ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ. ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಅಕ್ರಮ ಜಾನುವಾರು ಸಾಗಾಟ: ವಾಹನವನ್ನು ಬೆನ್ನಟ್ಟಿ ರಾಸುಗಳನ್ನು ರಕ್ಷಿಸಿದ ಖಾಕಿ ಪಡೆ
ಮಂಗಳೂರು: ಗಾಳಿಯಲ್ಲಿ ಗುಂಡು ಹಾರಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ. ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಜಾನುವಾರು ಸಾಗಿಸ್ತಿದ್ದವರ ಬಂಧಿಸಲು ಮೂಡುಬಿದ್ರೆ ವೃತ್ತ ನಿರೀಕ್ಷಕ BS ದಿನೇಶ್ ಕುಮಾರ್ ತಂಡ ಚೇಸಿಂಗ್ ಮಾಡಿದೆ. ಈ ವೇಳೆ ಜೀಪ್ಗೆ ಡಿಕ್ಕಿ ಹೊಡೆಯಲು ಕದೀಮರು ಪ್ರಯತ್ನಿಸಿದ್ದಾರೆ. ಆಗ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಗುಂಡು …
Read More »ಮಸ್ಕಿ ಹಳ್ಳ ದಂಡೆ ಸೇತುವೆ ಬಳಿ ಸಿಲುಕಿರುವ ವ್ಯಕ್ತಿಗಳು, ಪ್ರಾಣ ರಕ್ಷಣೆಗಾಗಿ ಪರದಾಟ
ರಾಯಚೂರು: ಮಸ್ಕಿ ಜಲಾಶಯಕ್ಕೆ 2,100 ಕ್ಯೂಸೆಕ್ ನೀರು ಒಳ ಹರಿವು ಹೆಚ್ಚಳವಾಗಿದೆ. ಮಸ್ಕಿ ಡ್ಯಾಂನಿಂದ 1,600 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಪೋತ್ನಾಳ ಸೇರಿ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಹಳ್ಳದ ದಂಡೆಗೆ ತೆರಳದಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಮಸ್ಕಿ ಹಳ್ಳದಲ್ಲಿ ಸಿಲುಕಿರುವ ವ್ಯಕ್ತಿ ಪರದಾಟ: ಇನ್ನು ಡ್ಯಾಂನಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಹಳ್ಳದ ದಂಡೆ ಮುಳುಗಿ ಹೋಗಿದೆ. ದ್ವೀಪದಂತಾದ ಸೇತುವೆಯ ಕೆಳಗೆ ನಿಂತು ರಕ್ಷಣೆಗಾಗಿ …
Read More »ಕಾನೂನಿಗೆ ಹೆದರೋದು ಯಾಕೆ?.. ನೀವು ಧೈರ್ಯವಂತ ಬಂಡೆ -ಡಿಕೆಶಿಗೆ ಕಟೀಲ್ ವ್ಯಂಗ್ಯ
ಬೆಳಗಾವಿ: ನೀವು ಧೈರ್ಯವಂತ ಬಂಡೆ. ಎಲ್ಲವನ್ನೂ ಎದುರಿಸೋರು CBIನ ಎದುರಿಸೋಕೆ ಆಗಲ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವೆಂಬ ಆರೋಪದ ವಿಚಾರವಾಗಿ ಸಿಬಿಐ ಸ್ವತಂತ್ರ ಸಂಸ್ಥೆ, ಕಾಂಗ್ರೆಸ್ ಕಾಲಘಟ್ಟದಲ್ಲಿ ಸ್ಥಾಪಿತವಾದ ಸಂಸ್ಥೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನರ ಮೇಲೆ ಸಿಬಿಐ ರೇಡ್ ಆಗಿದೆ. ಲಾಲೂ ಪ್ರಸಾದ್ ಯಾದವ್, …
Read More »ರೈಲ್ವೆ ಇಲಾಖೆ ಎಡವಟ್ಟು: ಕುರಿ ಮೇಯಿಸಲು ಹೋದವರು ಪಕ್ಕದ ಕಾಲುವೆಯಲ್ಲಿ ಮುಳುಗಿ ಸತ್ತೇ ಹೋದ್ರು..
