ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೊಡೆತಟ್ಟಿ 28 ವಿಪಕ್ಷಗಳು ರೂಪಿಸಿಕೊಂಡಿರುವ I.N.D.I.A ಮೈತ್ರಿಕೂಟದ ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಂದು ದಿನ ಮುಂಚೆ ಅಂದರೆ ಆಗಸ್ಟ್ 30 ರಂದು ಮಹಾರಾಷ್ಟ್ರಕ್ಕೆ ಆಗಮಿಸಲಿದ್ದಾರೆ. ಅಂದು ಬಾಲಿವುಡ್ನ ಖ್ಯಾತ ಹಿರಿಯ ನಟ ಅಮಿತಾಭ್ ಬಚ್ಚನ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದ್ದು, ರಕ್ಷಾ …
Read More »ಅಂಕೋಲಾದ ಕೆಂದಗಿ ಗ್ರಾಮಕ್ಕಿಲ್ಲ ರಸ್ತೆ: ಗಾಯಾಳುವನ್ನ ಜೋಳಿಗೆಯಲ್ಲಿಟ್ಟು 15 ಕಿ.ಮೀ ಸಾಗಿಸಿದ ಗ್ರಾಮಸ್ಥರು
ಕಾರವಾರ : ಭಾರತ ಸ್ವಾತಂತ್ರ್ಯ ಹೊಂದಿ 75 ವರ್ಷ ಕಳೆದರೂ ಇನ್ನೂ ರಸ್ತೆ ಸಂಪರ್ಕವಿಲ್ಲದ ಗ್ರಾಮಗಳು ಬಹಳಷ್ಟಿವೆ ಎಂದರೆ ಅಚ್ಚರಿಯಾಗದೇ ಇರೋದಿಲ್ಲ. ಹೀಗೆ ರಸ್ತೆ ಸಮಸ್ಯೆಯಿದ್ದ ಗ್ರಾಮವೊಂದರಿಂದ ಗಾಯಾಳುವನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಅಂಕೋಲಾದಲ್ಲಿ ನಡೆದಿದೆ. ಹಳ್ಳಗಳಿಂದ ಜಲದಿಗ್ಭಂದನಕ್ಕೊಳಗಾಗಿದ್ದ ಗ್ರಾಮದಿಂದ ಸುಮಾರು 15 ಕಿ.ಮೀ ದೂರ ಹರಸಾಹಸಪಟ್ಟು, ಹಳ್ಳ ದಾಟಿಸಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗಿ ಗ್ರಾಮದ ಉಮೇಶ್ ಗೌಡ ಎಂಬುವರು …
Read More »‘ಬಿಜೆಪಿಯಲ್ಲಿ ನಾಯಕರೊಂದಿಗೆ ಭಿನ್ನಾಭಿಪ್ರಾಯ ಇರೋದು ಸತ್ಯ,: ಶಂಕರ ಪಾಟೀಲ ಮುನೇನಕೊಪ್ಪ
ಹುಬ್ಬಳ್ಳಿ: ನನಗೆ ಈವರೆಗೂ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಬೇಕೆಂಬ ಆಹ್ವಾನ ಕಾಂಗ್ರೆಸ್ ಮುಖಂಡರಿಂದ ಬಂದಿಲ್ಲ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ನೀಡಿದ್ದಾರೆ. ಕಳೆದ ಕಲವು ದಿನಗಳಿಂದ ಶಂಕರ ಪಾಟೀಲ ಮುನೇನಕೊಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿರುವ ಅವರು, ”ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹಿತರು ಇದ್ದಾರೆ, ಬಂಧುಗಳು …
Read More »ಇಸ್ರೋ ಮಹತ್ವದ ಘೋಷಣೆ: ಸೂರ್ಯನ ಅಧ್ಯಯನಕ್ಕೆ ಬಾಹ್ಯಾಕಾಶದಲ್ಲಿ ಆದಿತ್ಯ-L1 ವೀಕ್ಷಣಾಲಯ; ಸೆ.2ರಂದು ಉಡ್ಡಯನ
ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೀಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1 ವೀಕ್ಷಣಾಲಯ ಹೊತ್ತ ರಾಕೆಟ್ ಅನ್ನು ಸೆಪ್ಟೆಂಬರ್ 2ರಂದು ಬೆಳಗ್ಗೆ 11:50 ನಿಮಿಷಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಇಂದು (ಸೋಮವಾರ) ಘೋಷಿಸಿದೆ. ಸೂರ್ಯನ ಅಧ್ಯಯನ ಮಾಡುವ ಭಾರತದ ಮೊಟ್ಟ ಮೊದಲ ಬಾಹ್ಯಾಕಾಶ ವೀಕ್ಷಣಾಲಯ ಇದಾಗಿದೆ. ಈ ಮಿಷನ್ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ …
Read More »ಕಾಂಗ್ರೆಸ್ ಕಾರ್ಯಕರ್ತೆಯ ಅವಹೇಳನ ಆರೋಪ; ಸೂಲಿಬೆಲೆ ವಿರುದ್ಧ ಎಫ್ಐಆರ್
ಶಿವಮೊಗ್ಗ : ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ ಸೂಲಿಬೆಲೆ ಪೋಸ್ಟ್ಗೆ ಸೌಗಂಧಿಕ ರಘುನಾಥ್ …
Read More »ಯಾದಗಿರಿ: ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿ 24 ಜನರು ಅಸ್ವಸ್ಥ
ಯಾದಗಿರಿ: ಕಲುಷಿತ ನೀರು ಸೇವಿಸಿ 22 ಮಕ್ಕಳು, ಇಬ್ಬರು ವಯಸ್ಕರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಅಸ್ವಸ್ಥರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮಸ್ಥರಾದ ಯಲ್ಲಪ್ಪ ಛಲುವಾದಿ ಮಾತನಾಡಿ, “ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಎದುರಿನ ಕೈ ಪಂಪ್ (ಕೊಳವೆಬಾವಿ) ನೀರನ್ನು ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ತಟ್ಟೆ ತೊಳೆಯಲು ಮತ್ತು ಕುಡಿಯಲು ಬಳಸಿದ್ದಾರೆ. ಇದರಿಂದಾಗಿ ಅಸ್ವಸ್ಥಗೊಂಡಿರುವ ಅನುಮಾನವಿದೆ” ಎಂದು ಶಂಕೆ ವ್ಯಕ್ತಪಡಿಸಿದರು. …
Read More »ಇಂಡೋನೇಷ್ಯಾದ ಬಾಲಿ, ಜಾವಾ ದ್ವೀಪಗಳಲ್ಲಿ ಪ್ರಬಲ ಭೂಕಂಪ: ಯಾವುದೇ ಸಾವು- ನೋವುಗಳು ವರದಿಯಾಗಿಲ್ಲ
ಡೆನ್ಪಾಸರ್ (ಇಂಡೋನೇಷ್ಯಾ): ಇಂಡೋನೇಷ್ಯಾದ ರೆಸಾರ್ಟ್ ದ್ವೀಪವಾದ ಬಾಲಿ ಮತ್ತು ದೇಶದ ಇತರ ಭಾಗಗಳಲ್ಲಿ ಮಂಗಳವಾರ ಪ್ರಬಲ ಭೂಕಂಪ ಸಂಭವಿಸಿದೆ. ಭೂಮಿ ಕಂಪಿಸಿದ್ದರಿಂದ ಜನರು ಭಯಭೀತರಾಗಿದ್ದಾರೆ. ಆದರೆ, ಸದ್ಯ ಯಾವುದೇ ಸಾವುನೋವಿನ ಕುರಿತು ವರದಿಯಾಗಿಲ್ಲ. 513.5 ಕಿಲೋಮೀಟರ್ ಆಳದಲ್ಲಿ 7.1 ತೀವ್ರತೆಯ ಭೂಕಂಪ ಸಂಭಸಿದೆ. ಬಾಲಿಯ ಪಕ್ಕದಲ್ಲಿರುವ ಲೊಂಬಾಕ್ ದ್ವೀಪದ ಕರಾವಳಿಯ ಸಮೀಪವಿರುವ ಸಣ್ಣ ದ್ವೀಪವಾದ ಗಿಲಿ ಏರ್ನಿಂದ ಈಶಾನ್ಯಕ್ಕೆ 181 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಪಾಯಿಂಟ್ ಇದೆ ಎಂದು ಅಮೆರಿಕದ ಜಿಯೋಲಾಜಿಕಲ್ …
Read More »ಸಚಿವ ಜಮೀರ್ ಅಹಮದ್ ಖಾನ್ ಮದರಸಾಗಳಲ್ಲಿ ಮುಖ್ಯವಾಗಿ ಕನ್ನಡ ಕಲಿಸಬೇಕೆಂದು ನಿರ್ದೇಶನ ನೀಡಿದ್ದಾರೆ.
