Breaking News

ಜಿಲ್ಲೆ

ಯಾರ್ ಆಗ್ತಾರೆ ಗೋಕಾಕ ನಗರ್ ಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ… .?

ಗೋಕಾಕ- ಗೋಕಾಕ ನಲ್ಲಿ ಇಂದು ನಗರ್ ಸಭೆ ಚುನಾವಣೆ ನಡೆಯುತ್ತಿದ್ದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಒಟ್ಟು 31ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು 31ರಲ್ಲಿ ಇಬ್ಬರು ತಿರಿ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಉಳಿದ ಜನರಲ್ಲಿ ಚುನಾವಣೆ ಜಟಾಪಟಿ ನಡೆಯುತ್ತಿದ್ದು ಯಾರು ಗೋಕಾಕ ನಗರ್ ಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ ರಮೇಶ್ ಜಾರಕಿಹೊಳಿ ಅವರ್ ಕೃಪಾ ಕಟಾಕ್ಷ ಯಾರ್ ಮೇಲಾಗುತ್ತದೆ ಅನ್ನೋದು …

Read More »

ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು,‌ ಕನ್ನಡಪರ‌ ಸಂಘಟನೆಗಳು ಘೇರಾವ್

ಅಥಣಿ: ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು,‌ ಕನ್ನಡಪರ‌ ಸಂಘಟನೆಗಳು ಘೇರಾವ್ ಹಾಕಿದ ಘಟನೆ ನಡೆದಿದೆ. ಹಿಪ್ಪರಗಿ ಬ್ಯಾರೇಜ್ ಸಂಪರ್ಕ ಕಲ್ಲಿಸುವ‌ ರಸ್ತೆ ಕಾಮಗಾರಿಗೆ ಭೂಮಿ ಪೂಜೆ‌ ನೆರವೇರಿಸಲು ಆಗಮಿಸುತ್ತಿದ್ದರು.ಈ ವೇಳೆ ರಸ್ತೆಯ ಮಧ್ಯದಲ್ಲಿಯೇ ಗ್ರಾಮಸ್ಥರು, ಕನ್ನಡಪರ ಹೋರಾಟಗಾರರು ಘೇರಾವ್ ಹಾಕುವ ಮೂಲಕ ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು ಹಿಡಿದರು. ಹಿಪ್ಪರಗಿ, ನಂದೇಶ್ವರ ಗ್ರಾಮದಲ್ಲಿ ಮೂಲ ಸೌಕರ್ಯ ಸೇರಿದಂತೆ ಅನೇಕ ಸಮಸ್ಯೆಗಳನ್ನು ಜನರು ಅನುಭವಿಸುತ್ತಿದ್ದಾರೆ. ಚುನಾವಣೆ ಬಳಿಕ …

Read More »

ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ

ಬೆಂಗಳೂರು: ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗಿರಿನಗರ ಸಮೀಪ ಮುನೇಶ್ವರ ಬ್ಲಾಕ್‌ನಲ್ಲಿ ಭಾನುವಾರ ನಡೆದಿದೆ. ಮುನೇಶ್ವರ ಬ್ಲಾಕ್‌ನ ನಿವಾಸಿ ಮಹಾಲಕ್ಷ್ಮಿ (16) ಮೃತ ದುರ್ದೈವಿ. ಮನೆಯಲ್ಲಿ ತನ್ನ ಎಂಟು ವರ್ಷದ ತಮ್ಮನನ್ನು ಸ್ನಾನಗೃಹದಲ್ಲಿ ಕೂಡಿಹಾಕಿ ಬಳಿಕ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕನ ಚೀರಾಟ ಕೇಳಿ ನೆರೆ ಹೊರೆಯರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು …

Read More »

ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಮೇಲೆ FIR ದಾಖಲಾಗಿದೆ.

ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ …

Read More »

2017-18-19ನೇ ಸಾಲಿನ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ ಪ್ರಕಟ

ಚಿಕ್ಕಮಗಳೂರು, ನ.1- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2017, 2018 ಹಾಗೂ 2019ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್‍ಎಸ್‍ಎಸ್ ಪ್ರಶಸ್ತಿಯನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ಈ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕøತಿ ಹಾಗೂ ಕ್ರೀಡಾ ಸಚಿವರಾದ ಸಿ.ಟಿ.ರವಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. 2018-19ನೆ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಮಂಡ್ಯದ ಸ್ವರ್ಣ ಫುಟ್‍ಬಾಲ್ ಡೆವಲಪ್‍ಮೆಂಟ್ …

Read More »

ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು

ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ …

Read More »

ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯವನ್ನು ವ್ಯವಸ್ಥಿತವಾಗಿ ನಾಶ ಮಾಡುವ ಎಲ್ಲ ರೀತಿಯ ಹುನ್ನಾರಗಳನ್ನೂ ಮಾಡುತ್ತಿದೆ:. ಸಿದ್ದರಾಮಯ್ಯ

ಬೆಂಗಳೂರು, ನ.1- ನ್ಯಾಯಯುತವಾಗಿ ನೀಡಬೇಕಾದ ತೆರಿಗೆ ಪಾಲನ್ನು ಕೇಂದ್ರ ನೀಡದೆ ವಂಚಿಸುತ್ತಿರುವುದರಿಂದ ನಮ್ಮಂತಹ ರಾಜ್ಯಗಳು ಅಭಿವೃದ್ಧಿಯಲ್ಲಿ ಹಿಂದೆ ಬೀಳುತ್ತಿವೆ. ಅನುದಾನವಿಲ್ಲದೆ ಮೂಲಸೌಕರ್ಯ ಕಲ್ಪಿಸಲಾಗಿದೆ. ರಾಜ್ಯಕ್ಕೆ ಹರಿದುಬರಬೇಕಾದ ಬಂಡವಾಳ ಹೂಡಿಕೆ ಸಮರ್ಪಕವಾಗಿ ಬರದಿದ್ದರೆ ಉದ್ಯೋಗ ಸೃಷ್ಟಿಯಾಗಲು ಸಾಧ್ಯವಾಗುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯವು ಅಭಿವೃದ್ಧಿ ಹೊಂದಬೇಕಾದಷ್ಟು ಪ್ರಮಾಣದಲ್ಲಿ ಅಭಿವೃದ್ಧಿಯಾಗುವುದಿಲ್ಲ. ಕರ್ನಾಟಕವು ಮುಂದಿನ ದಿನಗಳಲ್ಲಿ ಹಿಂದುಳಿದ ಅಥವಾ ಬಡ …

Read More »

ರಾಷ್ಟ್ರ ಧ್ವಜ ಸುಟ್ಟ ಟಿಪ್ಪರ್ ಚಾಲಕ – ಹಿಡಿದು ಥಳಿಸಿದ ಸಾರ್ವಜನಿಕರು

ಕೋಲಾರ: ಕನ್ನಡ ರಾಜ್ಯೋತ್ಸವದೊಂದೆ ರಾಷ್ಟ್ರ ಧ್ವಜ ಸುಟ್ಟು ಅಪಮಾನವೆಸಿಗಿದ್ದ ಟಿಪ್ಪರ್ ಚಾಲಕನಿಗೆ ಸಾರ್ವಜನಿಕರು ಥಳಿಸಿದ ಘಟನೆ ಕೋಲಾರದಲ್ಲಿ ನಡೆದಿದೆಕೋಲಾರ ಜಿಲ್ಲೆಯ ಮಾಲೂರು ತಾಲೂಕು ಮಾಸ್ತಿ ಗ್ರಾಮದ ತಿಮ್ಮಸಂದ್ರ ಬಳಿ ಉತ್ತರ ಭಾರತ ಮೂಲದ ಟಿಪ್ಪರ್ ಲಾರಿ ಡ್ರೈವರ್ ಸತ್ಯೇಂದ್ರ ಕುಮಾರ್ ಯಾದವ್ ರಾಷ್ಟ್ರ ಧ್ವಜಕ್ಕೆ ಅಪಮಾನವೆಸಿಗಿದ್ದ ಕಿಡಿಗೇಡಿ. ರಾಷ್ಟ್ರಧ್ವಜಕ್ಕೆ ಅಪಮಾನವೆಸಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಪಮಾನವೆಸಗಿದ್ದ ಕಿಡಿಗೇಡಿ ಕೈಗೆ ರಾಷ್ಟ್ರ ಧ್ವಜ ಮತ್ತು ಕನ್ನಡ ಧ್ವಜವನ್ನು …

