Breaking News
Home / ರಾಜಕೀಯ (page 1167)

ರಾಜಕೀಯ

ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಗುರುವಾರ ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಅವರು, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ …

Read More »

ಕೇವಲ 13 ಗಂಟೆಯಲ್ಲಿ 135 ಕಿ.ಮೀ ಬಂದ ಎತ್ತಿನ ಚಕ್ಕಡಿ – ಎತ್ತುಗಳಿಗೆ ಅದ್ಧೂರಿ ಸ್ವಾಗತ

ಧಾರವಾಡ: ಉಳವಿ ಜಾತ್ರೆಯಿಂದ ಧಾರವಾಡಕ್ಕೆ ಎತ್ತಿನ ಚಕ್ಕಡಿ ಕೇವಲ 13 ಗಂಟೆಯಲ್ಲಿ 135 ಕಿಲೋ ಮೀಟರ್ ಬಂದಿದ್ದು, ಅವುಗಳಿಗೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ. ಎತ್ತಿನ ಚಕ್ಕಡಿಗಳನ್ನ ತೆಗೆದುಕೊಂಡು ಜಾತ್ರೆಗೆ ಹೋಗುವುದೆಂದರೆ ಎಲ್ಲಿಲ್ಲದ ಖುಷಿ. ಗ್ರಾಮೀಣ ಪ್ರದೇಶಗಳಲ್ಲಿ ಚಕ್ಕಡಿಗೆ ಕೊಲ್ಲಾರಿ ಕಟ್ಟಿಕೊಂಡು ಜಾತ್ರೆಗೆ ಹೋಗುವ ಪದ್ಧತಿ ಇನ್ನೂ ಜೀವಂತವಾಗಿದೆ. ಜಾತ್ರೆಗೆ ಅನೇಕರು ಟ್ರ್ಯಾಕ್ಟರ್, ಬೈಕ್ ತೆಗೆದುಕೊಂಡು ಹೋಗುತ್ತಾರೆ. ಆದರೆ ಧಾರವಾಡದ ಎರಡು ಎತ್ತುಗಳು ಉತ್ತರ ಕನ್ನಡ ಜಿಲ್ಲೆಯ ಉಳವಿ ಜಾತ್ರೆಯಿಂದ ಧಾರವಾಡಕ್ಕೆ …

Read More »

ಅಂಡರ್​ ವಾಟರ್​ ಫೋಟೋಗಳನ್ನು ಹಂಚಿಕೊಂಡ ಹಾಟ್​ ನಟಿ ದೀಪಿಕಾ ಪಡುಕೋಣೆ

ಹೈದರಾಬಾದ್: ಬಾಲಿವುಡ್‌ ಪದ್ಮಾವತಿ ದೀಪಿಕಾ ಪಡುಕೋಣೆ ಗೆಹ್ರಿಯಾನ್​ ಸಿನಿಮಾದಲ್ಲಿ ಹಾಟ್​ ಆಗಿ ಕಾಣಿಸಿಕೊಂಡು ಚರ್ಚೆಗೆ ಗ್ರಾಸವಾಗಿದ್ದರು. ಸಿನಿಮಾದ ಬೆನ್ನಲ್ಲೇ ಇದೀಗ ಹಾಟ್​ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಎಲ್ಲರ ಹುಬ್ಬೇರಿಸಿದ್ದಾರೆದೀಪಿಕಾ ಪಡುಕೋಣೆ ಕಿತ್ತಳೆ ಬಣ್ಣದ ದಿರಿಸಿನಲ್ಲಿದ್ದು , ನೀರಿನ ಅಡಿ ಕುಳಿತು ತೆಗೆದುಕೊಂಡ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹರಿಬಿಟ್ಟಿದ್ದಾರೆ. ಅಲ್ಲದೇ, ‘ಕೆಲವೊಮ್ಮೆ ಸುರಕ್ಷಿತ ಸ್ಥಳವು ನೀರಿನ ಅಡಿಯಲ್ಲಿದೆ’ ಎಂದು ಬರೆದುಕೊಂಡಿದ್ದಾರೆ. ದೀಪಿಕಾ ಈ ಸಾಲನ್ನು ಲೇಖಕಿ ಮರಿಸಾ ರೀಚಾರ್ಡ್ ಅವರ ಕಾದಂಬರಿಯಾದ …

Read More »

ವೈಯಕ್ತಿಕ, ಕೈಗಾರಿಕೆ ಸಾಲದ ಹೆಚ್ಚಳದ ಸಂತಸ.. ಚಿನ್ನದ ಮೇಲಿನ ಸಾಲ ಏರಿಕೆಯ ಹಿನ್ನಡೆ: ಹಣಕಾಸು ಇಲಾಖೆ ವರದಿ

