Breaking News

ಮೂಡಲಗಿ

ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ ಹೊಸ ತಾಲೂಕು ರಚನೆ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿ ತಮ್ಮ ಕಛೇರಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. …

Read More »

ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ಶಾಸಕರಿಂದ ಭಜರಂಗದಳ ಘಟಕ ಉದ್ಘಾಟನೆ

ಮೂಡಲಗಿ : ಮಸಗುಪ್ಪಿ ಮಹಾಲಕ್ಷಿ ದೇವಿ ದೇವಸ್ಥಾನವು ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುವ ಪುಣ್ಯಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸುಮಾರು 5 ಕೋಟಿ ವೆಚ್ಚದಲ್ಲಿ ಮಹಾಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. 2.50 ಕೋಟಿ ರೂ.ವೆಚ್ಚದಲ್ಲಿ ದೇವಸ್ಥಾನದ ಹೊಸ ಕಟ್ಟಡ, 50 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನದ ಸಿಖರ , …

Read More »

ಕಲ್ಲು ಗಣಿಗಾರಿಕೆ: ಬಿರುಕು ಬಿಟ್ಟ ಮನೆ ಗೋಡೆಗಳು, ಸ್ಫೋಟಕ್ಕೆ ಬೆಚ್ಚಿ ಬೀಳುವ ಜನ

ಶಿರಹಟ್ಟಿ (ಗದಗ ಜಿಲ್ಲೆ): ತಾಲ್ಲೂಕಿನ ಮಾಗಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಸಾಪುರ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಮನೆಯ ಗೋಡೆಗಳು ಬಿರುಕು ಬಿಡುತ್ತಿವೆ. ಕೊಳವೆಬಾವಿಗಳು ಕುಸಿಯುತ್ತಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಈ ಭಾಗದಲ್ಲಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ನಡೆಸುವ ಸ್ಫೋಟಕದ ಶಬ್ದಕ್ಕೆ ಮಕ್ಕಳು ಮತ್ತು ವೃದ್ಧರು ಬೆಚ್ಚಿ ಬೀಳುವಂತಾಗಿದೆ. ಆದರೂ, ಸಂಬಂಧಪಟ್ಟ ಅಧಿಕಾರಿ ವರ್ಗ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ‘ಅಳತೆಗೂ ನಿಲುಕದಷ್ಟು …

Read More »

ಜಲಜೀವನ ಮಿಷನ್ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ 2.36 ಕೋಟಿ ರೂ. ವೆಚ್ಚದ ಕಾಮಗಾರಿ

ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದಾಗಿ ದುಡಿದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಧರ್ಮಟ್ಟಿ-ಪಟಗುಂದಿ ಗ್ರಾಮದ ಮನೆ-ಮನೆಗೆ ಗಂಗೆ …

Read More »

ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಶುಕ್ರವಾರದಂದು ಜರುಗಿದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಮೂಡಲಗಿಯಲ್ಲಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. …

Read More »

ಪಂಚಮಸಾಲಿ ಸಮಾಜ ೨ ಎ ಮೀಸಲಾತಿ ಪಟ್ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ, ಪಂಚಮಸಾಲಿ ಅಭಿವೃದ್ಧಿ ಸಮಿತಿ ವತಿಯಿಂದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೋಳಿ ಮನವಿಯನ್ನು ಸ್ವಿಕರಿಸಿ ಮಾತನಾಡಿ, ಪಂಚಮಸಾಲಿ ಸಮುದಾಯ ಬಂದುಗಳು ನಡೆಸುತ್ತಿರುವ ೨ಎ ಮೀಸಲಾತಿಯ ಪಡೆಯುವಲು ನಡೆಸುತ್ತಿರುವ ಪಾದಯಾತ್ರೆಗೆ ಸಂರ್ಪೂಣವಾಗಿ ಸಹಕಾರ ಇದೆ ಮತ್ತು ಅದು ಯಶಶ್ವಿಯಾಗುವುದು ಎಂದು ಹೇಳಿದರು. ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ …

Read More »

ಮೂಡಲಗಿದಲ್ಲಿ ಗೆದ್ದ- ಸೋತ ಅಭ್ಯರ್ಥಿಗಳ ನಡುವೆ ಹೊಡೆದಾಟ !

ಗೋಕಾಕ  : ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಂತರವೂ ಚುನಾವಣೆ ಎಫೆಕ್ಟ್ ಇನ್ನೂ ನಿಂತಿಲ್ಲ ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತುಕ್ಕಾನಕಟ್ಟಿ ಗ್ರಾಮದಲ್ಲಿ ಎರಡು ಪ್ಯಾನಲ್ನ್ ಮಹಿಳೆಯರು ನಡುವೆ ಬೆಳ್ಳಂಬೆಳಗ್ಗೆ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಮಹಿಳೆಯರು ಒಬ್ಬರನ್ನೊಬ್ಬರು ಎಳೆದಾಡಿಕೊಂಡು ದೊಣ್ಣೆಯಿಂದ ಹೊಡಿದಾಟ ನಡೆಸಿದ್ದಾರೆ ಇದೆ ಸಮಯದಲ್ಲಿ ಇಬ್ಬರ ಕುಟುಂಬಸ್ಥರು ಸಹ ಪರಸ್ಪರ ಎಳೆದಾಡಿಕೊಂಡು ಹಲ್ಲೆ …

Read More »

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …

Read More »

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಲಯವನ್ನು ಉದ್ಘಾಟಿಸಿ   ಮಾತನಾಡಿದ …

Read More »