ಬೆಂಗಳೂರು: ರಾಜ್ಯಾದ್ಯಂತ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದ್ದು, ಬಿಜೆಪಿ ಹಿರಿಯ ಮುಖಂಡ ಪುಟ್ಟಣ್ಣ ಅವರು 4 ವರ್ಷದ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿರುವುದೇ ಸಾಕ್ಷಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪುಟ್ಟಣ್ಣ ಅವರನ್ನು ಕಾಂಗ್ರೆಸ್ಗೆ ಸ್ವಾಗತಿಸಿ ಮಾತನಾಡಿದ ಅವರು, 4 ಬಾರಿ ಪರಿಷತ್ ಸದಸ್ಯರಾಗಿ, ಉಪಸಭಾಪತಿಯಾಗಿರುವ ಪುಟ್ಟಣ್ಣ ಅತ್ಯಂತ ಹಿರಿಯ ಹಾಗೂ ಅನುಭವಿ. ಶಿಕ್ಷಕರು, ಪದವೀಧರರು ಸೇರಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ …
Read More »170 ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ಮಾಡಲಾಗಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಬಾಕಿ ಇದೆ ಎಂದ ಡಿ.ಕೆ.ಶಿ.
ಬೆಂಗಳೂರು: ಪಕ್ಷದ ಸ್ಕ್ರೀನಿಂಗ್ ಕಮಿಟಿ ಕಳೆದ ಮೂರು ದಿನಗಳಿಂದ ಸಭೆ ನಡೆಸುತ್ತಿದ್ದು, ಸುಮಾರು 170 ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ಮಾಡಲಾಗಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಬಾಕಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ಚರ್ಚೆಯಾಗಿರುವ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಕೇಂದ್ರ ನಾಯಕರಿಗೆ ಕಳುಹಿಸಿಕೊಟ್ಟಿದ್ದೇವೆ. ಎಲ್ಲ ಕಡೆಗಳಲ್ಲಿ ಒಮ್ಮತದ ತೀರ್ಮಾನವನ್ನು ತೆಗೆದುಕೊಂಡಿದ್ದು, ಎಲ್ಲ ಪ್ರಕ್ರಿಯೆ ಸುಗಮವಾಗಿ ಸಾಗುತ್ತಿದೆ. ಪಕ್ಷದಲ್ಲಿ ನಾಯಕರ ಸಂದಾನ ವಿಚಾರವಾಗಿ ಕೇಳಿದ …
Read More »B,J,P,ಮೊದಲ ವಿಕೆಟ್ ಪತನ; M.L.C. ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಬಿಜೆಪಿಯ ಹಾಲಿ ಎಂಎಲ್ ಸಿ ಪುಟ್ಟಣ್ಣ ಅವರು ಇಂದು ತಮ್ಮ ಎಂ ಎಲ್ ಸಿ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರಲು ಇಚ್ಛಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಪುಟ್ಟಣ್ಣ ಅವರ ಕೊಡುಗೆ ಅಪಾರವಾಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಸತತ ನಾಲ್ಕು ಬಾರಿ ಗೆಲವು ಸಾಧಿಸಿದ್ದಾರೆ. ಇನ್ನು ಕೆಲವು ವರ್ಷಗಳ ಕಾಲ ಅಧಿಕಾರವಿದ್ದರೂ ಬಿಜೆಪಿ ಆಡಳಿತಕ್ಕೆ ಬೇಸತ್ತು, ತಮ್ಮ ಕ್ಷೇತ್ರದ ಜನರಿಗೆ ನ್ಯಾಯ …
Read More »6 ನಿಗಮಗಳಿಗೆ ನಿರ್ದೇಶಕರ ನೇಮಕ ಮಾಡಿದ ಸರ್ಕಾರ
ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಗೆ ಒಂದು ತಿಂಗಳು ಬಾಕಿಯಿರುವ ಹೊತ್ತಲ್ಲಿ ರಾಜ್ಯ ಸರ್ಕಾರ 6 ನಿಗಮಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ 11 ಜನರನ್ನು ನಿಗಮಗಳಿಗೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಸಿಎಂ ಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ 6 ಜನರಿಗೆ ನಿಗಮದಲ್ಲಿ ಸ್ಥಾನ ನೀಡಲಾಗಿದೆ. ದೇವರಾಜ್ ಅರಸು ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಮರಾಠಾ ಅಭಿವೃದ್ಧಿ ನಿಗಮ, …
Read More »ಎಲ್ಲಾ ಜಿಲ್ಲೆಗಳ ಅಭಿವೃದ್ಧಿ ಸೂಚ್ಯಂಕದಲ್ಲಿ ಹೆಚ್ಚಳ: ಬಡತನ ನಾಡಿಗೆ ಸವಾಲು
ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ (ಎಚ್ಡಿಐ) ಏರಿಕೆಯಾಗಿದೆ. ಆದರೆ, ಬಡತನ ಮತ್ತು ಅಪೌಷ್ಟಿಕತೆಯ ಸಮಸ್ಯೆಗಳೂ ಸವಾಲಾಗಿ ಬೆಳೆಯುತ್ತಿವೆ ಎಂಬುದನ್ನು ‘ಕರ್ನಾಟಕ ಮಾನವ ಅಭಿವೃದ್ಧಿ ವರದಿ-2022’ ಹೇಳಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿಯೂ ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳು ಬಹು ಆಯಾಮದ ಬಡತನ ಸೂಚ್ಯಂಕದ (ಎಂಪಿಐ) ವಿಷಯದಲ್ಲಿ ಅತ್ಯಂತ ಕಳಪೆ ಸಾಧನೆ ಮಾಡಿವೆ. ಕೆಲವು ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಸಾಧಿಸಿದ್ದರೂ, ಬಡತನ …
Read More »852 ಕೊಟಿಯಲ್ಲಿ ಐಐಟಿ ಧಾರವಾಡದ ಮೊದಲ ಹಂತ ಸಿದ್ಧ
ಧಾರವಾಡ: ‘ಐಐಟಿ ಧಾರವಾಡದ ನೂತನ ಕ್ಯಾಂಪಸ್ನ ಮೊದಲ ಹಂತ ಸಿದ್ಧಗೊಂಡಿದ್ದು, ಇದೇ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ’ ಎಂದು ಸಂಸ್ಥೆಯ ನಿರ್ದೇಶಕ ಡಾ. ವೆಂಕಪ್ಪಯ್ಯ ಆರ್. ದೇಸಾಯಿ ಹೇಳಿದರು. ‘2016ರಲ್ಲಿ ಕೇಂದ್ರ ಸರ್ಕಾರ ಐಐಟಿ ಧಾರವಾಡ ಘೋಷಿಸಿತು. ರಾಜ್ಯ ಸರ್ಕಾರವು 65 ಎಕರೆ ಮೀಸಲು ಅರಣ್ಯ ಪ್ರದೇಶ ಹಾಗೂ 470 ಎಕರೆ ಜಾಗ ಸೇರಿ ಒಟ್ಟು 535 ಎಕರೆ ಜಾಗವನ್ನು ನೀಡಿತ್ತು. ಅಲ್ಲಿ ಪ್ರಥಮ ಹಂತದಲ್ಲಿ ₹852ಕೋಟಿ …
Read More »ವೈದ್ಯರ ನಿರ್ಲಕ್ಷ್ಯ ಹೊಟ್ಟೆ ನೋವೆಂದು ಆಸ್ಪತ್ರೆಯಲ್ಲಿ ದಾಖಲಾದ 6 ತಿಂಗಳ ಮಗು ವಿಧಿವಶ
ಬೆಂಗಳೂರು: ಹೊಟ್ಟೆ ನೋವು ಅಂತ ಕರೆದುಕೊಂಡು ಬಂದಿದ್ದ ಮಗು ಸಾವಿಗೀಡಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದು 6 ತಿಂಗಳ ಮಗುವಿಗೆ ಒವರ್ ಡೋಸ್ ಮಾಡಿ ವೈದ್ಯರು ಸಾಯಿಸಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಹೊಸಕೋಟೆ ನಗರದ ಒವಂ ಆಸ್ವತ್ರೆಯಲ್ಲಿ ನಡೆದಿದೆ. ತಾಲೂಕಿನ ಕಂಬಳಿಪುರ ನಿವಾಸಿ ವೇಣುಗೋಪಾಲ್ ಪ್ರಿಯಾಂಕ ಎಂಬುವವರ ಮಗುವಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒವಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕಳೆದ 15 ದಿನಗಳಿಂದ ಹೊಟ್ಟೆ …
