Home / ಮೂಡಲಗಿ (page 2)

ಮೂಡಲಗಿ

ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಅಂಗವಿಕಲರು ಮುಖ್ಯ ವಾಹಿನಿಗೆ ಬರಲು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಅಂಗವಿಕಲರ ಕೆಲಸ ಕಾರ್ಯಗಳಿಗಾಗಿ ಅನುಕೂಲವಾಗಲು ಟ್ರೈಸಿಕಲ್ ವಿತರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಆವರಣದಲ್ಲಿ 2022-23ನೇ ಸಾಲಿನಲ್ಲಿ ಅಂಗವಿಕಲ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯಿಂದ ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ಇನ್ನೂ ಅರಭಾವಿ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ನೀಡುವುದು ಬಾಕಿ ಇವೆ. …

Read More »

ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

  ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ   ವಡೇರಹಟ್ಟಿ/ ಬಸವೇಶ್ವರ ಸಭಾ ಭವನದಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಳೆಯ ಕಾರಣದಿಂದ ವಡೇರಹಟ್ಟಿಯಿಂದ ಸಭಾ ಭವನಕ್ಕೆ ಕಾರ್ಯಕ್ರಮ ಶಿಫ್ಟ್

Read More »

ಆರು ತಾಲೂಕೂಗಳ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದ ಡಿಸಿ

ಬೆಳಗಾವಿ: ನಗರದ ವಡಗಾವಿ ಸಫಾರ ಗಲ್ಲಿಯಲ್ಲಿ ಮಳೆಯು ಅವಾಂತರ ಸೃಷ್ಟಿಸಿದೆ. ಮನೆಗಳಿಗೆ, ವಿದ್ಯುತ್ ಮಗ್ಗದ ಕಾರ್ಖಾನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನೀರು ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದಾರೆ. ಹೌದು.. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಫಾರ ಗಲ್ಲಿಯಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ನೀರು ನುಗ್ಗುತ್ತಿದೆ. ಹಗಲು ರಾತ್ರಿ ಎನ್ನದೇ ಇಲ್ಲಿನ ಜನ, ಚಿಕ್ಕ ಮಕ್ಕಳು, ವಯೋವೃದ್ಧರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಮೊಣಕಾಲುದ್ದ ನಿಂತಿದ್ದ ನೀರನ್ನು ಹೊರ ಹಾಕುವಲ್ಲಿ …

Read More »

ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿ

ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ನೇಕಾರನಗರದ ಬಸವೇಶ್ವರ ಸರ್ಕಲ್ ಬಳಿ‌ ಇಂದು‌ ಮುಂಜಾನೆ ನಡೆದಿದೆ‌. ಕೊಲೆಯಾದ ಮಹಿಳೆ ಸುಧಾ (೨೪) ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ ಹಿರೇಮಠ (೨೮) ಎಂಬಾತನೇ ಕುಡಿದ ಮತ್ತಿನಲ್ಲಿಯೇ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಿನ ಜಾವ ೧೨.೩೦ ರಿಂದ ಬೆಳಿಗ್ಗೆ ೯.೩೦ ರ ಮಧ್ಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ …

Read More »

ಪಂಚಮಸಾಲಿ ಸಮಾಜಕ್ಕೆ ಡಿಸಿಎಂ ಸ್ಥಾನ ನೀಡಿ : ಮಾಜಿ ಸಚಿವ ಶಶಿಕಾಂತ ನಾಯಿಕ ಆಗ್ರಹ

ಬೆಳಗಾವಿ : ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತ ಪಂಚಮಸಾಲಿ ಸಮಾಜ ಸಂಪೂರ್ಣ ಬೆಂಬಲ ನೀಡಿದ್ದು. ನಮ್ಮ ಸಮಾಜಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕಾಂಗ್ರೆಸ್ ನಾಯಕರಿಗೆ ಒತ್ತಾಯಿಸಿದರು. ಇಂದು ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆಯಲ್ಲಿ ಕರ್ನಾಟಕ ಜನ ಬದಲಾವಣೆ ಬಯಸಿದ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಸರ್ಕಾರ ರಚಿಸುತ್ತಿದೆ. ಇದರಿಂದ ನಮಗೂ ಬಹಳಷ್ಟು ಖುಷಿಯಾಗಿದೆ. ಬಿಜೆಪಿಯಲ್ಲಿ ಬಹಳ …

