Breaking News

ರಾಜಕೀಯ

ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ

ಭೋಪಾಲ್ (ಮಧ್ಯಪ್ರದೇಶ): ನಾಗರಿಕ ಸಮಾಜ ತಲೆ ತಗ್ಗಿಸುವ ಹಾಗೂ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶ ಸಹ ವ್ಯಕ್ತವಾಗಿದೆ. ಆರೋಪಿಯು ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದಾನೆ ಎಂದು ಕಾಂಗ್ರೆಸ್ ಹಾಗೂ ಆಮ್​ ಆದ್ಮಿ ಪಕ್ಷಗಳು ಆರೋಪ ಮಾಡಿವೆ.     …

Read More »

ಕುಮಾರಸ್ವಾಮಿ ಹೇಳಿಕೆ ಸ್ವಾಗತಿಸಿದ್ದರ ಹಿಂದೆ ಲೋಕಸಭೆ ಹೊಂದಾಣಿಕೆಯಿಲ್ಲ

ಬೆಂಗಳೂರು: ಗ್ಯಾರಂಟಿ ವಿಚಾರದಲ್ಲಿ ಜೆಡಿಎಸ್ ನಿಲುವನ್ನು ಸ್ವಾಗತಿಸಿದ ಮಾತ್ರಕ್ಕೆ ಅದನ್ನು ಮುಂದಿನ ಲೋಕಸಭಾ ಚುನಾವಣಾ ದೃಷ್ಟಿಕೋನದಿಂದ ನೋಡಬಾರದು, ಇದು ಮೈತ್ರಿಯ ಸುಳಿವಲ್ಲ, ನಾವು ಜನರ ಪರ ನಿಂತಿದ್ದೇವೆ, ಜೆಡಿಎಸ್ ಕೂಡ ಜನರ ಪರ ನಿಂತಿದೆ ಅಷ್ಟೆ ಇದು ಹೊಂದಾಣಿಕೆಯ ನಿಲುವಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಸ್ಪಷ್ಟಪಡಿಸಿದ್ದಾರೆ.   ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿಲ್ಲ …

Read More »

212 ವಿಧಾನಸಭೆ ಕ್ಷೇತ್ರಗಳು, 61 ಲೋಕಸಭೆ ಕ್ಷೇತ್ರಗಳ ಖರ್ಗೆ ಕಣ್ಣು.. ನಾಳೆ ಹೊಸ ಅಭಿಯಾನಕ್ಕೆ ಚಾಲನೆ

ನವದೆಹಲಿ: ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಸಾಂಪ್ರದಾಯಿಕ ದಲಿತ ಮತಬ್ಯಾಂಕ್‌ ತನ್ನತ್ತ ಸೆಳೆಯಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ 212 ಆಯ್ದ ವಿಧಾನಸಭೆ ಕ್ಷೇತ್ರಗಳು ಮತ್ತು 61 ಸಂಸದೀಯ ಕ್ಷೇತ್ರಗಳಲ್ಲಿ ಈ ಸಮುದಾಯವನ್ನು ಸಜ್ಜುಗೊಳಿಸಲು ಜುಲೈ 5ರಂದು ಅಭಿಯಾನ ಆರಂಭಿಸಲಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ತನ್ನ ಪ್ರಜಾಪ್ರಭುತ್ವದ ರುಜುವಾತುಗಳು ಹಾಗೂ ಅಂತರ್ಗತ ರಾಜಕೀಯದ ಸೂಚಕವಾಗಿ ದಲಿತ ನಾಯಕ ಖರ್ಗೆ ಅವರನ್ನು ಪಕ್ಷದ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡಿತ್ತು. ಅಧಿಕಾರ ವಹಿಸಿಕೊಂಡ …

Read More »

ರಾಜ್ಯ ಸರ್ಕಾರಕ್ಕೆ ಪಂಚ ಗ್ಯಾರಂಟಿಗಳ ಹೊರೆ: 2023-24ನೇ ಸಾಲಿನ ಸಾಲದ ಸ್ಥಿತಿಗತಿ ಹೀಗಿದೆ..

