Breaking News

ರಾಜಕೀಯ

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳ.

ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ, ಆದಾಯ ಮೀರಿ ಆಸ್ತಿಗಳಿಕೆ ಆರೋಪಗಳಡಿ ದಾಳಿ ನಡೆಸಲಾಗಿದೆ. ಇನ್ನು ಅಕ್ರಮ ಆಸ್ತಿಗಳಿಕೆ ಆರೋಪದಡಿ ಕೆ.ಆರ್.​ಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಹಶೀಲ್ದಾರ್ ಅಜೀತ್ ರಾಜ್ ರೈ ಎಂಬುವವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿ ಬಂದಿದ್ದು, ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ಏಕಾಏಕಿ ಅವರ ಮನೆ, ಕಚೇರಿ …

Read More »

ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆ: ಅಕ್ಕಿ ಬದಲು ಹಣ ಪಾವತಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಅನ್ನಭಾಗ್ಯದಡಿ ಅಕ್ಕಿ ಸಿಗದ ಕಾರಣ ಅಕ್ಕಿ ಬದಲಿಗೆ ಬಿಪಿಎಲ್ ಕಾರ್ಡುದಾರಿಗೆ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಫ್​ಸಿಐ ದರ ಪ್ರತಿ ಕೆಜಿಗೆ 34 ರೂಪಾಯಿಯಂತೆ ಬಿಪಿಎಲ್ ಕಾರ್ಡ್ ಕುಟುಂಬದವರಿಗೆ ಹಣ ಪಾವತಿ ಮಾಡಲು ತೀರ್ಮಾನಿಸಲಾಗಿದೆ. ಮನೆಯ ಯಜಮಾನನ ಖಾತೆಗೆ ಕುಟುಂಬ ಸದಸ್ಯರ ಹಣವನ್ನೂ ಪಾವತಿ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. …

Read More »

ಮೈಸೂರು- ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತಗಳು ಸಂಭವಿಸಲು ಚಾಲಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಕಾರಣ ಎಂದ ಪ್ರತಾಪ್ ಸಿಂಹ

ಮೈಸೂರು- ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತಗಳು ಸಂಭವಿಸಲು ಚಾಲಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರು: ದಶಪಥ ಮೈಸೂರು- ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್‌ ವೇ ಅವೈಜ್ಞಾನಿಕವಾಗಿದ್ದು, ಇದು ಸಾವಿನ ಹೆದ್ದಾರಿಯಾಗಿದೆ ಎಂಬ ಆರೋಪಕ್ಕೆ ಸಂಸದ ಪ್ರತಾಪ್ ಸಿಂಹ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಇದು ರೇಸಿಂಗ್ ಟ್ರ್ಯಾಕ್ ಅಲ್ಲ, ಬೆಂಗಳೂರು- ಮೈಸೂರು ನಡುವೆ ಕಡಿಮೆ ಅವಧಿಯಲ್ಲಿ ಸಂಪರ್ಕ ಕಲ್ಪಿಸುವ ಎಕ್ಸ್ಪ್ರೆಸ್ ಹೈವೇ. ಇದು …

Read More »

ನಂದಿನಿ ಹಾಲು ಮಾರಾಟಕ್ಕೆ ಕೇರಳದಲ್ಲಿ ವಿರೋಧ; ಮಳಿಗೆ ವಿಸ್ತರಿಸದಿರಲು ಕೆಎಂಎಫ್ ನಿರ್ಧಾರ

ಬೆಂಗಳೂರು : ನೆರೆಯ ಕೇರಳದಲ್ಲಿ ನಂದಿನಿ ಮಳಿಗೆಗಳನ್ನು ವಿಸ್ತರಿಸದಿರಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಿರ್ಧರಿಸಿದೆ ಎಂದು ಮೂಲಗಳು ಬುಧವಾರ ಖಚಿತಪಡಿಸಿವೆ. ಕೇರಳದ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಕೆಎಂಎಫ್ ಈ ನಿರ್ಧಾರ ತಳೆದಿದೆ. ಕೇರಳದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಅಭಿವೃದ್ಧಿ ಸಚಿವ ಜೆ. ಚಿಂಚು ರಾಣಿ ಮತ್ತು ಕೆಎಂಎಫ್ ಸಿಇಒ ನಡುವೆ ನಡೆದ ಮಾತುಕತೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನಂದಿನಿ ಹಾಲು ಮತ್ತು ಹಾಲು …

Read More »

ಮಂತ್ರಾಲಯ ದಲ್ಲಿ 7 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 27 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಾಣಿಕೆ ಹುಂಡಿ (Hundi) ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಒಟ್ಟು 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ 2,84,12,635 ರೂ. ಕರೆನ್ಸಿ ನೋಟುಗಳು ಹಾಗೂ 5,83,660 ರೂ ನಾಣ್ಯಗಳ ಸಂಗ್ರಹವಾಗಿದೆ. 57 ಗ್ರಾಂ ಚಿನ್ನ ಹಾಗೂ 910 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಹುಂಡಿ ಎಣಿಕೆ ಕಾರ್ಯ …