Read More »

ಮುಧೋಳದಲ್ಲಿ ದಾಖಲೆ ಇಲ್ಲದ 5 ಕೋಟಿ ಹಣ ಜಪ್ತಿ

ಬಾಗಲಕೋಟೆ : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ತಡೆಗೆ ಚುನಾವಣೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದರೂ ಹಲವೆಡೆ ಇದುವರೆಗೂ ನೂರಾರು ಕೋಟಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಅಂತೆಯೇ ಜಿಲ್ಲೆಯ ಮುಧೋಳ ಮತಕ್ಷೇತ್ರದ ಲಕ್ಷಾನಟ್ಟಿ ಚೆಕ್​ಪೋಸ್ಟ್​ ಬಳಿ ಅಧಿಕಾರಿಗಳು ಶನಿವಾರ ವಾಹನದಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 5 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯಿಂದ ಮುಧೋಳಕ್ಕೆ ತೆರಳುತ್ತಿದ್ದ ವಾಹನವನ್ನು ಎಸ್​ಎಸ್​ಟಿ ತಂಡ ಪರಿಶೀಲನೆ ನಡೆಸಿದಾಗ ವಾಹನದಲ್ಲಿದ್ದ ವ್ಯಕ್ತಿಯು ಹಣವು ಯುನಿಯನ್ …

Read More »

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …

Read More »

‘ಮೋದಿ ಬ್ಯಾನರ್’ ಹಾಕಿದವರೇ ಕಿತ್ತೆಸೆಯುತ್ತಿದ್ದಾರೆ, ಇದಲ್ಲವೇ ‘ಅಚ್ಛೆ ದಿನ್’: ‘ಟ್ವಿಟ್’ನಲ್ಲಿ ‘ಕಾಂಗ್ರೆಸ್’ ಕುಟುಕು

ಬೆಂಗಳೂರು: ಮೋದಿ ಬ್ಯಾನರ್ ( Modi Banner ) ಹಾಕಿದವರೇ ಮೋದಿಯನ್ನು ಕಿತ್ತೆಸೆಯುತ್ತಿದ್ದಾರೆ. ಇದಲ್ಲವೇ ಅಚ್ಛೆ ದಿನ್, ಇದಲ್ಲವೇ ಅಮೃತಕಾಲ್ ಬಿಜೆಪಿ ? ಮೋದಿ ಮುಖ ನೋಡಿ ಮತ ಕೊಡಿ ಎನ್ನುವ ಕಾಲ ಹೋಗಿದೆ, ಬಿಜೆಪಿ ಕಾರ್ಯಕರ್ತರಿಗೆ ( BJP Worker ) ಈಗ ಮೋದಿಯೇ ಅಪಥ್ಯ! ಕಾಲಚಕ್ರ ತಿರುಗುತ್ತದೆ, ತಲೆ ಮೇಲೆ ಬಿದ್ದ ನೀರು ಕಾಲಬುಡಕ್ಕೆ ಬರಲೇಬೇಕು ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ), ಬಿಜೆಪಿಯನ್ನು …

Read More »

ಕೈತಪ್ಪಿದ ಟಿಕೆಟ್, ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ: ಸರನೋಬತ್‌

ಖಾನಾಪುರ: ‘ಬಿಜೆಪಿ ಟಿಕೆಟ್‌ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ನನಗೆ ತುಂಬ ಆಘಾತವಾಗಿದೆ. ನನ್ನೊಂದಿಗೆ ಇಷ್ಟು ದಿನ ಇದ್ದ ಕಾರ್ಯಕರ್ತರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರನೋಬತ್‌ ಹೇಳಿದರು.   ಪಟ್ಟಣದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಕಳೆದ ಹಲವು ತಿಂಗಳಿಂದ ಖಾನಾಪುರ ಕ್ಷೇತ್ರದ ಉದ್ದಗಲ ಸಂಚರಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ನನಗೆ ಇಲ್ಲಿಯ ಜನರೊಂದಿಗೆ ಭಾವನಾತ್ಮಕ ಸಂಬಂಧವಿದೆ. ಇಲ್ಲಿಯ ಕಾಂಗ್ರೆಸ್ ಅಭ್ಯರ್ಥಿ …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಬಾಲಚಂದ್ರ ಜಾರಕಿಹೊಳಿ ಅವರ ಜನಪರ …

Read More »