ಬೆಂಗಳೂರು: ಪಂಚ ಗ್ಯಾರಂಟಿಗಳ ಬೃಹತ್ ಹೊರೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ಬಜೆಟ್​ಗೆ (2023-24) ಸಿದ್ಧತೆ ನಡೆಸುತ್ತಿದ್ದಾರೆ. ತಮ್ಮ ನೇತೃತ್ವದ ನೂತನ ಸರ್ಕಾರದ ಹೊಸ ಬಜೆಟ್ ಮಂಡನೆಯ ತಯಾರಿಯಲ್ಲಿ ಅವರಿದ್ದಾರೆ.‌ ಇದು ಮುಂದಿನ 9 ತಿಂಗಳ ಅವಧಿಗೆ ಪೂರ್ಣ ಪ್ರಮಾಣದ ಬಜೆಟ್ ಆಗಿರಲಿದೆ.‌ ನಿರ್ಗಮಿತ ಬಿಜೆಪಿ ಸರ್ಕಾರ 2023-24ನೇ ಸಾಲಿನ‌ ಬಜೆಟ್ ಮಂಡಿಸಿತ್ತು. ಬೊಮ್ಮಾಯಿ ಮಂಡಿಸಿದ್ದ ಬಜೆಟ್​ನಲ್ಲಿ 2023- 24ರಲ್ಲಿ ಅಂದಾಜು 77,750 ಕೋಟಿ ರೂ ಸಾಲ ಮಾಡುವುದಾಗಿ ತಿಳಿಸಿದ್ದರು.‌ ಇದೀಗ ಹೊಸ …

Read More »

ಭಾರತ ಕ್ರಿಕೆಟ್​ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್​ ನೇಮಕ

ನವದೆಹಲಿ: ಭಾರತ ಹಿರಿಯ ಪುರುಷರ ಕ್ರಿಕೆಟ್​ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಮಾಜಿ ವೇಗಿ ಅಜಿತ್​ ಅಗರ್ಕರ್​ ನೇಮಕವಾಗಿದ್ದಾರೆ. ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಶಿಫಾರಸಿನ ಮೇರೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ ಈ ವಿಚಾರವನ್ನು ಪ್ರಕಟಿಸಿದ್ದಾರೆ. ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಾಂಜಪೆ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ) ಪುರುಷರ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿದಾರರನ್ನು ಸಂದರ್ಶಿಸಿತು. ಮೂವರು ಸದಸ್ಯರ ಸಿಎಸಿ …

Read More »

ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಶಾಲಾ, ಕಾಲೇಜುಗಳಿಗೆ ಇಂದು ರಜೆ

ಕಾರವಾರ: ರಾಜ್ಯದಲ್ಲಿ ಕೆಲವೆಡೆ ಮುಂಗಾರು ಕ್ಷೀಣವಾಗಿದ್ದರೆ, ಕರಾವಳಿ ಜಿಲ್ಲೆಗಳು ಹಾಗೂ ಘಟ್ಟದ ಮೇಲ್ಭಾಗದ ಕೆಲವು ತಾಲೂಕುಗಳಲ್ಲಿ ವರ್ಷಧಾರೆ ಬಿರುಸು ಪಡೆದಿದೆ. ಮಂಗಳವಾರ ಸುರಿದ ಭಾರಿ ಮಳೆಗೆ ಭಟ್ಕಳ, ಕಾರವಾರದ ಬಳಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ತಾಲೂಕುಗಳ ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿದೆ. ಕಾರವಾರದಲ್ಲಿ ಮಂಗಳವಾರ ಸಂಜೆ ಬಳಿಕ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಜಡಿ ಮಳೆಗೆ ನಗರದ ಗ್ರೀನ್ ಸ್ಟ್ರೀಟ್ …

Read More »

”ಬಿಜೆಪಿ ವಿರೋಧ ಪಕ್ಷವಾಗಿ ಬಾಳೆ ಹಣ್ಣು ತಿನ್ನುತ್ತಾ ಕೂತಿಲ್ಲ” ಎಂದವಿಜಯೇಂದ್ರ

ಬೆಂಗಳೂರು: ”ಬಿಜೆಪಿ ವಿರೋಧ ಪಕ್ಷವಾಗಿ ಬಾಳೆ ಹಣ್ಣು ತಿನ್ನುತ್ತಾ ಕೂತಿಲ್ಲ” ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ”ಕುಂತಲ್ಲಿ, ನಿಂತಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ತನಿಖೆ ಮಾಡುವುದಾಗಿ ಗೊಡ್ಡು ಬೆದರಿಕೆ ಹಾಕ್ತಿದ್ದಾರೆ. ಅವರ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಭರವಸೆಗಳನ್ನು ನೀವು ಈಡೇರಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಬಿಜೆಪಿ ಅಧಿಕಾರಾವಧಿಯಲ್ಲಿನ ಹಗರಣಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳಿ ಗ್ಯಾರಂಟಿ …

Read More »

