ರಾಯಚೂರು : ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಾಮಾತುರಂ ನ ಲಜ್ಜಾ, ನ ಭಯಂ ಎಂಬಂತೆ ಕಾಮುಕ ವ್ಯಕ್ತಿಯೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅಟ್ಟಹಾಸ ಮೆರೆದಿದ್ದಾನೆ. ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಸದ್ಯ ಕಂಬಿ ಹಿಂದೆ ತಳ್ಳಿದ್ದಾರೆ. ಹೌದು, ಸ್ಕೂಟಿ ಕಲಿಸುವ ನೆಪದಲ್ಲಿ ಕರೆದೊಯ್ದು 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಈ ಪ್ರಕರಣ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ …
Read More »ಮೋದಿ ಕೊಡುತ್ತಿರುವ 5 ಕೆಜಿ ಬಿಟ್ಟು, ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ಕೊಡಬೇಕು: ಜೋಶಿ
ಧಾರವಾಡ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಕ್ಕಿ ಆರೋಪ ವಿಚಾರಕ್ಕೆ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ತನ್ನ ಕೈಯಿಂದ ಅಕ್ಕಿ ಕೊಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸುಳ್ಳು ಹೇಳುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳಾಯ್ತು. ಇನ್ನೂ ಒಂದು ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಈಗ ಕೊಡುತ್ತಿರುವ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದು. ಅದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ನ್ಯಾಷನಲ್ …
Read More »ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಮಷಿನ್ ಅಳವಡಿಸಲು ಚಿಂತನೆ: ಸಚಿವ ಶಿವಾನಂದ ಪಾಟೀಲ್
ಬೆಳಗಾವಿ: ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ತೂಕದಲ್ಲಿ ರೈತರಿಗೆ ಮೋಸ ಆರೋಪವಿರುವ ಹಿನ್ನೆಲೆಯಲ್ಲಿ ನಾವೇ ಇಲಾಖೆಯಿಂದ ತೂಕದ ಮಷಿನ್ ಹಾಕುವ ಬಗ್ಗೆ ಚಿಂತನೆ ಇದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರವೇ ಸಕ್ಕರೆ ಕಾರ್ಖಾನೆಗಳ ಸಭೆ ಕರೆಯುತ್ತೇವೆ. ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ. ಪರಿಸ್ಥಿತಿ ಅನಿವಾರ್ಯವಾದರೆ ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಹಾಕಲೇಬೇಕಾಗುತ್ತೆ ಎಂದರು. ಕಾರ್ಖಾನೆಯವರು ಸಾಕಷ್ಟು ಲಾಭ ಮಾಡಿಕೊಳ್ಳುತ್ತಾರೆ. ಆದರೆ …
Read More »ಸರ್ವರ್ ಹ್ಯಾಕ್ ವಿಚಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟೀಕರಣ .
ಚಿಕ್ಕೋಡಿ: ಗ್ಯಾರಂಟಿ ಯೋಜನೆಗಳನ್ನು ಅರ್ಜಿ ಹಾಕಲು ಕೇಂದ್ರ ಸರ್ಕಾರ ಕಂಪ್ಯೂಟರ್ ಸರ್ವರ್ ಹ್ಯಾಕ್ ಮಾಡಿದೆ ಎಂಬ ಹೇಳಿಕೆ ನೀಡಿದ್ದೆನು. ಆದರೆ ಇದೊಂದು ರಾಜಕೀಯ ಹೇಳಿಕೆ. ಬಿಜೆಪಿಯವರು ಇಂಥ ಹೇಳಿಕೆಗಳನ್ನು ಬಹಳ ಸಲ ಹೇಳಿದ್ದುಂಟು. ಇವೆಲ್ಲ ರಾಜಕೀಯ ಎಂದು ಸರ್ವರ್ ಹ್ಯಾಕ್ ವಿಚಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದ ಕೆಲವು ಸರ್ವರ್ ಹ್ಯಾಕ್ ಮಾಡಿದೆ ಎಂಬ …
Read More »ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಿಇಒಗೆ ದಂಡಸಮೇತ 5 ವರ್ಷ ಜೈಲು ಶಿಕ್ಷೆ
ಗದಗ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ (ಬಿಇಒ) ಶಂಕ್ರಪ್ಪ ಹಳ್ಳಿಗುಡಿ ಎಂಬವರಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಇಂದು ಆದೇಶ ನೀಡಿತು. ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಅವರು ಆದೇಶ ಹೊರಡಿಸಿದರು. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 6 ತಿಂಗಳು …
Read More »ಸಿದ್ದರಾಮಯ್ಯ- ಅಮಿತ್ ಶಾ ಭೇಟಿ
ನವದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಅನ್ನಭಾಗ್ಯ ಯೋಜನೆ ಹಾಗೂ ಅದರ ಜಾರಿಗೆ ಅಗತ್ಯವಿರುವ ಹೆಚ್ಚುವರಿ ಅಕ್ಕಿಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿ ನೀಡುವ ಕುರಿತಾದ ಭರವಸೆ ಈಡೇರಿಸುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ಸಿಐಗೆ ಜೂನ್ 9ರಂದು ಪತ್ರ …
Read More »500 ಮದ್ಯದ ಅಂಗಡಿಗಳನ್ನು ಮುಚ್ಚಲು ತೀರ್ಮಾನ!
