Breaking News
Home / ರಾಜಕೀಯ

ರಾಜಕೀಯ

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

ಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಿಂದ ತಲೆ ತಗ್ಗಿಸುವಂತಾಗಿರುವುದು ತೀವ್ರ ನೋವಾಗಿದೆ.ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು.   …

Read More »

ಕಾರು, ಬೈಕ್​ ಮನೆ ಬಾಡಿಗೆಗೆ ಇದೆ ಎಂದು ಕೇಳಿದ್ದೇವೆ. ಮದುವೆಗೆ ಟೆಂಟ್, ಅಡುಗೆ ಸಾಮಾನುಗಳನ್ನು ಬಾಡಿಗೆಗೆ ಕೊಡುತ್ತಾರೆ ಎಂದು ಕೇಳಿದ್ದೇವೆ. ಆದರೆ ನೀವು ಹೆಂಡತಿಯನ್ನು ಬಾಡಿಗೆಗೆ ಪಡೆಯುವ ಬಗ್ಗೆ ಕೇಳಿದ್ದೀರಾ?

ಮಧ್ಯಪ್ರದೇಶ: ಕಾರು, ಬೈಕ್​ ಮನೆ ಬಾಡಿಗೆಗೆ ಇದೆ ಎಂದು ಕೇಳಿದ್ದೇವೆ. ಮದುವೆಗೆ ಟೆಂಟ್, ಅಡುಗೆ ಸಾಮಾನುಗಳನ್ನು ಬಾಡಿಗೆಗೆ ಕೊಡುತ್ತಾರೆ ಎಂದು ಕೇಳಿದ್ದೇವೆ. ಆದರೆ ನೀವು ಹೆಂಡತಿಯನ್ನು ಬಾಡಿಗೆಗೆ ಪಡೆಯುವ ಬಗ್ಗೆ ಕೇಳಿದ್ದೀರಾ? ಮದುವೆ ಆಗದೆ ಇರುವ ಶ್ರೀಮಂತರಿಗೆ ಹೆಂಡತಿಯರನ್ನು ಎಷ್ಟು ದಿನ ಬೇಕಾದರೂ ಬಾಡಿಗೆ ಕೊಡುತ್ತಾರೆ.ಇದು ಚಿತ್ರದ ಕಥೆ ಎಂದು ನೀವು ಭಾವಿಸುತ್ತೀರಾ? ಆದರೆ ಇಲ್ಲ. ಇದು ನಿಜಕ್ಕೂ ಸತ್ಯ. ಈ ಸಂಸ್ಕೃತಿ ಎಲ್ಲೋ ವಿದೇಶದಲ್ಲಿಲ್ಲ.. ಮಧ್ಯಪ್ರದೇಶದ ಶಿವಪುರಿಯಲ್ಲಿರುವ ವಿಚಿತ್ರ …

Read More »

ಉಪ್ಪು ತಿಂದವರು ನೀರು ಕುಡಿಯಲೇಬೇಕು:H.D.K.

ಬೆಂಗಳೂರು: ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ಮುಜುಗರವನ್ನುಂಟು ಮಾಡಿದೆ. ಸರ್ಕಾರ ಪ್ರಕರಣವನ್ನು ಎಸ್‌ಐಟಿಗೆ ವಹಿಸಿಕೊಟ್ಟ ಮೇಲಂತೂ ದೊಡ್ಡ ಗೌಡರ ಕುಟುಂಬ ತತ್ತರಿಸಿದೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ. ನಾನಾಗಲಿ, …

Read More »

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

ನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ ಇದ್ದಾರೆ. ಸೋಶಿಯಲ್​​ ಮೀಡಿಯಾದಲ್ಲಿ ಕೆಲವು ವಿಡಿಯೋಗಳು ವೈರಲ್​ ಆಗುವ ಮೂಲಕ ಗಮನ ಸೆಳೆದಿದ್ದಾರೆ. ಗುಜರಾತಿನ ಆನಂದ್‌ನಲ್ಲಿ ತುಳಸಿ ಪಾನಿಪುರಿ ಅಂಗಡಿ ಮಾಲೀಕ 71 ವರ್ಷದ ಅನಿಲ್‌ ಭಟ್‌ ಠಕ್ಕರ್‌ ಅವರು ನೋಡಲು ಪ್ರಧಾನಿ ಮೋದಿ ಅವರಂತೆ ಕಾಣುತ್ತಿದ್ದಾರೆ. ಠಕ್ಕರ್‌ ಮಾತನಾಡಿ, ‘ನಾನು ನೋಡಲು ಮೋದಿ ಅವರಂತೆ ಕಾಣುತ್ತಿರುವುದರಿಂದ ನಮ್ಮ ಅಂಗಡಿಗೆ ಬರುವ …

