Breaking News

ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ : ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್

ವಿಜಯಪುರ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಲಾಗಿದೆ. ಲಿಂಗಾಯತರಿಗೆ 10, ರೆಡ್ಡಿ ಲಿಂಗಾಯ ಸಮುದಾಯಕ್ಕೆ 1 ಟಿಕೆಟ್ ಕೊಟ್ಟರೆ, ಒಕ್ಕಲಿಗ ಸಮುದಾಯಕ್ಕೆ 10 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ಕುರುಬ ಸಮುದಾಯಕ್ಕೆ …

Read More »

ನಾಳೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ. ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ …

Read More »

ಬೊಮ್ಮಾಯಿ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ – ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ

ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯ, ಬಸವರಾಜ ಬೊಮ್ಮಾಯಿ ಅವರ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ. ಚುನಾವಣೆಗಾಗಿ ಏಕಾಏಕಿ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹುಟ್ಟಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಮೊ-ಶಾ ಜೋಡಿ ಮಹಾರಾಷ್ಟ್ರದಲ್ಲಿನ ತಮ್ಮದೇ ಸರ್ಕಾರದ ಉದ್ಧಟತನಕ್ಕೆ ಕಡಿವಾಣ ಹಾಕುತ್ತಿಲ್ಲವೇಕೆ ಬಿಜೆಪಿ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.ಈ ಕುರಿತಂತೆ ಟ್ವಿಟ್ ಮಾಡಿದ್ದು, ರಮೇಶ್ ಜಾರಕಿಹೊಳಿ ಬಿಜೆಪಿಗೆ ದುಬಾರಿ ಮನುಷ್ಯನಾಗಿದ್ದಾರೆ, ಒಂದೆಡೆ ಸವದಿ ಜೊತೆ ಕಿರಿಕ್, ಇನ್ನೊಂದೆಡೆ ಈರಣ್ಣ …

Read More »

ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಬಿಎಸ್ ವೈ

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, : ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಆದರೆ ಬಿಜೆಪಿಗೆ ಸುದೀಪ್ ಸಪೋರ್ಟ್ ಸಿಗುತ್ತಿರುವುದು ಕಾಂಗ್ರೆಸ್‌ನವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಇದಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇನ್ನು ನಟ …

Read More »

ನಟ ಸುದೀಪ್ ಚಿತ್ರಗಳನ್ನು ನಿರ್ಬಂಧಿಸಿ : ರಾಜ್ಯ ಚುನಾವಣಾ ಆಯೋಗಕ್ಕೆ ವಕೀಲ ದೂರು

ಶಿವಮೊಗ್ಗ: ನನ್ನ ಕಷ್ಟ ಕಾಲದಲ್ಲಿ ಸದಾ ನಾನು ಮಾಮ ಎಂಬುದಾಗಿ ಕರೆಯುವಂತ ಸಿಎಂ ಬೊಮ್ಮಾಯಿ ( CM Bommai ) ಆಗಿದ್ದಾರೆ. ಅವರ ಪರವಾಗಿ ನಾನು ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇವೆ ಎಂಬುದಾಗಿ ನಟ ಕಿಟ್ಟ ಸುದೀಪ್ ( Actor Sudeep ) ಘೋಷಿಸಿದ್ದರು. ಈ ಬೆನ್ನಲ್ಲೇ ವಿಧಾನಸಭಾ ಚುನಾವಣಾ ( Karnataka Assembly Election 2023 ) ನೀತಿ ಸಂಹಿತೆಯಿಂದಾಗಿ ಅವರ ನಟನೆಯ ಚಿತ್ರಗಳನ್ನು ತಡೆ ಹಿಡಿಯುವಂತೆ ರಾಜ್ಯ ಚುನಾವಣಾ …

Read More »

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಹಲವರು ತಮ್ಮ ತಮ್ಮ ಇಷ್ಟದ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸೋಮವಾರದಂದು ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತರಾವ್ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡಿದ್ದಾರೆ.

Read More »

ಕೋಮು ದ್ವೇಷ ಭಾಷಣ: ವಿ.ಮುನಿರತ್ನ ವಿರುದ್ಧ FIR ದಾಖಲು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ( Karnataka Assembly Election 2023 ) ಘೋಷಣೆಯ ನಂತ್ರ ನೀತಿ ಸಂಹಿತೆ ಜಾರಿಯಲ್ಲಿದೆ. ಈ ವೇಳೆಯಲ್ಲಿ ದ್ವೇಷ ಭಾಷಣ ಸೇರಿದಂತೆ ವಿವಿಧ ವಿಷಯಗಳಿಗೆ ಸಂಹಿತೆಯ ಕಾನೂನು ಅಡೆತಡೆ ಇದೆ. ಹೀಗಿದ್ದೂ ಕೋಮು ದ್ವೇಷ ಭಾಷಣ ಮಾಡಿದಂತ ಸಚಿವ ವಿ.ಮುನಿರತ್ನ ( Minister V Munirathna ) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಅಖಿಲ ಭಾರತ …

Read More »

2023-24ನೇ ಸಾಲಿನ ಶಾಲಾ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಮೇ.29ರಿಂದ ಶಾಲೆ ಆರಂಭ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ …

Read More »

ಕರ್ನಾಟಕ ವಿಧಾನಸಭೆ ಚುನಾವಣೆ : ಇಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

ನವದೆಹಲಿ: ಕಳೆದ ಎರಡು ದಿನಗಳಿಂದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ.   ಈ ಬಗ್ಗೆ ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ …

Read More »

ಅಂಕಲಗಿ ಶ್ರೀ ಗುರುಸಿದ್ಧ ಶ್ರೀಗಳಿಗೆ ಶೃದ್ಧಾಂಜಲಿ ಅರ್ಪಿಸಿದ ಹುಕ್ಕೇರಿ ಕಾರಂಜಿಮಠದ ಶ್ರೀಗಳು

ಬೆಳಗಾವಿ: ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ಇತ್ತೀಚೆಗೆ ಲಿಂಗೈಕೆರಾಗಿದ್ದಾರೆ. ಇವರ ಗದ್ದುಗೆಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಪೂಜೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಂಕಲಗಿ ಶ್ರೀಗಳು ಭಕ್ತರ ಶೃದ್ಧಾ ಕೇಂದ್ರವಾಗಿರುವ ಅಂಕಲಗಿ ಅಡವಿಸಿದ್ದೇಶ್ವರ ಮಠವನ್ನು ಪುನರೋತ್ಥಾನಗೊಳಿಸುವುದರ ಮೂಲಕ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದಷ್ಟು …

Read More »