Read More »

ಸಾಕಷ್ಟು ಜಿದ್ದಾಜಿದ್ದಿನ ಮತ್ತು ಪ್ರತಿಷ್ಠೆಗೆ ಸಾಕ್ಷಿ ಆಗಿರುವ ಉಪ ಚುನಾವಣೆ ಮತದಾನಕ್ಕೆ ಇನ್ನೊಂದೇ ದಿನ

ಬೆಂಗಳೂರು: ಸಾಕಷ್ಟು ಜಿದ್ದಾಜಿದ್ದಿನ ಮತ್ತು ಪ್ರತಿಷ್ಠೆಗೆ ಸಾಕ್ಷಿ ಆಗಿರುವ ಉಪ ಚುನಾವಣೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿ. ನಿನ್ನೆ ಬಹಿರಂಗ ಪ್ರಚಾರ ಅಂತ್ಯ ಆಗಿದ್ದು, ಇವತ್ತು ಮನೆ ಮನೆಗೆ ತೆರಳಿ ಮತಯಾಚಿಸುವುದಕ್ಕೆ ಅವಕಾಶ ಇದೆ. 21 ದಿನಗಳಿಂದ ನಡೆದಿದ್ದ ಪ್ರಚಾರ ಈಗ ನಿರ್ಣಾಯಕ ಹಂತ ತಲುಪಿದೆ. ಬಹಿರಂಗ ಪ್ರಚಾರದ ಅವಧಿ ಮುಗಿದಂತೆ ಕ್ಷೇತ್ರದ ಮತದಾರರಲ್ಲದವರೂ ಕೂಡಾ ಕ್ಷೇತ್ರವನ್ನು ಖಾಲಿ ಮಾಡಿ ತೆರಳಬೇಕಾಗುತ್ತದೆ. ನಾಳೆ ಮತದಾನ ನಡೆಯಲಿದೆ. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಜೆಪಿ …

Read More »

ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಜಾರಕಿಹೊಳಿ

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹಲವು ವರ್ಷಗಳಿಂದ ಬಡವರ ದನಿಯಾಗಿ, ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೆ ಬಂದಿದೆ. ಮುಂದೆನೂ ಸಹ ಇದೇ ರೀತಿ ಹೋರಾಟ ನಡೆಯುತ್ತಿರಬೇಕು ಎಂದು ರಾಹುಲ್ ಜಾರಕಿಹೊಳಿ ಹೇಳಿದರು. ಅವರು ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಲವು ವರ್ಷಗಳಿಂದ ರಕ್ಷಣಾ ವೇದಿಕೆ ರಾಜ್ಯದಲ್ಲಿ ಬಡವರ ದನಿಯಾಗಿ ಕೆಲಸ ಮಾಡುತ್ತಿದೆ. ಅನ್ಯಾಯ ವಿರುದ್ಧ ಸಮರಕ್ಕೆ ಸಿದ್ದ ಎಂಬಂತೆ ಕಾರ್ಯ ಮಾಡುತ್ತಿದೆ …

Read More »