Breaking News

ರಾಜಕೀಯ

ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ: ಸತೀಶ್‌ ಜಾರಕಿಹೊಳಿ

ಗೋಕಾಕ: ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಬಿಜೆಪಿಯವರಿಗೆ ಟಾಂಗ್‌ ನೀಡಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ನಮ್ಮ ನಾಯಕರು ಸರಿಪಡಿಸುತ್ತಾರೆ, ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು. ಚಕ್ರವರ್ತಿ ಸೂಲಿಬೆಲೆ ಒಬ್ಬ …

Read More »

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಹೇಮಂತ ನಿಂಬಾಳ್ಕರ್ ನೇಮಕ

ಹೌದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರಿಗೆ ಕಾಂಗ್ರೆಸ್ ಸರಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Read More »

ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಬೇಕು ‘ಶಕ್ತಿ ಸ್ಮಾರ್ಟ್​​ಕಾರ್ಡ್

: ರಾಜ್ಯ ಸರ್ಕಾರ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’ ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ …

Read More »

ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜೂ.6- ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬೀದಿಗಿಳಿದು ಹೋರಾಟ ನಡೆದಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಮತ್ತು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತರು, ಪದಾಕಾರಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ ಹಾಲಿಗೆ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‍ಗೆ 5 ರೂ. ನೀಡಲಾಗುತ್ತಿತ್ತು. ಇದೀಗ ಬಂದಿರುವ ಕಾಂಗ್ರೆಸ್ …

Read More »

ವಾಹನ ಸವಾರರಿಗೆ ಇಲ್ಲಿದೆ ವಿಶೇಷ ಸುದ್ದಿ

ಬೆಂಗಳೂರು, ಜೂ.6- ಸಾರಿಗೆ ಇಲಾಖೆಯಿಂದ ನೀಡಲಾಗುವ ವಾಹನ ನೊಂದಣಿ ಪತ್ರ, ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರಿಗೆ ತಲುಪಿಸಲು ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸರ್ಕಾರ ಸಮ್ಮತಿಸಿದೆ. ಸಾರಿಗೆ ಇಲಾಖಾ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಸಚಿವಾಲಯ ನೊಂದಣಿ ಪ್ರಮಾಣ ಪತ್ರ, ಸ್ಮಾರ್ಟ್ ಕಾರ್ಡ್ ನೀಡಲು ಪ್ರತಿ ಕಾರ್ಡಿಗೆ ಅರ್ಜಿದಾರರಿಂದ ಸಂಗ್ರಹಿಸುವ 212 ರೂ.ಗಳನ್ನು ಹಾಗು ಅಂಚೆ ಮೂಲಕ ರವಾನಿಸಲು 50 ರೂ.ಗಳ ಸೇವಾಶುಲ್ಕ ಒಳಗೊಂಡು …

Read More »

ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ

ಚಿಕ್ಕೋಡಿ: ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ರೂಪಿಸಿ ನಮಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಡಲಾದ ಆರೋಪವನ್ನ ಶಾಸಕ ರಾಜು ಕಾಗೆ ತಳ್ಳಿ ಹಾಕಿದ್ದಾರೆ. ತಮ್ಮ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಕಾಗೆ, ”ನನ್ನ ವಿರುದ್ಧ ಅವರೇ ರಾಜಕೀಯ ಷಡ್ಯಂತ್ರ ರೂಪಿಸಿ ತಮ್ಮ ಮಾನ ಕಳೆಯುವ ಕೆಲಸ ಮಾಡುತ್ತಿದ್ದಾರೆ. ಅವರು ನನ್ನ ಹಳೆಯ ಸ್ನೇಹಿತ. …

Read More »

ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ

ಬಳ್ಳಾರಿ: ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿರುವ ಸುದೀಕ್ಷಾ ಇಂಟರ್​ ನ್ಯಾಷನಲ್ ಸ್ಕೂಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪವರ್ ಕಟ್ ಆಗಿ ಜನರೇಟರ್​ ಆನ್ ಮಾಡಿದಾಗ ಜನರೇಟರ್ ರೂಮ್ ಹಾಗೂ ಮತ್ತೊಂದು ರೂಮ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಶಾಲೆಯಲ್ಲಿದ್ದ 150 ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿ ರಕ್ಷಿಸಿದ್ದಾರೆ. ಶಾಲೆಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಸ್ಥಗಿತ ಕೊಂಡಿತ್ತು. ಈ …

Read More »

ರಸ್ತೆ ಅಪಘಾತ : ಉರುಸ್‌ಗೆ ಹೊರಟಿದ್ದ ಐದು ಜನರು ಸ್ಥಳದಲ್ಲೇ ಸಾವು ; 13 ಜನರಿಗೆ ಗಾಯ.!

ಯಾದಗಿರಿ : ಯಾದಗಿರಿ ತಾಲೂಕಿನ ಚಕ್ರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150(a)ರಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ನಡೆದಿರುವ ಬಗ್ಗೆ ತಿಳಿದು ಬಂದಿದೆ. ಈ ದುರ್ಘಟನೆಯಲ್ಲಿ ಮೂರು ಜನ ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, ಒಟ್ಟಾರೆ 13 ಜನರಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕ್ರೂಸರ್​ ವಾಹನವು ಗುಲ್ಬರ್ಗಾ ಕಡೆಗೆ ತೆರಳುತ್ತಿತ್ತು. ವಾಹನದಲ್ಲಿ …

Read More »

40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸಹಚರರ ಕೃತ್ಯ

ಬೆಂಗಳೂರು: ನಗರದ ಮಹದೇವಪುರದಲ್ಲಿ ಮೇ 25ರಂದು ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ರೇಣುಕುಮಾರ್ ಹತ್ಯೆಯ ದೃಶ್ಯ ವೈರಲ್​ ಆಗುತ್ತಿದೆ(Murder). ಸಿಸಿಟಿವಿಯಲ್ಲಿ ರೆಕಾರ್ಡ್​ ಆದ ಹತ್ಯೆಯ ದೃಶ್ಯಗಳು ಎಂತವರನ್ನೂ ಬೆಚ್ಚಿಬೀಳಿಸುವಂತಿವೆ. ರೇಣುಕುಮಾರ್(​Rowdy Sheeter Renukumar)  ಸಹಚರರಾದ ಶ್ರೀಕಾಂತ್ ಹಾಗೂ ಪ್ರಶಾಂತ್ ಇಬ್ಬರು ಸೇರಿಕೊಂಡು ಹತ್ಯೆ ಮಾಡಿದ್ದರು. 40 ಸೆಕೆಂಡ್​ನಲ್ಲಿ 26 ಬಾರಿ ಕೊಚ್ಚಿ ರೌಡಿಶೀಟರ್​ ಬರ್ಬರ ಕೊಲೆ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಧಮ್ಕಿ ಹಾಕಿದ ಎಂಬ ಕಾರಣಕ್ಕೆ ಕೊಲೆ ಈ ಹಿಂದೆ ಜೈಲಿನಿಂದ …

Read More »

ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜೂನ್ 11ರಿಂದ ಜಾರಿ: ಸರ್ಕಾರದ ಗೈಡ್​ಲೈನ್ಸ್​​ ಏನು?

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ‘ಶಕ್ತಿ ಯೋಜನೆ’ ಯನ್ನು ಜಾರಿಗೊಳಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ಅಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾ ನಿಗಮ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾ …

Read More »