Home / ರಾಜಕೀಯ (page 1169)

ರಾಜಕೀಯ

ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್, ಈಗ ಇರೋದ್ ನಕಲಿ ಕಾಂಗ್ರೆಸ್: ಆರ್.ಅಶೋಕ್

ಬೆಂಗಳೂರು : ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕ ಹಾಗೂ ಕ್ರಿಮಿನಲ್ ಕಾನೂನು ತಿದ್ದುಪಡಿ ಆಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ ) ವಿಧೇಯಕಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಕಂದಾಯ ಸಚಿವ ಆರ್. ಅಶೋಕ್, ನೊಂದಾಯಿತ ಯಾವುದೇ ಗೃಹ ನಿರ್ಮಾಣ ಸಹಕಾರ ಸಂಘದ ನಿವೇಶನ ಮಾರಾಟ ಮಾಡಿದ ದಿನಾಂಕದಂದು ಇರುವ ಮಾರುಕಟ್ಟೆಯ ಮೌಲ್ಯದ ಮುದ್ರಾಂಕ ಶುಲ್ಕ ಪಾವತಿಸುವ ಸಂಬಂಧ ಕರ್ನಾಟಕ ಸ್ಟಾಂಪ್​ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಸಹಕಾರ ಸಂಘಗಳ ಅಧಿನಿಯಮದಡಿಯಲ್ಲಿ ನೊಂದಾಯಿಸಿದ ಯಾವುದೇ ಗೃಹ ನಿರ್ಮಾಣ …

Read More »

ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್, ಈಗ ಇರೋದ್ ನಕಲಿ ಕಾಂಗ್ರೆಸ್: ಆರ್.ಅಶೋಕ್

ಬೆಂಗಳೂರು: ಕೋಳಿನಾ ಕೇಳಿ ಖಾರ ಅರಿಯೋ ಅಭ್ಯಾಸ ಬಿಜೆಪಿಗಿಲ್ಲ. ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್. ಈಗ ಇರೋದ್ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಹೋರಾಟದಲ್ಲಿದ್ದ ಕಾಂಗ್ರೆಸ್​​ಗೂ ಈಗಿರುವ ಕಾಂಗ್ರೆಸ್​ಗೂ ಸಂಬಂಧವಿಲ್ಲ ಎಂದು ಆರ್.ಅಶೋಕ್ ಟೀಕಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಜಾ ಮಾಡುವುದಾದ್ರೆ ಕಾಂಗ್ರೆಸ್​​ನವರನ್ನು ವಜಾ ಮಾಡಬೇಕು. ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಬಾವುಟ ಹಾರಿಸಿ ಎಂದಾಗ ಎಲ್ಲಿದ್ದರು ಇವರು?, ಇದು ಕಾಂಗ್ರೆಸ್​​ನವರ ರಾಜಕೀಯ ದೊಂಬರಾಟ ಅಷ್ಟೇ. ಆರಾಮಾಗಿ …

Read More »

ಮದ್ಯ ಸೇವನೆಗೆ ಹಣ ಹೊಂದಿಸಲು ಕಳ್ಳತನ, ಕುಡುಕನ ಬಂಧನ

ಬೆಂಗಳೂರು: ಮದ್ಯ ಸೇವನೆಗಾಗಿ ಹಣ ಸಂಗ್ರಹಿಸಲು ರಾತ್ರೋರಾತ್ರಿ ವಿವಿಧ ಅಂಗಡಿಗಳಲ್ಲಿ ಕಳ್ಳತನ ಮಾಡಿ ನಗದು ದೋಚುತ್ತಿದ್ದ ವ್ಯಕ್ತಿಯನ್ನು ಸುಬ್ರಮಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್ ಎಂಬಾತ ಬಂಧಿತ ಆರೋಪಿ. ಪ್ರಕರಣದ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಈ ಆರೋಪಿಗಳು ಹೊಟೇಲ್​​ಗಳು, ವಿವಿಧ ಮಳಿಗೆಗಳ ಬೀಗ ಹೊಡೆದು ಒಳನುಗ್ಗಿ ಕ್ಷಣಾರ್ಧದಲ್ಲಿ ಅಲ್ಲಿದ್ದ ಹಣ ಎಗರಿಸುತ್ತಿದ್ದರು. ಕಾರ್ತಿಕ್ ಜೊತೆಗೆ ಮತ್ತೊಬ್ಬ ಆರೋಪಿ ಕುಡಿತದ ಚಟಕ್ಕೆ ಬಿದ್ದಿದ್ದ. ಇಬ್ಬರೂ ಸುಲಭವಾಗಿ ಹಣ …

Read More »

ಡೊಳ್ಳು ಕುಣಿತದವರೊಂದಿಗೆ ಸ್ಪೀಕರ್ ಕಾಗೇರಿ ಗಿಲಿಗಚ್ಚಿ ಹಿಡಿದು ಸ್ಟೆಪ್

ಶಿರಸಿ ತಾಲೂಕಿನ ಬರೂರಿನ ಶ್ರೀ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಡೊಳ್ಳು ಕುಣಿತದ ತಂಡದವರೊಂದಿಗೆ ಹೆಜ್ಜೆ ಹಾಕಿ ಗಿಲಿಗಚ್ಚಿಯನ್ನು ಬಾರಿಸಿದ್ದು, ಎಲ್ಲರ ಗಮನ ಸೆಳೆಯಿತು. ಕಳೆದ 9 ತಿಂಗಳಲ್ಲಿ ನಿರ್ಮಾಣವಾಗಿರುವ ನೂತನ ದೇವಾಲಯದಲ್ಲಿ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹವನ್ನು ವೈದಿಕ ಪ್ರಮುಖರ ನೇತೃತ್ವದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ನೂತನ ವಿಗ್ರಹವನ್ನು ಅಲಂಕರಿಸಿ, ಆರತಿಯೊಂದಿಗೆ …

