Breaking News

ರಾಜಕೀಯ

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

 ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ ಅಡಿಯಲ್ಲಿ ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ಈ ಯೋಜನೆಯು ಮಹಿಳೆಯರ ಸ್ವಾವಲಂಬನೆ, ಉದ್ಯೋಗಾವಕಾಶ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಹೊಸ ದಾರಿಯನ್ನು ತೆರೆಯಲಿದೆ.

Read More »

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ ಹಿರಿಯ ಕನ್ನಡ ಶಾಲೆಯ ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ ಸಚಿವರು ಗೋಕಾಕ: ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವ ಕಾರ್ಯವನ್ನು ಮಾಡಬೇಕು, ಭವಿಷ್ಯತ್ತಿನಲ್ಲಿ ಅದೇ ಶಿಕ್ಷಣ ದೀಪವಾಗಿ ಬೆಳಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಜನರು ಮಧ್ಯ ಸಮನ್ವಯತೆ ಸಹಕಾರದಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ …

Read More »

ಡಿಸೆಂಬರ್​ನಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ರಾಯಚೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಅಂತ ಹಿರಿಯ ಸಚಿವರುಗಳು ಹೇಳಿದ್ದು, ಮುಖ್ಯಮಂತ್ರಿ ಅವರು ಕೂಡ ಸೂಚ್ಯವಾಗಿ ತಿಳಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಬಹುಶಃ ಡಿಸೆಂಬರ್​ನಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ತಿಳಿಸಿದರು. ಬಿಹಾರಕ್ಕೆ ಯಾರ‍್ಯಾರು ಎಷ್ಟೆಷ್ಟು ಕೊಡಬೇಕು ಅಂತ ನಿರ್ಧರಿಸಲು ಸಿಎಂ ಸಚಿವರ ಔತಣಕೂಟ ಕರೆದಿದ್ದಾರೆ ಎಂಬ ವಿಪಕ್ಷ ನಾಯಕ …

Read More »

ತುಂಬಿ ತುಳುಕಿದ ಕುಕ್ಕೆ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ದಕ್ಷಿಣ ಭಾರತದ ಪ್ರಸಿದ್ಧ ನಾಗದೇವತಾ ಕ್ಷೇತ್ರ ಹಾಗೂ ಕರ್ನಾಟಕದ ಮುಜರಾಯಿ ಇಲಾಖೆಗೆ ಅತಿ ಹೆಚ್ಚಿನ ಆದಾಯ ನೀಡುವ ಪುಣ್ಯಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾನುವಾರದಂದು ಭಕ್ತರ ಮಹಾಪೂರವೇ ಕಂಡುಬಂತು. ಜಾತಿ ಸಮೀಕ್ಷೆಯ ಹಿನ್ನೆಲೆಯಲ್ಲಿನ ಶಾಲಾ ರಜೆಗಳು ಹಾಗೂ ಎರಡನೇ ಶನಿವಾರದ ಸುದೀರ್ಘ ವಾರಾಂತ್ಯದ ಪ್ರಯೋಜನ ಪಡೆದುಕೊಂಡ ಸಾವಿರಾರು ಭಕ್ತಾದಿಗಳು ವಿವಿಧೆಡೆಯಿಂದ ಆಗಮಿಸಿ, ಶ್ರೀ ಸುಬ್ರಹ್ಮಣ್ಯದ ದರ್ಶನ ಪಡೆಯುವ ಭಾಗ್ಯವನ್ನು ಆಸ್ವಾದಿಸಿದರು. ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ, …

Read More »

ಆರ್​ಎಸ್​ಎಸ್​ ಚಟುವಟಿಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಪರಿಶೀಲನೆ

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆ ಚಟುವಟಿಕೆಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶೀಲಿಸಿ ಕ್ರಮವಹಿಸಲು ಮುಂದಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್​ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪೆನೆಲ್ ನಿಂದ ಒಟ್ಟು 6 ಜನರು ಆಯ್ಕೆಯಾಗಿದ್ದು, ಬ್ಯಾಂಕಿನ‌ ಆಡಳಿತ ಚುಕ್ಕಾಣಿ ಹಿಡಿಯುವ ಮಾತು ಸುಳ್ಳಾಗಿಸುವುದಿಲ್ಲ

ಬೆಳಗಾವಿ – ಇದೇ ಅಕ್ಟೋಬರ್ 19 ರಂದು ನಡೆಯುವ ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪೆನೆಲ್ ನಿಂದ ಒಟ್ಟು 6 ಜನರು ಆಯ್ಕೆಯಾಗಿದ್ದು, ಬ್ಯಾಂಕಿನ‌ ಆಡಳಿತ ಚುಕ್ಕಾಣಿ ಹಿಡಿಯುವ ಮಾತು ಸುಳ್ಳಾಗಿಸುವುದಿಲ್ಲ ಎಂದು ಬ್ಯಾಂಕಿನ‌ ಪೆನೆಲ್ ಸಾರಥಿಯಾಗಿರುವ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬ್ಯಾಂಕಿನ ಚುನಾವಣೆಗೂ ಮುನ್ನವೇ ಎರಡು ತಿಂಗಳಿನಿಂದ ಹೇಳಿಕೊಂಡು ಬರುತ್ತಿದ್ದೆ. ಈ ಸಲ ನಮ್ಮದೇ ಆಡಳಿತ ಚುಕ್ಕಾಣಿ ಅಂತಾ. 16 ರಲ್ಲಿ …