ಚೆನ್ನೈ : ರಾಜ್ಯದಲ್ಲಿರುವ 500 ಮದ್ಯದ ಅಂಗಡಿಗಳನ್ನು ಮುಚ್ಚಲು ತಮಿಳುನಾಡು ಸರ್ಕಾರ ತೀರ್ಮಾನಿಸಿದೆ. ಜೂನ್ 22 ರಿಂದ ಆರಂಭಗೊಂಡು 500 ಮದ್ಯದ ಮಳಿಗೆಗಳನ್ನು ಮುಚ್ಚಲಾಗುವುದು ಎಂದು ತಮಿಳು ನಾಡು ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಹಕಾರಿ ಸಂಸ್ಥೆಯಾಗಿರುವ ತಮಿಳುನಾಡು ಮಾರ್ಕೆಟಿಂಗ್ ಕಾರ್ಪೊರೇಶನ್ ಲಿಮಿಟೆಡ್ (TASMAC) ಹೇಳಿದೆ. ರಾಜ್ಯದಲ್ಲಿ 500 ಮದ್ಯದ ಮಳಿಗೆಗಳನ್ನು ಗುರುತಿಸಿದ್ದು, ಏಪ್ರಿಲ್ 20, 2023 ರಂದು ಹೊರಡಿಸಲಾದ ಸರ್ಕಾರದ ಆದೇಶದ ಆಧಾರದನ್ವಯ ಗುರುವಾರ (ಜೂನ್ 22) ದಿಂದ ಮಳಿಗೆಗಳನ್ನು ಮುಚ್ಚಲು …
Read More »ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!
ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ! ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ ವೈದ್ಯರು …
Read More »ಬೆಳಗಾವಿ ಜಿಲ್ಲೆಯ ರಕ್ಕಸಕೊಪ್ಪ, ಘಟಪ್ರಭಾ, ಮಲಪ್ರಭಾ ಜಲಾಶಯಗಳು ಖಾಲಿ
ಮಹಾರಾಷ್ಟ್ರ ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಜೀವಜಲ ಮೂಲವಾದ ಡ್ಯಾಮ್ ಗಳೂ ಖಾಲಿ ಖಾಲಿ ಆಗ್ತಿವೆ. ಮಳೆಗಾಗಿ ದೇವರ ಮೊರೆ ಹೋದ್ರು ಪ್ರಯೋಜನವಾಗಿಲ್ಲ. ಇನ್ನೊಂದು ವಾರದಲ್ಲಿ ಮಳೆ ಬಾರದಿದ್ದರೆ, ಮಳೆಗಾಗಿ ಮೊಡ ಬಿತ್ತನೆಗೆ ಸರ್ಕಾರ ಚಿಂತನೆ ನಡೆಸಲಿದೆ ಅಂತಾ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮುನ್ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಳೆದ 19 ದಿನಗಳಿಂದ ಮುಂಗಾರು ಮಳೆಯ ಸುಳಿವಿಲ್ಲ. ಇದರಿಂದ ಮಹಾರಾಷ್ಟ್ರದ ಮತ್ತು ಕರ್ನಾಟಕದಲ್ಲಿ ಬರಗಾಲದ …
Read More »ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ತನಿಖೆಯ ನಂತರವೇ ಆತ್ಮಹತ್ಯೆಗೆ …
Read More »
Laxmi News 24×7