ಬಾಗಲಕೋಟೆ: ನೋ ಪಾರ್ಕಿಂಗ್ ನಲ್ಲಿ ಬೈಕ್ ನಿಲ್ಲಿಸಿದ ವಿಷಯಕ್ಕೆ ಪೊಲೀಸರೊಂದಿಗೆ ಗಲಾಟೆ ನಡೆದ ವೇಳೆ ಮಹಿಳೆಯೊಬ್ಬರು ಪೊಲೀಸನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಸೋಮವಾರ ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ನವನಗರದ ಗರ್ಭಿಣಿ ತನ್ನ ಮೈದುನನ ಜತೆಗೆ ಬಸವೇಶ್ವರ ವೃತ್ತದ ಬಳಿ ಇರುವ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಬೈಕ್ ನಿಲ್ಲಿಸಿದ್ದರಿಂದ ಸಂಚಾರಿ ಪೊಲೀಸರು ಬೈಕ್ನ ಪ್ಲಗ್ ಕಿತ್ತುಕೊಂಡಿದ್ದರು. ಬೈಕ್ ಪ್ಲಗ್ ಕೊಡಲು ಒತ್ತಾಯಿಸಿದ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಈ …
Read More »ಶಿಕಾರಿಪುರ ತಾಲೂಕಿನ ಉಡುತಡಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ 30 ಕೋಟಿ ರೂ………
ಶಿವಮೊಗ್ಗ: ಅಕ್ಕಮಹಾದೇವಿ ಜನ್ಮಸ್ಥಳವಾದ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಈಗಾಗಲೇ 30 ಕೋಟಿ ರೂ.ಗಳನ್ನು ಮೀಸಲಾಗಿರಿಸಿದ್ದು, ಜಿಲ್ಲೆಯ ಆಕರ್ಷಕ ಪ್ರವಾಸಿ ತಾಣಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಉಡುಗುಣಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಸಿಎಂ ಶರಣೆ ಅಕ್ಕಮಹಾದೇವಿಯವರ ಹಾಗೂ 12ನೇ ಶತಮಾನದ ಶಿವಶರಣರ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಸದುದ್ದೇಶ ಹೊಂದಲಾಗಿದೆ ಎಂದರು. ಈ ಕ್ಷೇತ್ರವು ಕರ್ನಾಟಕ ಮಾತ್ರವಲ್ಲದೇ …
Read More »ಅಂದಾಜು ಸುಮಾರು ನೂರು ಬಾಕ್ಸ್ ನಷ್ಟು ಬಿಯರ್ವ್ಯರ್ಥವಾಗಿ ಹರಿದು ಹೋದ ಘಟನೆ
ಹಾಸನ: ಬಿಯರ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಅಪಘಾತಕ್ಕೀಡಾಗಿ ರಸ್ತೆ ಬದಿ ಬಿಯರ್ ವ್ಯರ್ಥವಾಗಿ ಹರಿದು ಹೋದ ಘಟನೆ ಹಾಸನ ಜಿಲ್ಲೆಯ, ಹೊಳೆನರಸೀಪುರದಲ್ಲಿ ನಡೆದಿದೆ. ಹಾಸನದಿಂದ ಕೇರಳಕ್ಕೆ ಲಾರಿಯಲ್ಲಿ ಸುಮಾರು 900 ಬಾಕ್ಸ್ ಬಿಯರ್ ಸಾಗಿಸಲಾಗುತ್ತಿತ್ತು. ಆದರೆ ಹೊಳೆನರಸೀಪುರ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ ಲಾರಿ ರಸ್ತೆ ಬದಿಯಲ್ಲಿ ಒಂದು ಕಡೆ ವಾಲಿಕೊಂಡಿದೆ. ಇದರಿಂದ ಒಂದಷ್ಟು ಬಿಯರ್ ಬಾಟಲಿ ಲಾರಿಯೊಳಗೇ ಒಡೆದು ಹೋದರೆ, ಮತ್ತಷ್ಟು …
Read More »ಯಡಿಯೂರಪ್ಪ ಸಿಎಂ ಆಗಿರಲ್ಲ ಎಂಬ ಮಾತು ಸದ್ಯ ಹೆಚ್ಚಾಗಿ ಕೇಳಿ ಬರುತ್ತಿದೆ. ಶಾಸಕ ಯತ್ನಾಳ ಹೇಳಿಕೆಗೆ ಬಾದಾಮಿಯಲ್ಲಿ ಪ್ರತಿಕ್ರಿಯೆ
ಬಾಗಲಕೋಟೆ : ನಾವಂತೂ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ. ಒಂದು ವೇಳೆ ಅವರ ತಿಕ್ಕಾಟದಿಂದಲೇ ಸರ್ಕಾರ ಬಿದ್ದು ಹೋದರೆ ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಾಸಕ ಯತ್ನಾಳ ಹೇಳಿಕೆಗೆ ಬಾದಾಮಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಹಳ ದಿನ ಯಡಿಯೂರಪ್ಪ ಸಿಎಂ ಆಗಿರಲ್ಲ ಎಂಬ ಮಾತು ಸದ್ಯ ಹೆಚ್ಚಾಗಿ ಕೇಳಿ ಬರುತ್ತಿದೆ. ಯಡಿಯೂರಪ್ಪನವರನ್ನು ತೆಗೆಯಬೇಕೆಂದು ಬಹಳ ದೊಡ್ಡ ಚರ್ಚೆ ನಡೆದಿದೆ. ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸುವ …
Read More »ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6.40 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿರುತ್ತದೆ:ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಬೆಳಗಾವಿ: ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6.40 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪ್ರಗತಿ ಪರಿಶೀನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಅತಿವೃಷ್ಟಿಯಿಂದ 4 ಜನರು 13 ಜಾನುವಾರಗಳ ಜೀವಹಾನಿಯಾಗಿದ್ದು, ಸಂಬಂಧಿಸಿದ ಕುಟುಂಬದವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ ಪೂರ್ಣ ಹಾಗೂ ಭಾಗಶಃ ಸೇರಿದಂತೆ ಒಟ್ಟಾರೆ 4619 ಮನೆಗಳ ಹಾನಿಯಾಗಿದೆ. ಅದೇ ರೀತಿ …
Read More »ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು.