Read More »

ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ

ಕೋಲಾರ: ಅಂತರ್ಜಾತಿ (Inter Caste) ಪ್ರೀತಿ ವಿಚಾರದಲ್ಲಿ ತಂದೆಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದು, ಘಟನೆಯಿಂದ ಮನನೊಂದ ಪ್ರಿಯಕರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಮತ್ತು ಪರಿಶಿಷ್ಟ ಜಾತಿ ಸಮುದಾಯದ ಗಂಗಾಧರ್ (24) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರೂ ಸಹ ಕಳೆದ ಒಂದು ವರ್ಷದಿಂದ ಪರಸ್ಪರ …

Read More »

ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಚೋದನಾಕಾರಿ ಭಾಷಣ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ

ಬೆಂಗಳೂರು: ಕಳೆದ ಆರು ವರ್ಷದ ಹಿಂದೆ ಗೋವಿನ ಹತ್ಯೆ ಮಾಡುವವರ ಕೈ ಕಡಿಯುವಂತೆ ಕರೆ ನೀಡಿದ್ದ ಆರೋಪದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.   ಈ ಸಂಬಂಧ ವಿಜಯಪುರ ಜಿಲ್ಲೆ ಬಬಲೇಶ್ವರ ಪೊಲೀಸ್ ಠಾಣೆಯ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಪ್ರಮೋದ್ ಮುತಾಲಿಕ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ …

Read More »

ದಮ್ಮು, ತಾಕತ್ತು ಧೈರ್ಯದ ಬಗ್ಗೆ ಮಾತಾಡ್ತರೆ. ಅಷ್ಟೊಂದು ಮಾತಾಡೋರು ಯಾಕ್ರಿ ಸೋತ್ರಿ :ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ದಮ್ಮು‌ ತಾಕತ್ ಬಗ್ಗೆ ಮಾತನಾಡುವ ಬಿಜೆಪಿ ನಾಯಕರಿಗೆ ತಡವಾಗಿ ಆದರೂ ಬುದ್ಧಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ನಗರದ ತಮ್ಮ ಗೃಹ ಕಚೇರಿಯಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷ ತಮ್ಮೇಗೌಡರನ್ನ ಪಕ್ಷಕ್ಕೆ ಸೇರ್ಪಡೆ ಹಾಗು ಕಾರ್ಯಕರ್ತರ ಸಭೆ ಹಮ್ಮಿಕೊಂಡಿದ್ದರು. ಇದೇ ವೇಳೆ ಮಾತನಾಡಿದ ವೀರಪ್ಪ ಮೊಯ್ಲಿ, ಕಾಂಗ್ರೆಸ್​ ಮುಖಂಡರಿಂದ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ ಎನ್ನುವುದು ಈಗಲಾದರೂ ಬಿಜೆಪಿಗೆ ಅರಿವಾಗಿದೆಯಾ?. ದಮ್ಮು ತಾಕತ್ತು ದೈರ್ಯದ ಬಗ್ಗೆ …

Read More »

ದಾವಣೆಗೆರೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ದಾವಣಗೆರೆ : ಕಾಲೇಜು ಕಾಂಪೌಂಡ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಅನುಮಾನಾಸ್ಪದ ಸಾವು ಎಂದು ಹರಿಹರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ಜೂನ್​​ 18ರ ಭಾನುವಾರ ರಾತ್ರಿ ಜಿಲ್ಲೆಯ ಹರಿಹರ ತಾಲೂಕಿನ ಕುರುಬರಹಳ್ಳಿ ಬಳಿಯ ಮಾನ್ಯತಾ ಪಬ್ಲಿಕ್​ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ಕಾಂಪೌಂಡ್​ ಹತ್ತುವಾಗ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣ …

Read More »

ಹಿಂದಿನ ಸರ್ಕಾರದ ಎಲ್ಲಾ ಅವ್ಯವಹಾರ ತನಿಖೆ ಮಾಡಿಸುತ್ತೇವೆ.: ಸಿದ್ದರಾಮಯ್ಯ

ಹಾಸನ: ”ಚುನಾವಣೆಗೂ ಮುನ್ನ ನಾವು ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ 60 ಸಾವಿರ ಕೋಟಿ ಆರ್ಥಿಕ ಹೊರೆಯ ಭಾರವಾದ್ರೂ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯ ಸರ್ಕಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸಕಾಲದಲ್ಲಿ ಅನುಷ್ಠಾನ ಆಗದೇ ಇದ್ದರೆ ಸದನದ ಒಳಗೆ ಹಾಗೂ …

Read More »