ಹಾಸನ: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಒತ್ತಾಯ ಮಾಡುವ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮಸೇನೆಯ ರಾಜ್ಯಕಾರಣಿ ಸಭೆಯ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಪಠ್ಯ ಪುಸ್ತಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಕೆಲ ವಿಷಯಗಳನ್ನು ವಾಪಸ್ ಪಡೆಯುತ್ತೇವೆ ಅಂದಿದ್ದಾರೆ. ಭಗತ್ ಸಿಂಗ್, ಸಾವರ್ಕರ್ ಸೇರಿದಂತೆ ಮೂರು ಪಾಠ ವಾಪಾಸ್ ತೆಗೆದುಕೊಳ್ಳುತ್ತೇವೆ ಅಂದ್ದಿದ್ದಾರೆ. ಸಾವರ್ಕರ್, ಭಗತ್ …
Read More »ಗಗನಕ್ಕೇರಿದ ಕೋಳಿ ಮಾಂಸ ಬೆಲೆ, ಕೊಳ್ಳಲು ಹಿಂದೇಟು ಹಾಕ್ತಿದ್ದಾರೆ ಗ್ರಾಹಕರು, ಕಾರಣ..?
ದಾವಣಗೆರೆ: ದಾವಣಗೆರೆಯಲ್ಲಿ ಮಾಂಸ ಪ್ರಿಯರೇ ಹೆಚ್ಚು, ಅದರಲ್ಲೂ ಕೋಳಿ ಮಾಂಸವನ್ನು ಸೇವಿಸುವವರ ಸಂಖ್ಯೆ ಗಣನೀಯಾವಾಗಿದೆ. ಆದರೆ ಕೋಳಿ ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದಾವಣಗೆರೆಯ 180ಕ್ಕೂ ಹೆಚ್ಚು ಚಿಕನ್ ಅಂಗಡಿಗಳಲ್ಲಿ ಬೆಲೆ ಏರಿಕೆ ಮಾಡಲಾಗಿದ್ದು, ಗ್ರಾಹಕರು ಕೋಳಿ ಮಾಂಸ ಕೊಳ್ಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಬಿಸಿಲಿನ ತಾಪ ಹೆಚ್ಚಿದ್ದರಿಂದ ಕೋಳಿ ಸಾಕಣೆಗೆ ರೈತರಿಗೆ ಸವಾಲು ಎದುರಾಗಿದ್ದರಿಂದ ಕೋಳಿ ಸಾಕಣೆ ಕೇಂದ್ರಗಳಲ್ಲಿ ಕೋಳಿಗಳ ಸಂಖ್ಯೆ ಇಳಿಮುಖವಾಗಿದೆ. ಇದರಿಂದ …
Read More »ಬರಡು ಭೂಮಿಯಲ್ಲಿ ಹಸಿರುಮಯ ಸುಂದರ ಉದ್ಯಾನವನ
ಚಿಕ್ಕೋಡಿ: ಹಸಿರೇ ದೇಶದ ಉಸಿರು ಅಂತೀವಿ. ಆದರೆ, ಈ ಮಾತಿನಂತೆ ಮುನ್ನಡೆಯುವವರು ಬೆರಳೆಣಿಕೆಯಷ್ಟು ಜನ ಮಾತ್ರ. ಇಲ್ಲೊಬ್ಬ ಅರಣ್ಯ ಇಲಾಖೆ ಅಧಿಕಾರಿ ಪರಿಸರ ಪ್ರೀತಿ ಮೆರೆದಿದ್ದಾರೆ. ಬಂಜರು ಭೂಮಿಯನ್ನು ಹಸಿರುಮಯವಾಗಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಯ ಪರಿಶ್ರಮದ ಫಲವಾಗಿ ಬರಡು ಭೂಮಿಯಲ್ಲಿ ಸಾವಿರಾರು ಮರಗಳು ಬೆಳೆದು ನಿಂತಿವೆ. ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಪಾಳು ಬಿದ್ದಿರುವ ಜಮೀನಿನ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ್ ಗಾಣಿಗೇರ ವಿಶೇಷ ಕಾಳಜಿ ವಹಿಸಿದ್ದರು. ಹೀಗಾಗಿ …
Read More »ಅಪೌಷ್ಟಿಕತೆ ಹೋಗಲಾಡಿಸುವ ಪ್ರಯತ್ನದಲ್ಲಿ ಯೋಗಿ ಸರ್ಕಾರ: ಪೌಷ್ಟಿಕಾಂಶ ಭರಿತ ‘ಸಾರವರ್ಧಿತ ಅಕ್ಕಿ’ ವಿತರಣೆ