ಬೆಂಗಳೂರು: ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ 1265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದರಸಾಗಳಿದ್ದು, ಆ ಪೈಕಿ 100 …
Read More »ರಾಜ್ಯದಲ್ಲಿ ಬರದ ಛಾಯೆ ಕರುನಾಡಿಗೆ ಬರದ ತೂಗುಗತ್ತಿ: ವಿದ್ಯುತ್ ಬಳಕೆ ಗಣನೀಯ ಏರಿಕೆ, ಉತ್ಪಾದನೆ ಕುಸಿತ
ಬೆಂಗಳೂರು: ರಾಜ್ಯದಲ್ಲಿ ಬರದ ಛಾಯೆ ಗಾಢವಾಗಿದ್ದು, ಒಂದೆಡೆ ಜಲಾಶಯಗಳ ನೀರಿನ ಮಟ್ಟ ಇಳಿಕೆಯಾಗಿದೆ. ವಿದ್ಯುತ್ ಉತ್ಪಾದನೆ ಕುಸಿತ ಕಂಡಿದೆ. ಇನ್ನೊಂದೆಡೆ ರಾಜ್ಯದ ವಿದ್ಯುತ್ ಬಳಕೆ ತಾರಕ್ಕೇರಿರುವುದು ಇಂಧನ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಬರದ ಕರಿ ನೆರಳು ದಟ್ಟವಾಗಿ ವ್ಯಾಪಿಸಿದೆ. ಮುಂಗಾರು ಮಳೆ ಕೈ ಕೊಟ್ಟಿದೆ. ವಾಡಿಕೆಯಂತೆ ಜುಲೈ ಹಾಗೂ ಆಗಸ್ಟ್ನಲ್ಲಿ ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತೆ. ಆದರೆ, ಈ ಬಾರಿ ವಾಡಿಕೆ ಮಳೆಯೂ ಕೈಕೊಟ್ಟಿದೆ. ಹೀಗಾಗಿ ರಾಜ್ಯದ ಸುಮಾರು 130ಕ್ಕೂ …
Read More »ಆಗಸದಲ್ಲಿ ನಿಂತ ಮಗುವಿನ ಉಸಿರು.. ಬೆಂಗಳೂರು – ದೆಹಲಿ ವಿಮಾನ ತುರ್ತು ಭೂಸ್ಪರ್ಶ.. ಕಂದಮ್ಮನ ಪಾಲಿಗೆ ದೇವರಾದ ವೈದ್ಯರು..
ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಬೆಂಗಳೂರು ನವದೆಹಲಿ ವಿಮಾನವನ್ನು ಭಾನುವಾರ ತಡರಾತ್ರಿ ನಾಗಪುರ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಗಪುರ, ಮಹಾರಾಷ್ಟ್ರ: ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಬೆಂಗಳೂರಿನಿಂದ ನವದೆಹಲಿಗೆ ತೆರಳಬೇಕಿದ್ದ ವಿಸ್ತಾರಾ ವಿಮಾನವನ್ನು ನಾಗಪುರನಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿತ್ತು. ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸಮಸ್ಯೆ ಇದ್ದು, ಆಕೆಯ ಆರೋಗ್ಯ ಹಠಾತ್ ಹದಗೆಟ್ಟ ಕಾರಣ ವಿಮಾನದಲ್ಲಿದ್ದ ವೈದ್ಯರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುಬೇಕಾಗಿದೆ …
Read More »
Laxmi News 24×7