Breaking News
Home / ಜಿಲ್ಲೆ (page 939)

ಜಿಲ್ಲೆ

ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿದ್ದು, ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುರುವಾರ ಹೇಳಿಕೆ ನೀಡಿರುವ ಅವರು, ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರಿಗೆ ಅಗತ್ಯವಿರುವ ಸುಮಾರು 2500 ಟನ್‌ (ಫುಲ್‌ ರೇಕ್‌) ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. 2-3 ದಿನಗಳಲ್ಲಿ ರಸಗೊಬ್ಬರ …

Read More »

ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ

ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ರೋಗಿಯನ್ನು ಸಂಬಂಧಿಕರು ಜಿಲ್ಲಾಧಿಕಾರಿ ಕಚೇರಿಗೆ ಕರೆತಂದಿದ್ದು, ಕೊರೋನಾ ಸಂಕಷ್ಟ ಕಾಲದ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಈವರೆಗೆ ಬೆಂಗಳೂರಿನಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲದೇ ರೋಗಿಗಳು ಪರದಾಡುವುದು ಸಾಮಾನ್ಯವಾಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಜನತೆಗೆ ಇಲ್ಲಿನ ಪರಿಸ್ಥಿತಿ ಕಂಡು ಆತಂಕ ಮೂಡಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂದಗಿ …

Read More »

10 ದಿನ ಕಳೆದ್ರೂ ಬಾರದ ವರದಿ – ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಹಾವೇರಿ: ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರ ವರದಿ ಎಂಟು ಹತ್ತು ದಿನಗಳು ಕಳೆದರೂ ಬಾರದ ಹಿನ್ನೆಲೆ ಜನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದೂದೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊರ ರಾಜ್ಯಗಳಿಂದ ಬಂದ 60ಕ್ಕೂ ಹೆಚ್ಚಿನ ಜನರನ್ನು ಸರ್ಕಾರದ ಆದೇಶದಂತೆ ಸರ್ಕಾರಿ ವಸತಿ ನಿಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿಯ ಜನರು ಸರಿಯಾಗಿ ಊಟವೂ ಸಿಗದೆ ಇತ್ತು ಕೊರೊನಾ ವರದಿಯೂ ಬಾರದೆ, ಮನೆಗೂ ಹೋಗಲಾಗದೆ ಪರದಾಟ ಅನುಭವಿಸುತ್ತಿದ್ದೇವೆ …

Read More »

ಹುಕ್ಕೇರಿ ಪಟ್ಟಣದಲ್ಲಿ ಚಿಕನ್ ತಿಂದವರಿಗೆ ಕೊರೊನಾ ಭೀತಿ………..

ಬೆಳಗಾವಿ/ಚಿಕ್ಕೋಡಿ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿದೆ. ಆದರೆ ಈಗ ಚಿಕನ್ ತಿಂದವರಿಗೆ ಕೊರೊನಾ ಭೀತಿ ಶುರುವಾಗಿರುವ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಚಿಕನ್ ಮಾರಾಟ ಮಾಡುತ್ತಿದ್ದ ಕುಟುಂಬದ 58 ವರ್ಷದ ಮಹಿಳೆ ಸಾವನ್ನಪ್ಪಿದ್ದು ಕೊರೊನಾ ಆತಂಕಕ್ಕೆ ಕಾರಣವಾಗಿದೆ. ಹುಕ್ಕೇರಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಅಂಗಡಿ ಹೊಂದಿದ್ದ ಕುಟುಂಬದವರು ಚಿಕನ್ ವ್ಯಾಪಾರವನ್ನ ಭರ್ಜರಿಯಾಗಿ ಮಾಡುತ್ತಿದ್ದರು. ಮನೆ ಜೊತೆಗೆ ಅಂಗಡಿ ಇಟ್ಟು ಚಿಕನ್ ಮಾರಾಟ ಮಾಡುತ್ತಿದ್ದ ಕುಟುಂಬದ ಮಹಿಳೆ …

Read More »

ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು: ಸತೀಶ ಜಾರಕಿಹೊಳಿ ಕಿಡಿ

ಗೋಕಾಕ: ವೈದ್ಯನಿಗೆ ಜೀವ ಬೆದರಿಕೆ ಮತ್ತು  ಹಣ ಸೂಲಿಗೆ ಯತ್ನಿಸಿದ ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿಕಾರಿದ್ದಾರೆ. ಈ ಹಿಂದೆ ಕೂಡ ಹಲವು ಪ್ರಕರಣಗಳಲ್ಲಿ ಭೀಮಶಿ ಭರಮನ್ನವರ ಹೆಸರು ಕೇಳಿ ಬಂದಿದೆ. ಆದ್ರೆ ಪ್ರಥಮ ಬಾರಿಗೆ ಡಾ. ಹೊಸಮನಿ ಅವರ ಧೈರ್ಯದಿಂದ ಪ್ರಕರಣ ಪೊಲೀಸ ಠಾಣೆಗೆ ಬಂದಿದೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.ಆದ್ರೆ ಭರಮಣ್ಣವರನನ್ನು ಗೋಕಾಕ ಪೊಲೀಸರು ಬಂಧಿಸಲು …

Read More »

ಕ್ರಿಕೆಟ್ ನಂತೆ ಕೊರೊನಾಕೇಸ್ ದಿನಕ್ಕೆ ಎಷ್ಟುಎಂಬಬೆಟ್ಟಿಂಗ್………..

ಮೈಸೂರು:  ರಾಜ್ಯದ ಕೇಲವು ಜಿಲ್ಲೆಗಳಲ್ಲಿ  ಕ್ರಿಕೆಟ್ ನಂತೆ ಕೊರೊನಾ ಕೇಸ್ ದಿನಕ್ಕೆ ಎಷ್ಟು ದಾಖಲಾಗುತ್ತೆವೆ ಎಂಬ ಬಗ್ಗೆ ಜನ ಈಗ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಕೊರೊನಾ ಸೋಂಕಿತರ ಪ್ರಕರಣಗಳ ದಾಖಲಾಗುವ ಎಂಬ ಬಗ್ಗೆ ಬರ್ಜರಿಯಾಗಿ ಬೆಟ್ಟಿಂಗ್ ದಂಧೆ ನಡೆದಿದೆ. ಇಂದು ರಾಜ್ಯದಲ್ಲಿ ಎಷ್ಟು ಕೊರೊನಾ ಕೇಸ್ ದಾಖಲಾಗಲಿವೆ ಎಂಬ ಬಗ್ಗೆ ಮಧ್ಯ ವಯಸ್ಕರರು ಟೀ ಅಂಗಡಿಗಳ ಮುಂದೆ ನಿಂತು ಬೆಟ್ಟಿಂಗ್ ದಂಧೆ ನಡೆಸಿದ್ದಾರೆ. ಇನ್ನು ಕೆಲವೆಡೆ  ಟೀ ಅಂಗಡಿಗಳ ಮುಂದೆ ನಿಂತು …

Read More »

ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ …

Read More »

ಗುಟ್ಕಾ ತಿಂದು ನೆಲಕ್ಕೆ ಉಗಿದವನ್ ಮುಖಕ್ಕೆ ಉಗಿದ ಕೊರೊನಾ ವಾರಿಯರ್

ಚಿಕ್ಕೋಡಿ(ಬೆಳಗಾವಿ): ಗುಡ್ಕಾ ತಿಂದು ರಸ್ತೆಗೆ ಉಗುಳಿದ ವ್ಯಕ್ತಿಗೆ ಕೊರೊನಾ ವಾರಿಯರ್ ಶಿಕ್ಷೆ ನೀಡಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಕೊರೊನಾ ಮಹಾಮಾರಿ ಹರಡುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಕ್ತಿ ಗುಟ್ಕಾ ತಿಂದು ನಿಪ್ಪಾಣಿ ನಗರಸಭೆ ಎದುರು ರಸ್ತೆಗೆ ಉಗುಳಿದ್ದಾನೆ. ಇದನ್ನು ಕೊರೊನಾ ವಾರಿಯರ್ ಒಬ್ಬರು ಗಮನಿಸಿದ್ದಾರೆ. ಅಲ್ಲದೆ ಕೂಡಲೇ ಆತನಿಗೆ ಸ್ಥಳದಲ್ಲಿಯೇ ಶಿಕ್ಷೆ ನೀಡಿದ್ದಾರೆ. ವ್ಯಕ್ತಿ ಉಗಿದ ಕೂಡಲೇ ಸ್ಥಳಕ್ಕೆ ಬಂದ ಪೌರಾಯುಕ್ತ ಮಹಾವೀರ ಬೋರನ್ನವರ …

Read More »

ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು,

ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ …

Read More »

ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ. ದೂಧ್‌ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್‌ ನೀರು ಸೇರಿ ಒಟ್ಟು 71,452 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. …

Read More »