ (page 928)

ಜಿಲ್ಲೆ

ಲಾಕ್‍ಡೌನ್ಮಾತಿಗಷ್ಟೆ ಎನ್ನುವಂತಾಗಿದೆ.ನೆಲಮಂಗಲ ಟೋಲ್‍ನಲ್ಲಿ ನಡೆಯುತ್ತಿಲ್ಲ ವಾಹನಗಳ ತಪಾಸಣೆ

ನೆಲಮಂಗಲ: ಲಾಕ್‍ಡೌನ್‍ಗೂ ಕ್ಯಾರೆ ಎನ್ನದೆ ವಾಹನಗಳು ಬೆಂಗಳೂರಿನತ್ತ ಹೆಚ್ಚು ವಾಹನಗಳು ಆಗಮಿಸುತ್ತಿದ್ದು, ಸಿಬ್ಬಂದಿ ಸಹ ತಪಾಸಣೆ ನಡೆಸದೆ ಬಿಡುತ್ತಿದ್ದಾರೆ. ಇದರಿಂದಾಗಿ ಎಂದಿನಂತೆ ನೆಲಮಂಗಲ ಟೋಲ್‍ನಲ್ಲಿ ವಾಹನ ಸಂಚಾರ ಜೋರಾಗಿಯೇ ನಡೆಯುತ್ತಿದೆ. ನೆಲಮಂಗಲ ಟೋಲ್‍ನಲ್ಲಿ ವಾಹನಗಳ ತಪಾಸಣೆ ನಡೆಸಿ, ವಾಹನಗಳ ಸಂಚಾರಕ್ಕೆ ಸಿಬ್ಬಂದಿ ಹಾಗೂ ಪೊಲೀಸರು ಬ್ರೇಕ್ ಹಾಕಿಲ್ಲ. ಹೀಗಾಗಿ ಟೋಲ್‍ನಲ್ಲಿ ವಾಹನಗಳ ಸಂಚಾರ ಎಂದಿನಂತೆ ಜೋರಾಗಿದೆ. ಲಾಕ್‍ಡೌನ್ ಸಮಯದಲ್ಲೂ ಬರೋರು ಬರಬಹುದು, ಹೋಗೋರು ಹೋಗಬಹುದು ಎನ್ನವಂತಾಗಿದೆ. ಟೋಲ್‍ನ ಮುಖ್ಯರಸ್ತೆಗಳನ್ನು ಬಂದ್ …

Read More »

ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದದುರದುಂಡಿ ಗ್ರಾಮದಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ.

ಗೋಕಾಕ: ದುರದುಂಡಿ ಗ್ರಾಮದಲ್ಲಿ ಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ. ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ 23 ವರ್ಷದ ಯುವಕನಿಗೆ ಮತ್ತು ಇತ್ತೀಚೆಗೆ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ 37 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ 37 ವರ್ಷದ ವ್ಯಕ್ತಿಯು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಿಂಡಲಗಾದಿಂದ ಬಂದ ಯುವಕನನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಸೊಂಕೀತರ ವಾಸವಿದ್ದ ಸ್ಥಳವನ್ನು ಸಿಲ್ಡೌನ್ ಮಾಡಲಾಗಿದೆ ಎಂದು ಡಿಎಚ್ಓ ಜಗದೀಶ ಜಿಂಗಿ …

Read More »

