ಹೊಸಕೋಟೆ: ಟಿಪ್ಪರ್ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ. ಮೇಡಹಳ್ಳಿ ನಿವಾಸಿ ಸಂಜು(24) ಮೃತ ದುರ್ದೈವಿ. ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು.
Read More »ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಚಾಲನೆ ನೀಡಲಾಯಿತು.
ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗ ಶುಕ್ರವಾರ ಚಾಲನೆ ನೀಡಲಾಯಿತು. ಹಲಗಾ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು. ಮಣ್ಣೂರು ಗ್ರಾಮದಲ್ಲಿ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಯುವ ಕಾಂಗ್ರೆಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೃಣಾಲ ಹೆಬ್ಬಾಳಕರ ಮತ್ತು ಮುಖಂಡರು ಭೂಮಿಪೂಜೆ ಸಲ್ಲಿಸಿದರು. ಮುಖಂಡರಾದ ಅಶೋಕ ಜಕ್ಕಣ್ಣವರ, ಅಪ್ಪಣ್ಣ ಜಿ. ಭಾಗಣ್ಣವರ, ರಾಜು ಬಡವನ್ನವರ, ಅರ್ಜುನ ಪಾಟೀಲ, …
Read More »ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು.
ಕುಡಚಿ: ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು. ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ಬಂದಿದ್ದ ಅವರು ಮಾಸಾಹೇಬಾ ದರ್ಗಾದಿಂದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ದೇವರ ನಾಮಸ್ಮರಣೆ ಮಾಡಿದರು. ಅವರಿಗೆ ಮುಖಂಡರು ಸಿಹಿ, ಶರಬತ್, ಚಹಾ ವಿತರಿಸಿದರು. ಮುಖಂಡರಾದ ಮಹಮ್ಮದ ಹುಸೇನ ಓಮಿನಿ, ಸುಲ್ತಾನ ವಾಟೆ, ರಾಜು ನಿಡಗುಂದಿ, ಆಶಿಫ ಚಮನಶೇಖ, ಆತೀಫ ಪಟಾಯಿತ, ಅಮೀನ ವಾಟೆ ಇದ್ದರು. ಮಸೀದಿಗಳನ್ನು ಸಿಂಗರಿಸಲಾಗಿತ್ತು. ಪಿಎಸ್ಐ …
Read More »ಬಿಜೆಪಿ ನಾಯಕರ ನಡುವೆ ‘ಸಮನ್ವಯ’ ಮೂಡಿಸುವ ಕಾರ್ಯಕ್ಕೆ ಹೈಕಮಾಂಡ್ ತಂತ್ರ ರೂಪಿಸಿದೆ.
ಬೆಳಗಾವಿ: ಅನಿರೀಕ್ಷಿತವಾಗಿ ಎದುರಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಬಿಜೆಪಿ ನಾಯಕರ ನಡುವೆ ‘ಸಮನ್ವಯ’ ಮೂಡಿಸುವ ಕಾರ್ಯಕ್ಕೆ ಹೈಕಮಾಂಡ್ ತಂತ್ರ ರೂಪಿಸಿದೆ. ಇದರ ಮೊದಲ ಭಾಗವಾಗಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಒಂದು ಬಣ, ಹುಕ್ಕೇರಿ ಶಾಸಕ ಉಮೇಶ ಕತ್ತಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ …
Read More »ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ.
ಬೆಂಗಳೂರು: ವಿಧಾನಪರಿಷತ್ ಚುನಾವಣೆ ಮತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಚಿವ ಸಂಪುಟ ವಿಸ್ತರಣೆ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದ್ದು, ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ. ಉಪಚುನಾವಣೆ ತರುವಾಯ ದೆಹಲಿಗೆ ತೆರಳುತ್ತೇನೆ. ಅಲ್ಲಿಗೆ ಹೋಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ …
Read More »B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ …
Read More »ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ
ಮೂಡಲಗಿ : ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವುದು ನಮ್ಮ ನೆಲದ ಹೆಮ್ಮೆಯಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಂಪವ್ವಾ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ಬಯಲಾಟಗಳ ಪ್ರದರ್ಶನ ಮಾಡುತ್ತ ತಮ್ಮ ಕಲೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸುಮಾರು 4 ದಶಕಗಳಿಂದ ಸಣ್ಣಾಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಲಾವಿದೆಯಾಗಿದ್ದಾರೆ. …
Read More »ಔಷಧಿ ಅಂಗಡಿಯಕಳ್ಳತನ ಮಾಡಿರುವ ಘಟನೆ
ಬೆಳಗಾವಿ: ಔಷಧಿ ಅಂಗಡಿಯ ಮೇಲ್ಛಾವಣಿ ಕೊರೆದ ಕಳ್ಳರು ಮಾಸ್ಕ್ ಸೇರಿದಂತೆ ಇತರೆ ಔಷಧಿಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮಹೊಂಗಲದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು 1 ಚೀಲ ಮಾಸ್ಕ್ ಕಳವು ಮಾಡಿದ್ದಾರೆ. ಚಂದ್ರಶೇಖರ ಹುಚ್ಚನ್ನವರ್ಗೆ ಸೇರಿದ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಒಂದು ಚೀಲ ಮಾಸ್ಕ್ ಜೊತೆಗೆ 50ಕ್ಕೂ ಹೆಚ್ಚು ಮೂವ್ ಸ್ಪ್ರೇ ಮತ್ತು 6 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ.
Read More »ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ.
ತುಮಕೂರು: ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ. ಸುಮಾರು 520 ಎಕರೆ ಪ್ರದೇಶದಲ್ಲಿರುವ ಮದಲೂರು ಕೆರೆಗೆ ಹೇಮಾವತಿ ನದಿಯಿಂದ ಈ ಹಿಂದೆ ನೀರು ಹರಿಸಲಾಗಿತ್ತು. ಆದರೆ, ಹೇಮಾವತಿ ನದಿ ನೀರು ಕಾವೇರಿ ಕೊಳ್ಳದ ವ್ಯಾಪ್ತಿ ಎಂಬ ಕಾರಣಕ್ಕೆ ಅದನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಇದೀಗ, ಭದ್ರಾ ಮೇಲ್ದಂಡೆಯಿಂದ ನೀರು ಹರಿಸಲು ಯೋಜನೆ ರೂಪಿಸಲಾಗ್ತಿದೆ. ಈ ಹೆಗ್ಗಳಿಕೆಯನ್ನು ಕಾಂಗ್ರೆಸ್, ಜೆಡಿಎಸ್ ಹಾಗೂ …
Read More »ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ
ಬೆಂಗಳೂರು: ಏನೂ ಅರಿಯದ ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದ ವಿನೋದ್ ಕುಮಾರ್ (2) ಮೃತ ದುರ್ದೈವಿ. ಉಮೇಶ್ ಎಂಬುವವರು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದರು. ಕೊಪ್ಪಳ ಮೂಲದ ಅಂಬರೀಷ್ ದಂಪತಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿ ಸಮೀಪದ ಕೋಡಿಪಾಳ್ಯದಲ್ಲಿ ಶೆಡ್ನಲ್ಲಿ ನೆಲೆಸಿದ್ದರು. ಅಂಬರೀಷ್ ದಂಪತಿಗೆ ಒಬ್ಬನೇ …
Read More »
Laxmi News 24×7