Breaking News

ಜಿಲ್ಲೆ

ಇನ್ನೂ ನಾಲ್ಕು ದಿನ ಮಳೆ : ಉತ್ತರ ಕರ್ನಾಟಕಕ್ಕೆ ಜಲಕಂಟಕ

ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಬೀಳುತ್ತಿರುವ ನಿರಂತರ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯುವ ಸಾಧ್ಯತೆಗಳಿವೆ.ನಿನ್ನೆ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾದ ವರದಿಯಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗುಲ್ಬರ್ಗ ಭಾಗದಲ್ಲಿ ಅಕ ಪ್ರಮಾಣದ ಮಳೆಯಾದ ವರದಿಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. ಮುಂಗಾರು ಮಳೆ ಮರಳುವಿಕೆ ಸಂದರ್ಭದಲ್ಲಿ ರಾಜ್ಯದಲ್ಲಿ ಉತ್ತಮ ಪ್ರಮಾಣದ …

Read More »

50 ಸಾವಿರ ರೂಪಾಯಿಯನ್ನು ಮರಳಿ ಮಹಿಳೆಗೆ ಹಿಂದಿರುಗಿಸಿ ರಿಕ್ಷಾ ಚಾಲಕ

ಉಡುಪಿ ; ಮಹಿಳೆಯೊಬ್ಬರು ರಿಕ್ಷಾದಲ್ಲಿ ಮರೆತು ಬಿಟ್ಟುಹೋದ 50 ಸಾವಿರ ರೂಪಾಯಿಯನ್ನು ಮರಳಿ ಮಹಿಳೆಗೆ ಹಿಂದಿರುಗಿಸಿ ರಿಕ್ಷಾ ಚಾಲಕ ಅಂಬಲಪಾಡಿಯ ಜಯ ಶೆಟ್ಟಿ ಅವರು ಮಾನವೀಯತೆ ಮೆರೆದಿದ್ದಾರೆ. ಬುಧವಾರ ಬೆಳಗ್ಗೆ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ರಿಕ್ಷಾದಿಂದ ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು. ಮಹಿಳೆಯನ್ನು ಬಸ್‍ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ ರಿಕ್ಷಾ ಚಾಲಕ ಜಯ …

Read More »

ಶ್ರೀರಾಮುಲು ಅವರೇ ಖುದ್ದು ಯಡಿಯೂರಪ್ಪನವರ ಮುಂದೆಯೇ ತಮ್ಮ ಅಸಮಾನಧವನ್ನು ಹೊರಹಾಕಿದರು

ಬೆಂಗಳೂರು: ಸಚಿವ ಶ್ರೀರಾಮುಲು ಅವರಿಗೆ ಆರೋಗ್ಯ ಖಾತೆ ಕಿತ್ತುಕೊಂಡು ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಶ್ರೀರಾಮುಲು ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ಮೂಲಕ ಬಗೆಹರಿಸಿದ್ದಾರೆ. ಆದ್ರೆ, ಶ್ರೀರಾಮುಲು ಅಸಮಾಧಾನ ಶಮನವಾಗಿಲ್ಲ. ತಮಗೆ ಒಂದು ಮಾತು ತಿಳಿಸದೇ ಏಕಾಏಕಿ ಖಾತೆ ಬದಲಾವಣೆ ಮಾಡಿರುವುದಕ್ಕೆ ಶ್ರೀರಾಮುಲು, ಯಡಿಯೂರಪ್ಪನವರ ಮುಂದೆಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಮಂಗಳವಾರ ಶ್ರೀರಾಮುಲು ಅವರೇ ಖುದ್ದು ಯಡಿಯೂರಪ್ಪನವರ ಮುಂದೆಯೇ ತಮ್ಮ …

Read More »

ನಂದಿ ಗಿರಿಧಾಮ ತೋಟಗಾರಿಕಾ ಇಲಾಖೆಯ ಕೈಜಾರುತ್ತದಾ? ಮುಂದೇನು?

ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತ್ಯವ್ಯ ಹೂಡಿದ್ದ ತೋಟಗಾರಿಕೆ ಸಚಿವ ನಾರಾಯಣ ಗೌಡ, ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ್ರು. ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ ಸಚಿವ ನಾರಾಯಣ ಗೌಡ ರಾತ್ರಿಯೇ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದ ಸಚಿವರು, ಬೆಳ್ಳಂ‌ಬೆಳಿಗ್ಗೆ ಎದ್ದು ನಂದಿ ಗಿರಿಧಾಮದ ರಸ್ತೆಗಳಲ್ಲಿ ರೌಂಡ್ಸ್ ಹಾಕಿದರು. ಇದೇ ಮೊದಲ‌ ಬಾರಿಗೆ ನಾನು ಸಚಿವನಾದ ನಂತರ ನಂದಿ ಗಿರಿಧಾಮಕ್ಕೆ ಆಗಮಿಸಿದ್ದೇನೆ. …

Read More »

