ಬೆಳಗಾವಿ: ಬೆಳಗಾವಿಯ ಉಪವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಅವರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಪ್ರಕರಣ ಮಗ್ಗಲು ಬದಲಿಸಿದೆ. ಇದು ಸಹಜ ಸಾವಲ್ಲ ಎಂದು ಅಶೋಕ್ ಅವರ ಸಹೋದರಿಯರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ. ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬ ವಾಸವಿತ್ತು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಖಾಸಗಿ ಆಸ್ಪತ್ರೆಗೆ ಅಶೋಕ್ …
Read More »ಸಕ್ಕರೆನಾಡಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ.. ಭಯಾನಕ ಕೊಲೆ ಕಂಡು ಬೆಚ್ಚಿಬಿದ್ದ ಮಂಡ್ಯ ಜನರು
ಮಂಡ್ಯ: ಜಿಲ್ಲೆಯಲ್ಲಿ ಜನರು ಬೆಚ್ಚಿ ಬೀಳುವಂತಹ ಭಯಾನಕ ಕೊಲೆ ಪ್ರಕರಣ ಇಂದು ನಡೆದಿದೆ. ರೌಡಿಶೀಟರ್ ಒಬ್ಬನನ್ನು ಸ್ನೇಹಿತರೇ ಕತ್ತು ಕತ್ತರಿಸಿ ಕೊಲೆ ಮಾಡಿರುವಂತಹ ಭೀಕರ ಘಟನೆ ಶ್ರೀರಂಗಪಟ್ಟಣದ ಬಳಿ ನಡೆದಿದೆ. ಸ್ನೇಹಿತರು ಪಾರ್ಟಿ ಮಾಡುವ ವೇಳೆಯಲ್ಲಿ ಗಲಾಟೆ: ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆಯ ಕೆಆರ್ಎಸ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದಂತಹ ಸುಧೀರ್ (35) ಎಂಬಾತನನ್ನು ಭಯಾನಕವಾಗಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಸುಧೀರ್ ಹಾಗೂ ಸ್ನೇಹಿತರೊಂದಿಗೆ ಇಂದು ಎಣ್ಣೆ ಪಾರ್ಟಿ …
Read More »ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವು, 4 ಮಂದಿಗೆ ಗಾಯ.
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಬಸ್ ಚಾಲಕ 50 ವರ್ಷದ ಸದಾನಂದ ಬೆಳಗಾವಿ ಮತ್ತು ಪ್ರಯಾಣಿಕ ರಾಹುಲ್ (22) ಮೃತರಾಗಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಮೀರಜ್ಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ …
Read More »ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಾರಾಮಾರಿ, 7 ಜನರ ಬಂಧನ
ಬೆಂಗಳೂರು : ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವತಿ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಈಗ ಈ ಪ್ರಕರಣ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಜೂನಿಯರ್ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರ ಬೀಸಿದ್ದ 7 ಜನ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಾಹಸ್ ಗೌಡ, ಜೀವನ್, ಅಭಿಷೇಕ್, ರವಿಕುಮಾರ್, ಚಂದನ್, ಗೌತಮ್ ಹಾಗೂ ಸೂರ್ಯ ಎಂದು ಗುರುತಿಸಲಾಗಿದೆ. ಇದೇ ತಿಂಗಳ 5ರಂದು ನಾಗರಭಾವಿಯ ಖಾಸಗಿ …
Read More »65 ಲೀಟರ್ ಸಾರಾಯಿ ಜಪ್ತಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್
ಖಾನಾಪೂರ ತಾಲೂಕಿನ ಅಶೋಕನಗರದ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಮತ್ತು ಪಿಎಸ್ಐ ಗಿರೀಶ್.ಎಂ ಅವರು ದಾಳಿ ನಡೆಸಿ ಸುಮಾರು 65 ಲೀಟರ್ ಸಾರಾಯಿ ಜಪ್ತಿ ಪಡೆಸಿಕೊಂಡಿದ್ದು,ಕಾಡಪ್ಪಾ ಬಸಪ್ಪಾ ಉಪ್ಪಾಶಿ ಅಶೋಕನಗರದ ಇತನು ಈ ಅಕ್ರಮ ಮಾಡುತ್ತಿರುವುದು ಕಂಡು ಬಂದಿದೆ.ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ: ಬೊಮ್ಮಾಯಿ
ಬೆಂಗಳೂರು: ಇವರು ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ …
Read More »ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಮಂಗಳೂರು: ಮನೆಗೆ ನುಗ್ಗಿ ಒಂಟಿ ಮಹಿಳೆಯನ್ನು ಅತ್ಯಾಚಾರ ಮಾಡಿ, ಹತ್ಯೆ ನಡೆಸಿರುವ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಮಂಜೇಶ್ವರ ನಿವಾಸಿ ಮೊಹಮ್ಮದ್ ಅಶ್ರಫ್ (33) ಶಿಕ್ಷೆಗೊಳಗಾದ ಅಪರಾಧಿ. ಮೊಹಮ್ಮದ್ ಅಶ್ರಫ್ ಕೂಲಿ ಕೆಲಸ ಮಾಡಿಕೊಂಡಿದ್ದು, ವಿವಾಹವಾಗಿ ಇಬ್ಬರು ಮಕ್ಕಳಿದ್ದಾರೆ. ಈತ ಬಾಳೆಪುಣಿ ಗ್ರಾಮದ ಬೆಳ್ಕೆರಿಯಲ್ಲಿರುವ ಸಂತ್ರಸ್ತ ಮಹಿಳೆಯ ಸಹೋದರನ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದ. …
Read More »ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಮತ್ತೆ ಅಪಘಾತ: ಬಸ್ ಕಂಡಕ್ಟರ್ ಸಾವು
ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಇಂದು ಘಟನೆ ನಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಫ್ಲೈವುಡ್ ತುಂಬಿದ್ದ ಬೊಲೆರೋ ವಾಹನ ಓವರ್ ಟೇಕ್ ಮಾಡಲು ಹೋಗಿ …
Read More »ಅಕ್ಕಿ ಬದಲು ಹಣ ಪಾವತಿಸಲು ತೀರ್ಮಾನಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಸಮರ
ಬೆಂಗಳೂರು : ರಾಜ್ಯ ಸರ್ಕಾರವು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ತಿಂಗಳಿಗೆ 170 ರೂ. ನೀಡಲು ತೀರ್ಮಾನಿಸಿದೆ. ಕಾಂಗ್ರೆಸ್ ಸರ್ಕಾರದ ನಿರ್ಣಯವನ್ನು ಬಿಜೆಪಿ ಖಂಡಿಸಿದೆ. ‘ಹೋರಾಟ ಮಾಡುತ್ತೇವೆ’: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ಹೊರಹಾಕಿದ್ದು, ಸಿದ್ದರಾಮಯ್ಯ ಸರ್ಕಾರ ವಚನ ಭ್ರಷ್ಟ ಸರ್ಕಾರ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣೆ ಪೂರ್ವದಲ್ಲಿ ಹತ್ತು ಕೆಜಿ ಅಕ್ಕಿ …
Read More »ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ.
ನವದೆಹಲಿ: ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಕ್ವಿಂಟಲ್ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (Fair and Remunerative Price – FRP)ಯನ್ನು 10 ರೂಪಾಯಿ ಹೆಚ್ಚಳ ಮಾಡಿದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು 315 ರೂ.ಗೆ ನಿಗದಿ ಮಾಡಿದೆ. ಇದಕ್ಕೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ …
Read More »
Laxmi News 24×7