ನವದೆಹಲಿ: ಗ್ರಾಹಕರು ಮತ್ತು ಉದ್ಯಮಿಗಳು ಹೆಚ್ಚಿನ ಸಾಲವನ್ನು ಪಡೆದುಕೊಳ್ಳುತ್ತಿರುವುದು ಆರ್ಥಿಕ ಚಟುವಟಿಕೆಯ ಸುಧಾರಣೆಯ ಸಂಕೇತವಾಗಿದೆ. ಕಳೆದ ವರ್ಷದ ಡಿಸೆಂಬರ್​ ತಿಂಗಳಲ್ಲಿ ವೈಯಕ್ತಿಕ ಮತ್ತು ಕೈಗಾರಿಕಾ ಸಾಲಗಳ ಬೆಳವಣಿಗೆ ದರ ಹೆಚ್ಚಾಗಿದೆ. ಆದರೆ, ಈ ಮಧ್ಯೆಯೇ ಚಿನ್ನದ ಮೇಲಿನ ಸಾಲವೂ ಕೂಡ ಏರುತ್ತಿರುವುದು ಆರ್ಥಿಕ ಕೊರತೆ ಮತ್ತು ನಗದು ಹರಿವಿನ ಸಮಸ್ಯೆಯನ್ನು ಇದು ದೃಢೀಕರಿಸುತ್ತದೆ ಎಂದು ಹಣಕಾಸು ಇಲಾಖೆಯ ವರದಿ ತಿಳಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಪ್ರತಿಕೂಲ ಪರಿಣಾಮದಿಂದಾಗಿ ಜನರು ಆರ್ಥಿಕ …

Read More »

ಕಸ ಹಾಕೋ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ಕಸ ಹಾಕುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನನಾಯಕನ ಪಾಳ್ಯದಲ್ಲಿ ನಡೆದಿದೆ. ನಿವೃತ್ತ ಎಎಸ್‍ಐ ಜವರೇಗೌಡ, ಮಕ್ಕಳಾದ ಆನಂದ್ ಪಾಪು, ಮಗಳು ಕೋಮಲ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಅನಿತಾ ಹಾಗೂ ಕುಟುಂಬಸ್ಥರ ಮೇಲೆ ಜವರೇಗೌಡ ಫ್ಯಾಮಿಲಿಯಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.  ಚನ್ನನಾಯಕನ ಹಳ್ಳಿಯಲ್ಲಿ ಅನಿತಾ ಅವರು ಗಾರ್ಮೆಂಟ್ಸ್ ಹೊಂದಿದ್ದು, ಕಳೆದ ಮೂರುವರೆ ವರ್ಷದ ಹಿಂದೆ ಗಾರ್ಮೆಂಟ್ಸ್ ಆರಂಭವಾಗಿತ್ತು. ರೆಸಿಡೆನ್ಷಿಯಲ್ …

Read More »

ಜೀಪಿನಿಂದ ಡಿಕ್ಕಿ ಹೊಡಿಸಿ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ

ಮೈಸೂರು: ಹಣಕಾಸಿನ ವಿಚಾರಕ್ಕಾಗಿ ಜೀಪಿನಿಂದ ಡಿಕ್ಕಿ ಹೊಡಿಸಿ ಹೆತ್ತ ತಾಯಿಯನ್ನೆ ಮಗನೊಬ್ಬ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ನಾಗಮ್ಮ (65) ಮೃತ ದುರ್ದೈವಿ ಹಾಗೂ ಹೇಮರಾಜ್ (45) ಕೊಲೆ ಮಾಡಿದ ಆರೋಪಿ. ಹಣಕಾಸಿನ ವಿಚಾರಕ್ಕಾಗಿ ತಾಯಿ, ಮಗನ ನಡುವೆ ಪ್ರತಿನಿತ್ಯ ಗಲಾಟೆ ನಡೆಯುತ್ತಿತ್ತು. ಇದು ವಿಕೋಪಕ್ಕೆ ಹೋಗಿ ಹೆತ್ತ ತಾಯಿಯನ್ನೆ ಮಗ ಜೀಪಿನಿಂದ ಡಿಕ್ಕಿ ಹೊಡಿಸಿ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹನುಮಂತಪುರದಲ್ಲಿ …

Read More »

KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ

ಚಿಕ್ಕೋಡಿ: KSRTC ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಹೊರವಲಯದ ಕೆರೂರ ಕ್ರಾಸ್ ಬಳಿಯ ಚಿಕ್ಕೋಡಿ-ಮಿರಜ ರಾಜ್ಯ ಹೆದ್ದಾರಿಯಲ್ಲಿ ಬಸ್-ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆಯೇ ಬಸ್ ಎಗರಿದೆ. ಪರಿಣಾಮ ಚಿಕ್ಕೋಡಿಯಿಂದ ಅಂಕಲಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಚಿಕ್ಕೋಡಿ ಪಟ್ಟಣದ ನಿವಾಸಿಗಳಾದ …

Read More »

ಐದು ನದಿಗಳ ಜೋಡಣೆ – ನಾಳೆ ಕೇಂದ್ರ ರಾಜ್ಯಗಳ ಸಭೆ

ನವದೆಹಲಿ: ಐದು ನದಿಗಳ ಜೋಡಣೆಗೆ ಬಜೆಟ್ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯ ಕಾರ್ಯಪ್ರವೃತ್ತವಾಗಿದೆ. ನದಿ ಜೋಡಣೆ ಸಂಬಂಧ ಚರ್ಚಿಸಲು ದಕ್ಷಿಣ ರಾಜ್ಯಗಳ ಮೊದಲ ಸಭೆ ಕರೆದಿದೆ. ನಾಳೆ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ನೇತೃತ್ವದಲ್ಲಿ ಮೊದಲ ಸಭೆ ನಡೆಯಲಿದ್ದು, ಸಭೆಯಲ್ಲಿ ಕಾವೇರಿ-ಗೋದಾವರಿ, ಕೃಷ್ಣಾ-ಪೆನ್ನಾರು ಸೇರಿದಂತೆ ನದಿ ಜೋಡಣೆ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ಸಭೆಯಲ್ಲಿ …

Read More »

ನಾನು ರಾಷ್ಟ್ರ ಭಕ್ತ, ಡಿಕೆಶಿ ರಾಜಿನಾಮೆ ಕೊಡಲಿ: ಈಶ್ವರಪ್ಪ

ಬೆಂಗಳೂರು: ರಾಷ್ಟ್ರಧ್ವಜ ಇಲ್ಲದೇ ಇರುವುದನ್ನು ಇದೆ ಎಂದು ಹೇಳಿ ಸಮಸ್ಯೆ ಸೃಷ್ಟಿಸಿದವರು ಡಿ.ಕೆ ಶಿವಕುಮಾರ್, ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಡಿಕಿಶಿ ರಾಜೀನಾಮೆ ಕೊಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ರಾಷ್ಟ್ರದ್ರೋಹ ಮಾಡಿದ್ದಾರೋ ಅವರು ರಾಜೀನಾಮೆ ಕೊಡಲಿ. ಹೀಗಾಗಿ ಡಿಕೆಶಿಯೇ ರಾಜೀನಾಮೆ ಕೊಡಲಿ ನಾನು ರಾಷ್ಟ್ರಭಕ್ತ ಎಂದರು. ತಿರಂಗ ಯಾತ್ರೆ ಮಾಡಿದವನು ನಾನು, ತುರ್ತುಪರಿಸ್ಥಿತಿ ವೇಳೆ ಜೈಲಿಗೆ ಹೋಗಿ …

Read More »

ಅಹೋರಾತ್ರಿ ಧರಣಿ: ಸದನಕ್ಕೆ ಹಾಸಿಗೆ, ದಿಂಬು ತರಲು ಕಾಂಗ್ರೆಸ್ ಸಿದ್ಧತೆ

ಬೆಂಗಳೂರು : ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ರಾತ್ರಿ ವಾಸ್ತವ್ಯಕ್ಕಾಗಿ ಹಾಸಿಗೆ, ದಿಂಬುಗಳನ್ನು ತರಿಸುವುದಕ್ಕೆ ಸೂಚನೆ ನೀಡಲಾಗಿದೆ. ಸದನದಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸುವುದಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಹೀಗಾಗಿ ಪರಿಷತ್ ಹಾಗು ವಿಧಾನಸಭೆ ಸದಸ್ಯರಿಗೆ ರಾತ್ರಿ ಮಲಗುವುದಕ್ಕೆ ಅಗತ್ಯವಾದ ಹಾಸಿಗೆ- ದಿಂಬುಗಳನ್ನು ತರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಜತೆಗೆ ಭೋಜನ ವ್ಯವಸ್ಥೆಗೂ ಸೂಚನೆ ನೀಡಲಾಗಿದೆ. ಇಂದೇ ಅಂತ್ಯ ? ಆದರೆ ಕಾಂಗ್ರೆಸ್ …

Read More »