Read More »

ಇಂದು ರಾತ್ರಿಯಿಂದಲೇ ಅಹೋರಾತ್ರಿ ಧರಣಿ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದಲೇ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾವು ಧರಣಿ ಮುಂದುವರಿಸಿದ್ದೇವೆ. ಈಶ್ವರಪ್ಪರನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದೇವೆ. ಅವರು ನಮ್ಮ ಸಂವಿಧಾನಕ್ಕೆ ಅಗೌರವ ತೋರಿದ್ದಾರೆ. ರಾಜ್ಯಪಾಲರು ಡಿಸ್ಮಿಸ್ ಮಾಡೋಕೆ ಹೇಳಬೇಕಿತ್ತು. ಸಿಎಂ ಕೂಡ ಮಾಡಬೇಕಿತ್ತು. ಇದರ ಅರ್ಥ ಆರ್​ಎಸ್​ಎಸ್ ಮೂಲಕ ಮಾಡಿಸಿದ್ದಾರೆ. ಈಶ್ವರಪ್ಪ ಮೂಲಕ ಹೇಳಿಸಿದ್ದಾರೆ. ರಾಷ್ಟ್ರಧ್ವಜ ನಮ್ಮ …

Read More »

ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಅಲ್ಲ: ಸಿಎಂ

ಬೆಂಗಳೂರು: ‘ರಾಜ್ಯದ ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ. ಈ ವಿಷಯದಲ್ಲಿ ಹೈಕೋರ್ಟ್‌ ಆದೇಶವನ್ನು ಪಾಲನೆ ಮಾಡುತ್ತಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಾಮರಾಜನಗರದಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು’ ಎಂದು ಒತ್ತಾಯಿಸಿದರು. ಬಸವರಾಜ ಬೊಮ್ಮಾಯಿ ಉತ್ತರಿಸಿ, ‘ಉನ್ನತ ಶಿಕ್ಷಣ …

Read More »

ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯ ಮಾನ್ಯತೆ: ಬೊಮ್ಮಾಯಿ

ಚಿತ್ರದುರ್ಗ): ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಲು ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಲ್ಲಿನ ತರಳಬಾಳು ಮಠದ ಆವರಣದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆಯ ಅಂತಿಮ ದಿನದಂದು ನಡೆದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸದ್ಧರ್ಮ ಸಿಂಹಾಸನಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ‘ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ಉನ್ನತ ಸಮಿತಿ ಭದ್ರಾ ಮೇಲ್ದಂಡೆಗೆ ಸಮ್ಮತಿ ನೀಡಿದೆ. ಇದು ರಾಜ್ಯದ ಮೊದಲ …

Read More »

ವಿಧಾನಪರಿಷತ್‌ ಕಲಾಪ: ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ

ಬೆಂಗಳೂರು: ವಿಧಾನಪರಿಷತ್‌ ಕಲಾಪದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಸದಸ್ಯರು ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದರು. ‘ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ’ ಎಂಬುದಾಗಿ ಈಶ್ವರಪ್ಪ ನೀಡಿದ ಹೇಳಿಕೆ ವಿರುದ್ಧವಾಗಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು.

Read More »

ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ಜಯರಾಜ್ ಸಿಂಗ್ ಪರ್ಮಾರ್

ಗಾಂಧೀನಗರ: ಗುಜರಾತ್ ಕಾಂಗ್ರೆಸ್ ಮಾಜಿ ಮುಖ್ಯ ವಕ್ತಾರ ಜಯರಾಜ್ ಸಿಂಗ್ ಪರ್ಮಾರ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ. ಈ ಕುರಿತಂತೆ ಫೇಸ್‍ಬುಕ್‍ನಲ್ಲಿ ಪರ್ಮಾರ್ ಅವರು ಕಾಂಗ್ರೆಸ್‍ನ ಹಿರಿಯ ನಾಯಕರ ನಿರ್ಲಕ್ಷಕ್ಕೆ ಬೇಸತ್ತಿದ್ದು, ಪಕ್ಷದಲ್ಲಿ ಕೆಲವರಿಗೆ ಮಾತ್ರ ಜವಾಬ್ದಾರಿಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಮೂರು ವರ್ಷಗಳಿಂದಲೂ ಪಕ್ಷದಲ್ಲಿದ್ದರೂ ಯಾವುದೇ ಸ್ಥಾನವನ್ನು ನೀಡಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಯರಾಜ್ ಸಿಂಗ್ ಪರ್ಮಾರ್ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು …

Read More »

ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಆರು ಯುವಕರು,ಬೆಳಗಾವಿಯಲ್ಲಿ ಹಿಜಬ್ ಹೈಡ್ರಾಮಾ

ಬೆಳಗಾವಿ: ನಗರದ ವಿಜಯ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಬ್‍ಗೆ ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಪಟ್ಟುಹಿಡಿದು ಪ್ರತಿಭಟನೆಗೆ ಮುಂದಾದಾಗ ಅಲ್ಲಾಹು ಅಕ್ಬರ್ ಅಂತಾ ಘೋಷಣೆ ಕೂಗಿದ ಆರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ವಿಜಯ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಲ್ಲಿದ್ದು ಆ ಪೈಕಿ 50ರಷ್ಟು ವಿದ್ಯಾರ್ಥಿನಿಯರು ಮುಸ್ಲಿಂ ಸಮಾಜದವರಿದ್ದಾರೆ. ಅದರಲ್ಲಿ ಇಂದು 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಬ್‍ಗೆ …

Read More »