ಲಖನೌ (ಉತ್ತರಪ್ರದೇಶ) : ಕೇಂದ್ರ ಸರ್ಕಾರದ ಅಕ್ಕಿ ಬಲವರ್ಧನೆ ಯೋಜನೆಯಡಿ 15.05 ಕೋಟಿ ಫಲಾನುಭವಿಗಳಿಗೆ ‘ಬಲವರ್ಧಿತ ಅಕ್ಕಿ’ ವಿತರಿಸಲು ಅನುಕೂಲವಾಗುವಂತೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಬ್ಲೆಂಡರ್ಗಳನ್ನು ಅಳವಡಿಸಿರುವ ರಾಜ್ಯದ ಅಕ್ಕಿ ಗಿರಣಿಗಳಿಗೆ ಭತ್ತವನ್ನು ಹಂಚಿಕೆ ಮಾಡಲು ಪ್ರಾರಂಭಿಸಿದೆ. ಪ್ರಮುಖವಾಗಿ, ಯೋಜನೆಯ ಎರಡನೇ ಹಂತದಲ್ಲಿ NFSA ವ್ಯಾಪ್ತಿಗೆ ಒಳಪಡುವ 12 ಕೋಟಿ ಫಲಾನುಭವಿಗಳಿಗೆ 46.10 ಲಕ್ಷ ಮೆಟ್ರಿಕ್ ಟನ್ ವಾರ್ಷಿಕ ಹಂಚಿಕೆಯೊಂದಿಗೆ ರಾಜ್ಯದ 60 ಜಿಲ್ಲೆಗಳಲ್ಲಿ 64,365 ಪಡಿತರ …
Read More »ವಿಮಾನ ಹೈಜಾಕ್ ಕುರಿತು ದೂರವಾಣಿಯಲ್ಲಿ ಮಾತು.. ಏರ್ಪೋರ್ಟ್ನಲ್ಲಿ ಆರೋಪಿ ಬಂಧಿಸಿದ ಪೊಲೀಸರು
ಮುಂಬೈ, ಮಹಾರಾಷ್ಟ್ರ: ವಿಮಾನ ಹೈಜಾಕ್ ಕುರಿತು ದೂರವಾಣಿಯಲ್ಲಿ ಮಾತನಾಡಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) 336 ರ ಅಡಿ ಪ್ರಕರಣ ದಾಖಲಿಸಲಾಗಿದೆ. ಗುರುವಾರ ರಾತ್ರಿ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಅಧಿಕಾರಿಗಳು ವಿವರ ನೀಡಿದ್ದಾರೆ. ಸಿಬ್ಬಂದಿಯ ದೂರಿನ ಆಧಾರದ ಮೇಲೆ ಜೂನ್ 23 ರಂದು (ಶುಕ್ರವಾರ) ವಿಸ್ತಾರಾ ವಿಮಾನದಲ್ಲಿದ್ದ ಪ್ರಯಾಣಿಕನನ್ನು ಬಂಧಿಸಲಾಯಿತು. …
Read More »ಅಕ್ಕಿ ವಿತರಣೆಗೆ ಒಂದೆರಡು ತಿಂಗಳು ತಡವಾದರೆ ಸಮಸ್ಯೆ ಏನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಮೈಸೂರು: ”ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನರಿಗೆ ಅಕ್ಕಿ ವಿತರಣೆ ಮಾಡಲು ಸಿದ್ದರಾಮಯ್ಯನವರು ಈಗಾಗಲೇ ಕೇಂದ್ರದ ಜೊತೆಗೆ ಮಾತನಾಡಿದ್ದಾರೆ. ವಿತರಣೆಯಲ್ಲಿ ಒಂದೆರೆಡು ತಿಂಗಳು ತಡವಾದರೆ ಅಂತಹ ತೊಂದರೆ ಏನೂ ಆಗುವುದಿಲ್ಲ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದರು. ಮೈಸೂರಿನ ವಿಶ್ವವಿದ್ಯಾಲಯದಲ್ಲಿಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿರು. ”ಉಚಿತ ಅಕ್ಕಿ ನೀಡುವುದನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ. ನಮಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲು ಪರ್ಯಾಯ ಮಾರ್ಗಗಳಿವೆ. ಆದರೂ ಮುಖ್ಯಮಂತ್ರಿಗಳು ಕೇಂದ್ರದ ಜೊತೆ …
Read More »ಕಾಂತಾರ 2 ಸಿನಿಮಾಗಾಗಿ ನಟ ರಿಷಬ್ ಶೆಟ್ಟಿ ಕುದುರೆ ಸವಾರಿ ತರಬೇತಿ