ಅಧಿಕಾರಿಗಳು ಕುಳಿತುಕೊಳ್ಳುವ ಕುರ್ಚಿ ಕಾಲಿಗೆ ಪಾದ ಪೂಜೆ ಮಾಡಿ ವಿನೂತನವಾಗಿ ಪ್ರತಿಭಟನೆ

ಜಮಖಂಡಿ:   ಭ್ರಷ್ಟಚಾರ ವಿರೋಧಿಸಿ ನಗರದ ಸಹಾಯಕ  ಪ್ರದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ವ್ಯಕ್ತಿಯೊಬ್ಬ ಅಧಿಕಾರಿಗಳು ಕುಳಿತುಕೊಳ್ಳುವ ಕುರ್ಚಿ ಕಾಲಿಗೆ ಪಾದ ಪೂಜೆ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡಿದ ಘಟನೆ  ಬುಧವಾರ ನಡೆದಿದೆ. ನಗರದ ಆರ್​ಟಿಒ ಕಚೇರಿಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ  ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸಂತೋಷ ಚನಾಳ ಎಂಬಾತ ಹಲವು ಬಾರಿ ಪ್ರತಿಭಟನೆ ನಡೆಸಿದ್ದ,  ಆತನ ಹೋರಾಟಕ್ಕೆ ಫಲ ಸಿಗದರಿಂದ ವಿನೂತನವಾಗಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ಗಮನ …

Read More »

ಸುಮಾರು 10 ಸಾವಿರ ಕುಟುಂಬಗಳಿಗೆ 16 ದಿನಗಳವರೆಗೆ ದಿನಬಿಟ್ಟು ದಿನ ಹಾಲಿನ ಪೂರೈಕೆಯಾಗಲಿದೆ:ಗಣೇಶ ಹುಕ್ಕೇರಿ

ಚಿಕ್ಕೋಡಿ – ಚಿಕ್ಕೋಡಿ ಪಟ್ಟಣದಲ್ಲಿ ಕೊರೋನಾ ಈವರೆಗೂ ಕಾಣಿಸದಿದ್ದರೂ, ಮುಂದಿನ ದಿನಗಳಲ್ಲಿ ಅಪಾಯ ಬರಬಾರದೆನ್ನುವ ಕಾರಣಕ್ಕೆ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳಲಾಗಿದೆ. ಪಟ್ಟಣದಲ್ಲಿ 8 ದಿನಗಳ ಕಾಲ ಶಾಸಕ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ವಯಂ ಲಾಕ್ ಡೌನ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಕಾಶ  ಹುಕ್ಕೇರಿ ಮತ್ತು ಶಾಸಕ ಗಣೇಶ ಹುಕ್ಕೇರಿ ತಾವೇ  ಸ್ವತಃ  8 ದಿನಗಳ ಕಾಲ ಪಟ್ಟಣದ ಎಲ್ಲ ಜನರಿಗೂ ಹಾಲನ್ನು ಉಚಿತವಾಗಿ …

Read More »

ಭಗವಂತ ಒಬ್ಬನೇ ನಮ್ಮನ್ನ ಕೊರೊನಾದಿಂದ ಕಾಪಾಡಬೇಕು’: ಸಚಿವ ಶ್ರೀರಾಮುಲು

ಚಿತ್ರದುರ್ಗ: ಇಂದು ಭಗವಂತ ಒಬ್ಬನೇ ಕೊರೊನಾ ಸೋಂಕಿನಿಂದ ನಮ್ಮನ್ನು ಕಾಪಾಡಬೇಕು. ಇಲ್ಲವಾದಲ್ಲಿ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಬರಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶ್ರೀರಾಮುಲು, ಇಡೀ ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಬಡವ, ಶ್ರೀಮಂತ, ಶಾಸಕರು, ಪೊಲೀಸರು, ವೈದ್ಯರು ಮತ್ತು ರಾಜಕಾರಣಿಗಳು ಎಂದು ಬರುತ್ತಿಲ್ಲ. ಇನ್ನೂ 2 ತಿಂಗಳಲ್ಲಿ ಇನ್ನಷ್ಟು ಸೋಂಕು ಹೆಚ್ಚುವ ಸಾಧ್ಯತೆ ಶೇ.100 ರಷ್ಟಿದೆ. …

Read More »

ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇ……………

ಬೆಳಗಾವಿ – ಕೊರೋನಾದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇರಿದೆ. ಇಂದು ಮೂವರು ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಇಂದು ಬೆಳಗಾವಿ ನಗರದಲ್ಲಿ ಇಬ್ಬರು ಹಾಗೂ ಅಥಣಿಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ನಗರದ ಕುಮಾರಸ್ವಾಮಿ ಬಡಾವಣೆ  ಮತ್ತು ಆನಗೋಳದಲ್ಲಿ ಒಬ್ಬೊಬ್ಬರು ಸಾವಿಗೀಡಾಗಿದ್ದಾರೆ. ನಿನ್ನೆ 64 ಜನರಿಗೆ ಸೋಂಕು ಪತ್ತಯಾಗಿರುವುದು ಸೇರಿ ಜಿಲ್ಲೆಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 561ಕ್ಕೇರಿದೆ. 366 ಜನರು ಗುಣಮುಖರಾಗಿದ್ದು, ಇನ್ನೂ 185 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ:ರಮೇಶ ಜಾರಕಿಹೊಳಿ

ಗೋಕಾಕ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಗೆ ತೆರಳಿದ್ದು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರದ ಜಲಶಕ್ತಿ ಸಚಿವರು, ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರನ್ನು ಭೇಟಿಯಾಗಿ ಸಭೆ ನಡೆಸಲಿದ್ದಾರೆ. ದಿ. ೧೪ ರಂದು ಸಂಜೆ೪.೪೫ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ದಿ.೧೫ರಂದು ಕೃಷ್ಣ ಜಲ ನ್ಯಾಯಾಧಿಕರಣ ಹಾಗೂ ಮೇಕೆದಾಟು ಸಮತೋಲನ ಜಲಾಶಯದ ಬಗ್ಗೆ ಕೇಂದ್ರದ ಜಲಶಕ್ತಿ ಸಚಿವರು, …

Read More »

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಸಾವು

ಶಿವಮೊಗ್ಗ : ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ಶಿಕ್ಷಕ ಭದ್ರಾವತಿಯ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಕುಮಾರ್ (48) ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕ ಕುಮಾರ್ ಶಿವಮೊಗ್ಗದ ಎನ್.ಇ.ಎಸ್ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಸಮಾಜ ವಿಜ್ಞಾನ ವಿಷಯದ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಇಂದು ಮಧ್ಯಾಹ್ನದವರೆಗೂ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ್ದ ಮೃತ ಶಿಕ್ಷಕ ಕುಮಾರ್ ಮಧ್ಯಾಹ್ನ ಊಟಕ್ಕೆ ತೆರಳಲು ಹೊರಡುತ್ತಿದ್ದರು. ಈ ವೇಳೆ …

Read More »

ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು

ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ. ಅಲ್ಲದೆ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ …

Read More »

ಯಾರಿಗೂ ಯಾವುದೇ ಪಾಸ್ ನೀಡಿಲ್ಲ’ – ಠಾಣೆಗಳಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ

ಬೆಂಗಳೂರು: ಏಳು ದಿನ ಬೆಂಗಳೂರು ಲಾಕ್‍ಡೌನ್ ಹಿನ್ನೆಲೆಯಲ್ಲಿ ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ. ಕಮೀಷನರ್ ಭಾಸ್ಕರ್ ರಾವ್ ಕಂಟ್ರೋಲ್ ರೂಂ ಮೂಲಕ ಪೊಲೀಸ್ ಠಾಣೆಗಳಿಗೆ ಸೂಚನೆ ಕೊಟ್ಟಿದ್ದಾರೆ. ಇಂದಿನಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆಯವರೆಗೆ ಲಾಕ್‍ಡೌನ್ ಇರುತ್ತೆ. ಈ ವೇಳೆ ಕೆಲವು ವ್ಯಾಪಾರ ವಹಿವಾಟುಗಳು ನಡೆಯುತ್ತೆ ಅವರಿಗೆ ಅವಕಾಶ ಮಾಡಿ ಕೊಡಬೇಕು. ಅಲ್ಲದೇ ಲಾಕ್‍ಡೌನ್ ವೇಳೆ ಸಾರ್ವಜನಿಕರ ಜೊತೆ ಮೃದುವಾಗಿ …

Read More »