ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ ಬಸ್ ಒಂದರಲ್ಲಿ ಮುಂಬೈನಿಂದ ಬರುತ್ತಿದ್ದ ಪ್ರಯಾಣಿಕನಲ್ಲಿದ್ದ ಹಣವನ್ನು ವಶಕ್ಕೆ ಪಡೆದರು. ಈ ಹಣಕ್ಕೆ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಬುಧವಾರ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 3.61 ಕೇಟಿ ರೂ. ನಗದು ಹಾಗೂ 60.47 ಲಕ್ಷ …
Read More »ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ
ಬೆಂಗಳೂರು: ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ. ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು …
Read More »ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ.. ಚೇತನ್ ಅಹಿಂಸಾ ಏನ್ ಹೇಳಿದ್ರು ಗೊತ್ತಾ?
ಬೆಂಗಳೂರು : ಚೇತನ್ ಅಹಿಂಸಾ ಸದಾ ಒಂದಲ್ಲ ಒಂದು ವಿಚಾರಕ್ಕೆ ಮುನ್ನೆಲೆಗೆ ಬಂದೇ ಬರುತ್ತಾರೆ. ಅದರಲ್ಲೂ ಅವರು ಮಾಡುವ ಟ್ವೀಟ್ಗಳು ಸೆನ್ಸೇಷನ್ ಹುಟ್ಟು ಹಾಕುತ್ತವೆ. ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿರುವ ಚೇತನ್, ಇದೀಗ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡಿದ್ದರ ಬಗ್ಗೆಯೂ ಟ್ವೀಟ್ ಮಾಡಿದ್ದಾರೆ. ಸುದೀಪ್ ಬಿಜೆಪಿ ಸೇರಲಿದ್ದಾರೆ, ಚುನಾವಣೆಗೂ ಸ್ಪರ್ಧಿಸಲಿದ್ದಾರೆ ಎಂಬ ಅನೇಕ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದವು. ಇದೆಲ್ಲದಕ್ಕೂ ಇಂದು ಸುದೀಪ್ ಸ್ಪಷ್ಟನೆ ಕೊಟ್ಟಾಗಿದೆ. ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ …
Read More »ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ
ಬೆಂಗಳೂರು: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಡೃ ಸರ್ಕಾರ ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ …
Read More »ನಮ್ಮ ಭಾಷೆಗಳು ಬೇರೆ-ಬೇರೆಯಾಗಿದ್ದರೂ ಭಾವ ಒಂದೇ: ಜಗತಾಪ
ಸೊಲ್ಲಾಪುರ: ಇದು ಗಡಿನಾಡು ಸಾಹಿತ್ಯ ಸಮ್ಮೇಳನ, ನಮ್ಮ ಗಡಿ ಸಂರಕ್ಷಣೆ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರದೇಶಗಳು ಬರಲೇಬೇಕು. ಅಲ್ಲದೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗುವ ಪ್ರದೇಶಗಳು ಹೋಗಲೇಬೇಕು. ಆಗ ಮಾತ್ರ ಎರಡು ರಾಜ್ಯಗಳ ಗಡಿ ಸಮಸ್ಯೆ ಬಗೆಹರಿಯುತ್ತದೆ. ಗಡಿನಾಡು ಕನ್ನಡಿಗರಾದ ನಾವೆಲ್ಲ ಬೇಲಿ ಮೇಲಿನ ಹೂಗಳಿದ್ದಂತೆ ಎಂದು ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಮಹಾರಾಷ್ಟ್ರ ಗಡಿನಾಡು ಘಟಕದ ವತಿಯಿಂದ ಜತ್ತ …
Read More »ನನ್ನ ಕಾರ್ಯಕರ್ತರೇ ನನಗೆ ಸ್ಟಾರ್ ಕ್ಯಾಂಪೇನರ್; ಎಚ್ಡಿಕೆ
ಬೆಂಗಳೂರು: ನಟರನ್ನು ನೋಡಲು ಅಭಿಮಾನಿಗಳು, ಜನರು ಬರುತ್ತಾರೆ, ಜೈಕಾರ ಹಾಕುತ್ತಾರೆ. ಅವರು ಎಲ್ಲಾ ಪಕ್ಷದ ಪರವಾಗಿಯೂ ಪ್ರಚಾರಕ್ಕೆ ಹೋಗುತ್ತಾರೆ. ಅವರಿಗೆ ಸ್ಥಿರತೆ ಇಲ್ಲ. ವೈಯಕ್ತಿಕ ಬಾಂಧವ್ಯದ ಹಿನ್ನೆಲೆ ಹೋಗಬಹುದು. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳುವ ಮೂಲಕ ನಟ ಸುದೀಪ್ ಬೊಮ್ಮಾಯಿ ಪರ ಪ್ರಚಾರಕ್ಕೆ ಬರುವುದಾಗಿ ಘೋಷಣೆ ಮಾಡುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ನಟ ಸುದೀಪ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಮೇಲಿನ ವಿಶ್ವಾಸದಿಂದ …
Read More »ತಮ್ಮ ಮುಖ ತೋರಿಸಿದರೆ ಮತ ಬರುವುದಿಲ್ಲವೆಂದು ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ: ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಾಗಿ ಪರ ಮತ್ತು ವಿರೋಧ ಚರ್ಚೆ ನಡೆಯುತ್ತಿದೆ. ಸುದೀಪ್ ಘೋಷಣೆಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ. ತಮ್ಮ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಮಾಜಿ …
Read More »ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ; ಈ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದೇನು..?