ಬಾಗಲಕೋಟೆ: ತಾವು ಪ್ರತಿನಿಧಿಸುವ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು. ತಮಗೊಂದು ಸೂರಿಗಾಗಿ ಸಿದ್ದರಾಮಯ್ಯ ಕಚೇರಿಗೆ ಅರ್ಜಿ ಸಲ್ಲಿಸಲು ಬಾದಾಮಿ ತಾಲೂಕಿನ ನೆಲವಿಗಿ ಗ್ರಾಮದ ಯಲ್ಲವ್ವ ಹನಮಂತಪ್ಪ ಗಾರವಾಡ ಬಂದಿದ್ದರು. ಆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಅವರು ತಮ್ಮ ಆಕ್ರೋಶ ಹೊರಹಾಕಿದರು. ಇದ್ದವರು ಸರ್ಕಾರದಿಂದ ಎರಡೆರಡು ಮನೆ ಹಾಕಿಸಿಕೊಂಡಾರ. …
Read More »ಬಿಎಸ್ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ಸಿದ್ದರಾಮಯ್ಯ
ಬೆಂಗಳೂರು: ಬಿಎಸ್ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಶಾಸಕ …
Read More »ಭೀಮಾ ನದಿ ಪ್ರವಾಹ ಮುಂದುವರೆದಿದೆ.
ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಮುಂದುವರೆದಿದೆ. ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ. ಮನೆಗಳ ಹಾನಿಯ ಜೊತೆ ಅಂಗಡಿಗಳಲ್ಲಿಯೂ ಅಪಾರ ಹಾನಿ ಸಂಭವಿಸಿದೆ. ಭೀಮಾ ನದಿ ಪ್ರವಾಹಕ್ಕೆ ಕಲಬುರ್ಗಿ ಜಿಲ್ಲೆ ಜನತೆ ತತ್ತರಿಸಿ ಹೋಗಿದ್ದಾರೆ. ಅಫಜಲಪುರ ತಾಲೂಕಿನಲ್ಲಿ ಪ್ರವಾಹ ಒಂದಷ್ಟು ಇಳಿಮುಖವಾಗಿದೆ. ಆದರೆ ಕಲಬುರ್ಗಿ, ಜೇವರ್ಗಿ, ಶಹಾಬಾದ್ ಹಾಗು ಚಿತ್ತಾಪುರ ತಾಲೂಕುಗಳಲ್ಲಿ ಪ್ರವಾಹ ಮುಂದುವರಿದಿದೆ. ಭಾರಿ ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ. ಕಲಬುರ್ಗಿ ತಾಲೂಕಿನ ಸರಡಗಿ …
Read More »ಕೊರೊನಾ ವಾರಿಯರ್ಸ್ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ.
ಬೆಂಗಳೂರು,- ಕೋವಿಡ್ -19 ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಇಲ್ಲವೇ ಅಪಘಾತಕ್ಕೆ ತುತ್ತಾದ ಕೊರೊನಾ ವಾರಿಯರ್ಸ್ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಈ ಯೋಜನೆಯ ಸೌಲಭ್ಯ ಒದಗಿಸಲಾಗಿದ್ದು, ಮತ್ತೆ ಈ ಸೌಲಭ್ಯವನ್ನು 6 ತಿಂಗಳಿಗೆ ವಿಸ್ತರಿಸಲಾಗಿದೆ. ರೋಗಿಗಳೊಂದಿಗೆ ನೇರ ಸಂಪರ್ಕ …
Read More »ಈ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು : ಬೊಂಬೆ ತಯಾರಕರಿಗೆ ಬಿಐಎಸ್ (ಭಾರತೀಯ ಮಾನಕ ಬ್ಯೂರೋ) ಸಂಸ್ಥೆ ನೀಡುವ ಐಎಸ್ಐ ಮಾರ್ಕ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕಲೆ ಅವಲಂಬಿಸಿರುವ ಬೊಂಬೆ ತಯಾರಕರ ಮೇಲೆ ಗದಾಪ್ರಹಾರ ಮಾಡಿದ್ದು, ಈ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಐಎಸ್ ಪ್ರಮಾಣಪತ್ರ ಪಡೆಯಲು ಸಾವಿರಾರು ರೂ. ವೆಚ್ಚ ಸಣ್ಣ ಬೊಂಬೆಗಳ ತಯಾರಕರಿಗೆ ದುಬಾರಿ ಆಗಲಿದ್ದು, ದೇಶೀಯ ಬೊಂಬೆ ಉತ್ಪಾದಕರ ಭವಿಷ್ಯಕ್ಕೆ ಮಾರಕವಾಗಲಿದೆ. ಕೇಂದ್ರದ ಈ …
Read More »
Laxmi News 24×7