ಕಾಂತಾರ 2 ಸಿನಿಮಾಗಾಗಿ ನಟ ರಿಷಬ್ ಶೆಟ್ಟಿ ಕುದುರೆ ಸವಾರಿ ತರಬೇತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಕಳೆದ ಸೆಪ್ಟೆಂಬರ್ನಲ್ಲಿ ಸಾಮಾನ್ಯ ಚಿತ್ರವಾಗಿ ತೆರೆಕಂಡ ‘ಕಾಂತಾರ’ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಸುಮಾರು 15 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಂಪಾದಿಸಿದ್ದು 450 ಕೋಟಿ ರೂ.ಗೂ ಹೆಚ್ಚು. ಚಿತ್ರತಂಡದ ನಿರೀಕ್ಷೆಗೂ ಮೀರಿ ಯಶಸ್ಸು ಸಾಧಿಸಿದೆ. ಇದೀಗ ಸೂಪರ್ ಹಿಟ್ ಕಾಂತಾರದ ಮತ್ತೊಂದು ಭಾಗ ತಯಾರಾಗುತ್ತಿದೆ. ಆದರೆ ಈ ಸಿನಿಮಾ …
Read More »ಲೋಕಸಭೆ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಲು ಪ್ರತಿಪಕ್ಷ ನಾಯಕರ ನಿರ್ಧಾರ, ಮುಂದಿನ ಸಭೆ ಶಿಮ್ಲಾದಲ್ಲಿ
ಪಾಟ್ನಾ (ಬಿಹಾರ) : ಎಲ್ಲ ಪ್ರತಿಪಕ್ಷಗಳ ಮುಖಂಡರು ಒಗ್ಗಟ್ಟಾಗಿದ್ದಾರೆ ಹಾಗೂ ಮುಂದಿನ ಬಾರಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮತ್ತೊಂದು ಬಾರಿ ಸಭೆ ನಡೆಸಿ ನಮ್ಮ ಅಜೆಂಡಾ ರೂಪಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಶುಕ್ರವಾರ ಮಧ್ಯಾಹ್ನ ನಡೆದ ಬಹು ನಿರೀಕ್ಷಿತ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, “ಎಲ್ಲ ನಾಯಕರು ಒಗ್ಗಟ್ಟಾಗಿದ್ದು, ನಾವು ಸಾಮಾನ್ಯ ಕಾರ್ಯಸೂಚಿಯನ್ನು (ಅಜೆಂಡಾ) ಸಿದ್ಧಪಡಿಸುತ್ತಿದ್ದೇವೆ. ಜುಲೈ 12 ರಂದು ನಾವು ಹಿಮಾಚಲ ಪ್ರದೇಶದ …
Read More »ವಿಧಾನಪರಿಷತ್ ಉಪ ಚುನಾವಣೆ: ಶೆಟ್ಟರ್ ಸೇರಿ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ
ಬೆಂಗಳೂರು : ವಿಧಾನ ಪರಿಷತ್ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ಎನ್.ಎಸ್. ಬೋಸರಾಜು ಅವಿರೋಧವಾಗಿ ಆಯ್ಕೆಯಾದವರು. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾಗಿತ್ತು. ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಿರಲಿಲ್ಲ. ಹಾಗಾಗಿ, ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮಾತ್ರ ಇದ್ದರು. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, …
Read More »ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ದಿನಾಂಕವನ್ನು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ದಿನಾಂಕವನ್ನು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಯ ಕುರಿತ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿದ್ದರು. ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ಆಗಿದೆ. …
Read More »
Laxmi News 24×7