Breaking News

ರಾಜಕೀಯ

KSRTC ನಡಿಬೇಕಲ್ಲ, ಗಂಡಸ್ರು ಟಿಕೆಟ್ ತಕೊಳ್ರಪ್ಪ.: ಡಿಕೆ ಶಿವಕುಮಾರ್

ರಾಮನಗರ: ಇದೇ ತಿಂಗಳು 11ರಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಿಗಲಿದೆ. ಎಲ್ಲಿಗೆ ಬೇಕಾದರೂ ಹೋಗಿ, ಓಡಾಡಿ. ಆದರೆ ಗಂಡಸರು ಟಿಕೆಟ್ ತಗೆದುಕೊಂಡು ಓಡಾಡಿ. ಕೆಎಸ್‌ಆರ್ ಟಿಸಿ ನಡಿಯಬೇಕಲ್ಲ, ಅದಕ್ಕೆ ಗಂಡಸರು ಟಿಕೆಟ್ ತಕೊಳ್ರಪ್ಪ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.   ಕಬ್ಬಾಳು ಗ್ರಾಮದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ತಿಂಗಳಿನಿಂದ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ. …

Read More »

ಗೃಹ ಜ್ಯೋತಿ ಯೋಜನೆ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್.! ಜೂ. 1 ರಿಂದಲೇ ವಿದ್ಯುತ್ ದರ ಹೆಚ್ಚಳ

ಬೆಂಗಳೂರು: ಗೃಹಜ್ಯೋತಿ ಯೋಜನೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ. ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ ವಿದ್ಯುತ್ ದರ 70 ಪೈಸೆ ಹೆಚ್ಚಳ ಮಾಡಿ KERC ಆದೇಶ ಹೊರಡಿಸಿದೆ. ಮೇ 12ರಂದು KERC ವಿದ್ಯುತ್ ಪರಿಷ್ಕರಣೆ ಮಾಡಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ವಿದ್ಯುತ್ ದರ ಜೂ. 1 …

Read More »

ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರದ ಬಗ್ಗೆ ಮಾತನಾಡಿದ್ ಸಚಿವ ಕೆ ವೆಂಕಟೇಶ್ ಪ್ರಶ್ನೆ

ಮೈಸೂರು: ಗೋಹತ್ಯೆ ನಿಷೇಧಿಸಿ ಹಿಂದಿನ ಬಿಜೆಪಿ ಸರ್ಕಾರ ಕಾನೂನು ಜಾರಿಗೆ ತಂದಿತ್ತು. ಇದೀಗ ಕಾಂಗ್ರೆಸ್​ ಸರ್ಕಾರ ಈ ಕಾನೂನು ರದ್ದುಗೊಳಿಸುವ ನಿರ್ಧಾರ ಮಾಡಿದೆಯಾ ಎಂಬ ಪ್ರಶ್ನೆ ಉದ್ಬವಿಸಿದೆ. ಏಕೆಂದರೆ, ಈ ಬಾರಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ನ ನಾಯಕರು ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನುಗಳನ್ನು ಪುನರ್​ ಪರಿಶೀಲಿಸುವ ಮಾತುಗಳನ್ನಾಡುತ್ತಿದ್ದಾರೆ. ಇದೀಗ ನೂತನ ಪಶು ಸಂಗೋಪನ ಸಚಿವರು ಸಹ ಇದೇ ದಾಟಿಯಲ್ಲಿ ಮಾತನಾಡಿದ್ದಾರೆ. “ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ …

Read More »

ಒಡಿಶಾ ರೈಲು ದುರಂತಕ್ಕೆ ಕಾರಣವೇನು.. ಹೊರಬಿತ್ತು ಪ್ರಾಥಮಿಕ ತನಿಖಾ ಮಾಹಿತಿ

ನವದೆಹಲಿ: ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯ ಮಾಹಿತಿ ಹೊರಬಿದ್ದಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್‌ಗೆ ಪ್ರವೇಶಿಸಿ ಬಹಾನಗರ್ ಬಜಾರ್ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಕೋರಮಂಡಲ್ ಎಕ್ಸ್‌ಪ್ರೆಸ್ ಬೋಗಿಗಳು ಚದುರಿ ಪಕ್ಕದ ಹಳಿ ಮೇಲೆ ಬಿದ್ದಿವೆ. ಆ ಬೋಗಿಗಳಿಗೆ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎಂದು ಪ್ರಾಥಮಿಕ …

Read More »

ಬಾಗಲಕೋಟೆಯಲ್ಲಿ ವರುಣನ ಆರ್ಭಟ: ನೇಕಾರರ ಮನೆಗಳಿಗೆ ಹಾನಿ.

ಬಾಗಲಕೋಟೆ: ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವು ನೇಕಾರರ ಮನೆಗಳಿಗೆ ಹಾನಿ ಉಂಟಾಗಿರುವ ಘಟನೆ ಜಿಲ್ಲೆಯ ರಬಕವಿ – ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣ ಸೇರಿದಂತೆ ವಿವಿಧೆಡೆ ನಡೆದಿದೆ. ಧಾರಾಕಾರವಾಗಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಸಾಕಷ್ಟು ಹಾನಿ ಉಂಟಾಗಿದೆ. ನೇಕಾರರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕೆಂಗೇರಿ ಮಡ್ಡಿ ಸೇರಿದಂತೆ ಇತರ ಪ್ರದೇಶದಲ್ಲಿ ಬೃಹದಾಕಾರದ ಮರಗಳು ನೇಕಾರರ ಮನೆಗಳ ಮೇಲೆ ಉರುಳಿ ಬಿದಿದ್ದರಿಂದ, ಮನೆ ಮತ್ತು ಆಸ್ತಿ- ಪಾಸ್ತಿಗೆ …

Read More »

ಜಿಲ್ಲಾ ಉಸ್ತುವಾರಿಗೆ ಸಚಿವರ ಪೈಪೋಟಿ ಆರಂಭ: ಇಲ್ಲಿದೆ ಸಂಭಾವ್ಯ ಪಟ್ಟಿ!!

