Breaking News

ಜಿಲ್ಲೆ

ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ ವಾರ ಪತ್ರಿಕೆಯ ಮೂಲಕ ದಿಟ್ಟ ಪತ್ರಕರ್ತರಾಗಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದ ಅವರ …

Read More »

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …

Read More »

ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ

ಬೆಂಗಳೂರು: ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ.ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7,335 ಮತ ಪಡೆದ್ರೆ ಜೆಡಿಎಸ್‍ನ ಎಪಿ ರಂಗನಾಥ್ 5,107 ಮತ ಗಳಿಸಿದರು. ಆದ್ರೆ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಗಳಿಸಲಷ್ಟೇ ಶಕ್ತರಾದರು. ಗೆಲುವಿನ ಹಿನ್ನೆಲೆಯಲ್ಲಿ ಪುಟ್ಟಣ್ಣರನ್ನು ಹೊತ್ತು ಅಭಿಮಾನಿಗಳು ಸಂಭ್ರಮಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ …

Read More »

ಆರ್.ಆರ್. ನಗರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಂತೆ ಕಾಣಿಸುತ್ತದೆ.‌ ವೀಕ್ ಕ್ಯಾಂಡಿಡೇಟ್ ಹಾಕಿದ್ದಾರೆ : ಸಿದ್ದರಾಮಯ್ಯ

ಬಾಗಲಕೋಟೆ : ಆರ್.ಆರ್.ನಗರ, ಶಿರಾ ಕ್ಷೇತ್ರದಲ್ಲಿ ನಾವು ಸೋತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬದಾಮಿಯಲ್ಲಿ ಮಾತನಾಡಿದ ಅವರು, ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲ್ಲುವ ನಿರೀಕ್ಷೆಯಿತ್ತು. ಜೊತೆಗೆ, ಆರ್, ಆರ್ ನಗರದಲ್ಲಿ ಒಳ್ಳೆಯ ಫೈಟ್​ ಕೊಡ್ತೇವೆಂದು ಕೊಂಡಿದ್ದೆವು. ಆದರೆ, ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ. ಸರ್ಕಾರದಲ್ಲಿ ಇರುವವರು ಚುನಾವಣೆ ನಿಷ್ಪಕ್ಷಪಾತ, ಮುಕ್ತವಾಗಿ ನಡೆಸಬೇಕು. ಅದು ಅವರ ಜವಾಬ್ದಾರಿ. …

Read More »

ಅಭಿವೃದ್ಧಿಯೇ ನಮ್ಮ ಮೂಲಮಂತ್ರ ಸಚಿವೆ – ಶಶಿಕಲಾ ಜೊಲ್ಲೆ

ಚಿಕ್ಕೋಡಿ- ನಿಪ್ಪಾಣಿ ನಗರಸಭೆ ಕಾರ್ಯಾಲಯದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಭಾರತೀಯ ಜನತಾ ಪಕ್ಷದ ಜಯವಂತ ಬಾಟಲೆ ಹಾಗೂ ಉಪಾಧ್ಯಕ್ಷರಾದ  ನೀತಾ ಬಾಗಡಿ ಅವರ ಪದಗ್ರಹಣ ಸಮಾರಂಭ ನಡೆಯಿತು. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ  ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ ಭಾಗವಹಿಸಿ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು. …

Read More »

ಕರ್ನಾಟಕ ವಿಧಾನಸಭೆಯ ಎಸ್ಟಿಮೇಟ್ ಕಮಿಟಿ (ಅಂದಾಜುಗಳ ಸಮಿತಿ) ಅಧ್ಯಕ್ಷರನ್ನಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರನ್ನು ನೇಮಕಮಾಡಲಾಗಿದೆ.

ಬೆಂಗಳೂರು  – ಕರ್ನಾಟಕ ವಿಧಾನಸಭೆಯ ಎಸ್ಟಿಮೇಟ್ ಕಮಿಟಿ (ಅಂದಾಜುಗಳ ಸಮಿತಿ) ಅಧ್ಯಕ್ಷರನ್ನಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರನ್ನು ನೇಮಕಮಾಡಲಾಗಿದೆ. ಒಟ್ಟೂ 17 ಜನರ ಸಮಿತಿಯನ್ನು ನೇಮಕ ಮಾಡಿ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ. ಎಸ್.ಎ.ರವೀಂದ್ರನಾಥ, ದುರ್ಯೋಧನ ಐಹೊಳೆ, ವೀರಣ್ಣ ಚರಂತಿಮಠ, ಶಿವರಾಜ ಪಾಟೀಲ, ಹಾಲಪ್ಪ ಆಚಾರ, ಅಮೃತ ದೇಸಾಯಿ, ಮಹಾಂತೇಶ ದೊಡ್ಡಗೌಡರ್, ಸುನೀಲ ನಾಯ್ಕ, ಅಮರೇಗೌಡ ಬಯ್ಯಾಪುರ, ಶರಣ ಬಸಪ್ಪ ದರ್ಶನಾಪುರ, …

Read More »

ಅಧಿಕಾರ, ಹಣದ ಹೊಳೆ ಹರಿಸಿ ಬಿಜೆಪಿ ಗೆದ್ದಿದೆ: ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ಎರಡೂ ಕಡೆ ಬಿಜೆಪಿ ಗೆದ್ದಿದೆ. ನಾವು ಎರಡು ಕಡೆ ಸೋತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆರ್.ಆರ್.ನಗರದಲ್ಲಿ ಒಳ್ಳೆಯ ಸ್ಪರ್ಧೆ ನೀಡುತ್ತೇವೆ ಎಂದು ಕೊಂಡಿದ್ದೆವು. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು. ಸರಕಾರದಲ್ಲಿರುವವರು ಚುನಾವಣೆಯನ್ನು ನಿಷ್ಪಕ್ಷಪಾತವಾಗಿ, ಮುಕ್ತವಾಗಿ ನಡೆಸುವುದು …

Read More »

ಚಿನ್ನ ಕಳವು ಮಾಡಿದವನೂ, ಅದನ್ನು ಖರೀದಿವನೂ, ಅರೆಸ್ಟ್….