ಸ್ಯಾಂಡಲ್ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಬಿಜೆಪಿ ಪರ ಕ್ಯಾಂಪೇನ್ ಮಾಡುವುದಾಗಿ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಸುದೀಪ್ ಬಿಜೆಪಿಗೆ ಬೆಂಬಲ ನೀಡಿದರ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮಾತಾಡಿದ್ದಾರೆ. ಬಿಜೆಪಿ ಪರ ಸುದೀಪ್ ಪ್ರಚಾರ ಮಾಡುವುದರ ಬಗ್ಗೆ ನಾನು ಟೀಕೆ ಮಾಡಲು ಹೋಗುವುದಿಲ್ಲ. ನನ್ನ ಕಾರ್ಯಕರ್ತರೇ ನಮ್ಮ ಪಕ್ಷದ ಸ್ಟಾರ್ ಪ್ರಚಾರಕರು. ಸುದೀಪ್ ಪ್ರಚಾರಕ್ಕೆ ಅಭಿಮಾನಿಗಳು ಜೈಕಾರ ಹಾಕಬಹುದು. ಆದರೆ, ಅದು ಮತವಾಗಿ ಪರಿವರ್ತನೆ …
Read More »ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಕೊಡಲು ನಾನು ಸಿದ್ಧ: ಕಿಚ್ಚ ಸುದೀಪ್
ಬೆಂಗಳೂರು: ಕಿಚ್ಚ ಸುದೀಪ್ ರಾಜಕೀಯ ವ್ಯಕ್ತಿಯಲ್ಲ, ಅವರು ಚಿತ್ರರಂಗದಲ್ಲಿರುವ ವ್ಯಕ್ತಿ ಅವರಿಂದು ತಮ್ಮ ನಿಲುವು, ಮನದಾಳದ ಮಾತನ್ನು ಹಂಚಿಕೊಳ್ಳಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಕಿಚ್ಚ ಸುದೀಪ್, ಬೊಮ್ಮಾಯಿ ಅವರನ್ನು ಚಿಕ್ಕಂದಿನಿಂದಲೂ ನೊಡಿದ್ದೇನೆ. ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರು ನನ್ನ ಬೆನ್ನಿಗೆ ನಿಂತಿದ್ದರು. ಅವರಲ್ಲಿ ಬೊಮ್ಮಾಯಿ ಕೂಡ ಒಬ್ಬರು. ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಕೊಡಲು ನಾನು …
Read More »ಏಪ್ರಿಲ್ ನಿಂದ ಕೇಬಲ್ ದರ ಹೆಚ್ಚಳ
ಮೆಟ್ರೋ ಕಾಸ್ಟ್ ನೆಟ್ವರ್ಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಕೇಬಲ್ ದರ ಏಪ್ರಿಲ್ ನಿಂದ ಹೆಚ್ಚಳ ಮಾಡಲಾಗಿದೆ ಗ್ರಾಹಕರು ಸಹಕರಿಸಬೇಕು ಎಂದು ಮೆಟ್ರೋ ಕಾಸ್ಟ್ ನೆಟ್ವಕ್೯ ಇಂಡಿಯಾ ಪ್ರೈ.ಲಿನ ಎಂ.ಡಿ. ನಾಗೇಶ ಛಾಬ್ರಿಯಾ ಹೇಳಿದರು. ಬುಧವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ 30 ವರ್ಷಗಳಿಂದ ಮೆಟ್ರೋ ಕಾಸ್ಟ್ ಇಂಡಿಯಾ ಕೇಬಲ್ ಸಂಸ್ಥೆ ಕೆಲಸ ಮಾಡುತ್ತಿದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮೊದಲು ರಿದ್ದಿ ಸಿದ್ಧಿ ಸಂಸ್ಥೆಯಿಂದ …
Read More »
Laxmi News 24×7