Read More »

ಪ್ರಾಣ ರಕ್ಷಣೆ :RPF ಸಿಬ್ಬಂದಿಯ ಸಾಹಸಕ್ಕೆ ಮೆಚ್ಚುಗೆ

ಬೆಳಗಾವಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ ರೈಲಿನಿಂದ ಬಿದ್ದ ವೃದ್ಧರೊಬ್ಬರನ್ನು ಕ್ಷಣಾರ್ಧದಲ್ಲಿ RPF ಸಿಬ್ಬಂದಿ ರಕ್ಷಿಸಿದ ಘಟನೆ ನಿನ್ನೆ ಬೆಳಗಾವಿ ರೈಲು ನಿಲ್ದಾಣದಲ್ಲಿ ನಡೆದಿದೆ. ಜಿಲ್ಲೆಯ ಉಚ್ಚಗಾಂವ ಸಮೀಪದ ಬಸುರತೆ ಗ್ರಾಮದ ನಿವಾಸಿಯಾದ ಶ್ರೀ ಬರಮಾ ಗಂಗರಾಮ ಕುಂಬಾರ (ವಯಸ್ಸು 55) ಎಂಬುವರು ಬೆಳಗಾವಿ ಯಿಂದ ಪುಣೆಗೆ ತೆರಳುವ ತಮ್ಮ ಮೊಮ್ಮಗನಾದ ಶ್ರೀ ಲಕ್ಷ್ಮಿ ರಾಜಾರಾಮ ಕುಂಬಾರ ಅವರನ್ನು ಮೈಸೂರು–ಅಜ್ಮೀರ್ ಎಕ್ಸ್‌ಪ್ರೆಸ್ ರೈಲಿಗೆ ( ಸಂಖ್ಯೆ16210) ಬೀಳ್ಕೊಡಲು ಬಂದಿದ್ದರು. ಆಗ ರೈಲು …

Read More »

ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ

ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ  -ಖಾನಾಪೂರದ ಶಾಸಕ ಮಹಾಲಕ್ಷ್ಮಿ ಗ್ರುಪ್ ಸಂಸ್ಥಾಪಕ ಅಧ್ಯಕ್ಷ ವಿಠ್ಠಲ ಹಲಗೇಕರ ಅವರು ರಾಜಾಸ್ಥಾನದ ಮೌಂಟ್ ಅಬು ಶಾಂತಿವನ ಕ್ಯಾಂಪಸ್ ನಲ್ಲಿ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ “ಏಕತೆ ಮತ್ತು ವಿಶ್ವಾಸ” ಕುರಿತು ಜಾಗತಿಕ ಶೃಂಗ ಸಭೆಯಲ್ಲಿ ಭಾಗವಹಿಸಿದ್ದರು ಈ ಬೃಹತ್ ಅಂತಾರಾಷ್ಟ್ರೀಯ ಶೃಂಗ ಸಭೆಯಲ್ಲಿ ಜಾಗತಿಕ ನಾಯಕರು, ನೀತಿ ನಿರೂಪಕರು, …

Read More »

ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ನೀರು ಪೋಲು: ಅಧಿಕಾರಿಗಳ ವಿರುದ್ದ ಜನರ ಆಕ್ರೋಶ

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದ ಹೊರಭಾಗದಲ್ಲಿರುವ ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2.50 ಟಿಎಂಸಿ ನೀರು ಸಂಗ್ರಹ‌ ಸಾಮರ್ಥ್ಯ ಹೊಂದಿರುವ ಮಾಲವಿ ಜಲಾಶಯ, ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಭರ್ತಿಯಾಗಿದೆ. ಆದ್ರೆ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ಕೃಷಿ ಚಟುವಟಿಕೆಗೆ ಬಳಕೆಯಾಗಬೇಕಿದ್ದ ಜಲಾಶಯದ ನೀರು ವ್ಯರ್ಥವಾಗಿ ಹರಿಯುತ್ತಿದೆ. ಕ್ರಸ್ಟ್ ಗೇಟ್‌ …

Read More »

RSS ಬ್ಯಾನ್​ ಮಾಡಲು ಇಂದಿರಾ ಗಾಂಧಿ ಕೈಯಲ್ಲೇ ಆಗಿಲ್ಲ: ಆರ್. ಅಶೋಕ್

ಬೆಂಗಳೂರು: “ಆರ್.ಎಸ್ ಎಸ್ ಬ್ಯಾನ್ ಮಾಡಲು ಮೂರು ಬಾರಿ ಪ್ರಯತ್ನ ಮಾಡಿದರು. ಇಂದಿರಾ ಗಾಂಧಿ ಕೈಯಲ್ಲೇ ಆಗಿಲ್ಲ” ಎ‌ಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ನಗರದಲ್ಲಿಂದು RSS ಪಥಸಂಚಲನದ ಬಳಿಕ RSS ಬ್ಯಾನ್ ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, “ಆರ್.ಎಸ್ ಎಸ್ ಬ್ಯಾನ್ ಮಾಡಲು ಮೂರು ಬಾರಿ ಪ್ರಯತ್ನ ಮಾಡಿದರೂ ಇಂದಿರಾ ಗಾಂಧಿ ಕೈಯಲ್ಲೇ ಆಗಿಲ್ಲ. ಪ್ರಧಾನಿ ನರೇಂದ್ರ ಮೋದಿ, ಗೃಹ …

Read More »