ಬೆಳಗಾವಿ- ಖಾನಾಪೂರ ಪೋಲೀಸರು ವಿಶೇಷ ಕಾರ್ಯಾಚರಣೆಯ ಮೂಲಕ ಚಿನ್ನ ಕಳ್ಳತನ ಮಾಡಿದವನನ್ನು,ಜೊತೆಗೆ ಕಳವು ಮಾಡಿದ ಚಿನ್ನವನ್ನು ಖರೀಧಿ ಮಾಡಿದ ಜ್ಯುವಲರಿ ವ್ಯಾಪಾರಿ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ಚಿನ್ನದ ಆಭರಣ ಕದ್ದು ಅದನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ ಅವನ ಬಳಿಯಿದ್ದ 26,5300 ಮೌಲ್ಯದ ಚಿನ್ನಾಭರಣಗಳು ವಶಪಡಿಸಿಕೊಂಡಿದ್ದಾರೆ ಕಳ್ಳತನ ಆರೋಪಿಗೆ ಸಹಾಯ ಮಾಡಿದ್ದ ಕಳುವಾದ ಚಿನ್ನವನ್ನು ಖರೀಧಿ ಮಾಡಿದ್ದ ಜ್ಯುವೆಲರಿ ಶಾಪ್ ಮಾಲೀಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಳಗಾವಿಯ ವಡಗಾಂವ ಗಲ್ಲಿಯ …

Read More »

ಬಿಎಸ್‍ವೈ ಸಂಪುಟದಲ್ಲಿ 7 ಮಂತ್ರಿ ಸ್ಥಾನಗಳು ಖಾಲಿಯಿದ್ದು, 2 ಡಜನ್‍ಗೂ ಅಧಿಕ ಶಾಸಕರು ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಬೆಂಗಳೂರು,ನ.10- ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಆರ್ ಆರ್ ನಗರ ಮತ್ತು ಶಿರಾದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ಯಾವುದೇ ಸಂದರ್ಭದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತವಾಗಿದೆ. ದೆಹಲಿ ವರಿಷ್ಠರು ಅನುಮತಿ ಕೊಟ್ಟರೆ ದೀಪಾವಳಿ ಹಬ್ಬದ ನಂತರ ಯಾವುದೇ ವೇಳೆಯೂ ಸಂಪುಟ ವಿಸ್ತರಣೆಗೆ ಮುಹೂರ್ತ ಯಾವುದೇ ವೇಳೆಯಲ್ಲಿ ನಿಗದಿಯಾಗಲಿದ್ದು, ಆಡಳಿತಾರೂಢ ಬಿಜೆಪಿಯಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಸದ್ಯ ಬಿಎಸ್‍ವೈ ಸಂಪುಟದಲ್ಲಿ 7 ಮಂತ್ರಿ ಸ್ಥಾನಗಳು ಖಾಲಿಯಿದ್ದು, 2 ಡಜನ್‍ಗೂ ಅಧಿಕ ಶಾಸಕರು ಮಂತ್ರಿ …

Read More »

ನಾಯಕತ್ವ ಬದಲಾವಣೆ ಎಂಬ ವದಂತಿಗೆ ಪೂರ್ಣ ವಿರಾಮ ಬಿದ್ದಿದ್ದು, ಬಿಎಸ್‍ವೈ 2023ರವರೆಗೂ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಸಂಶಯವೇ ಇಲ್ಲ

ಬೆಂಗಳೂರು,ನ.10- ಭಾರೀ ಹಣಾಹಣಿಯಿಂದ ಕೂಡಿದ್ದ ರಾಜ್ಯದ ಎರಡು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುರ್ಚಿ ಇನ್ನಷ್ಟು ಸುಭದ್ರ ಮಾಡಿದೆ. ಒಂದು ವೇಳೆ ಅಪ್ಪಿತಪ್ಪಿಯೂ ರಾಜರಾಜೇಶ್ವರಿನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ್ದರೆ ಸಿಎಂ ಬಿಎಸ್‍ವೈ ಕುರ್ಚಿಗೆ ನಿಸ್ಸಂದೇಹವಾಗಿ ಕಂಟಕ ಎದುರಾಗುತ್ತಿತ್ತು.ಕುರಿ ಹಳ್ಳಕ್ಕೆ ಬಿದ್ದಾಗಲೇ ಹಾಳಿಗೊಂದು ಕಲ್ಲು ಎಂಬಂತೆ ಸೋಲಿನ ಹೊಣೆಯನ್ನು ಯಡಿಯೂರಪ್ಪನವರಿಗೆ ಕಟ್ಟಿ ನಾಯಕತ್ವ ಬದಲಾವಣೆಯಾಗಬೇಕೆಂಬ ಕೂಗಿಗೆ ಬಲ …

Read More »