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಯಿತು. ಸಂಪುಟ ರಚನೆ, ಖಾತೆ ಹಂಚಿಕೆಯೂ ಆಯಿತು. ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಿನ್ನೆಯಷ್ಟೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದೀಗ ಜಿಲ್ಲಾ ಉಸ್ತುವಾರಿಗೆ ಪೈಪೋಟಿ ಆರಂಭವಾಗಿದೆ. ಮೈಸೂರು, ತುಮಕೂರು ಮತ್ತು ಧಾರವಾಡ ಜಿಲ್ಲೆಗಳ ಉಸ್ತುವಾರಿಗಾಗಿ ಸಚಿವರುಗಳ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಇನ್ನು ಸಚಿವರುಗಳಿಲ್ಲದ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ಹಾಸನ, ದಕ್ಷಿಣ ಕನ್ನಡಕ್ಕೆ ಯಾರು ಉಸ್ತುವಾರಿಗಳಾಗಲಿದ್ದಾರೆ ಎಂಬ ಕುತೂಹಲದ ಜೊತೆಗೆ …

Read More »

ದೇಶ ಸೇವೆಗೆ ಸನ್ನದ್ಧರಾದ ಅಗ್ನಿವೀರರು: ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ತು ಏರ್ ಮಾರ್ಷಲ್ ಕಡೆಯಿಂದ ಬಹುಮಾನ

ಬೆಳಗಾವಿ: ಬೆಳಗಾವಿ ಏರ್​ಮನ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ಅಗ್ನಿವೀರರನ್ನು ಅದ್ಧೂರಿಯಾಗಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ ತರಬೇತಿ ಪೂರ್ಣಗೊಳಿಸಿದ ಮೊದಲ ಅಗ್ನವೀರರು ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾಗಿದ್ದಾರೆ. ಸಾಂಬ್ರಾದಲ್ಲಿನ ಏರ್​ಮನ್ ತರಬೇತಿ ಶಾಲೆಯಲ್ಲಿ 22 ವಾರಗಳ‌ ಕಾಲ ತರಬೇತಿ ಪಡೆದ 2675 ಅಗ್ನಿವೀರರ ಬೀಳ್ಕೊಡುಗೆ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನೆರವೇರಿತು. ತರಬೇತಿ ಅವಧಿಯಲ್ಲಿ ತಾವು ಪಡೆದ ವಿವಿಧ ಕೌಶಲ್ಯಗಳನ್ನು ಅಗ್ನಿವೀರರು ಪ್ರದರ್ಶಿಸಿ, ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು. ಅಗ್ನಿ …

Read More »

ಕೌಟುಂಬಿಕ ಕಲಹ: ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ

ಬೆಳಗಾವಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ. ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬಸವ್ವ ಹಣಮಂತ ಹಿಡಕಲ್(30) ಕೊಲೆಯಾದ ದುರ್ದೈವಿ. ಹಣಮಂತ ಸಿದ್ದಪ್ಪ ಹಿಡಕಲ್( 35) ಕೊಲೆ ಆರೋಪಿ. ಪ್ರಕರಣದ ವಿವರ: ಪತಿ ಹಣಮಂತ ಯಾವುದೇ ಕೆಲಸ ಮಾಡದೇ ಓಡಾಡಿಕೊಂಡಿದ್ದನಂತೆ. ಪತ್ನಿ ಬಸವ್ವ ಕೂಲಿ ಕೆಲಸ ಮಾಡಿ ಸಂಸಾರದ ಬಂಡಿ ಸಾಗಿಸುತ್ತಿದ್ದರು. ಪತಿ ಹಣಮಂತನಿಗೆ ನೀನು ಕೆಲಸ ಮಾಡುತ್ತಿಲ್ಲ …

Read More »

ಬೆಳಗಾವಿಯಲ್ಲಿ ವಾರ್ಡ್ ಸಮಿತಿ ರಚನೆ ವಿಳಂಬ: ನಾಗರಿಕರ ಅಸಮಾಧಾನ

ಬೆಳಗಾವಿ: ಮಹಾನಗರ ಪಾಲಿಕೆಯ ಪ್ರತಿಯೊಂದು ವಾರ್ಡ್‌ಗಳಲ್ಲಿ ರಚನಾತ್ಮಕವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಕ್ಕಾಗಿ ‘ನಾಗರಿಕ ವಾರ್ಡ್ ಸಮಿತಿ’ ರಚಿಸಬೇಕೆಂಬ ಕಾನೂನಿದೆ. ಆದರೆ, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪಾಲಿಕೆ ಸದಸ್ಯರು ಆಯ್ಕೆಯಾಗಿ 2 ವರ್ಷ ಕಳೆಯುತ್ತಾ ಬಂದರೂ ವಾರ್ಡ್ ಸಮಿತಿ ರಚನೆ ಆಗದೇ ಇರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಆಡಳಿತದಲ್ಲಿ ನಾಗರಿಕರ ಸಹಭಾಗಿತ್ವದೊಂದಿಗೆ ವಾರ್ಡ್‌ಗಳಲ್ಲಿ ಪರಿಣಾಮಕಾರಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಕ್ಕೆ ‘ನಾಗರಿಕ ವಾರ್ಡ್ ಸಮಿತಿ’ ರಚಿಸಬೇಕು ಎಂಬ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ಸ್ ಕಾಯ್ದೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »