ಕೊಪ್ಪಳ: ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೂರ್ಖತನದ ಮಾತುಗಳನ್ನಾಡುತ್ತಿದ್ದು, ಅವರಿಗೆ ಯಾವುದೇ ನೋಟಿಸ್ ನೀಡದೆ ಪಕ್ಷದಿಂದ ಉಚ್ಛಾಟಿಸಲು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ಗೆ ಮನವಿ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು. ಯತ್ನಾಳ್ ಹೇಳಿಕೆಯನ್ನು ರಾಜ್ಯದ ಯಾವೊಬ್ಬ ಬಿಜೆಪಿ ಕಾರ್ಯಕರ್ತ ಒಪ್ಪುವುದಿಲ್ಲ. ನಮ್ಮದು ಶಿಸ್ತಿನ ಪಕ್ಷ. ಅವರು ಹೀಗೆ ಪದೇಪದೆ ಬಾಯಿಗೆ ಬಂದಂತೆ ಮಾತನಾಡಿದರೆ, ಸೂಕ್ತ ಕ್ರಮ ಆಗೇ ಆಗುತ್ತದೆ ಎಂದು ಸುದ್ದಿಗಾರರಿಗೆ …
Read More »ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಬಿಜೆಪಿ ಇನ್ನಿಲ್ಲದ ಕಸರತ್ತು
ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ. ಅಕ್ರಮ ಸಂಪತ್ತು ಗಳಿಕೆ ಪ್ರಕರಣದ ವಿಚಾರವಾಗಿ ಹಿಂದಿನ ವರ್ಷ ಇಡಿ ಅಧಿಕಾರಿಗಳು ಡಿಕೆಶಿ ಅವರನ್ನು ಬಂಧಿಸಿದ್ದ ಸಂದರ್ಭದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿತ್ತು. ಆ ಸಂದರ್ಭದಲ್ಲಿ ಸಾರ್ವಜನಿಕರ ಆಸ್ತಿ – ಪಾಸ್ತಿಗೆ ನಷ್ಟ ಉಂಟಾಗಿತ್ತು. ಸದ್ಯ ನಷ್ಟದ ವಿಚಾರಣೆಗೆ ಸರ್ಕಾರ, ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿದ …
Read More »ಕಾಂಗ್ರೆಸ್ ಮುಖಂಡರತ್ತ ಸಂಬರಗಿ ಮಾತು
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಿ ಎಲ್ಲ ವಿದ್ಯಾವಂತರಿಗೆ ಮಾಡಿರುವ ಅವಮಾನ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಟೀಕಿಸಿದ್ದಾರೆ. ಈ ಸಂಬಂಧ ಅಭ್ಯರ್ಥಿಗಳ ಪಟ್ಟಿಸಮೇತ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಪ್ರಕಾಶ್ ಸಂಬರಗಿ ಅವರು, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಕುಮಾರ್ ಅವರು ಪೀಟರ್ ಆಗಿದ್ದಾರೆ. ಇದನ್ನೇ ಅರ್ಹತೆಯಾಗಿ ಪರಿಗಣಿಸಿ …
Read More »ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ನವೆಂಬರ್ 2 ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದೆ. ನಿಯಮದಂತೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನೀಡಲಾಗಿದೆ. ಚುನಾವಣೆ ಘೋಷಣೆ ನಂತರ ತಡೆಯಾಜ್ಞೆ ಸೂಕ್ತವಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ …
Read More »ಕಬ್ಬಿಗೆ ಯೋಗ್ಯ ದರ ನೀಡುತ್ತಿಲ್ಲ ಎಂದು ರೈತರ ಆಕ್ರೋಶ
ಅಥಣಿ: ಸಕ್ಕರೆ ಕಾರ್ಖಾನೆಗಳು ರೈತರಿಂದ ಖರೀದಿಸಿದ ಕಬ್ಬಿಗೆ 14 ದಿನದಲ್ಲಿ ರೈತನಿಗೆ ಬಿಲ್ ಬಿಡುಗಡೆ ಮಾಡಬೇಕೆಂದು ಕಾನೂನು ಇದ್ದರೂ ಸಕ್ಕರೆ ಕಾರ್ಖಾನೆ ಮಾಲೀಕರು ಯಾರು ಇದನ್ನು ಪಾಲಿಸುತ್ತಿಲ್ಲ, ಯಾವ ಸಕ್ಕರೆ ಕಾರ್ಖಾನೆ ಪಾಲಿಸಿಕೊಂಡು ಬಂದಿದೆ ಎಂದು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಥಣಿ ತಾಲೂಕು ಘಟಕದ ಅಧ್ಯಕ್ಷ ಮಾಹದೇವ ಮಡಿವಾಳ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಬ್ಬಿಗೆ ಯೋಗ್ಯ ದರ ನೀಡುತ್ತಿಲ್ಲ …
Read More »ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗರಂ ಆಗಿರುವ ಮೇಯರ್ ತಸ್ನೀಂ ಬಾನು
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗರಂ ಆಗಿರುವ ಮೇಯರ್ ತಸ್ನೀಂ ಬಾನು, ರೋಹಿಣಿ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದ್ದಾರೆಂದು ಆರೋಪಿಸಿ, ಶಿಷ್ಟಾಚಾರ ಪಾಲನೆಯ ಪಾಠ ಮಾಡಿದ್ದಾರೆ. ದಸರಾ ಉದ್ಘಾಟನೆಗೆ ಮುಖ್ಯಮಂತ್ರಿಯವರಿಗೆ ಸ್ವಾಗತ ನೀಡುವಾಗ ಮೈಸೂರಿನ ಪ್ರಥಮ ಪ್ರಜೆಗೂ ಅವಕಾಶ ನೀಡಬೇಕು. ಆದರೆ, ಮೇಯರ್ ಅವರನ್ನು ಒಳಗೆ ಬಿಡದಂತೆ ಜಿಲ್ಲಾಧಿಕಾರಿ, ಪೋಲೀಸರಿಗೆ ಹೇಳುತ್ತಾರೆ. ಉದ್ಘಾಟನೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಕ್ಕದಲ್ಲಿ ನಮ್ಮ ಆಸನ ಇಡಬೇಕು. ಆದರೆ, ಕೊನೆಯಲ್ಲಿ ನಮಗೆ ನೀಡುತ್ತೀರಿ …
Read More »ನಮ್ಮನ್ನ ಡ್ರಗ್ಸ್ ವಿಚಾರವಾಗಿ ಸಿ ಸಿ ಬಿ ಕರೆದಿಲ್ಲ ಸೌಂದರ್ಯ ಜಗದೀಶ್ ಪತ್ನಿ ರೇಖಾ ಸ್ಪೆಷನೆ
ಬೆಂಗಳೂರು: ನಮ್ಮನ್ನ ಡ್ರಗ್ಸ್ ವಿಚಾರವಾಗಿ ಕರೆದಿಲ್ಲ ಅಂತಾ ನಿರ್ಮಾಪಕ ಸೌಂದರ್ಯ ಜಗದೀಶ್ ಪತ್ನಿ ರೇಖಾ ಹೇಳಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಕೇಸ್ಗೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಸೌಂದರ್ಯ ಜಗದೀಶ್ ದಂಪತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಎನ್ನಲಾಗಿತ್ತು. ಅದರಂತೆ ಇಂದು ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಸೌಂದರ್ಯ ದಂಪತಿ ವಿಚಾರಣೆಗೆ ಹಾಜರಾಗಿ ವಾಪಸ್ ಆಗಿದ್ದಾರೆ. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿರುವ ಸೌಂದರ್ಯ ಜದಗೀಶ್ ದಂಪತಿ.. ನಮ್ಮನ್ನ ಡ್ರಗ್ಸ್ ವಿಚಾರವಾಗಿ ಕರೆದಿಲ್ಲ. …