Read More »

ನಾವು ರೈತರ ಹಿತಕ್ಕೆ ಬರ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ :  ಡಿಕೆಶಿ 

ನಾವು ರೈತರ ಹಿತಕ್ಕೆ ಬರ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ :  ಡಿಕೆಶಿ ಬೆಂಗಳೂರು: “ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಅನ್ಯಾಯ ಖಂಡಿಸಿ ರವಿವಾರ ನಡೆದ ಪ್ರತಿಭಟನೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬರದ …

Read More »

ಮೇ 7ಕ್ಕೆ ಎರಡನೇ ಹಂತದ ಚುನಾವಣೆ : ಉತ್ತರ ಕರ್ನಾಟಕ ಭಾಗದತ್ತ ರಾಜಕೀಯ ನಾಯಕರ ಚಿತ್ತ

ಬೆಂಗಳೂರು : ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ಅಂತ್ಯಗೊಂಡ ಬೆನ್ನಲ್ಲೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಿತ ಘಟಾನುಘಟಿ ನಾಯಕರು ಮೇ 7ರಂದು ನಡೆಯಲಿರುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಕಾರ್ಯಕ್ಕೆ ಉತ್ತರ ಕರ್ನಾಟಕ ಭಾಗದತ್ತ ಮುಖ ಮಾಡಿದ್ದಾರೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ(ಎಸ್‍ಸಿ), ಕಲಬುರಗಿ(ಎಸ್‍ಸಿ), ರಾಯಚೂರು (ಎಸ್‍ಟಿ), ಬೀದರ್, ಕೊಪ್ಪಳ, ಬಳ್ಳಾರಿ(ಎಸ್‍ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ …

Read More »

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಅತ್ತ ವಿದೇಶಕ್ಕೆ ಹೋದರಾ ಸಂಸದ?

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (special investigation team) ರಚನೆಯಾಗಲಿದೆ. ರಾಜ್ಯ ಸರ್ಕಾರದಿಂದ (state government) ಇದೀಗ ಆದೇಶ ಹೊರಬಿದ್ದಿದೆ.ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ …

Read More »

ಮುಂಬೈ-ಪುಣೆ ಹೆದ್ದಾರಿಯಲ್ಲಿ ಹೊತ್ತಿ ಉರಿದ ಐಷಾರಾಮಿ ಬಸ್

ಮುಂಬೈ : ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಐಷಾರಾಮಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿದ್ದ 36 ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಬಸ್ ಮುಂಬೈನಿಂದ ಪುಣೆಗೆ ತೆರಳುತ್ತಿದ್ದಾಗ ಮಾವಲ್ ತಾಲ್ಲೂಕಿನ ಅಧೆ ಗ್ರಾಮದ ಬಳಿ ಬೆಳಿಗ್ಗೆ 7: 30 ರ ಸುಮಾರಿಗೆ ಈ ಘಟನೆ ನಡೆದಿದೆ. ಬಸ್ಸಿನ ಟೈರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬಸ್ ಚಾಲಕನ ತ್ವರಿತ ಚಿಂತನೆಯು ಎಲ್ಲಾ ಪ್ರಯಾಣಿಕರನ್ನು ತ್ವರಿತವಾಗಿ ಸ್ಥಳಾಂತರಿಸಲು ಅನುವು …

Read More »

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ಸಂವಿಧಾನದಲ್ಲಿ ಎಲ್ಲಿಯೂ ಧರ್ಮಧರಿತ ಮೀಸಲಾತಿಯಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಹೇಳಿ SC ST OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್ ಗೆ ಕೊಡತೀದಾರೆ. ಇದು ಅತ್ಯಂತ ಅಪಾಯಕಾರಿ. ದೇಶದ ಸಂವಿಧಾನದಲ್ಲಿ ಎಲ್ಲು …

Read More »

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ ಉಡುಪಿ: ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿದರು. ಬೆಂಗಳೂರಿನಲ್ಲಿದ್ದ ನಟ ರಕ್ಷಿತ್ ಶೆಟ್ಟಿ ಮತದಾನಕ್ಕಾಗಿ ಉಡುಪಿಯ ಕುಕ್ಕಿಕಟ್ಟೆಗೆ ಬಂದು ತಂದೆ ಶ್ರೀಧರ್ ಶೆಟ್ಟಿ, ತಾಯಿ ರಂಜನಿ ಶೆಟ್ಟಿ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಅರಿವು ಮೂಡಿಸಿದರು.

Read More »