Breaking News

ರಾಜಕೀಯ

ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ

ಬೆಳಗಾವಿ; ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕಿತ್ತೂರಿನ ನಾವಲಗಟ್ಟಿ ಗ್ರಾಮದ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಯಲ್ಲಪ್ಪ ಉಪ್ಪಾರಟ್ಟಿ, ಭೀಮಮೂಡಲಗಿ, ರಾಜು ಕಲ್ಲೂರ, ಸಂತೋಷ ಕಲ್ಲೂರ ಸೇರಿದಂತೆ ಎಲ್ಲರನ್ನೂ ಕಾಂಗ್ರೆಸ್ ಮುಖಂದ ನಾನಾಸಾಹೇಬ್ ಪಾಟೀಲ್ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

Read More »

ನಾಳೆ ಸಂಜೆ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ : ಸಿಎಂ ಬೊಮ್ಮಾಯಿ ಮಾಹಿತಿ

ನವದೆಹಲಿ : ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ನಾಳೆ ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದು ತಿಳಿಸಿದ್ದಾರೆ.   ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸ …

Read More »

ಹಾವೇರಿಯಲ್ಲಿ ನಿಶ್ಚಿತಾರ್ಥಗೊಂಡ ಭಾವಿ ಪತಿಯ ಕುತ್ತಿಗೆಗೆ ಚಾಕು ಇರಿದ ಯುವತಿ: ಖತರ್ನಾಕ್ ಕೃತ್ಯಕ್ಕೆ ಪೊಲೀಸರೇ ಶಾಕ್

ಹಾವೇರಿ : ಜಿಲ್ಲೆಯ ರಾಣೇಬೆನ್ನೂರು ಪಟ್ಟಣದ ಹೊರವಲಯದ ಓಂ ಪಬ್ಲಿಕ್ ಸ್ಕೂಲ್ ಬಳಿ ಅಪ್ರಾಪ್ತ ಬಾಲಕಿಯೊಬ್ಬಳು ಭಾವಿ ಪತಿಯ ಕುತ್ತಿಗೆಗೆ ಚಾಕು ಇರಿದ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಭಾವಿ ಪತಿಗೆ ಪಾರ್ಕ್​ಗೆ ಕರೆದು ರೀಲ್ಸ್ ಮಾಡೋಣ ಎಂಬ ನೆಪದಲ್ಲಿ ಕರೆದು, ಶಿಲುಬೆಯಂತೆ ನಿಲ್ಲಿಸಿ ಫೋಟೋ ತೆಗೆಯುವಂತ ನಟಿಸಿ ಭಾವಿ ಪತಿಯ ಕುತ್ತಿಗೆಗೆ ಚಾಕು ಇರಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಚಾಕು …

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಏಪ್ರಿಲ್ 10ರವರೆಗೂ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಲಿಂಗದಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿದೆ. ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರು ಸಿಡಿಲುಬಡಿದು ಶಳದಲ್ಲೇ ಸಾವನ್ನಪ್ಪಿದ್ದಾರೆ. ಶರಣಪ್ಪ ಪುರದ (20) ಹಾಗೂ ದೇವರಾಜ್ ಬಾಡಗಿ (16) ಮೃತರು. ಘಟನೆಯಲ್ಲಿ ನಾಲ್ಕು ಕುರಿ, ಒಂದು ಆಡು ಸಾವನ್ನಪ್ಪಿವೆ. ಬಾಗಲಕೋಟೆ ಜಿಲ್ಲೆಯಲ್ಲಿಯೂ …

Read More »

ಸೂಕ್ತ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 14 ಕೆಜಿ ಬೆಳ್ಳಿ ವಶಕ್ಕೆ.!

ಬೆಳಗಾವಿ : ಹಿರೇಬಾಗೇವಾಡಿ ಚೆಕ್ ಪೋಸ್ಟ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಕೆಜಿ‌ ಬೆಳ್ಳಿಯನ್ನು ಪೊಲೀಸರು ಜಪ್ತಿ‌ ಮಾಡಿದ್ದಾರೆ. ಆದರೆ ಬೆಳ್ಳಿ ವಶಕ್ಕೆ ಪಡೆಯುವ ಮುಂಚೆ ಗಲಾಟೆ ನಡೆದಿದೆ ಎನ್ನಲಾಗಿದೆ.     ಚಹಾ ತಡವಾಗಿ ಕೊಟ್ಟಿದ್ದಕ್ಕಾಗಿ ಅಂಗಡಿ ಮಾಲೀಕನ ಜೊತೆಗೆ ಮೂವರು ಆರೋಪಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಮೂವರು ಸೇರಿಕೊಂಡು ಅಂಗಡಿ‌ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ಕಂಡ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ …

Read More »

ಅಭಿಮಾನಿಗಳ ಮುಂದೆ ಕಣ್ಣೀರು ಹಾಕಿದ ತಾಯಿ – ಮಗ: ಚುನಾವಣೆಗೆ ಸ್ಪರ್ಧಿಸಲು ಸೌರಭ್​ ಚೋಪ್ರಾ ತೀರ್ಮಾನ

ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ಸೌರಭ್​ ಚೋಪ್ರಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ನಿನ್ನೆ ಸವದತ್ತಿಯಲ್ಲಿ ನಡೆದ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಸಾವಿರಾರು ಬೆಂಬಲಿಗರು ಭಾಗಿಯಾಗಿದ್ದರು. ಈ ವೇಳೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೆಂಬಲಿಗರ‌ ಮುಂದೆ ತಾಯಿ ಕಾಂತಾದೇವಿ ಮತ್ತು ಸೌರಭ ಚೋಪ್ರಾ ಕಣ್ಣೀರು ಹಾಕಿದರು‌. ಸಭೆಯಲ್ಲಿ ಮತದಾರರ ಬಳಿ ಮನವಿ ಮಾಡಿಕೊಂಡ ಸೌರಭ್ ಚೋಪ್ರಾ ತಾಯಿ ಕಾಂತಾದೇವಿ, ನನ್ನ …

Read More »

ಕೇಂದ್ರದಿಂದ ಸಾರ್ವಜನಿಕರಿಗೆ ಸಿಹಿ ಸುದ್ದಿ ; ಶೀಘ್ರ ‘ಎಲ್ಪಿಜಿ ಸಿಲಿಂಡರ್’ ಬೆಲೆ ಇಳಿಕೆ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಸಾಮಾನ್ಯ ಜನರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಮೋದಿ ಸರ್ಕಾರದ ಇತ್ತೀಚಿನ ನಿರ್ಧಾರದಿಂದ ಅನೇಕ ಜನರು ನಿರಾಳರಾಗಿದ್ದು, ಸಧ್ಯದಲ್ಲೇ ಗ್ಯಾಸ್ ಬೆಲೆ ಇಳಿಕೆಯಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರದೊಂದಿಗೆ, ನಗರ ಅನಿಲ ವಿತರಕರು ಸಂಕುಚಿತ ನೈಸರ್ಗಿಕ ಅನಿಲ (CNG) ಮತ್ತು ಪೈಪ್ಡ್ ನೈಸರ್ಗಿಕ ಅನಿಲ (PNG) ಬೆಲೆಗಳನ್ನ ಕಡಿಮೆ ಮಾಡುತ್ತಾರೆ. ವಾಹನಗಳಲ್ಲಿ ಸಿಎನ್‌ಜಿ ಬಳಸುತ್ತಾರೆ. ಇಲ್ಲದಿದ್ದರೆ, PNG ಮನೆಗಳಲ್ಲಿ ಬಳಸಲಾಗುತ್ತದೆ. …

Read More »

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ರಮೇಶ ಜಾರಕಿಹೊಳಿಯವರ ವಾಹನ ತಪಾಸಣೆ

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ವಾಹನ ತಪಾಸಣೆ ನಡೆಸಲಾಗಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ವಾಹನ ತಪಾಸಣಾ ಕಾರ್ಯ ನಡೆದಿದೆ. ಈ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನಲ್ಲೂ ಸಹ ವಾಹನಗಳ ತಪಾಸಣೆ ನಡೆಯುತ್ತಿದೆ. ಅದೇ ದಾರಿಯಾಗಿ ತೆರಳುತ್ತಿದ್ದ ರಮೇಶ ಜಾರಕಿಹೊಳಿ ಅವರ ವಾಹನವನ್ನು ಅಧಿಕಾರಿಗಳು ತಪಾಸಣೆ ನಡೆಸಿದರು.

Read More »

ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳ ಬಿಜೆಪಿ ಮುಂದಾಗಿದೆ; ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. …

Read More »

ಪ್ರತಿಮನೆಯ ಯಜಮಾನಿಗೆ 2000 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ : ಸಿಎಂ ಇಬ್ರಾಹಿಂ ವ್ಯಂಗ್ಯ

ಚಿಕ್ಕಮಗಳೂರು : 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ಕಡೂರಿನಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಯ ಯಜಮಾನಿಗೆ 2000 ರೂ ಹಣ ನೀಡುತ್ತಾರೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಯ ಯಜಮಾನಿಗೆ 2000 …

Read More »