Read More »ಕಾಂಗ್ರೆಸ್ ಬಿಟ್ಟು ಬಿ ಜೆ ಪಿ ಗೆ ಸೇರಿದ ಮಾಜಿ ಸಚಿವರು
ಹುಬ್ಬಳ್ಳಿ : ಮಾಜಿ ಸಚಿವರಾದ ವಿನಯ ಕುಲಕರ್ಣಿ, ಎಂ.ಬಿ. ಪಾಟೀಲ್ ಅವರು ಬಿಜೆಪಿ ಸೇರುವ ಬಗ್ಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಬಿಜೆಪಿಗೆ ಯಾವುದೇ ರಾಜಕೀಯ ಅಸ್ಪೃಶ್ಯತೆ ಇಲ್ಲ, ಪಕ್ಷಕ್ಕೆ ಹೊರೆಯಾಗದಿದ್ದರೆ ಹಾಗೂ ಸಿದ್ಧಾಂತ ಒಪ್ಪಿದರೆ ಯಾರನ್ನಾದರೂ ಸೇರಿಸಿಕೊಳ್ಳುತ್ತೇವೆ ಎಂದರು. 3 ವರ್ಷ ಬಿಎಸ್ವೈ ರಾಜ್ಯದ ಸಿಎಂ, ಬದಲಾವಣೆ ಮಾತೇ ಇಲ್ಲ: ಗುಡುಗಿದ ಬಿಜೆಪಿ ಸಾರಥಿ! … ಸುದ್ದಿಗೋಷ್ಠಿಯಲ್ಲಿ ಮಾತನಾಡಿ, …
Read More »ತುಳು ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ
ಮಂಗಳೂರು: ಬುಧವಾರ ಹಾಡಹಗಲೇ ರೌಡಿಶೀಟರ್, ಉದ್ಯಮಿ, ತುಳು ಸಿನಿಮಾ ನಟ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿಯ ಬಸ್ತಿಪಡ್ಪುವಿನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಹಾಡಹಾಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್ರನ್ನು ಹತ್ಯೆ ಗೈಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಸುರೇಂದ್ರ ಬಂಟ್ವಾಳ್ ಹಣಕಾಸು ವ್ಯವಹಾರ ಮಾಡುತ್ತಿದ್ದರು. ಹಣಕಾಸಿನ ವಿಚಾರಕ್ಕೆ ಜೊತೆಗಿದ್ದ ವ್ಯಕ್ತಿಗಳು ಬಂಟ್ವಾಳ್ ರನ್ನು ಹತ್ಯೆ ಮಾಡಿರಬಹುದು …
Read More »ಲಂಡನ್ ಮೂಲದ ಯುವತಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾಳೆ
ಹುಬ್ಬಳ್ಳಿ : ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ಲಂಡನ್ ಮೂಲದ ಯುವತಿ ಮದುವೆಯಾಗುವುದಾಗಿ ನಂಬಿಸಿ ಹುಬ್ಬಳ್ಳಿಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾಳೆ. ಹುಬ್ಬಳ್ಳಿಯ ನವನಗರದ ನಿವಾಸಿ ಗುತ್ತಿಗೆದಾರ ಪ್ರಮೋದ್ ಕುಲಕರ್ಣಿ ಮೋಸ ಹೋಗಿದ್ದು ಈಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಧು ಹುಡುಕಾಟದಲ್ಲಿದ್ದ ಪ್ರಮೋದ್ಗೆ ‘ಸಂಗಮ’ ಹೆಸರಿನ ಮ್ಯಾಟ್ರಿಮೋನಿಯಲ್ಲಿ ಲಂಡನ್ ಮೂಲದ ಯುವತಿ ಅನ್ನಾ ಮೊಹಮ್ಮದ್ ಪರಿಚಯವಾಗಿದ್ದಾಳೆ. ಮೊದ ಮೊದಲು ವಾಟ್ಸಪ್ನಲ್ಲಿ ಮೆಸೇಜ್ ಮಾಡುತ್ತಿದ್ದ ಯುವತಿ ಬಳಿಕ ಪ್ರತಿನಿತ್ಯ ಚಾಟ್ …
Read More »
Laxmi News 24×7