Read More »ಎಮ್ಮೆನೋ..ಹಸುನೋ.. ಕರು ಹಾಕಿದರು ಸಿದ್ದರಾಮಯ್ಯ ಅದು ನನ್ನದು ಅಂತಾರೆ:ಪ್ರಹ್ಲಾದ್ ಜೋಶಿ
ಹಾಸನ: ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದು ಅಭ್ಯಾಸ ಶುರುವಾಗಿದೆ. ಯಾರು ಏನೇ ಮಾಡಿದ್ರು ಅದು ನನ್ನದು ಎಂದು ಹೇಳುತ್ತಾರೆ. ಎಮ್ಮೆನೋ..ಹಸುನೋ.. ಸುಂದರವಾದ ಕರು ಹಾಕಿದರು ಸಿದ್ದರಾಮಯ್ಯ ಅದು ನನ್ನದು ಅಂತಾರೆ ಎಂದು ಬಿಜೆಪಿ ವಿಜಯ ಸಂಕಲ್ಪಯಾತ್ರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಹಾಸನ ಅರಸೀಕೆರೆ ತಾಲೂಕ್ ಬೇಲೂರು ವಿಧಾನ ಸಭಾ ಕ್ಷೇತ್ರ ಜಾವಗಲ್ನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಜನಕವೇ ಕಾಂಗ್ರೆಸ್ ಆಗಿದೆ. ಕಾಂಗ್ರೆಸ್ ಕಾಲದಲ್ಲಿ ಭ್ರಷ್ಟಾಚಾರ …
Read More »ಎ.ಪಿ.ಚಂದ್ರಶೇಖರ್, ಶಿವಾಜಿ ಕಾಗಣಿಕರ್ಗೆ ಗೌರವ ಡಾಕ್ಟರೇಟ್
ಗದಗ: ಗಾಂಧಿವಾದಿ, ಜಲಸಂರಕ್ಷಕ ಬೆಳಗಾವಿಯ ಶಿವಾಜಿ ಕಾಗಣಿಕರ್ ಹಾಗೂ ಸಾವಯವ ಕೃಷಿಕ, ಮೈಸೂರಿನ ಎ.ಪಿ.ಚಂದ್ರಶೇಖರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಷ್ಣುಕಾಂತ ಎಸ್.ಚಟಪಲ್ಲಿ ತಿಳಿಸಿದ್ದಾರೆ. ಶಿವಾಜಿ ಕಾಗಣಿಕರ್ ರಾತ್ರಿ ಶಾಲೆಗಳನ್ನು ಆರಂಭಿಸಿ, ಗ್ರಾಮೀಣ ಜನರಲ್ಲಿ ಶಿಕ್ಷಣ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿ ಸಿದ್ದಾರೆ. ಕೆರೆಗಳನ್ನು ನಿರ್ಮಿಸಿದ್ದಾರೆ. ಮೈಸೂರಿನ ಎ.ಪಿ. ಚಂದ್ರಶೇಖರ್ 40 ವರ್ಷಗಳಿಂದ ಸಾವಯವ …
Read More »ವಿಧಾನಸಭೆ ಚುನಾವಣೆ | 40 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ: ಕುರುಬ ಸಮುದಾಯ ಆಗ್ರಹ
ಬೆಂಗಳೂರು: ರಾಜ್ಯದಲ್ಲಿನ ಕನಿಷ್ಠ 40 ವಿಧಾನಸಭಾ ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ರಾಜಕೀಯ ಪಕ್ಷಗಳಿಗೆ ಒತ್ತಾಯಿಸಿದೆ. ‘ರಾಜ್ಯದಲ್ಲಿ ಅತಿ ದೊಡ್ಡ ಸಮುದಾಯವಾಗಿದ್ದರೂ ಕುರುಬರಿಗೆ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ. 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಮುದಾಯದ ಮತದಾರರು ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ನಿರ್ಣಾಯಕರಾಗಿದ್ದಾರೆ. 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಅಭ್ಯರ್ಥಿಗಳು ಗೆಲ್ಲುವ ಸಾಮರ್ಥ್ಯ ಇದ್ದರೂ ಹಲವು ದಶಕಗಳಿಂದ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಪ್ರಾತಿನಿಧ್ಯ …
Read More »
Laxmi News 24×7