ತಂತ್ರಜ್ಞಾನದ ಮೊರೆಹೋದ ವ್ಯಕ್ತಿ, ಸಿಸಿಟಿವಿ ಕಣ್ಗಾವಲಿನಲ್ಲಿ ವ್ಯಾಪಾರ! TOMATO

ಹಾವೇರಿ: ಒಂದು ಸಮಯದಲ್ಲಿ ಟೊಮೆಟೋಗೆ ಬೆಲೆ ಇಲ್ಲದೆ, ರೈತರು ಕಂಗಾಲಾಗಿದ್ದರು. ಎಷ್ಟೋ ಬಾರಿ ದರ ಪಾತಾಳಕ್ಕೆ ಕುಸಿದ ಪರಿಣಾಮ ಬೇಸತ್ತು ಅನ್ನದಾತರು ಮತ್ತು ವ್ಯಾಪಾರಿಗಳು ರಸ್ತೆಗೆ ಸುರಿಯುತ್ತಿದ್ದರು. ಇನ್ನೂ ಕೆಲವೆಡೆ ಟೊಮೆಟೊವನ್ನು ರೈತರು ತಿಪ್ಪೆಗೆ ಸುರಿದಿದ್ದರು. ಮತ್ತೆ ಕೆಲವರು ಅದನ್ನು ಕಿತ್ತು ಮಾರುಕಟ್ಟೆಗೆ ಸಾಗಿಸುವುದು ಮಾರಾಟದ ದರ ಕೈಸೇರದೆ ನಷ್ಟವೇ ಹೆಚ್ಚಾಗಿರುತ್ತೆ ಎಂದು ಹೊಲದಲ್ಲೇ ಬಿಟ್ಟರೆ ಗೊಬ್ಬರವಾಗುತ್ತೆ ಅಂತಾ ತಮ್ಮ ಕೈಯಾರೆ ನೆಲಸಮ ಮಾಡಿದ್ದು ಉಂಟು.. ಹೌದು, ನಾವ್​ ಇಷ್ಟೆಲ್ಲ ಹೇಳಿದ್ದು …

Read More »

ಗೋಹತ್ಯೆ, ಮತಾಂತರ ಕಾಯ್ದೆ ರದ್ದು ಮಾಡದಂತೆಮಠಾಧೀಶರ ಆಗ್ರಹ

ಕಲಬುರಗಿ : ಗೋ ಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತಂದಿದ್ದು, ರಾಜ್ಯದಲ್ಲಿರುವ ಕಾಂಗ್ರೆಸ್ ಆಡಳಿತದ ಸರ್ಕಾರ ಆ ಕಾನೂನು ತೆಗೆದುಹಾಕುತ್ತಿದೆ. ಹೀಗಾಗಿ ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕಡಗಂಚಿಯ ಶಾಂತಲಿಂಗೇಶ್ವರ ಸಂಸ್ಥಾನ ಮಠದ ವೀರಭದ್ರ ಶಿವಾಚಾರ್ಯರು ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋ ಮಾತೆ ದೇವರು. ದೇವರ ಹತ್ಯೆ ಮಾಡಿದವರು ಏನು ಆಗುತ್ತಾರೆ ಎಂದು …

Read More »

ಪ್ರವಾಸೋದ್ಯಮ ಪ್ರಚಾರದ ಶ್ರೇಷ್ಠತೆಗಾಗಿ ರಾಮೋಜಿ ಫಿಲ್ಮ್ ಸಿಟಿಗೆ ಎಫ್​ಟಿಸಿಸಿಐ ಪ್ರಶಸ್ತಿ ಗರಿ

ಹೈದರಾಬಾದ್: ತೆಲಂಗಾಣದ ಅಪೆಕ್ಸ್ ಟ್ರೇಡ್ ಮತ್ತು ಇಂಡಸ್ಟ್ರಿ ಮಂಡಳಿ, ತೆಲಂಗಾಣ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಫೆಡರೇಶನ್ (ಎಫ್‌ಟಿಸಿಸಿಐ) ವತಿಯಿಂದ ನೀಡಲಾಗುವ ಎಕ್ಸಲೆನ್ಸ್ ಪ್ರಶಸ್ತಿ ಗರಿ ರಾಮೋಜಿ ಫಿಲ್ಮ್ ಸಿಟಿಗೆ ದೊರೆತಿದೆ.   ರಾಮೋಜಿ ಫಿಲ್ಮ್ ಸಿಟಿಗೆ ತೆಲಂಗಾಣ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಫೆಡರೇಶನ್​ನಿಂದ (ಎಫ್​ಟಿಸಿಸಿಐ) ಪ್ರಶಸ್ತಿ ಗರಿ ಲಭಿಸಿದೆಹೈದರಾಬಾದ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ತೆಲಂಗಾಣ ಸರ್ಕಾರದ ಕೈಗಾರಿಕೆಗಳು ಮತ್ತು ಐಟಿ ಸಚಿವರಾದ ಶ್ರೀ ಕೆ.ಟಿ. ರಾಮರಾವ್ …

Read More »