ರಾಜ್ಯ-ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಸರ್ಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರ್ಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರ್ಕಾರಗಳಿಗೆ ಸಂದೇಶ ರವಾನಿಸಲು ಈ ಚುನಾವಣೆ ಎದುರಿಸುತ್ತೇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು: ‘ರಾಜರಾಜೇಶ್ವರಿ …

Read More »

ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ದಾವಣಗೆರೆ: ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಜಗಳೂರು ತಾಲೂಕಿನ ಅಶ್ವತ್ಥರೆಡ್ಡಿ ನಗರ ಸಮೀಪದ ಬಿದರಕೆರೆ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಎಗ್​ರೈಸ್ ವ್ಯಾಪಾರಿ ಬಸವರಾಜ(45) ಭೀಕರವಾಗಿ ಕೊಲೆಯಾದವ. ಗೋಪಗೊಂಡನಹಳ್ಳಿ ಸಮೀಪದಲ್ಲಿರುವ ಹೊಲಕ್ಕೆಂದು ಬುಧವಾರ ಬೆಳಗಿನ ಜಾವ ಬಸವರಾಜ ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಶವ ಎಸೆದು ಪರಾರಿಯಾಗಿದ್ದಾರೆ …

Read More »

DC ಕಚೇರಿಯಲ್ಲಿ ಹಾವು ಪ್ರತ್ಯಕ್ಷ! ಕೆಲಸ ಬಿಟ್ಟು ಓಡಿ ಹೋದ ಸಿಬ್ಬಂದಿ..

ಚಿಕ್ಕಮಗಳೂರು: ಕೆರೆ ಹಾವೊಂದು ಅತ್ತಿಂದಿತ್ತ ಓಡಾಡಿ ಸಿಬ್ಬಂದಿಗಳಲ್ಲಿ ಆತಂಕ ಹುಟ್ಟಿಸಿದ್ದ ಪ್ರಸಂಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದ ಮಧ್ಯದಲ್ಲಿ ಗಾಂಧಿ ಪ್ರತಿಮೆ ಸುತ್ತಲೂ ಇರೋ ಹುಲ್ಲು ಹಾಸಿನ ಮೇಲೆ ಕೆರೆ ಹಾವನ್ನ ಕಂಡು ಸಿಬ್ಬಂದಿಗಳು ಹಾಗೂ ಕೆಲಸಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಜನಸಾಮಾನ್ಯರು ಗಾಬರಿಯಾಗಿದ್ದರು. ಒಂದು ಆಫೀಸಿನಿಂದ ಮತ್ತೊಂದು ಆಫೀಸ್ ಗೆ ಹೋಗುವಾಗ ಹಾವನ್ನ ಕಂಡ ಸಿಬ್ಬಂದಿಗಳು ಗಾಬರಿಗೊಂಡಿದ್ದರು.‌ ಅತ್ಯಂತ ವೇಗವಾಗಿ ಓಡುವ ಕೆರೆ ಹಾವು ಸಿಬ್ಬಂದಿಗಳ …

Read More »

10 ವರ್ಷದಿಂದ ಬತ್ತಿದ್ದ ಕೊಳವೆ ಬಾವಿಗಳಿಗೆ ಮರು ಜೀವ! ಉಕ್ಕುತ್ತಿದ್ದಾಳೆ ಗಂಗೆ..

ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬತ್ತಿದ್ದ ಕೊಳವೆ ಬಾವಿಗಳು ಮರು ಜೀವ ಪಡೆದುಕೊಳ್ಳುತ್ತಿವೆ. 10 ವರ್ಷಗಳಿಂದ ಬತ್ತಿದ್ದ ಕೊಳವೆ ಬಾವಿಗಳಲ್ಲಿ ನೀರು ಉಕ್ಕುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಕೆರೆಗಳು ತುಂಬಿವೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರ ಜೊತೆಗೆ ಜಿಲ್ಲೆಯ ಹಲವೆಡೆ ಹಲವು ವರ್ಷಗಳಿಂದ ಬತ್ತಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ನೀರು ಹರಿಯುತ್ತಿದೆ. ಚಿಮ್ಮಡ, ರಬಕವಿಯ ಬ್ರಹ್ಮಾನಂದ ನಗರದಲ್ಲಿನ ವಿಜಯ ಹೂಗಾರ ಮನೆಯ ಬೋರ್‌ವೆಲ್‌ನಲ್ಲಿ …

Read More »

ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ …

Read More »

ಓವರ್ ಟೆಕ್ ಮಾಡುವಾಗ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ

ಹಾಸನ: ಮುಂದೊಂದು ಚಲಿಸುತ್ತಿರುವ ಸಾರಿಗೆ ಬಸ್ ಅನ್ನು ಓವರ್ ಟೆಕ್ ಮಾಡುವಾಗ.. ಎದುರಿಗೆ ಬಂದ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ತುಮಕೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಇನ್ನೊವಾ ಕಾರು ನಡುವೆ ಈ ಡಿಕ್ಕಿ ಸಂಭವಿಸಿದೆ. …

Read More »