ಕೋಲಾರ: ಬಾಳಿ ಬದುಕಬೇಕಿದ್ದ ಮೂವರು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಕುರಿ ಮೇಯಿಸಲು ಹೋದವರು ಬಾರದ ಲೋಕಕ್ಕೆ ಹೋಗಿದ್ದರಿಂದ ಹೆತ್ತವರು ದಿಕ್ಕೇ ತೋಚದಂತಾಗಿದ್ದಾರೆ. ರೈಲ್ವೆ ಇಲಾಖೆಯವರು ಮಾಡಿರೋ ಅವೈಜ್ಞಾನಿಕ ಕಾಲುವೆ ಇದಕ್ಕೆಲ್ಲ ಕಾರಣವಾಗಿದೆ. ಮೊನ್ನೆ ಕೋಲಾರ ಜಿಲ್ಲೆ ಬಂಗಾರಪೇಟೆ ಸುತ್ತಮುತ್ತ ಭರ್ಜರಿ ಮಳೆ ಸುರಿದಿತ್ತು. ಪರಿಣಾಮ ಕುಂಬಾರಪಾಳ್ಯದ ರೈಲ್ವೆ ಅಂಡರ್ಪಾಸ್ನಲ್ಲಿ ನೀರು ತುಂಬಿತ್ತು. ಈ ವೇಳೆ ತಮ್ಮ ಮನೆಯಲ್ಲಿದ್ದ ಕುರಿಗಳನ್ನ ಮೇಯಿಸುತ್ತಾ ಅಲ್ಲೇ ಆಟವಾಡಿಕೊಂಡಿದ್ದ ಮಕ್ಕಳು ನೀರಿಗೆ ಇಳಿದಿದ್ದಾರೆ. ನೀರಿನ ಆಳ ತಿಳಿಯದೆ …
Read More »ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆಚರ್ಚೆಯೇ ಆಗಿಲ್ಲ.
ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆ ಇನ್ನೂ ಚರ್ಚೆಯೇ ಆಗಿಲ್ಲ ಅಂತಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಇನ್ನೂ ಚರ್ಚೆಯಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು. ನನಗೆ ಟಿಕೆಟ್ ನೀಡಲು ಚರ್ಚೆಯಾಗಿದೆ ಎಂದು ಯಾರೂ ಹೇಳಿಲ್ಲ. …
Read More »ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’.
ಬೆಳಗಾವಿ: ‘ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’. – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೀರಾ ಎಂಬ ಪ್ರಶ್ನೆಗೆ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಉತ್ತರಿಸಿದ್ದು ಹೀಗೆ. ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ಭೇಟಿಯಾಗಲು ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ‘ಈ ಬಾರಿ ಯುವಕರಿಗೆ ಕೊಟ್ಟರೂ ಸಂತೋಷ. ಯಾರಿಗೆ ಕೊಟ್ಟರೂ ಸಂತೋಷ. ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು. …
Read More »ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತಯಾರಿ ಆರಂಭಿಸಿದೆ.
ಬೆಳಗಾವಿ: ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತಯಾರಿ ಆರಂಭಿಸಿದೆ. ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂದು ಅವರ ಬಂಧುಗಳು, ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಇದಲ್ಲದೇ, ಮತ್ತಷ್ಟು ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ. ಹೀಗಾಗಿ, ಮುಖಂಡರ ಅಭಿಪ್ರಾಯ ಆಲಿಸುವ ಕಸರತ್ತನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಪ್ರಾರಂಭಿಸಿದ್ದಾರೆ. ಶನಿವಾರ ಇಲ್ಲಿಗೆ ಬಂದು ವಾಸ್ತವ್ಯ ಹೂಡಿರುವ ಅವರು, ‘ಯಾರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ …
Read More »ಸಚಿವರು ರಮೇಶ್ ಜಾರಕಿಹೊಳಿ ಹೇಳಿದ್ದೇನು.
ಬೆಂಗಳೂರು : ನೆರೆಯ ತೆಲಂಗಾಣ ಹಾಗೂ ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸಮರ್ಥ ವಾದ ಮಂಡನೆ ಮಾಡಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಎರಡು ಹೊಸ ವಿವಾದಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ …
Read More »ಕೊರೊನಾ ಸೋಂಕು ಕಾಣಿಸಿಕೊಂಡರೇ ನರಗಳಲ್ಲಿ ರಕ್ತ ಹೆಪ್ಪುಗಟ್ಟುತ್ತಾ?
ಬೆಂಗಳೂರು: ಕಳೆದ 8ತಿಂಗಳಿಂದ ತಿಗಣೆಯಂತೆ ರಕ್ತ ಹೀರಿ ಹಿಂಸಿಸುತ್ತಿರೋ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಈ ಮಹಾಮಾರಿ ಬಗ್ಗೆ ಮತ್ತಷ್ಟು ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರ ಬೀಳುತ್ತಿವೆ. ಈ ಬರುತ್ತಿರುವ ವರದಿಗಳು ಜನರಲ್ಲಿ ನಡುಕ ಹುಟ್ಟಿಸುವಂತಿದೆ. ಕೊರೊನಾ ಸೋಂಕಿಗಿಂತ ಮುಂಚೆ ಆರೋಗ್ಯ ಸಮಸ್ಯೆಗಳಿದ್ರೆ ಶಾಶ್ವತವಾಗಿ ಅನಾರೋಗ್ಯವಾಗೋದು ಗ್ಯಾರೆಂಟಿಯಂತೆ. ಹೃದಯ ಸಂಬಂಧಿ, ಶ್ವಾಸಕೋಶದಲ್ಲಿ ಸಮಸ್ಯೆ ಇದ್ದವರಿಗೆ ಕೋವಿಡ್ ಪಾಸಿಟಿವ್ ಬಂದ್ರೆ ಕೊರೊನಾ ಚಿಕಿತ್ಸೆ ನೀಡುವ ವೇಳೆ ವೈದ್ಯರಿಗೆ ತಪ್ಪದೆ …
Read More »
Laxmi News 24×7